Homeಮುಖಪುಟಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

ಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಸರ್ಕಾರ ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಇದನ್ನು ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ. ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಕೊರೊನಾ ಸಾಂಕ್ರಮಿಕ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲ

“ಕೊರೊನಾ ವೈರಸ್ ಜನವರಿ 30 ರಂದು ಕೇರಳದಲ್ಲಿ ಪತ್ತೆಯಾಗಿತ್ತು. ಈ ಸೋಂಕು ದೇಶದಾದ್ಯಂತ ಹರಡದಂತೆ ತಡೆಯಲು ಜನವರಿ, ಫೆಬ್ರವರಿ ಸೇರಿದಂತೆ ಎರಡು ತಿಂಗಳ ಸಮಯಾವಕಾಶ ಇತ್ತು. ಆದರೆ, ಲಾಕ್ ಡೌನ್ ಮಾಡಿದ್ದು ಮಾರ್ಚ್ ಕೊನೆ ವಾರದಲ್ಲಿ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ

“ಸಿದ್ದತೆಗಳನ್ನ ಮಾಡಲು ಸಾಕಷ್ಟು ಸಮಯವಿದ್ದರೂ, ಯಾವ ಸರ್ಕಾರಗಳೂ ಏನೂ ಮಾಡಲಿಲ್ಲ. ಕೇಂದ್ರ ಸರ್ಕಾರ ನರೇಂದ್ರ ಮೋದಿ ಅವರು ವಿದೇಶಿ ವಿಮಾನಯಾನ ಬಂದ್ ಮಾಡಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ. ಇಷ್ಟು ದೊಡ್ಡ ಮಟ್ಟದಲ್ಲಿ ರೋಗ ಹಬ್ಬುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ, ದೇಶದಾದ್ಯಂತ ಕೊರೊನಾ ವೈರಸ್ ಹೆಚ್ಚಾಗಲು ತಬ್ಲಿಘಿಗಳೇ ಕಾರಣ ಎಂದು ರಾಜಕೀಯ ಮಾಡಲಾಗುತ್ತಿದೆ. ಆದರೆ, ಇಟಲಿ, ಅಮೇರಿಕಾ, ಸ್ಪೇನ್ ನಲ್ಲಿ ಯಾವ ತಬ್ಲಿಘಿಗಳಿದ್ದಾರೆ? ಅಸಲಿಗೆ ತಬ್ಲಿಘಿಗಳಿಗೆ ಸಭೆ ಮಾಡಲು ಲೈಸೆನ್ಸ್ ಕೊಟ್ಟವರ್ಯಾರು?, ಪೊಲೀಸ್ ಮತ್ತು ಕೇಂದ್ರ ಸರ್ಕಾರವೇ ಅನುಮತಿ ಕೊಟ್ಟು ಈಗ ಗೂಬೆ ಕೂರಿಸುವುದು ಎಷ್ಟು ಸರಿ? ಇವೆಲ್ಲಾ ಆರ್‌ಎಸ್‌ಎಸ್‌ ನವರ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಕೇರ್ ಹಣ ಯಾವ ರಾಜ್ಯಕ್ಕೂ ನೀಡಿಲ್ಲ

“ಈವರೆಗೆ ಪಿಎಂ ಫಂಡ್ ಗೆ 35,000 ಕೋಟಿ ಹಣ ಬಂದಿದೆ. ಕರ್ನಾಟಕದಿಂದ ಮೂರು ಸಾವಿರ ಕೋಟಿ ಹಣ ಹೋಗಿದೆ. ಈ ಹಣವನ್ನು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಕೊಡೋದಕ್ಕೆ ಆಗಲ್ವಾ? ನರೇಂದ್ರ ಮೋದಿ ಕೋವಿಡ್ ಪ್ಯಾಕೇಜ್ ಎಂದು ಯಾವ ರಾಜ್ಯಕ್ಕೂ ಒಂದು ರೂಪಾಯಿ ಹಣ ನೀಡಿಲ್ಲ. ಆದರೆ, ದೀಪ ಹಚ್ಚಿ, ಚೆಪ್ಪಾಳೆ ಹೊಡಿರಿ ಅಂತಾರೆ. ಇದ್ರಿಂದ ಬಡವರ ಕಷ್ಟ ನೀಗುತ್ತಾ?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

“ಮಾರ್ಚ್ 24 ರಂದು ಲಾಕ್‌ಡೌನ್ ಮಾಡಿದ್ದರೂ ಸಹ ವಲಸೆ ಕಾರ್ಮಿಕರನ್ನು ಅವರವರ ಮನೆಗೆ ಕಳುಹಿಸಲು ಯಾವುದೇ ಸಿದ್ದತೆ ಮಾಡಿಕೊಂಡಿರಲಿಲ್ಲ. ಇದರಿಂದ ವಲಸೆ ಕಾರ್ಮಿಕರು ಸಾಕಷ್ಟು ಪರದಾಡಿದ್ದಾರೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಕಾರ್ಮಿಕರಿಗೆ ಈ ಸಮಸ್ಯೆ ಬರುತ್ತಿರಲಿಲ್ಲ.” ಎಂದು ಹೇಳಿದ್ದಾರೆ.

“ಇದೀಗ 5.05 ಲಕ್ಷ ವಲಸೆ ಕಾರ್ಮಿಕರು ಆನ್‌ಲೈನ್‌ ನಲ್ಲಿ ಅಪ್ಲೈ ಮಾಡಿದ್ದಾರೆ. ಆದರೆ, ಅರವತ್ತು ಸಾವಿರ ಮಂದಿಗೆ ಪರ್ಮಿಷನ್ ಕೊಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಉಳಿದವರ ಕಥೆ ಏನು? ಹೀಗಾಗಿ ಎಲ್ಲಾ ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರವರ ರಾಜ್ಯಗಳಿಗೆ ಕಳುಹಿಸುವ ಕೆಲಸವಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.


ಓದಿ:  ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ


ನಮ್ಮ ಚಾನೆಲಿನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...