Homeಮುಖಪುಟಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ

- Advertisement -
- Advertisement -

ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿ ಮಾಡುವ ಹುನ್ನಾರಕ್ಕೆ ಬಿಜೆಪಿ ಸರ್ಕಾರ ಕೈ ಹಾಕಿದೆ. ಮೋದಿ ಸರ್ಕಾರದ ಅಣತಿಯಂತೆ ಈ ರೈತ ವಿರೋಧೀ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ.

ದೊಡ್ಡ ದೊಡ್ಡ ಜಮೀನ್ದಾರರು ಕರ್ನಾಟಕದಲ್ಲಿ ನಿರ್ಗತಿಕರಿಗೆ 2-3 ಎಕರೆ ಜಮೀನು ಮಾಡಲು ಕೊಟ್ಟು ಅವರನ್ನು ನಿರಂತರ ಗುಲಾಮಗಿರಿಗೆ ನೂಕಿದ್ದರು. ಬಡವರನ್ನು ಖಾಯಂ ಆಗಿ ಬಡವರನ್ನಾಗಿಡುವ ಕೆಲಸ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿತ್ತು. ಈ ಬಡ ಗೇಣಿದಾರರನ್ನು ಸಂಘಟನೆ ಮಾಡಿದ ಮೊದಲಿಗರಲ್ಲಿ ಕಡಿದಾಳ್ ಮಂಜಪ್ಪನವರು, ಬಸವಾನಿ ರಾಮಶರ್ಮರು ಮತ್ತು ಗಣಪತಿಯಪ್ಪ ಮೊದಲಿಗರು. ಆನಂತರ ಶಾಂತವೇರಿ ಗೋಪಾಲಗೌಡರು ಮುಂತಾದ ಸೋಷಿಯಲಿಸ್ಟ್ ಮುಖಂಡರು ಗೇಣೀದಾರರರನ್ನು ಸಂಘಟನೆ ಮಾಡಿ, ಜಮೀನ್ದಾರರ ವಿರುದ್ಧವಾಗಿ, ಗೇಣೀ ಪದ್ದತಿ ರದ್ದತಿಗಾಗಿ ಚಳವಳಿ ಮಾಡಿದರು. ಮುಂದೆ ದೇವರಾಜ ಅರಸರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಂದರ್ಭದಲ್ಲಿ ಗೇಣಿ ಪದ್ದತಿ ರದ್ದುಗೊಳಿಸುವ ಶಾಸನ ಜಾರಿಗೆ ತಂದರು. ಈ ಜಮೀನ್ದಾರರ ಜಮೀನುಗಳಲ್ಲಿ ದುಡಿಯುತ್ತಿದ್ದ ಬಡ ರೈತರನ್ನು ಅವರು ಮಾಡುತ್ತಿದ್ದ ಜಮೀನುಗಳಿಗೆ ಒಡೆಯರನ್ನಾಗಿ ಮಾಡಿದರು. ಉಳುವವನಿಗೆ ಭೂಮಿ ಎಂದು ಘೋಷಣೆ ಮಾಡಿದರು. ಈ Slogan ದೊಡ್ಡ ಜಮೀನ್ದಾರರ ಭೂಮಿಗೆ ಮಾತ್ರ ಸೀಮಿತವಾಗಿತ್ತು.

ಅದೇ ದೇವರಾಜ ಅರಸರು ಕರ್ನಾಟಕದ ಎಲ್ಲ ಕಡೆಗೂ ಅನ್ವಯಿಸುವ ಭೂ ಸುಧಾರಣಾ ಕಾಯ್ದೆಯನ್ನೂ ಅದೇ ಕಾಲಕ್ಕೆ ಜಾರಿಗೆ ತಂದರು ಈ ಕಾಯ್ದೆಯ ಪ್ರಕಾರ ಭೂಮಿತಿ ಶಾಸನವನ್ನು ಜಾರಿಗೆ ತಂದರೆ, ಎಲ್ಲಾ ಉಳುವರಿಗೂ ಭೂಮಿ ಎಂದು ಘೋಷಿಸಲಿಲ್ಲ. ಅಷ್ಟೇ ಅಲ್ಲ ಅವರು ಕೈಗೊಂಡ ಭೂಮಿತಿ ಶಾಸನ ಅವೈಜ್ಞಾನಿಕವೂ, ಅವಾಸ್ತವಿಕವೂ ಆಗಿತ್ತು. ಹಾಗಾಗಿ ಈ ಭೂಮಿತಿ ಶಾಸನದಿಂದ ಬಡವರಿಗೆ ಭೂಹೀನರಿಗೆ ಜಮೀನು ಸಿಕ್ಕಲಿಲ್ಲ.

