Homeಕರ್ನಾಟಕಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು - ಡಾ.ಎ.ಆರ್ ವಾಸವಿ

ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ

ಈ ಕಾನೂನು ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ಬದಲು ಬೇಗುದಿಯನ್ನು ಹೆಚ್ಚಿಸಿತೆಂಬುದಕ್ಕೆ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಸಾವಿರಾರು ದಾವೆಗಳೇ ಸಾಕ್ಷಿ. ಎಷ್ಟೋ ನಾಗರಿಕರು ಈ ಕೊನೆಗಾಣದ ಕಾನೂನಾತ್ಮಕ ಬಲೆಯಲ್ಲಿ ಇನ್ನೂ ಒದ್ದಾಡುತ್ತಿದ್ದಾರೆ.

- Advertisement -
- Advertisement -

ಇತ್ತೀಚೆಗಿನ ಕರ್ನಾಟಕ ಸರಕಾರದ ಭೂಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಸುತ್ತ ನಡೆಯುತ್ತಿರುವ ಚರ್ಚೆ ಈ ಹಿಂದಿನ ಕಾನೂನು ಮತ್ತು ಈಗ ತರಲಿಚ್ಛಿಸುತ್ತಿರುವ ತಿದ್ದುಪಡಿಯ ಪರಿಣಾಮಗಳೇನು ಎಂಬುದನ್ನು ವಿಶ್ಲೇಷಿಸಲು ನಮ್ಮನ್ನು ಒತ್ತಾಯಿಸುತ್ತದೆ.

ಗ್ರಾಮಾಂತರ ಪ್ರದೇಶಗಳು ವಿಸ್ತೃತ ಸಂಕಷ್ಟಕ್ಕೆ ಸ್ಪಂದಿಸಲು ಗಮನಾರ್ಹ ಪ್ರಯತ್ನಗಳಾಗುತ್ತಿದ್ದ ಕಾಲದಲ್ಲಿ, ಅಂದರೆ 1961 ರಲ್ಲಿ ಕರ್ನಾಟಕ ಭೂಸುಧಾರಣಾ ಕಾನೂನು 1961 ನ್ನು ಜಾರಿಗೊಳಿಸಲಾಯಿತು. ತದನಂತರದ ತಿದ್ದುಪಡಿಗಳು, ಅದರಲ್ಲೂ 1974ರ ತಿದ್ದುಪಡಿಯು, ಸಣ್ಣ ಮತ್ತು ಅತಿಸಣ್ಣ ರೈತರನ್ನೂ, ಕೃಷಿ ಆರ್ಥಿಕತೆಯನ್ನೂ ರಕ್ಷಿಸಲು ಜಾರಿಗೆಬಂದಿತು. ತನ್ಮೂಲಕ ರೈತಾಪಿ ಭೂಮಿ ಕಬಳಿಸಿ ಅವರನ್ನು ದಿವಾಳಿಯೆಬ್ಬಿಸುವ ಭಕ್ಷಕ ಬಂಡವಾಳ- ಅದರಲ್ಲೂ ಕೈಗಾರಿಕಾ, ನಗರ ಜನ್ಯ ಬಂಡವಾಳದಿಂದ ರಕ್ಷಿಸಲು ಅನುವಾಯಿತು. ಇದು ಮಿಶ್ರ ಫಲಿತಾಂಶವನ್ನು ನೀಡಿದೆ. ಒಂದೆಡೆ ಭೂಹಿಡುವಳಿಯ ಸಂರಚನೆ ಬಹಳಷ್ಟೇನೂ ಬದಲಾಗದಿದ್ದರೂ ಸಣ್ಣ ಮತ್ತು ಅತಿಸಣ್ಣ ರೈತರ ಭೂ-ನಷ್ಟ ಮತ್ತು ಸ್ಥಳಾಂತರ ನಡೆಯಲಿಲ್ಲ. ಆದರೆ ಈ ಕಾನೂನು ಮತ್ತು ತದನಂತರದ ತಿದ್ದುಪಡಿಗಳ ನೇತ್ಯಾತ್ಮಕ ಪರಿಣಾಮಗಳು ಮತ್ತು ವಿಕೃತಿಗಳು ಕಣ್ಣ ಮುಂದಿವೆ.

