Homeಮುಖಪುಟಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

- Advertisement -
- Advertisement -

ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ಮಾಡುವ ಹುನ್ನಾರಕ್ಕೆ ಬಿಜೆಪಿ ಸರ್ಕಾರ ಕೈ ಹಾಕಿದೆ. ಮೋದಿ ಸರ್ಕಾರದ ಅಣತಿಯಂತೆ ಈ ರೈತ ವಿರೋಧೀ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ.

ದೊಡ್ಡ ದೊಡ್ಡ ಜಮೀನ್ದಾರರು ಕರ್ನಾಟಕದಲ್ಲಿ ನಿರ್ಗತಿಕರಿಗೆ 2-3 ಎಕರೆ ಜಮೀನು ಮಾಡಲು ಕೊಟ್ಟು ಅವರನ್ನು ನಿರಂತರ ಗುಲಾಮಗಿರಿಗೆ ನೂಕಿದ್ದರು. ಬಡವರನ್ನು ಖಾಯಂ ಆಗಿ ಬಡವರನ್ನಾಗಿಡುವ ಕೆಲಸ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿತ್ತು. ಈ ಬಡ ಗೇಣಿದಾರರನ್ನು ಸಂಘಟನೆ ಮಾಡಿದ ಮೊದಲಿಗರಲ್ಲಿ ಕಡಿದಾಳ್ ಮಂಜಪ್ಪನವರು, ಬಸವಾನಿ ರಾಮಶರ್ಮರು ಮತ್ತು ಗಣಪತಿಯಪ್ಪ ಮೊದಲಿಗರು. ಆನಂತರ ಶಾಂತವೇರಿ ಗೋಪಾಲಗೌಡರು ಮುಂತಾದ ಸೋಷಿಯಲಿಸ್ಟ್ ಮುಖಂಡರು ಗೇಣೀದಾರರರನ್ನು ಸಂಘಟನೆ ಮಾಡಿ, ಜಮೀನ್ದಾರರ ವಿರುದ್ಧವಾಗಿ, ಗೇಣೀ ಪದ್ದತಿ ರದ್ದತಿಗಾಗಿ ಚಳವಳಿ ಮಾಡಿದರು. ಮುಂದೆ ದೇವರಾಜ ಅರಸರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ಗೇಣಿ ಪದ್ದತಿ ರದ್ದುಗೊಳಿಸುವ ಶಾಸನ ಜಾರಿಗೆ ತಂದರು. ಈ ಜಮೀನ್ದಾರರ ಜಮೀನುಗಳಲ್ಲಿ ದುಡಿಯುತ್ತಿದ್ದ ಬಡ ರೈತರನ್ನು ಅವರು ಮಾಡುತ್ತಿದ್ದ ಜಮೀನುಗಳಿಗೆ ಒಡೆಯರನ್ನಾಗಿ ಮಾಡಿದರು. ಉಳುವವನಿಗೆ ಭೂಮಿ ಎಂದು ಘೋಷಣೆ ಮಾಡಿದರು. ಈ Slogan ದೊಡ್ಡ ಜಮೀನ್ದಾರರ ಭೂಮಿಗೆ ಮಾತ್ರ ಸೀಮಿತವಾಗಿತ್ತು.

ಅದೇ ದೇವರಾಜ ಅರಸರು ಕರ್ನಾಟಕದ ಎಲ್ಲ ಕಡೆಗೂ ಅನ್ವಯಿಸುವ ಭೂ ಸುಧಾರಣಾ ಕಾಯ್ದೆಯನ್ನೂ ಅದೇ ಕಾಲಕ್ಕೆ ಜಾರಿಗೆ ತಂದರು ಈ ಕಾಯ್ದೆಯ ಪ್ರಕಾರ ಭೂಮಿತಿ ಶಾಸನವನ್ನು ಜಾರಿಗೆ ತಂದರೆ, ಎಲ್ಲಾ ಉಳುವರಿಗೂ ಭೂಮಿ ಎಂದು ಘೋಷಿಸಲಿಲ್ಲ. ಅಷ್ಟೇ ಅಲ್ಲ ಅವರು ಕೈಗೊಂಡ ಭೂಮಿತಿ ಶಾಸನ ಅವೈಜ್ಞಾನಿಕವೂ, ಅವಾಸ್ತವಿಕವೂ ಆಗಿತ್ತು. ಹಾಗಾಗಿ ಈ ಭೂಮಿತಿ ಶಾಸನದಿಂದ ಬಡವರಿಗೆ ಭೂಹೀನರಿಗೆ ಜಮೀನು ಸಿಕ್ಕಲಿಲ್ಲ.

