Homeಮುಖಪುಟಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

- Advertisement -
- Advertisement -

ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ಮಾಡುವ ಹುನ್ನಾರಕ್ಕೆ ಬಿಜೆಪಿ ಸರ್ಕಾರ ಕೈ ಹಾಕಿದೆ. ಮೋದಿ ಸರ್ಕಾರದ ಅಣತಿಯಂತೆ ಈ ರೈತ ವಿರೋಧೀ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ.

ದೊಡ್ಡ ದೊಡ್ಡ ಜಮೀನ್ದಾರರು ಕರ್ನಾಟಕದಲ್ಲಿ ನಿರ್ಗತಿಕರಿಗೆ 2-3 ಎಕರೆ ಜಮೀನು ಮಾಡಲು ಕೊಟ್ಟು ಅವರನ್ನು ನಿರಂತರ ಗುಲಾಮಗಿರಿಗೆ ನೂಕಿದ್ದರು. ಬಡವರನ್ನು ಖಾಯಂ ಆಗಿ ಬಡವರನ್ನಾಗಿಡುವ ಕೆಲಸ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿತ್ತು. ಈ ಬಡ ಗೇಣಿದಾರರನ್ನು ಸಂಘಟನೆ ಮಾಡಿದ ಮೊದಲಿಗರಲ್ಲಿ ಕಡಿದಾಳ್ ಮಂಜಪ್ಪನವರು, ಬಸವಾನಿ ರಾಮಶರ್ಮರು ಮತ್ತು ಗಣಪತಿಯಪ್ಪ ಮೊದಲಿಗರು. ಆನಂತರ ಶಾಂತವೇರಿ ಗೋಪಾಲಗೌಡರು ಮುಂತಾದ ಸೋಷಿಯಲಿಸ್ಟ್ ಮುಖಂಡರು ಗೇಣೀದಾರರರನ್ನು ಸಂಘಟನೆ ಮಾಡಿ, ಜಮೀನ್ದಾರರ ವಿರುದ್ಧವಾಗಿ, ಗೇಣೀ ಪದ್ದತಿ ರದ್ದತಿಗಾಗಿ ಚಳವಳಿ ಮಾಡಿದರು. ಮುಂದೆ ದೇವರಾಜ ಅರಸರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ಗೇಣಿ ಪದ್ದತಿ ರದ್ದುಗೊಳಿಸುವ ಶಾಸನ ಜಾರಿಗೆ ತಂದರು. ಈ ಜಮೀನ್ದಾರರ ಜಮೀನುಗಳಲ್ಲಿ ದುಡಿಯುತ್ತಿದ್ದ ಬಡ ರೈತರನ್ನು ಅವರು ಮಾಡುತ್ತಿದ್ದ ಜಮೀನುಗಳಿಗೆ ಒಡೆಯರನ್ನಾಗಿ ಮಾಡಿದರು. ಉಳುವವನಿಗೆ ಭೂಮಿ ಎಂದು ಘೋಷಣೆ ಮಾಡಿದರು. ಈ Slogan ದೊಡ್ಡ ಜಮೀನ್ದಾರರ ಭೂಮಿಗೆ ಮಾತ್ರ ಸೀಮಿತವಾಗಿತ್ತು.

ಅದೇ ದೇವರಾಜ ಅರಸರು ಕರ್ನಾಟಕದ ಎಲ್ಲ ಕಡೆಗೂ ಅನ್ವಯಿಸುವ ಭೂ ಸುಧಾರಣಾ ಕಾಯ್ದೆಯನ್ನೂ ಅದೇ ಕಾಲಕ್ಕೆ ಜಾರಿಗೆ ತಂದರು ಈ ಕಾಯ್ದೆಯ ಪ್ರಕಾರ ಭೂಮಿತಿ ಶಾಸನವನ್ನು ಜಾರಿಗೆ ತಂದರೆ, ಎಲ್ಲಾ ಉಳುವರಿಗೂ ಭೂಮಿ ಎಂದು ಘೋಷಿಸಲಿಲ್ಲ. ಅಷ್ಟೇ ಅಲ್ಲ ಅವರು ಕೈಗೊಂಡ ಭೂಮಿತಿ ಶಾಸನ ಅವೈಜ್ಞಾನಿಕವೂ, ಅವಾಸ್ತವಿಕವೂ ಆಗಿತ್ತು. ಹಾಗಾಗಿ ಈ ಭೂಮಿತಿ ಶಾಸನದಿಂದ ಬಡವರಿಗೆ ಭೂಹೀನರಿಗೆ ಜಮೀನು ಸಿಕ್ಕಲಿಲ್ಲ.