ಇದರಲ್ಲಿ ಪ್ರಮುಖವೆಂದರೆ ಕೃಷಿಕರಲ್ಲದವರಿಗೆ ಕೃಷಿ ಭೂಮಿ ಕೊಳ್ಳಲಾಗದ ಪರಿಸ್ಥಿತಿ. ಇದು ಅಧಿಕಾರಶಾಹಿಯ ಉರುಳನ್ನು ಸೃಷ್ಟಿ ಮಾಡಿದ್ದಲ್ಲದೇ, ಭೂ ವ್ಯವಹಾರದಲ್ಲಿ ಅನೇಕ ಭ್ರಷ್ಟ ಹಾದಿಗಳನ್ನು ತೆರೆಯಿತು. ಸರಕಾರ ಅಂದರೆ ವಾಸ್ತವದಲ್ಲಿ ವಿವಿಧ ರಾಜಕೀಯ ಸೂತ್ರಧಾರರು ಈ ತಡೆ ಇರುವಾಗಲೇ ಕಾನೂನನ್ನು ದಾಟಿಹೋಗುವ ಹೊಸ ನಿಯಮಗಳನ್ನು ಮತ್ತು ಪ್ರಕ್ರಿಯೆಗಳನ್ನು ಸೃಷ್ಟಿಸಿದರು.

ಭೂಸ್ವಾಧೀನ ಮತ್ತು ನಂತರ ಅದನ್ನು ಕೈಗಾರಿಕೆ, ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ಹಂಚುವ ಪ್ರಕ್ರಿಯೆ ಭಟ್ಟಂಗಿ ಬಂಡವಾಳಶಾಹಿಯನ್ನು ಸಶಕ್ತಗೊಳಿಸುವ ಮತ್ತು ಸರಕಾರ ಮತ್ತು ಚುನಾಯಿತ ನಾಯಕರನ್ನು ಭ್ರಷ್ಟಗೊಳಿಸುವ ಹೊಸ ಮೂಲಗಳಾದವು. ಇದರಿಂದಾಗಿ ಸರಕಾರಕ್ಕೆ ಆದಾಯ ನಷ್ಟವಾಗಿದ್ದಷ್ಟೇ ಅಲ್ಲ; ದಢೂತಿ ರಾಜಕೀಯ ಮಂದಿ, ಭಟ್ಟಂಗಿ ಬಂಡವಾಳಿಗರು, ರಿಯಲ್ ಎಸ್ಟೇಟ್ ಕುಳಗಳು, ಭೂ ಮಾಫಿಯಾ ಮತ್ತು ರಾತ್ರೋರಾತ್ರಿ ಓಡಿಹೋಗುವ ಖದೀಮ ಉದ್ಯಮಪತಿಗಳು ಇದರ ಲಾಭ ಪಡೆದರು.

ಇದಕ್ಕಿಂತ ಹೆಚ್ಚಾಗಿ, ರೈತ ಸಮುದಾಯ ಈ ಕಾಯಿದೆಯ ಕಳಪೆ ಅನುಷ್ಠಾನ, ಕಾನೂನಾತ್ಮಕ ವಿಕೃತಿಗಳು ಹಾಗೂ ಅಧಿಕಾರಶಾಹಿಯ ಭಾರದಿಂದ ಬಳಲಿದವು. ನೈಜ ರೈತರಿಗೆ ತಮ್ಮ ಹಿಡುವಳಿಯನ್ನು ಹೆಚ್ಚಿಸಲು ಆಗಲಿಲ್ಲ; ಸಣ್ಣ ಹಿಡುವಳಿದಾರರಿಗೆ ತಮ್ಮ ಜಮೀನನ್ನು ಹೊರಗಿನವರಿಗೆ ಮಾರಲು ಸಾಧ್ಯವಾಗಲಿಲ್ಲ; ಘಾಸಿಗೊಂಡ ಭೂ ಮಾರುಕಟ್ಟೆ ದಲ್ಲಾಳಿಗಳು ಮತ್ತು ಏಜೆಂಟರಿಗಷ್ಟೇ ಲಾಭ ಮಾಡಿಕೊಟ್ಟಿತು.