ಕರ್ನಾಟಕದಲ್ಲಿ ಒಂದು ಎಕರೆ 2 ಎಕರೆ ಜಮೀನುಳ್ಳವರು ಶೇ.60 ಮಂದಿ ಇದ್ದಾರೆ. ಇವರು ಜಮೀನಿನಲ್ಲಿ ಸ್ವತಃ ದುಡಿದು ತಿನ್ನುವವರು. ಹೆಚ್ಚಿಗೆ ಜಮೀನು ಇರುವವರೆಲ್ಲ ದಿನಕ್ಕೆ 500 ರೂ ಕೂಲಿ ಕೊಟ್ಟು ಜಮೀನು ಮಾಡಿಸುವವರು. ಇವರೆಲ್ಲ ತಮಗಿರುವ ಎಲ್ಲಾ ಜಮೀನನ್ನೂ ಆಹಾರಧಾನ್ಯ ಬೆಳೆಯುವುದಕ್ಕೆ ಉಪಯೋಗಿಸುತ್ತಿಲ್ಲ. ಇವರು ತಿಂಗಳು ತಿಂಗಳು ಹಣ ನೀಡುವ ತರಕಾರಿ, ಹೂವು, ಶುಂಠಿ, ಅರಿಸಿನ, ಹಣ್ಣಿನ ಗಿಡಗಳನ್ನು ಬೆಳೆಸುವವರು ಮತ್ತು ಪರಾವಲಂಬಿಗಳು. ಒಂದು ಎರಡು ಎಕರೆ ಜಮೀನುಳ್ಳವರು ಸ್ವತಃ ವ್ವವಸಾಯ ಮಾಡುವರಾದರೂ ಅವರಿಗೆ ಇರುವ ಸಣ್ಣ ಜಮೀನಿನಲ್ಲಿ ತಮ್ಮ ಹೊಟ್ಟೆಗೆ ಬೇಕಾದಷ್ಟನ್ನು ಬೆಳೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಬಡ ರೈತರಿಗೆ ಕನಿಷ್ಟ 5 ಎಕರೆ ಖುಷ್ಕಿ ಜಮೀನು ಬೇಕು. ಹೀಗೆ ಮಾಡುವುದರಿಂದ ಅವರು ತಾವೇ ದುಡಿದು ತಮ್ಮ ಉಪಜೀವನ ನಡೆಸಿಕೊಳ್ಳುವುದರ ಜೊತೆಗೆ ಸಮಾಜಕ್ಕೂ ಅಷ್ಟೂ ಇಷ್ಟೋ ಆಹಾರ ಒದಗಿಸಿಯಾರು.

ಆದ್ದರಿಂದ ಈಗ ಭೂಮಿತಿ ಶಾಸನವನ್ನು ಪರಿಷ್ಕರಿಸಿ ಒಂದು ಎಕರೆಯಿಂದ ೩ ಎಕರೆ ಜಮೀನು ಕೊಳ್ಳಲು ಬಡ ರೈತರಿಗೂ ಭೂ ಕಾರ್ಮಿಕರಿಗೂ ತಲಾ 5 ಎಕರೆ ಜಮೀನು ದೊರೆಯುವಂತೆ ಶಾಸನ ಮಾಡಬೇಕು. ಹಾಗೆ ಮಾಡದಿದ್ದರೆ ಈ ಅಪಾರ ಸಂಖ್ಯೆಯ ಬಡವರೂ ಕೂಡ ವಲಸಿಗ ಕಾರ್ಮಿಕರಾಗಿ ಪಟ್ಟಣ ಸೇರುವುದು ಖಚಿತ. ಸರ್ಕಾರಗಳು 70 ವರ್ಷದಿಂದ ಒಂದೇ ಸಮನೆ ಬೆಳೆ ಬೆಳೆಯುವ ಜಮೀನುಗಳನ್ನು ರಸ್ತೆ ನಿರ್ಮಿಸುವ, ಅಗಲ ಮಾಡುವ ಉದ್ಯಮಗಳಿಗಾಗಿ ವಶ ಪಡಿಸಿಕೊಂಡು ವ್ಯವಸಾಯದ ಭೂಮಿಯನ್ನು ನುಂಗಿ ಹಾಕುತ್ತಿವೆ.