ಕರ್ನಾಟಕದಲ್ಲಿ ಒಂದು ಎಕರೆ 2 ಎಕರೆ ಜಮೀನುಳ್ಳವರು ಶೇ.60 ಮಂದಿ ಇದ್ದಾರೆ. ಇವರು ಜಮೀನಿನಲ್ಲಿ ಸ್ವತಃ ದುಡಿದು ತಿನ್ನುವವರು. ಹೆಚ್ಚಿಗೆ ಜಮೀನು ಇರುವವರೆಲ್ಲ ದಿನಕ್ಕೆ 500 ರೂ ಕೂಲಿ ಕೊಟ್ಟು ಜಮೀನು ಮಾಡಿಸುವವರು. ಇವರೆಲ್ಲ ತಮಗಿರುವ ಎಲ್ಲಾ ಜಮೀನನ್ನೂ ಆಹಾರಧಾನ್ಯ ಬೆಳೆಯುವುದಕ್ಕೆ ಉಪಯೋಗಿಸುತ್ತಿಲ್ಲ. ಇವರು ತಿಂಗಳು ತಿಂಗಳು ಹಣ ನೀಡುವ ತರಕಾರಿ, ಹೂವು, ಶುಂಠಿ, ಅರಿಸಿನ, ಹಣ್ಣಿನ ಗಿಡಗಳನ್ನು ಬೆಳೆಸುವವರು ಮತ್ತು ಪರಾವಲಂಬಿಗಳು. ಒಂದು ಎರಡು ಎಕರೆ ಜಮೀನುಳ್ಳವರು ಸ್ವತಃ ವ್ವವಸಾಯ ಮಾಡುವರಾದರೂ ಅವರಿಗೆ ಇರುವ ಸಣ್ಣ ಜಮೀನಿನಲ್ಲಿ ತಮ್ಮ ಹೊಟ್ಟೆಗೆ ಬೇಕಾದಷ್ಟನ್ನು ಬೆಳೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಬಡ ರೈತರಿಗೆ ಕನಿಷ್ಟ 5 ಎಕರೆ ಖುಷ್ಕಿ ಜಮೀನು ಬೇಕು. ಹೀಗೆ ಮಾಡುವುದರಿಂದ ಅವರು ತಾವೇ ದುಡಿದು ತಮ್ಮ ಉಪಜೀವನ ನಡೆಸಿಕೊಳ್ಳುವುದರ ಜೊತೆಗೆ ಸಮಾಜಕ್ಕೂ ಅಷ್ಟೂ ಇಷ್ಟೋ ಆಹಾರ ಒದಗಿಸಿಯಾರು.

ಆದ್ದರಿಂದ ಈಗ ಭೂಮಿತಿ ಶಾಸನವನ್ನು ಪರಿಷ್ಕರಿಸಿ ಒಂದು ಎಕರೆಯಿಂದ ೩ ಎಕರೆ ಜಮೀನು ಕೊಳ್ಳಲು ಬಡ ರೈತರಿಗೂ ಭೂ ಕಾರ್ಮಿಕರಿಗೂ ತಲಾ 5 ಎಕರೆ ಜಮೀನು ದೊರೆಯುವಂತೆ ಶಾಸನ ಮಾಡಬೇಕು. ಹಾಗೆ ಮಾಡದಿದ್ದರೆ ಈ ಅಪಾರ ಸಂಖ್ಯೆಯ ಬಡವರೂ ಕೂಡ ವಲಸಿಗ ಕಾರ್ಮಿಕರಾಗಿ ಪಟ್ಟಣ ಸೇರುವುದು ಖಚಿತ. ಸರ್ಕಾರಗಳು 70 ವರ್ಷದಿಂದ ಒಂದೇ ಸಮನೆ ಬೆಳೆ ಬೆಳೆಯುವ ಜಮೀನುಗಳನ್ನು ರಸ್ತೆ ನಿರ್ಮಿಸುವ, ಅಗಲ ಮಾಡುವ ಉದ್ಯಮಗಳಿಗಾಗಿ ವಶ ಪಡಿಸಿಕೊಂಡು ವ್ಯವಸಾಯದ ಭೂಮಿಯನ್ನು ನುಂಗಿ ಹಾಕುತ್ತಿವೆ.