ಸ್ವತಃ ಆರ್ಥಿಕ ಕಷ್ಟದಿಂದಾಗಿ ಬೇಸಾಯ ಮಾಡಲಾಗದ ಸಣ್ಣ ರೈತರು ಭೋಗ್ಯದ ಕೃಷಿಯ ಭಾಗವಾಗುವ ಉದಾಹರಣೆ ಗಮನಿಸಿ. ದೊಡ್ಡ ರೈತರು ಇಲ್ಲಾ ಉದ್ಯಮಶೀಲರ ಜೊತೆ ಈ ಭೋಗ್ಯ ಕರಾರಿಗೆ ಸಹಿಹಾಕಿದ ಮೇಲೆ ಆ ಮಂದಿ ಸೀಮಿತ ಅವಧಿಗೆ ಈ ಜಮೀನಲ್ಲಿ ಭೂಮಿಯ ಸಾರ ಹೀರುವ ಕೃಷಿ ಮಾಡುತ್ತಿದ್ದಾರೆ. ಈ ಉಲ್ಟಾ ಗೇಣಿ ಪದ್ಧತಿಯಲ್ಲಿ ಬಂಡವಾಳಶಾಹಿಗಳು, ಗೇಣಿದಾರರು, ಬಡ ರೈತ ಭೂಮಾಲೀಕ! ಈ ಮಾಲೀಕ ತನ್ನ ಜಮೀನಿನಲ್ಲೇ ಕೂಲಿಯಾಳಾಗಿ ದುಡಿಯುವ ಸನ್ನಿವೇಶ ಉಂಟಾಗಿದೆ. ಈ ಭೋಗ್ಯಕ್ಕೆ ಪಡೆದ ಜಮೀನಿನಲ್ಲಿ ಶುಂಠಿ, ಅರಿಶಿನ, ಬಾಳೆ ಮುಂತಾದ ಬೆಳೆ ಬೆಳೆದು ಪರಿಸರಕ್ಕಾಗಿರುವ ಹಾನಿ ಇನ್ನೊಂದು ಉದಾಹರಣೆ. ಇಂಥ ವಿಷಯಗಳನ್ನು ಪರಿಹರಿಸುವ ಬದಲು ಇಡೀ ಲಕ್ಷ್ಯ ದೊಡ್ಡ ಬಂಡವಾಳಶಾಹಿಗಳಿಗೆ ಮತ್ತು ಶಂಕಾಸ್ಪದ ಉದ್ಯಮಶೀಲರಿಗೆ ಭೂಮಾರುಕಟ್ಟೆಯನ್ನು ಸುಲಭಗೊಳಿಸುವ ಕಡೆಗಿದೆ.

ನಿಜಕ್ಕೂ ಕೃಷಿಭೂಮಿ ಕೊಳ್ಳಬೇಕೆಂದಿದ್ದವರು, ಅದರಲ್ಲೂ ನಗರ ಮತ್ತು ಕೃಷಿಯೇತರ ಹಿನ್ನೆಲೆಯವರು, ಈ ಅಧಿಕಾರಶಾಹಿ ಜಾಲ ಮತ್ತು ದಲ್ಲಾಳಿಗಳ ಮೂಲಕ ಭೂಮಿ ಪಡೆಯಬೇಕಾದ ಸಂದರ್ಭ ಒದಗಿಬಂತು. ಕೃಷಿ ಮಾಡಬೇಕೆಂದಿದ್ದ ಅಥವಾ ಭೂಮಿಯನ್ನು ಇನ್ಯಾವುದೋ ಪ್ರಯೋಜನಕಾರಿ ಉದ್ದಿಶ್ಯಕ್ಕೆ ಬಳಸಬೇಕೆಂದಿದ್ದ ಆಸೆಗೇ ಎಳ್ಳುನೀರು ಬಿಡಬೇಕಾಗಿ ಬಂದ ಪ್ರಕರಣಗಳೂ ಇವೆ.

