Homeಕರ್ನಾಟಕಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

ಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಸರ್ಕಾರ ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಇದನ್ನು ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ. ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಕೊರೊನಾ ಸಾಂಕ್ರಮಿಕ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲ

“ಕೊರೊನಾ ವೈರಸ್ ಜನವರಿ 30 ರಂದು ಕೇರಳದಲ್ಲಿ ಪತ್ತೆಯಾಗಿತ್ತು. ಈ ಸೋಂಕು ದೇಶದಾದ್ಯಂತ ಹರಡದಂತೆ ತಡೆಯಲು ಜನವರಿ, ಫೆಬ್ರವರಿ ಸೇರಿದಂತೆ ಎರಡು ತಿಂಗಳ ಸಮಯಾವಕಾಶ ಇತ್ತು. ಆದರೆ, ಲಾಕ್ ಡೌನ್ ಮಾಡಿದ್ದು ಮಾರ್ಚ್ ಕೊನೆ ವಾರದಲ್ಲಿ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ

“ಸಿದ್ದತೆಗಳನ್ನ ಮಾಡಲು ಸಾಕಷ್ಟು ಸಮಯವಿದ್ದರೂ, ಯಾವ ಸರ್ಕಾರಗಳೂ ಏನೂ ಮಾಡಲಿಲ್ಲ. ಕೇಂದ್ರ ಸರ್ಕಾರ ನರೇಂದ್ರ ಮೋದಿ ಅವರು ವಿದೇಶಿ ವಿಮಾನಯಾನ ಬಂದ್ ಮಾಡಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ. ಇಷ್ಟು ದೊಡ್ಡ ಮಟ್ಟದಲ್ಲಿ ರೋಗ ಹಬ್ಬುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ, ದೇಶದಾದ್ಯಂತ ಕೊರೊನಾ ವೈರಸ್ ಹೆಚ್ಚಾಗಲು ತಬ್ಲಿಘಿಗಳೇ ಕಾರಣ ಎಂದು ರಾಜಕೀಯ ಮಾಡಲಾಗುತ್ತಿದೆ. ಆದರೆ, ಇಟಲಿ, ಅಮೇರಿಕಾ, ಸ್ಪೇನ್ ನಲ್ಲಿ ಯಾವ ತಬ್ಲಿಘಿಗಳಿದ್ದಾರೆ? ಅಸಲಿಗೆ ತಬ್ಲಿಘಿಗಳಿಗೆ ಸಭೆ ಮಾಡಲು ಲೈಸೆನ್ಸ್ ಕೊಟ್ಟವರ್ಯಾರು?, ಪೊಲೀಸ್ ಮತ್ತು ಕೇಂದ್ರ ಸರ್ಕಾರವೇ ಅನುಮತಿ ಕೊಟ್ಟು ಈಗ ಗೂಬೆ ಕೂರಿಸುವುದು ಎಷ್ಟು ಸರಿ? ಇವೆಲ್ಲಾ ಆರ್‌ಎಸ್‌ಎಸ್‌ ನವರ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಕೇರ್ ಹಣ ಯಾವ ರಾಜ್ಯಕ್ಕೂ ನೀಡಿಲ್ಲ

“ಈವರೆಗೆ ಪಿಎಂ ಫಂಡ್ ಗೆ 35,000 ಕೋಟಿ ಹಣ ಬಂದಿದೆ. ಕರ್ನಾಟಕದಿಂದ ಮೂರು ಸಾವಿರ ಕೋಟಿ ಹಣ ಹೋಗಿದೆ. ಈ ಹಣವನ್ನು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಕೊಡೋದಕ್ಕೆ ಆಗಲ್ವಾ? ನರೇಂದ್ರ ಮೋದಿ ಕೋವಿಡ್ ಪ್ಯಾಕೇಜ್ ಎಂದು ಯಾವ ರಾಜ್ಯಕ್ಕೂ ಒಂದು ರೂಪಾಯಿ ಹಣ ನೀಡಿಲ್ಲ. ಆದರೆ, ದೀಪ ಹಚ್ಚಿ, ಚೆಪ್ಪಾಳೆ ಹೊಡಿರಿ ಅಂತಾರೆ. ಇದ್ರಿಂದ ಬಡವರ ಕಷ್ಟ ನೀಗುತ್ತಾ?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

“ಮಾರ್ಚ್ 24 ರಂದು ಲಾಕ್‌ಡೌನ್ ಮಾಡಿದ್ದರೂ ಸಹ ವಲಸೆ ಕಾರ್ಮಿಕರನ್ನು ಅವರವರ ಮನೆಗೆ ಕಳುಹಿಸಲು ಯಾವುದೇ ಸಿದ್ದತೆ ಮಾಡಿಕೊಂಡಿರಲಿಲ್ಲ. ಇದರಿಂದ ವಲಸೆ ಕಾರ್ಮಿಕರು ಸಾಕಷ್ಟು ಪರದಾಡಿದ್ದಾರೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಕಾರ್ಮಿಕರಿಗೆ ಈ ಸಮಸ್ಯೆ ಬರುತ್ತಿರಲಿಲ್ಲ.” ಎಂದು ಹೇಳಿದ್ದಾರೆ.

“ಇದೀಗ 5.05 ಲಕ್ಷ ವಲಸೆ ಕಾರ್ಮಿಕರು ಆನ್‌ಲೈನ್‌ ನಲ್ಲಿ ಅಪ್ಲೈ ಮಾಡಿದ್ದಾರೆ. ಆದರೆ, ಅರವತ್ತು ಸಾವಿರ ಮಂದಿಗೆ ಪರ್ಮಿಷನ್ ಕೊಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಉಳಿದವರ ಕಥೆ ಏನು? ಹೀಗಾಗಿ ಎಲ್ಲಾ ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರವರ ರಾಜ್ಯಗಳಿಗೆ ಕಳುಹಿಸುವ ಕೆಲಸವಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.


ಓದಿ:  ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ


ನಮ್ಮ ಚಾನೆಲಿನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...