Homeಕರ್ನಾಟಕಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

ಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಸರ್ಕಾರ ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಇದನ್ನು ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ. ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಕೊರೊನಾ ಸಾಂಕ್ರಮಿಕ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲ

“ಕೊರೊನಾ ವೈರಸ್ ಜನವರಿ 30 ರಂದು ಕೇರಳದಲ್ಲಿ ಪತ್ತೆಯಾಗಿತ್ತು. ಈ ಸೋಂಕು ದೇಶದಾದ್ಯಂತ ಹರಡದಂತೆ ತಡೆಯಲು ಜನವರಿ, ಫೆಬ್ರವರಿ ಸೇರಿದಂತೆ ಎರಡು ತಿಂಗಳ ಸಮಯಾವಕಾಶ ಇತ್ತು. ಆದರೆ, ಲಾಕ್ ಡೌನ್ ಮಾಡಿದ್ದು ಮಾರ್ಚ್ ಕೊನೆ ವಾರದಲ್ಲಿ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ

“ಸಿದ್ದತೆಗಳನ್ನ ಮಾಡಲು ಸಾಕಷ್ಟು ಸಮಯವಿದ್ದರೂ, ಯಾವ ಸರ್ಕಾರಗಳೂ ಏನೂ ಮಾಡಲಿಲ್ಲ. ಕೇಂದ್ರ ಸರ್ಕಾರ ನರೇಂದ್ರ ಮೋದಿ ಅವರು ವಿದೇಶಿ ವಿಮಾನಯಾನ ಬಂದ್ ಮಾಡಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ. ಇಷ್ಟು ದೊಡ್ಡ ಮಟ್ಟದಲ್ಲಿ ರೋಗ ಹಬ್ಬುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ, ದೇಶದಾದ್ಯಂತ ಕೊರೊನಾ ವೈರಸ್ ಹೆಚ್ಚಾಗಲು ತಬ್ಲಿಘಿಗಳೇ ಕಾರಣ ಎಂದು ರಾಜಕೀಯ ಮಾಡಲಾಗುತ್ತಿದೆ. ಆದರೆ, ಇಟಲಿ, ಅಮೇರಿಕಾ, ಸ್ಪೇನ್ ನಲ್ಲಿ ಯಾವ ತಬ್ಲಿಘಿಗಳಿದ್ದಾರೆ? ಅಸಲಿಗೆ ತಬ್ಲಿಘಿಗಳಿಗೆ ಸಭೆ ಮಾಡಲು ಲೈಸೆನ್ಸ್ ಕೊಟ್ಟವರ್ಯಾರು?, ಪೊಲೀಸ್ ಮತ್ತು ಕೇಂದ್ರ ಸರ್ಕಾರವೇ ಅನುಮತಿ ಕೊಟ್ಟು ಈಗ ಗೂಬೆ ಕೂರಿಸುವುದು ಎಷ್ಟು ಸರಿ? ಇವೆಲ್ಲಾ ಆರ್‌ಎಸ್‌ಎಸ್‌ ನವರ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಕೇರ್ ಹಣ ಯಾವ ರಾಜ್ಯಕ್ಕೂ ನೀಡಿಲ್ಲ

“ಈವರೆಗೆ ಪಿಎಂ ಫಂಡ್ ಗೆ 35,000 ಕೋಟಿ ಹಣ ಬಂದಿದೆ. ಕರ್ನಾಟಕದಿಂದ ಮೂರು ಸಾವಿರ ಕೋಟಿ ಹಣ ಹೋಗಿದೆ. ಈ ಹಣವನ್ನು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಕೊಡೋದಕ್ಕೆ ಆಗಲ್ವಾ? ನರೇಂದ್ರ ಮೋದಿ ಕೋವಿಡ್ ಪ್ಯಾಕೇಜ್ ಎಂದು ಯಾವ ರಾಜ್ಯಕ್ಕೂ ಒಂದು ರೂಪಾಯಿ ಹಣ ನೀಡಿಲ್ಲ. ಆದರೆ, ದೀಪ ಹಚ್ಚಿ, ಚೆಪ್ಪಾಳೆ ಹೊಡಿರಿ ಅಂತಾರೆ. ಇದ್ರಿಂದ ಬಡವರ ಕಷ್ಟ ನೀಗುತ್ತಾ?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

“ಮಾರ್ಚ್ 24 ರಂದು ಲಾಕ್‌ಡೌನ್ ಮಾಡಿದ್ದರೂ ಸಹ ವಲಸೆ ಕಾರ್ಮಿಕರನ್ನು ಅವರವರ ಮನೆಗೆ ಕಳುಹಿಸಲು ಯಾವುದೇ ಸಿದ್ದತೆ ಮಾಡಿಕೊಂಡಿರಲಿಲ್ಲ. ಇದರಿಂದ ವಲಸೆ ಕಾರ್ಮಿಕರು ಸಾಕಷ್ಟು ಪರದಾಡಿದ್ದಾರೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಕಾರ್ಮಿಕರಿಗೆ ಈ ಸಮಸ್ಯೆ ಬರುತ್ತಿರಲಿಲ್ಲ.” ಎಂದು ಹೇಳಿದ್ದಾರೆ.

“ಇದೀಗ 5.05 ಲಕ್ಷ ವಲಸೆ ಕಾರ್ಮಿಕರು ಆನ್‌ಲೈನ್‌ ನಲ್ಲಿ ಅಪ್ಲೈ ಮಾಡಿದ್ದಾರೆ. ಆದರೆ, ಅರವತ್ತು ಸಾವಿರ ಮಂದಿಗೆ ಪರ್ಮಿಷನ್ ಕೊಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಉಳಿದವರ ಕಥೆ ಏನು? ಹೀಗಾಗಿ ಎಲ್ಲಾ ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರವರ ರಾಜ್ಯಗಳಿಗೆ ಕಳುಹಿಸುವ ಕೆಲಸವಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.


ಓದಿ:  ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ


ನಮ್ಮ ಚಾನೆಲಿನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...