ಈ ಕಾನೂನು ರೈತರ ಹಿತಾಸಕ್ತಿಗಳನ್ನು ರಕ್ಷಿಸುವ ಬದಲು ಬೇಗುದಿಯನ್ನು ಹೆಚ್ಚಿಸಿತೆಂಬುದಕ್ಕೆ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಸಾವಿರಾರು ದಾವೆಗಳೇ ಸಾಕ್ಷಿ. ಎಷ್ಟೋ ನಾಗರಿಕರು ಈ ಕೊನೆಗಾಣದ ಕಾನೂನಾತ್ಮಕ ಬಲೆಯಲ್ಲಿ ಇನ್ನೂ ಒದ್ದಾಡುತ್ತಿದ್ದಾರೆ. ಆದ್ದರಿಂದ ಈ ಕಾನೂನನ್ನು ಮರುಪರಿಶೀಲಿಸಿ ಕೃಷಿಲೋಕದ ಅಂಚಿಗೆ ನೂಕಲ್ಪಟ್ಟಿರುವ ಮಂದಿಯ ಹಿತಾಸಕ್ತಿಯನ್ನು ರಕ್ಷಿಸುವುದು, ಗ್ರಾಮೀಣ ಆರ್ಥಿಕತೆಗೆ ಪ್ರೋತ್ಸಾಹ ಮತ್ತು ಆಹಾರ ಭದ್ರತೆಯ ಭರವಸೆಯನ್ನು ಖಚಿತಪಡಿಸುವುದರೊಂದಿಗೆ, ಗ್ರಾಮೀಣೇತರ ನಾಗರಿಕರಿಗೆ ಆರ್ಥಿಕವಾಗಿ ಸುಲಲಿತ ಮತ್ತು ಸಮರ್ಥನೀಯ ರೀತಿಯಲ್ಲಿ ಜಮೀನು ಹೊಂದುವ ವಿಧಿವಿಧಾನಗಳನ್ನು ರೂಪಿಸಬೇಕಾಗಿದೆ.

ಕೃಷಿ ಆರ್ಥಿಕತೆಯೇ ಕಳೆದ ಕೆಲವು ವರ್ಷಗಳಿಂದ ತೀವ್ರ ಹಿಂಜರಿಕೆಯಲ್ಲಿದೆ. ಹವಾಮಾನ ವೈಪರೀತ್ಯದ ಕಾರಣಕ್ಕೇ ದೀರ್ಘಕಾಲದ ಬರ, ಆಗಾಗ್ಗೆ ಪ್ರವಾಹಗಳು ನಮ್ಮ ರಾಜ್ಯದ ಒಳನಾಡಿನ ವಿಸ್ತಾರ ಭೂಪ್ರದೇಶಗಳನ್ನು ಹದಗೆಡಿಸಿವೆ. ಇದರೊಂದಿಗೇ ಕೋವಿಡ್-19 ಪಿಡುಗಿನ ಸಮಸ್ಯೆ; ಲಾಕ್‌ಡೌನ್‌ನಿಂದ ಉಂಟಾದ ಆರ್ಥಿಕ ಮತ್ತು ಸಾಮಾಜಿಕ ಪಲ್ಲಟಗಳು ತುರ್ತು ಗಮನದ ವಿಚಾರಗಳಾಗಬೇಕಿತ್ತು.

ಈ ಪಿಡುಗು ಮತ್ತು ಈ ಹಿಂದಿನ ಪಿಡುಗುಗಳು ಸೂಚಿಸುವುದೇನೆಂದರೆ, ಮಾನವ ಮತ್ತು ಪ್ರಾಕೃತಿಕ ಸಂಪನ್ಮೂಲಗಳ ಮಾಲಿನ್ಯ ಮತ್ತು ಬೃಹತ್ ಕೈಗಾರಿಕಾ ಮಾದರಿಯ ಆಹಾರ ಉತ್ಪಾದನೆಗಳೆರಡೂ ಇಂಥಾ ಪಿಡುಗು ಹುಟ್ಟಿ ಹರಡಲು ಕಾರಣವಾಗಿವೆ. ಸಂಶೋಧನೆಗಳು ಸತತವಾಗಿ ತೋರಿಸಿಕೊಟ್ಟಿರುವಂತೆ, ಸಣ್ಣ ಪ್ರಮಾಣದ, ವೈವಿಧ್ಯಮಯ ಉತ್ಪಾದಕ ವ್ಯವಸ್ಥೆಗಳನ್ನು ಹೊಂದಿರುವ ನಮ್ಮ ಸಣ್ಣ ರೈತರೇ ಜೀವ ವೈವಿಧ್ಯತೆ ಮತ್ತು ಆಹಾರ ಉತ್ಪಾದನೆಯ ರಕ್ಷಕರು.