ಈಗ ಸರ್ಕಾರ ಕೈಗೊಳ್ಳುವ ಭೂ ಸುಧಾರಣೆ ಕಾಯ್ದೆಯೂ ಈ ಬಡ ರೈತರನ್ನೆಲ್ಲ ವಲಸೆ ಹೋಗಬೇಕಾದ ಅನಿವಾರ್ಯತೆಗೆ ಅಣಿಗೊಳಿಸುತ್ತದೆ. ಈ ಸುಧಾರಣೆಯ ಕಾಯ್ದೆ ಜಾರಿಗೆ ಬಂದರೆ ಬಡಜನರ ಜಮೀನೆಲ್ಲ ಶ್ರೀಮಂತರ ಅಥವಾ ಕಾರ್ಪೋರೇಟ್ ಜಗತ್ತಿನವರ ವಶವಾಗುತ್ತದೆ. ಕಾರ್ಪೋರೇಟ್ ಕಂಪನಿಗಳು consolidation holding ಅನ್ನು ಬೆಂಬಲಿಸುತ್ತವೆ. ಬಡವರಿಗೆ ಆಮಿಷವೊಡ್ಡಿ ಅವರ ಜಮೀನನ್ನೆಲ್ಲ ದೊಡ್ಡ ಜಮೀನ್ದಾರರ ಅಥವಾ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡುವ ಹುನ್ನಾರ ಇದು. ಕಾಪೋರೇಟ್ ಕಂಪನಿಗಳು ವ್ಯವಸಾಯಕ್ಕೆ ಬೇಕಾದ ಅತ್ಯುತ್ತಮ ಸಾಧನಗಳನ್ನು ಈ ಶ್ರೀಮಂತ ರೈತರಿಗೆ ಒದಗಿಸಿ ಕೆಲವೇ ಜನ ಕೂಲಿಗಳ ಅವಶ್ಯಕತೆ ಬೀಳುವಂತೆ ಮಾಡುತ್ತಾರೆ. ಭೂಮಿ ಕಳೆದುಕೊಂಡವರೆಲ್ಲ ಗ್ರಾಮಬಿಟ್ಟು ಪಟ್ಟಣ ಸೇರಬೇಕಾದ ಅನಿವಾರ್ಯತೆ ಉಂಟು ಮಾಡುತ್ತಾರೆ. ಹೆಚ್ಚಿನ ಜಮೀನುಳ್ಳ ರೈತರನ್ನು ಹಣವಂತರು, ಕಾರ್ಪೋರೇಟ್‌ಗಳು ಸಂಧಿಸಿ, ತಾವು ಹೇಳುವ ಬೆಳೆ ಬೆಳೆದು ಕೊಟ್ಟರೆ, ಅವರು ನೀರೀಕ್ಷಿಸುವ ದರ ನೀಡುವುದಾಗಿ ಹೇಳುತ್ತಾರೆ. ಅರ್ಥಾತ್ ಈ ಜಮೀನುದಾರರನ್ನು ತಮ್ಮ ಕೂಲಿಯಾಳುಗಳನ್ನಾಗಿ ಪರಿವರ್ತಿಸುತ್ತಾರೆ. ವ್ಯವಸಾಯ ಪ್ರಧಾನವಾದ ಭಾರತ ದೇಶವನ್ನು ಅಮೆರಿಕ ಮಾಡುವ ಸನ್ನಾಹ ಮೋದಿಯವರದು ಯಡಿಯೂರಪ್ಪನವರದು.

