Homeಕರ್ನಾಟಕಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

ಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಸರ್ಕಾರ ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಇದನ್ನು ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ. ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಕೊರೊನಾ ಸಾಂಕ್ರಮಿಕ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲ

“ಕೊರೊನಾ ವೈರಸ್ ಜನವರಿ 30 ರಂದು ಕೇರಳದಲ್ಲಿ ಪತ್ತೆಯಾಗಿತ್ತು. ಈ ಸೋಂಕು ದೇಶದಾದ್ಯಂತ ಹರಡದಂತೆ ತಡೆಯಲು ಜನವರಿ, ಫೆಬ್ರವರಿ ಸೇರಿದಂತೆ ಎರಡು ತಿಂಗಳ ಸಮಯಾವಕಾಶ ಇತ್ತು. ಆದರೆ, ಲಾಕ್ ಡೌನ್ ಮಾಡಿದ್ದು ಮಾರ್ಚ್ ಕೊನೆ ವಾರದಲ್ಲಿ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ

“ಸಿದ್ದತೆಗಳನ್ನ ಮಾಡಲು ಸಾಕಷ್ಟು ಸಮಯವಿದ್ದರೂ, ಯಾವ ಸರ್ಕಾರಗಳೂ ಏನೂ ಮಾಡಲಿಲ್ಲ. ಕೇಂದ್ರ ಸರ್ಕಾರ ನರೇಂದ್ರ ಮೋದಿ ಅವರು ವಿದೇಶಿ ವಿಮಾನಯಾನ ಬಂದ್ ಮಾಡಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ. ಇಷ್ಟು ದೊಡ್ಡ ಮಟ್ಟದಲ್ಲಿ ರೋಗ ಹಬ್ಬುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ, ದೇಶದಾದ್ಯಂತ ಕೊರೊನಾ ವೈರಸ್ ಹೆಚ್ಚಾಗಲು ತಬ್ಲಿಘಿಗಳೇ ಕಾರಣ ಎಂದು ರಾಜಕೀಯ ಮಾಡಲಾಗುತ್ತಿದೆ. ಆದರೆ, ಇಟಲಿ, ಅಮೇರಿಕಾ, ಸ್ಪೇನ್ ನಲ್ಲಿ ಯಾವ ತಬ್ಲಿಘಿಗಳಿದ್ದಾರೆ? ಅಸಲಿಗೆ ತಬ್ಲಿಘಿಗಳಿಗೆ ಸಭೆ ಮಾಡಲು ಲೈಸೆನ್ಸ್ ಕೊಟ್ಟವರ್ಯಾರು?, ಪೊಲೀಸ್ ಮತ್ತು ಕೇಂದ್ರ ಸರ್ಕಾರವೇ ಅನುಮತಿ ಕೊಟ್ಟು ಈಗ ಗೂಬೆ ಕೂರಿಸುವುದು ಎಷ್ಟು ಸರಿ? ಇವೆಲ್ಲಾ ಆರ್‌ಎಸ್‌ಎಸ್‌ ನವರ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಕೇರ್ ಹಣ ಯಾವ ರಾಜ್ಯಕ್ಕೂ ನೀಡಿಲ್ಲ

“ಈವರೆಗೆ ಪಿಎಂ ಫಂಡ್ ಗೆ 35,000 ಕೋಟಿ ಹಣ ಬಂದಿದೆ. ಕರ್ನಾಟಕದಿಂದ ಮೂರು ಸಾವಿರ ಕೋಟಿ ಹಣ ಹೋಗಿದೆ. ಈ ಹಣವನ್ನು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಕೊಡೋದಕ್ಕೆ ಆಗಲ್ವಾ? ನರೇಂದ್ರ ಮೋದಿ ಕೋವಿಡ್ ಪ್ಯಾಕೇಜ್ ಎಂದು ಯಾವ ರಾಜ್ಯಕ್ಕೂ ಒಂದು ರೂಪಾಯಿ ಹಣ ನೀಡಿಲ್ಲ. ಆದರೆ, ದೀಪ ಹಚ್ಚಿ, ಚೆಪ್ಪಾಳೆ ಹೊಡಿರಿ ಅಂತಾರೆ. ಇದ್ರಿಂದ ಬಡವರ ಕಷ್ಟ ನೀಗುತ್ತಾ?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

“ಮಾರ್ಚ್ 24 ರಂದು ಲಾಕ್‌ಡೌನ್ ಮಾಡಿದ್ದರೂ ಸಹ ವಲಸೆ ಕಾರ್ಮಿಕರನ್ನು ಅವರವರ ಮನೆಗೆ ಕಳುಹಿಸಲು ಯಾವುದೇ ಸಿದ್ದತೆ ಮಾಡಿಕೊಂಡಿರಲಿಲ್ಲ. ಇದರಿಂದ ವಲಸೆ ಕಾರ್ಮಿಕರು ಸಾಕಷ್ಟು ಪರದಾಡಿದ್ದಾರೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಕಾರ್ಮಿಕರಿಗೆ ಈ ಸಮಸ್ಯೆ ಬರುತ್ತಿರಲಿಲ್ಲ.” ಎಂದು ಹೇಳಿದ್ದಾರೆ.

“ಇದೀಗ 5.05 ಲಕ್ಷ ವಲಸೆ ಕಾರ್ಮಿಕರು ಆನ್‌ಲೈನ್‌ ನಲ್ಲಿ ಅಪ್ಲೈ ಮಾಡಿದ್ದಾರೆ. ಆದರೆ, ಅರವತ್ತು ಸಾವಿರ ಮಂದಿಗೆ ಪರ್ಮಿಷನ್ ಕೊಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಉಳಿದವರ ಕಥೆ ಏನು? ಹೀಗಾಗಿ ಎಲ್ಲಾ ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರವರ ರಾಜ್ಯಗಳಿಗೆ ಕಳುಹಿಸುವ ಕೆಲಸವಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.


ಓದಿ:  ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ


ನಮ್ಮ ಚಾನೆಲಿನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...