ಈ ಅಂಶಗಳನ್ನು ಪರಿಗಣಿಸಿದರೆ, ಶಾಸನಾತ್ಮಕ ಕ್ರಮಗಳು ಈ ವಿಷಯಗಳಿಗೆ ಸ್ಪಂದಿಸುವ ನೀತಿ ಮತ್ತು ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ರೀತಿಯಲ್ಲಿರಬೇಕಲ್ಲದೇ, ಭೂಮಿಯನ್ನು ಕೈಗಾರಿಕೀಕರಣಗೊಂಡ ಬಂಡವಾಳಶಾಹಿ ಉತ್ಪಾದನೆಗೆ ಬೇಕಾದ ಮಾರಾಟದ ಸರಕೆಂಬಂತೆ ನೋಡಬಾರದು. ಎಲ್ಲರಿಗೂ ಭೂಮಿ ಹೊಂದುವ ಅವಕಾಶ ನೀಡುವ ಇತ್ತೀಚೆಗಿನ ಭೂಸುಧಾರಣಾ ಕಾಯಿದೆಯ ತಿದ್ದುಪಡಿಯು ಈ ಹಿನ್ನೆಲೆಯಲ್ಲಿ ದೂರದೃಷ್ಟಿ ಇಲ್ಲದ, ಹಾದಿ ತಪ್ಪಿಸುವ ತಿದ್ದುಪಡಿಯಾಗಿದೆ. ಊಹಾತ್ಮಕ ಲೆಕ್ಕಾಚಾರಗಳಿಗೆ ಭೂಮಾರುಕಟ್ಟೆ ಪಕ್ಕಾಗುವುದು ಮತ್ತು ಸಣ್ಣ ರೈತರ ದೀರ್ಘಕಾಲಿಕ ಹಿತಾಸಕ್ತಿಗಳನ್ನು ದೈತ್ಯ ಬಂಡವಾಳ ನುಂಗುವ ಕುರಿತಂತೆ ಈ ತಿದ್ದುಪಡಿ ನಿರ್ಲಕ್ಷ ತೋರಿದೆ.

ಸಿಕ್ಕಿದವರಿಗೆ ಸೀರುಂಡೆ ಎಂಬಂತ ನಡೆಯ ಮೂಲಕ ಗ್ರಾಮಾಂತರದ ಸಣ್ಣ ಹಿಡುವಳಿದಾರರನ್ನು ದಿವಾಳಿ ಎಬ್ಬಿಸುವ ನೀತಿಯ ಬದಲು, ಊಹಾತ್ಮಕ ಭೂಮಿ ಆರ್ಥಿಕತೆಯನ್ನು ನಿರುತ್ತೇಜಗೊಳಿಸಿ ಆರ್ಥಿಕ, ಪರಿಸರ ಸಂಬಂಧಿ ಮತ್ತು ಸಾಮಾಜಿಕ ಮಾನದಂಡಗಳನ್ನು ಗೌರವಿಸುವ ಸಾಚಾ ಇರಾದೆ ಇರುವವರಿಗೆ ಭೂಮಿ ಹೊಂದುವ ಅವಕಾಶ ನೀಡುವ ನೀತಿ ಮತ್ತು ಮಾನದಂಡಗಳನ್ನು ಸರಕಾರ ರೂಪಿಸಬೇಕಿದೆ.