ಈಗ ಸರ್ಕಾರ ಕೈಗೊಳ್ಳುವ ಭೂ ಸುಧಾರಣೆ ಕಾಯ್ದೆಯೂ ಈ ಬಡ ರೈತರನ್ನೆಲ್ಲ ವಲಸೆ ಹೋಗಬೇಕಾದ ಅನಿವಾರ್ಯತೆಗೆ ಅಣಿಗೊಳಿಸುತ್ತದೆ. ಈ ಸುಧಾರಣೆಯ ಕಾಯ್ದೆ ಜಾರಿಗೆ ಬಂದರೆ ಬಡಜನರ ಜಮೀನೆಲ್ಲ ಶ್ರೀಮಂತರ ಅಥವಾ ಕಾರ್ಪೋರೇಟ್ ಜಗತ್ತಿನವರ ವಶವಾಗುತ್ತದೆ. ಕಾರ್ಪೋರೇಟ್ ಕಂಪನಿಗಳು consolidation holding ಅನ್ನು ಬೆಂಬಲಿಸುತ್ತವೆ. ಬಡವರಿಗೆ ಆಮಿಷವೊಡ್ಡಿ ಅವರ ಜಮೀನನ್ನೆಲ್ಲ ದೊಡ್ಡ ಜಮೀನ್ದಾರರ ಅಥವಾ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡುವ ಹುನ್ನಾರ ಇದು. ಕಾಪೋರೇಟ್ ಕಂಪನಿಗಳು ವ್ಯವಸಾಯಕ್ಕೆ ಬೇಕಾದ ಅತ್ಯುತ್ತಮ ಸಾಧನಗಳನ್ನು ಈ ಶ್ರೀಮಂತ ರೈತರಿಗೆ ಒದಗಿಸಿ ಕೆಲವೇ ಜನ ಕೂಲಿಗಳ ಅವಶ್ಯಕತೆ ಬೀಳುವಂತೆ ಮಾಡುತ್ತಾರೆ. ಭೂಮಿ ಕಳೆದುಕೊಂಡವರೆಲ್ಲ ಗ್ರಾಮಬಿಟ್ಟು ಪಟ್ಟಣ ಸೇರಬೇಕಾದ ಅನಿವಾರ್ಯತೆ ಉಂಟು ಮಾಡುತ್ತಾರೆ. ಹೆಚ್ಚಿನ ಜಮೀನುಳ್ಳ ರೈತರನ್ನು ಹಣವಂತರು, ಕಾರ್ಪೋರೇಟ್‌ಗಳು ಸಂಧಿಸಿ, ತಾವು ಹೇಳುವ ಬೆಳೆ ಬೆಳೆದು ಕೊಟ್ಟರೆ, ಅವರು ನೀರೀಕ್ಷಿಸುವ ದರ ನೀಡುವುದಾಗಿ ಹೇಳುತ್ತಾರೆ. ಅರ್ಥಾತ್ ಈ ಜಮೀನುದಾರರನ್ನು ತಮ್ಮ ಕೂಲಿಯಾಳುಗಳನ್ನಾಗಿ ಪರಿವರ್ತಿಸುತ್ತಾರೆ. ವ್ಯವಸಾಯ ಪ್ರಧಾನವಾದ ಭಾರತ ದೇಶವನ್ನು ಅಮೆರಿಕ ಮಾಡುವ ಸನ್ನಾಹ ಮೋದಿಯವರದು ಯಡಿಯೂರಪ್ಪನವರದು.