ಕರ್ನಾಟಕದಲ್ಲಿ ಒಂದು ಎಕರೆ 2 ಎಕರೆ ಜಮೀನುಳ್ಳವರು ಶೇ.60 ಮಂದಿ ಇದ್ದಾರೆ. ಇವರು ಜಮೀನಿನಲ್ಲಿ ಸ್ವತಃ ದುಡಿದು ತಿನ್ನುವವರು. ಹೆಚ್ಚಿಗೆ ಜಮೀನು ಇರುವವರೆಲ್ಲ ದಿನಕ್ಕೆ 500 ರೂ ಕೂಲಿ ಕೊಟ್ಟು ಜಮೀನು ಮಾಡಿಸುವವರು. ಇವರೆಲ್ಲ ತಮಗಿರುವ ಎಲ್ಲಾ ಜಮೀನನ್ನೂ ಆಹಾರಧಾನ್ಯ ಬೆಳೆಯುವುದಕ್ಕೆ ಉಪಯೋಗಿಸುತ್ತಿಲ್ಲ. ಇವರು ತಿಂಗಳು ತಿಂಗಳು ಹಣ ನೀಡುವ ತರಕಾರಿ, ಹೂವು, ಶುಂಠಿ, ಅರಿಸಿನ, ಹಣ್ಣಿನ ಗಿಡಗಳನ್ನು ಬೆಳೆಸುವವರು ಮತ್ತು ಪರಾವಲಂಬಿಗಳು. ಒಂದು ಎರಡು ಎಕರೆ ಜಮೀನುಳ್ಳವರು ಸ್ವತಃ ವ್ವವಸಾಯ ಮಾಡುವರಾದರೂ ಅವರಿಗೆ ಇರುವ ಸಣ್ಣ ಜಮೀನಿನಲ್ಲಿ ತಮ್ಮ ಹೊಟ್ಟೆಗೆ ಬೇಕಾದಷ್ಟನ್ನು ಬೆಳೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಬಡ ರೈತರಿಗೆ ಕನಿಷ್ಟ 5 ಎಕರೆ ಖುಷ್ಕಿ ಜಮೀನು ಬೇಕು. ಹೀಗೆ ಮಾಡುವುದರಿಂದ ಅವರು ತಾವೇ ದುಡಿದು ತಮ್ಮ ಉಪಜೀವನ ನಡೆಸಿಕೊಳ್ಳುವುದರ ಜೊತೆಗೆ ಸಮಾಜಕ್ಕೂ ಅಷ್ಟೂ ಇಷ್ಟೋ ಆಹಾರ ಒದಗಿಸಿಯಾರು.

ಆದ್ದರಿಂದ ಈಗ ಭೂಮಿತಿ ಶಾಸನವನ್ನು ಪರಿಷ್ಕರಿಸಿ ಒಂದು ಎಕರೆಯಿಂದ ೩ ಎಕರೆ ಜಮೀನು ಕೊಳ್ಳಲು ಬಡ ರೈತರಿಗೂ ಭೂ ಕಾರ್ಮಿಕರಿಗೂ ತಲಾ 5 ಎಕರೆ ಜಮೀನು ದೊರೆಯುವಂತೆ ಶಾಸನ ಮಾಡಬೇಕು. ಹಾಗೆ ಮಾಡದಿದ್ದರೆ ಈ ಅಪಾರ ಸಂಖ್ಯೆಯ ಬಡವರೂ ಕೂಡ ವಲಸಿಗ ಕಾರ್ಮಿಕರಾಗಿ ಪಟ್ಟಣ ಸೇರುವುದು ಖಚಿತ. ಸರ್ಕಾರಗಳು 70 ವರ್ಷದಿಂದ ಒಂದೇ ಸಮನೆ ಬೆಳೆ ಬೆಳೆಯುವ ಜಮೀನುಗಳನ್ನು ರಸ್ತೆ ನಿರ್ಮಿಸುವ, ಅಗಲ ಮಾಡುವ ಉದ್ಯಮಗಳಿಗಾಗಿ ವಶ ಪಡಿಸಿಕೊಂಡು ವ್ಯವಸಾಯದ ಭೂಮಿಯನ್ನು ನುಂಗಿ ಹಾಕುತ್ತಿವೆ.