ಪ್ರ್ರಾಸ್ತಾವಿತ ತಿದ್ದುಪಡಿಯಲ್ಲಿ ಈ ಅಂಶಗಳೇ ಮಾಯವಾಗಿವೆ. ಇದರ ಬದಲು ಹೊಸ ರೀತಿಯ ಉತ್ಪಾದಕತೆ, ಐಟಿ, ಬಿಟಿ ಕ್ಷೇತ್ರಗಳವರ ಅಗತ್ಯಕ್ಕೆ ತಕ್ಕಂತೆ ಸರಳೀಕೃತ ಮತ್ತು ಸಾರಾಸಗಟು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಈಗಿರುವ ಆಳ ಕಂದರವನ್ನು ಎದುರಿಸುವ ನಗರ-ಗ್ರಾಮೀಣ; ಕೃಷಿ-ಕೈಗಾರಿಕಾ ಉತ್ಪಾದಕ ವ್ಯವಸ್ಥೆಗಳು ಅಸ್ತಿತ್ವಕ್ಕೆ ಬರಬೇಕು ಎಂಬುದನ್ನು ಈ ತಿದ್ದುಪಡಿ ಆದ್ಯತೆ ಮಾಡಿಕೊಳ್ಳಬೇಕಿತ್ತು.

ಸಣ್ಣ ಮತ್ತು ಅತಿಸಣ್ಣ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಹಕಾರೀ ತತ್ವಾಧಾರಿತ ಮತ್ತು ರೈತ ಉತ್ಪಾದಕ ಸಂಸ್ಥೆಗಳಿಗೆ ಸಾಮರ್ಥ್ಯವಿದ್ದರೂ, ಹೊಸ ಭೂಮಿನೀತಿಗಳು ಬೃಹತ್ ಬಂಡವಾಳವನ್ನು ಪ್ರೋತ್ಸಾಹಿಸುವಂತಿವೆ. ಇದರೊಂದಿಗೇ, ಈ ತಿದ್ದುಪಡಿಯಲ್ಲಿ ಅರಣ್ಯ, ಶ್ರೀಮಂತ ಜೀವವೈವಿಧ್ಯತಾ ವಲಯಗಳನ್ನು ರಕ್ಷಿಸುವ ಪ್ರಸ್ತಾಪವೇ ಇಲ್ಲ. ಮಾರುಕಟ್ಟೆ ವಿಚಾರದಲ್ಲಿ ವಿವೇಕಯುತವಾಗಿಯೂ ಹವಾಮಾನ ತಾಳಿಕೆಯನ್ನು ಹೊಂದಿರುವಂತಹ ಕೃಷಿ, ಹವಾಮಾನ ವಲಯಾಧಾರಿತ ಕೃಷಿಯನ್ನು ಉತ್ತೇಜಿಸುವ, ಕಾರ್ಮಿಕರನ್ನು ಔಚಿತ್ಯಪೂರ್ಣವಾಗಿ ಗೌರವಿಸುವ ಹೊಸ ಉತ್ಪಾದಕ ವ್ಯವಸ್ಥೆಗೆ ಅನುಕೂಲ ಮಾಡಿಕೊಡುವಂಥಾ ಯಾವ ಪ್ರಸ್ತಾಪವೂ ಈ ತಿದ್ದುಪಡಿಯಲ್ಲಿ ಇಲ್ಲ.

ಇಂಥಾ ಪರ್ಯಾಯ ಮತ್ತು ಸಮಗ್ರ ನೀತಿ ಮತ್ತು ಕಾರ್ಯಕ್ರಮಗಳನ್ನು ಅನ್ವೇಷಿಸುತ್ತಿರುವ ಈ ಸಂದರ್ಭದಲ್ಲಿ ಸದ್ಯದ ರಾಜಕೀಯ ವ್ಯವಸ್ಥೆ ಜನರ ಹಿತಾಸಕ್ತಿಗಳನ್ನು ಪ್ರತಿನಿಧಿಸಲು ಸೋತಿದೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕಿದೆ.

