Homeಕರ್ನಾಟಕಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

ಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಸರ್ಕಾರ ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಇದನ್ನು ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ. ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಕೊರೊನಾ ಸಾಂಕ್ರಮಿಕ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲ

“ಕೊರೊನಾ ವೈರಸ್ ಜನವರಿ 30 ರಂದು ಕೇರಳದಲ್ಲಿ ಪತ್ತೆಯಾಗಿತ್ತು. ಈ ಸೋಂಕು ದೇಶದಾದ್ಯಂತ ಹರಡದಂತೆ ತಡೆಯಲು ಜನವರಿ, ಫೆಬ್ರವರಿ ಸೇರಿದಂತೆ ಎರಡು ತಿಂಗಳ ಸಮಯಾವಕಾಶ ಇತ್ತು. ಆದರೆ, ಲಾಕ್ ಡೌನ್ ಮಾಡಿದ್ದು ಮಾರ್ಚ್ ಕೊನೆ ವಾರದಲ್ಲಿ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ

“ಸಿದ್ದತೆಗಳನ್ನ ಮಾಡಲು ಸಾಕಷ್ಟು ಸಮಯವಿದ್ದರೂ, ಯಾವ ಸರ್ಕಾರಗಳೂ ಏನೂ ಮಾಡಲಿಲ್ಲ. ಕೇಂದ್ರ ಸರ್ಕಾರ ನರೇಂದ್ರ ಮೋದಿ ಅವರು ವಿದೇಶಿ ವಿಮಾನಯಾನ ಬಂದ್ ಮಾಡಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ. ಇಷ್ಟು ದೊಡ್ಡ ಮಟ್ಟದಲ್ಲಿ ರೋಗ ಹಬ್ಬುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ, ದೇಶದಾದ್ಯಂತ ಕೊರೊನಾ ವೈರಸ್ ಹೆಚ್ಚಾಗಲು ತಬ್ಲಿಘಿಗಳೇ ಕಾರಣ ಎಂದು ರಾಜಕೀಯ ಮಾಡಲಾಗುತ್ತಿದೆ. ಆದರೆ, ಇಟಲಿ, ಅಮೇರಿಕಾ, ಸ್ಪೇನ್ ನಲ್ಲಿ ಯಾವ ತಬ್ಲಿಘಿಗಳಿದ್ದಾರೆ? ಅಸಲಿಗೆ ತಬ್ಲಿಘಿಗಳಿಗೆ ಸಭೆ ಮಾಡಲು ಲೈಸೆನ್ಸ್ ಕೊಟ್ಟವರ್ಯಾರು?, ಪೊಲೀಸ್ ಮತ್ತು ಕೇಂದ್ರ ಸರ್ಕಾರವೇ ಅನುಮತಿ ಕೊಟ್ಟು ಈಗ ಗೂಬೆ ಕೂರಿಸುವುದು ಎಷ್ಟು ಸರಿ? ಇವೆಲ್ಲಾ ಆರ್‌ಎಸ್‌ಎಸ್‌ ನವರ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಕೇರ್ ಹಣ ಯಾವ ರಾಜ್ಯಕ್ಕೂ ನೀಡಿಲ್ಲ

“ಈವರೆಗೆ ಪಿಎಂ ಫಂಡ್ ಗೆ 35,000 ಕೋಟಿ ಹಣ ಬಂದಿದೆ. ಕರ್ನಾಟಕದಿಂದ ಮೂರು ಸಾವಿರ ಕೋಟಿ ಹಣ ಹೋಗಿದೆ. ಈ ಹಣವನ್ನು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಕೊಡೋದಕ್ಕೆ ಆಗಲ್ವಾ? ನರೇಂದ್ರ ಮೋದಿ ಕೋವಿಡ್ ಪ್ಯಾಕೇಜ್ ಎಂದು ಯಾವ ರಾಜ್ಯಕ್ಕೂ ಒಂದು ರೂಪಾಯಿ ಹಣ ನೀಡಿಲ್ಲ. ಆದರೆ, ದೀಪ ಹಚ್ಚಿ, ಚೆಪ್ಪಾಳೆ ಹೊಡಿರಿ ಅಂತಾರೆ. ಇದ್ರಿಂದ ಬಡವರ ಕಷ್ಟ ನೀಗುತ್ತಾ?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

“ಮಾರ್ಚ್ 24 ರಂದು ಲಾಕ್‌ಡೌನ್ ಮಾಡಿದ್ದರೂ ಸಹ ವಲಸೆ ಕಾರ್ಮಿಕರನ್ನು ಅವರವರ ಮನೆಗೆ ಕಳುಹಿಸಲು ಯಾವುದೇ ಸಿದ್ದತೆ ಮಾಡಿಕೊಂಡಿರಲಿಲ್ಲ. ಇದರಿಂದ ವಲಸೆ ಕಾರ್ಮಿಕರು ಸಾಕಷ್ಟು ಪರದಾಡಿದ್ದಾರೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಕಾರ್ಮಿಕರಿಗೆ ಈ ಸಮಸ್ಯೆ ಬರುತ್ತಿರಲಿಲ್ಲ.” ಎಂದು ಹೇಳಿದ್ದಾರೆ.

“ಇದೀಗ 5.05 ಲಕ್ಷ ವಲಸೆ ಕಾರ್ಮಿಕರು ಆನ್‌ಲೈನ್‌ ನಲ್ಲಿ ಅಪ್ಲೈ ಮಾಡಿದ್ದಾರೆ. ಆದರೆ, ಅರವತ್ತು ಸಾವಿರ ಮಂದಿಗೆ ಪರ್ಮಿಷನ್ ಕೊಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಉಳಿದವರ ಕಥೆ ಏನು? ಹೀಗಾಗಿ ಎಲ್ಲಾ ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರವರ ರಾಜ್ಯಗಳಿಗೆ ಕಳುಹಿಸುವ ಕೆಲಸವಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.


ಓದಿ:  ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ


ನಮ್ಮ ಚಾನೆಲಿನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....