ಅಮೆರಿಕ ಉದ್ಯಮಗಳ ದೇಶ. ಕೈಗಾರಿಕ ಪ್ರಧಾನ ದೇಶ. ವ್ಯವಸಾಯ ಪ್ರಧಾನ ದೇಶವಲ್ಲ. ಅಲ್ಲಿ ವ್ಯವಸಾಯದಲ್ಲಿ ಜನ ತೊಡಗಿಕೊಳ್ಳುವುದಿಲ್ಲ. ಆದ್ದರಿಂದ ಕೆಲವರು ಮಾತ್ರ ಸಾವಿರ ಸಾವಿರ ಎಕರೆ ಜಮೀನು ಮಾಲಿಕರಾಗಿದ್ದಾರೆ. ಅವರು ಜಮೀನನ್ನೆಲ್ಲ ಪವರ್ ಟಿಲ್ಲರ್‌ನಲ್ಲಿ ಉಳುತ್ತಾರೆ. ಬೀಜವನ್ನು ಹೆಲಿಕಾಪ್ಟರ್‌ನಿಂದ ಬಿತ್ತುತ್ತಾರೆ. ಡ್ರೈಯರ್‌ಗಳನ್ನು ಧಾನ್ಯವನ್ನು ತೂರುವ ಯಂತ್ರಗಳನ್ನು ಬೀಜ ಬಿಡಿಸುವ ಯಂತ್ರಗಳನ್ನು ಇಟ್ಟುಕೊಂಡಿದ್ದಾರೆ. ಮನೆ ಮಂದಿಯೇ 1000 ಎಕರೆ ಜಮೀನಿನ ನಿರ್ವಹಣೆಯನ್ನು ಮಾಡುತ್ತಾರೆ.

ವ್ಯವಸಾಯ ಪ್ರಧಾನವಾದ ಭಾರತದಲ್ಲಿ ಅಮೆರಿಕದ ಪ್ರಯೋಗವನ್ನು ಮಾಡುವುದು ಸರಿಯಲ್ಲ. ಆಹಾರಧಾನ್ಯಕ್ಕಾಗಿ ಭಿಕ್ಷಾಪಾತ್ರೆ ತೆಗೆದುಕೊಂಡು ಅನ್ಯ ದೇಶಗಳಲ್ಲಿ ದೇಹಿ ಎಂದು ಬೇಡುವುದೂ ಅಪಮಾನಕರ. ಇಂತಹ ಅವಿವೇಕದ ಭೂಸುಧಾರಣೆಯನ್ನು ಭಾರತದಲ್ಲಿ ಜಾರಿ ಮಾಡುವುದನ್ನು ತಡೆಗಟ್ಟಬೇಕಾದ್ದು ಈ ದೇಶದ ಎಲ್ಲ ಜನರ ಕರ್ತವ್ಯವೇ ಆಗಿದೆ.

ಮುಖ್ಯವಾಗಿ ಭಾರತದಾದ್ಯಂತ ಇರುವ ಎಲ್ಲ ರೈತ ಸಂಘಟನೆಗಲೂ ಒಂದುಗೂಡಿ ಒಂದು ಸಂಘರ್ಷ ಸಮಿತಿಯನ್ನು ರಚಿಸಬೇಕು. ಭಾರತದ ಬಡ ರೈತರ ಹಿತ ದೃಷ್ಟಿಯುಳ್ಳ ಎಲ್ಲರೂ ಶ್ರೀಮಂತರು ಬಡವರ ಭೂಮಿಯನ್ನು ಕೊಳ್ಳುವುದಕ್ಕೆ ಸರ್ಕಾರ ಅವಕಾಶ ಮಾಡಿಕೊಡುವ ಶಾಸನ ಮಾಡುವುದು ಜನದ್ರೋಹ ಕೆಲಸ ಎಂದು ಸಾರಿ ಹೇಳಬೇಕು. ಅದಕ್ಕಾಗಿ ದೇಶವ್ಯಾಪಿ ಅಸಹಕಾರ ಚಳವಳಿ ಆರಂಭಿಸಬೇಕು ಭಾರತದ ಸ್ವಾಯತ್ತತೆಯನ್ನು ಬಯಸುವ ಎಲ್ಲಾ ಜನರೂ, ರೈತ ಸಂಘಟನೆಗಳ ಜೊತೆಗೆ ಕೈ ಜೋಡಿಸಬೇಕು.

  • ಎಚ್.ಎಸ್‌ ದೊರೆಸ್ವಾಮಿ

ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...