Homeಕರ್ನಾಟಕಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

ಬಹುರಾಷ್ಟ್ರೀಯ ಕಂಪೆನಿಗಳಿಗೆ ಲಾಭ ಮಾಡಿಕೊಡಲು APMC ಕಾಯ್ದೆಗೆ ತಿದ್ದುಪಡಿ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಸರ್ಕಾರ ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಇದನ್ನು ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ. ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಕೊರೊನಾ ಸಾಂಕ್ರಮಿಕ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲ

“ಕೊರೊನಾ ವೈರಸ್ ಜನವರಿ 30 ರಂದು ಕೇರಳದಲ್ಲಿ ಪತ್ತೆಯಾಗಿತ್ತು. ಈ ಸೋಂಕು ದೇಶದಾದ್ಯಂತ ಹರಡದಂತೆ ತಡೆಯಲು ಜನವರಿ, ಫೆಬ್ರವರಿ ಸೇರಿದಂತೆ ಎರಡು ತಿಂಗಳ ಸಮಯಾವಕಾಶ ಇತ್ತು. ಆದರೆ, ಲಾಕ್ ಡೌನ್ ಮಾಡಿದ್ದು ಮಾರ್ಚ್ ಕೊನೆ ವಾರದಲ್ಲಿ.” ಎಂದು ಸಿದ್ದರಾಮಯ್ಯ ಹೇಳಿದ್ದಾರೆ

“ಸಿದ್ದತೆಗಳನ್ನ ಮಾಡಲು ಸಾಕಷ್ಟು ಸಮಯವಿದ್ದರೂ, ಯಾವ ಸರ್ಕಾರಗಳೂ ಏನೂ ಮಾಡಲಿಲ್ಲ. ಕೇಂದ್ರ ಸರ್ಕಾರ ನರೇಂದ್ರ ಮೋದಿ ಅವರು ವಿದೇಶಿ ವಿಮಾನಯಾನ ಬಂದ್ ಮಾಡಿದ್ದರೆ ಈ ಸಮಸ್ಯೆ ಇರುತ್ತಿರಲಿಲ್ಲ. ಇಷ್ಟು ದೊಡ್ಡ ಮಟ್ಟದಲ್ಲಿ ರೋಗ ಹಬ್ಬುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ, ದೇಶದಾದ್ಯಂತ ಕೊರೊನಾ ವೈರಸ್ ಹೆಚ್ಚಾಗಲು ತಬ್ಲಿಘಿಗಳೇ ಕಾರಣ ಎಂದು ರಾಜಕೀಯ ಮಾಡಲಾಗುತ್ತಿದೆ. ಆದರೆ, ಇಟಲಿ, ಅಮೇರಿಕಾ, ಸ್ಪೇನ್ ನಲ್ಲಿ ಯಾವ ತಬ್ಲಿಘಿಗಳಿದ್ದಾರೆ? ಅಸಲಿಗೆ ತಬ್ಲಿಘಿಗಳಿಗೆ ಸಭೆ ಮಾಡಲು ಲೈಸೆನ್ಸ್ ಕೊಟ್ಟವರ್ಯಾರು?, ಪೊಲೀಸ್ ಮತ್ತು ಕೇಂದ್ರ ಸರ್ಕಾರವೇ ಅನುಮತಿ ಕೊಟ್ಟು ಈಗ ಗೂಬೆ ಕೂರಿಸುವುದು ಎಷ್ಟು ಸರಿ? ಇವೆಲ್ಲಾ ಆರ್‌ಎಸ್‌ಎಸ್‌ ನವರ ಹುನ್ನಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಎಂ ಕೇರ್ ಹಣ ಯಾವ ರಾಜ್ಯಕ್ಕೂ ನೀಡಿಲ್ಲ

“ಈವರೆಗೆ ಪಿಎಂ ಫಂಡ್ ಗೆ 35,000 ಕೋಟಿ ಹಣ ಬಂದಿದೆ. ಕರ್ನಾಟಕದಿಂದ ಮೂರು ಸಾವಿರ ಕೋಟಿ ಹಣ ಹೋಗಿದೆ. ಈ ಹಣವನ್ನು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಕೊಡೋದಕ್ಕೆ ಆಗಲ್ವಾ? ನರೇಂದ್ರ ಮೋದಿ ಕೋವಿಡ್ ಪ್ಯಾಕೇಜ್ ಎಂದು ಯಾವ ರಾಜ್ಯಕ್ಕೂ ಒಂದು ರೂಪಾಯಿ ಹಣ ನೀಡಿಲ್ಲ. ಆದರೆ, ದೀಪ ಹಚ್ಚಿ, ಚೆಪ್ಪಾಳೆ ಹೊಡಿರಿ ಅಂತಾರೆ. ಇದ್ರಿಂದ ಬಡವರ ಕಷ್ಟ ನೀಗುತ್ತಾ?” ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

“ಮಾರ್ಚ್ 24 ರಂದು ಲಾಕ್‌ಡೌನ್ ಮಾಡಿದ್ದರೂ ಸಹ ವಲಸೆ ಕಾರ್ಮಿಕರನ್ನು ಅವರವರ ಮನೆಗೆ ಕಳುಹಿಸಲು ಯಾವುದೇ ಸಿದ್ದತೆ ಮಾಡಿಕೊಂಡಿರಲಿಲ್ಲ. ಇದರಿಂದ ವಲಸೆ ಕಾರ್ಮಿಕರು ಸಾಕಷ್ಟು ಪರದಾಡಿದ್ದಾರೆ. ಮೊದಲೇ ಎಚ್ಚೆತ್ತುಕೊಂಡಿದ್ದರೆ ಕಾರ್ಮಿಕರಿಗೆ ಈ ಸಮಸ್ಯೆ ಬರುತ್ತಿರಲಿಲ್ಲ.” ಎಂದು ಹೇಳಿದ್ದಾರೆ.

“ಇದೀಗ 5.05 ಲಕ್ಷ ವಲಸೆ ಕಾರ್ಮಿಕರು ಆನ್‌ಲೈನ್‌ ನಲ್ಲಿ ಅಪ್ಲೈ ಮಾಡಿದ್ದಾರೆ. ಆದರೆ, ಅರವತ್ತು ಸಾವಿರ ಮಂದಿಗೆ ಪರ್ಮಿಷನ್ ಕೊಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಉಳಿದವರ ಕಥೆ ಏನು? ಹೀಗಾಗಿ ಎಲ್ಲಾ ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರವರ ರಾಜ್ಯಗಳಿಗೆ ಕಳುಹಿಸುವ ಕೆಲಸವಾಗಬೇಕು” ಎಂದು ಅವರು ಒತ್ತಾಯಿಸಿದ್ದಾರೆ.


ಓದಿ:  ರಕ್ತ ಹರಿಸಿ ನಾಡು ಕಟ್ಟಿರುವ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ್ಯ ಬಿಡಿ: ಸಿದ್ದರಾಮಯ್ಯ ಆಗ್ರಹ


ನಮ್ಮ ಚಾನೆಲಿನ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...