ಕೃಷಿ ಮತ್ತು ಭೂನೀತಿಗಳ ಮಿತಿಗಳನ್ನು ತಮ್ಮ ಹಿತಾಸಕ್ತಿಗಳಿಗೆ ತಕ್ಕಂತೆ ತಿರುಚಿ ರಾಜಕಾರಣಿಗಳು ತಮ್ಮ ರಾಜಕೀಯ ಮತ್ತು ಬಂಡವಾಳದ ಸಾಮ್ರಾಜ್ಯಗಳನ್ನು ಕಟ್ಟಿದ್ದಾರೆ. ಹೆಚ್ಚಿನ ರೈತ ಸಂಘಟನೆಗಳು ದೂರಗಾಮಿ ದೃಷ್ಟಿಯಿಲ್ಲದೇ, ಸಾಲಮನ್ನಾ, ಉಚಿತ ವಿದ್ಯುತ್, ಕೃಷಿ ಒಳಸುರಿಗಳಿಗೆ ಮತ್ತು ಸಬ್ಸಿಡಿಯಂಥಾ ಬೇಡಿಕೆಗಳಾಚೆ ಹೋಗಿಲ್ಲ. ಆದ್ದರಿಂದಲೇ, ನಾಗರಿಕರು, ರೈತರು, ನಾಗರಿಕ ಸಂಘಟನೆಗಳು, ಕ್ರಿಯಾಶೀಲ ವ್ಯಕ್ತಿಗಳು ಒಟ್ಟಾಗಿ ಬಹುಸಂಖ್ಯಾತ ಜನರ ದೀರ್ಘಕಾಲಿಕ ಹಿತಾಸಕ್ತಿಯ ನೀತಿ ಮತ್ತು ಕಾರ್ಯಕ್ರಮಗಳನ್ನು ರೂಪಿಸುವಂಥಾ ಒಂದು ಪರ್ಯಾಯ ದೃಷ್ಟಿಕೋನವನ್ನು ಪ್ರಸ್ತಾಪಿಸಬೇಕಿದೆ.

ನಮ್ಮ ನಡುವಿರುವ ದೈತ್ಯ ಆರ್ಥಿಕ ಸಂರಚನೆಗಳು, ಮಾದರಿಗಳು ಮತ್ತು ಚಿಂತನೆಗಳನ್ನು ಮರುಪರಿಶೀಲಿಸುವಂತೆ ಮಾಡಿರುವ ಈ ಕೋವಿಡ್-19ರ ಚಾರಿತ್ರಿಕ ಸಂದರ್ಭದಲ್ಲಿ ನಾವಿದ್ದೇವೆ. ಆದ್ದರಿಂದಲೇ ನಾವು ತೀವ್ರ ಆರ್ಥಿಕ ಅಸಮಾನತೆ, ಪರಿಸರ ಬಿಕ್ಕಟ್ಟು, ಆರೋಗ್ಯ ಅಪಾಯಗಳ ಆಳ ಸಮಸ್ಯೆಗಳನ್ನು ಎದುರಿಸುವ ಪರ್ಯಾಯಗಳನ್ನು ಹುಡುಕಬೇಕಿದೆ. ಭೂಮಿಯೆಂಬುದು ಕೇವಲ ಮಾರಾಟದ ಸರಕಲ್ಲ; ಅದರ ಉಪಯೋಗ ಮತ್ತು ನಮಗೆ ಅದರೊಂದಿಗಿರುವ ಸಂಬಂಧವು ಸಾಮಾಜಿಕ ನ್ಯಾಯ, ಪರಿಸರ ಸುಸ್ಥಿರತೆ ಮತ್ತು ಆರ್ಥಿಕ ಸ್ಥಿರತೆಯನ್ನು ಖಚಿತಪಡಿಸುವಂಥಾದ್ದು ಎಂಬುದನ್ನು ನಾವು ಗುರುತಿಸಿ ಗಟ್ಟಿಯಾಗಿ ಸಮರ್ಥಿಸಿಕೊಳ್ಳಬೇಕಿದೆ.


ಇದನ್ನೂ ಓದಿ: ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ 

ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?

ಲಾಕ್ ಡೌನ್ ನಂತರದ ಪ್ರಥಮ ಆದ್ಯತೆ – ಕೃಷಿ ಮತ್ತು ಗ್ರಾಮೀಣ ವಲಯಗಳ ಪುನಶ್ಚೇತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...