ಈಗ ಸರ್ಕಾರ ಕೈಗೊಳ್ಳುವ ಭೂ ಸುಧಾರಣೆ ಕಾಯ್ದೆಯೂ ಈ ಬಡ ರೈತರನ್ನೆಲ್ಲ ವಲಸೆ ಹೋಗಬೇಕಾದ ಅನಿವಾರ್ಯತೆಗೆ ಅಣಿಗೊಳಿಸುತ್ತದೆ. ಈ ಸುಧಾರಣೆಯ ಕಾಯ್ದೆ ಜಾರಿಗೆ ಬಂದರೆ ಬಡಜನರ ಜಮೀನೆಲ್ಲ ಶ್ರೀಮಂತರ ಅಥವಾ ಕಾರ್ಪೋರೇಟ್ ಜಗತ್ತಿನವರ ವಶವಾಗುತ್ತದೆ. ಕಾರ್ಪೋರೇಟ್ ಕಂಪನಿಗಳು consolidation holding ಅನ್ನು ಬೆಂಬಲಿಸುತ್ತವೆ. ಬಡವರಿಗೆ ಆಮಿಷವೊಡ್ಡಿ ಅವರ ಜಮೀನನ್ನೆಲ್ಲ ದೊಡ್ಡ ಜಮೀನ್ದಾರರ ಅಥವಾ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡುವ ಹುನ್ನಾರ ಇದು. ಕಾಪೋರೇಟ್ ಕಂಪನಿಗಳು ವ್ಯವಸಾಯಕ್ಕೆ ಬೇಕಾದ ಅತ್ಯುತ್ತಮ ಸಾಧನಗಳನ್ನು ಈ ಶ್ರೀಮಂತ ರೈತರಿಗೆ ಒದಗಿಸಿ ಕೆಲವೇ ಜನ ಕೂಲಿಗಳ ಅವಶ್ಯಕತೆ ಬೀಳುವಂತೆ ಮಾಡುತ್ತಾರೆ. ಭೂಮಿ ಕಳೆದುಕೊಂಡವರೆಲ್ಲ ಗ್ರಾಮಬಿಟ್ಟು ಪಟ್ಟಣ ಸೇರಬೇಕಾದ ಅನಿವಾರ್ಯತೆ ಉಂಟು ಮಾಡುತ್ತಾರೆ. ಹೆಚ್ಚಿನ ಜಮೀನುಳ್ಳ ರೈತರನ್ನು ಹಣವಂತರು, ಕಾರ್ಪೋರೇಟ್‌ಗಳು ಸಂಧಿಸಿ, ತಾವು ಹೇಳುವ ಬೆಳೆ ಬೆಳೆದು ಕೊಟ್ಟರೆ, ಅವರು ನೀರೀಕ್ಷಿಸುವ ದರ ನೀಡುವುದಾಗಿ ಹೇಳುತ್ತಾರೆ. ಅರ್ಥಾತ್ ಈ ಜಮೀನುದಾರರನ್ನು ತಮ್ಮ ಕೂಲಿಯಾಳುಗಳನ್ನಾಗಿ ಪರಿವರ್ತಿಸುತ್ತಾರೆ. ವ್ಯವಸಾಯ ಪ್ರಧಾನವಾದ ಭಾರತ ದೇಶವನ್ನು ಅಮೆರಿಕ ಮಾಡುವ ಸನ್ನಾಹ ಮೋದಿಯವರದು ಯಡಿಯೂರಪ್ಪನವರದು.