ಅಮೆರಿಕ ಉದ್ಯಮಗಳ ದೇಶ. ಕೈಗಾರಿಕ ಪ್ರಧಾನ ದೇಶ. ವ್ಯವಸಾಯ ಪ್ರಧಾನ ದೇಶವಲ್ಲ. ಅಲ್ಲಿ ವ್ಯವಸಾಯದಲ್ಲಿ ಜನ ತೊಡಗಿಕೊಳ್ಳುವುದಿಲ್ಲ. ಆದ್ದರಿಂದ ಕೆಲವರು ಮಾತ್ರ ಸಾವಿರ ಸಾವಿರ ಎಕರೆ ಜಮೀನು ಮಾಲಿಕರಾಗಿದ್ದಾರೆ. ಅವರು ಜಮೀನನ್ನೆಲ್ಲ ಪವರ್ ಟಿಲ್ಲರ್‌ನಲ್ಲಿ ಉಳುತ್ತಾರೆ. ಬೀಜವನ್ನು ಹೆಲಿಕಾಪ್ಟರ್‌ನಿಂದ ಬಿತ್ತುತ್ತಾರೆ. ಡ್ರೈಯರ್‌ಗಳನ್ನು ಧಾನ್ಯವನ್ನು ತೂರುವ ಯಂತ್ರಗಳನ್ನು ಬೀಜ ಬಿಡಿಸುವ ಯಂತ್ರಗಳನ್ನು ಇಟ್ಟುಕೊಂಡಿದ್ದಾರೆ. ಮನೆ ಮಂದಿಯೇ 1000 ಎಕರೆ ಜಮೀನಿನ ನಿರ್ವಹಣೆಯನ್ನು ಮಾಡುತ್ತಾರೆ.

ವ್ಯವಸಾಯ ಪ್ರಧಾನವಾದ ಭಾರತದಲ್ಲಿ ಅಮೆರಿಕದ ಪ್ರಯೋಗವನ್ನು ಮಾಡುವುದು ಸರಿಯಲ್ಲ. ಆಹಾರಧಾನ್ಯಕ್ಕಾಗಿ ಭಿಕ್ಷಾಪಾತ್ರೆ ತೆಗೆದುಕೊಂಡು ಅನ್ಯ ದೇಶಗಳಲ್ಲಿ ದೇಹಿ ಎಂದು ಬೇಡುವುದೂ ಅಪಮಾನಕರ. ಇಂತಹ ಅವಿವೇಕದ ಭೂಸುಧಾರಣೆಯನ್ನು ಭಾರತದಲ್ಲಿ ಜಾರಿ ಮಾಡುವುದನ್ನು ತಡೆಗಟ್ಟಬೇಕಾದ್ದು ಈ ದೇಶದ ಎಲ್ಲ ಜನರ ಕರ್ತವ್ಯವೇ ಆಗಿದೆ.

ಮುಖ್ಯವಾಗಿ ಭಾರತದಾದ್ಯಂತ ಇರುವ ಎಲ್ಲ ರೈತ ಸಂಘಟನೆಗಲೂ ಒಂದುಗೂಡಿ ಒಂದು ಸಂಘರ್ಷ ಸಮಿತಿಯನ್ನು ರಚಿಸಬೇಕು. ಭಾರತದ ಬಡ ರೈತರ ಹಿತ ದೃಷ್ಟಿಯುಳ್ಳ ಎಲ್ಲರೂ ಶ್ರೀಮಂತರು ಬಡವರ ಭೂಮಿಯನ್ನು ಕೊಳ್ಳುವುದಕ್ಕೆ ಸರ್ಕಾರ ಅವಕಾಶ ಮಾಡಿಕೊಡುವ ಶಾಸನ ಮಾಡುವುದು ಜನದ್ರೋಹ ಕೆಲಸ ಎಂದು ಸಾರಿ ಹೇಳಬೇಕು. ಅದಕ್ಕಾಗಿ ದೇಶವ್ಯಾಪಿ ಅಸಹಕಾರ ಚಳವಳಿ ಆರಂಭಿಸಬೇಕು ಭಾರತದ ಸ್ವಾಯತ್ತತೆಯನ್ನು ಬಯಸುವ ಎಲ್ಲಾ ಜನರೂ, ರೈತ ಸಂಘಟನೆಗಳ ಜೊತೆಗೆ ಕೈ ಜೋಡಿಸಬೇಕು.

  • ಎಚ್.ಎಸ್‌ ದೊರೆಸ್ವಾಮಿ

ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...