ಅಮೆರಿಕ ಉದ್ಯಮಗಳ ದೇಶ. ಕೈಗಾರಿಕ ಪ್ರಧಾನ ದೇಶ. ವ್ಯವಸಾಯ ಪ್ರಧಾನ ದೇಶವಲ್ಲ. ಅಲ್ಲಿ ವ್ಯವಸಾಯದಲ್ಲಿ ಜನ ತೊಡಗಿಕೊಳ್ಳುವುದಿಲ್ಲ. ಆದ್ದರಿಂದ ಕೆಲವರು ಮಾತ್ರ ಸಾವಿರ ಸಾವಿರ ಎಕರೆ ಜಮೀನು ಮಾಲಿಕರಾಗಿದ್ದಾರೆ. ಅವರು ಜಮೀನನ್ನೆಲ್ಲ ಪವರ್ ಟಿಲ್ಲರ್‌ನಲ್ಲಿ ಉಳುತ್ತಾರೆ. ಬೀಜವನ್ನು ಹೆಲಿಕಾಪ್ಟರ್‌ನಿಂದ ಬಿತ್ತುತ್ತಾರೆ. ಡ್ರೈಯರ್‌ಗಳನ್ನು ಧಾನ್ಯವನ್ನು ತೂರುವ ಯಂತ್ರಗಳನ್ನು ಬೀಜ ಬಿಡಿಸುವ ಯಂತ್ರಗಳನ್ನು ಇಟ್ಟುಕೊಂಡಿದ್ದಾರೆ. ಮನೆ ಮಂದಿಯೇ 1000 ಎಕರೆ ಜಮೀನಿನ ನಿರ್ವಹಣೆಯನ್ನು ಮಾಡುತ್ತಾರೆ.

ವ್ಯವಸಾಯ ಪ್ರಧಾನವಾದ ಭಾರತದಲ್ಲಿ ಅಮೆರಿಕದ ಪ್ರಯೋಗವನ್ನು ಮಾಡುವುದು ಸರಿಯಲ್ಲ. ಆಹಾರಧಾನ್ಯಕ್ಕಾಗಿ ಭಿಕ್ಷಾಪಾತ್ರೆ ತೆಗೆದುಕೊಂಡು ಅನ್ಯ ದೇಶಗಳಲ್ಲಿ ದೇಹಿ ಎಂದು ಬೇಡುವುದೂ ಅಪಮಾನಕರ. ಇಂತಹ ಅವಿವೇಕದ ಭೂಸುಧಾರಣೆಯನ್ನು ಭಾರತದಲ್ಲಿ ಜಾರಿ ಮಾಡುವುದನ್ನು ತಡೆಗಟ್ಟಬೇಕಾದ್ದು ಈ ದೇಶದ ಎಲ್ಲ ಜನರ ಕರ್ತವ್ಯವೇ ಆಗಿದೆ.

ಮುಖ್ಯವಾಗಿ ಭಾರತದಾದ್ಯಂತ ಇರುವ ಎಲ್ಲ ರೈತ ಸಂಘಟನೆಗಲೂ ಒಂದುಗೂಡಿ ಒಂದು ಸಂಘರ್ಷ ಸಮಿತಿಯನ್ನು ರಚಿಸಬೇಕು. ಭಾರತದ ಬಡ ರೈತರ ಹಿತ ದೃಷ್ಟಿಯುಳ್ಳ ಎಲ್ಲರೂ ಶ್ರೀಮಂತರು ಬಡವರ ಭೂಮಿಯನ್ನು ಕೊಳ್ಳುವುದಕ್ಕೆ ಸರ್ಕಾರ ಅವಕಾಶ ಮಾಡಿಕೊಡುವ ಶಾಸನ ಮಾಡುವುದು ಜನದ್ರೋಹ ಕೆಲಸ ಎಂದು ಸಾರಿ ಹೇಳಬೇಕು. ಅದಕ್ಕಾಗಿ ದೇಶವ್ಯಾಪಿ ಅಸಹಕಾರ ಚಳವಳಿ ಆರಂಭಿಸಬೇಕು ಭಾರತದ ಸ್ವಾಯತ್ತತೆಯನ್ನು ಬಯಸುವ ಎಲ್ಲಾ ಜನರೂ, ರೈತ ಸಂಘಟನೆಗಳ ಜೊತೆಗೆ ಕೈ ಜೋಡಿಸಬೇಕು.

  • ಎಚ್.ಎಸ್‌ ದೊರೆಸ್ವಾಮಿ

ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...