Homeಕರ್ನಾಟಕ'ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ'ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

‘ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಜನರ ಹಣ ವಂಚಿಸುವ ಮೋಸದ ಕಂಪೆನಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಲ್ಲಿ ‘ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ಹಲವು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ (ಡಿ.16) ವಿಧಾನಸಭೆಯಲ್ಲಿ “ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024” ಮಂಡಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “2003-04 ರಲ್ಲಿ ವಿನಿವಿಂಕ್‌ ಶಾಸ್ತ್ರಿ ಚಿಟ್‌ಫಂಡ್‌ ಸ್ಕೀಂನಿಂದ ಸಾವಿರಾರು ಜನ ಬಡ ಠೇವಣಿದಾರರು ಹಣ ಕಳೆದುಕೊಂಡಿದ್ದರು. ಅಪಾರ ಸಂಖ್ಯೆಯ ಅಮಾಯಕರು ಹಣ ಕಳೆದುಕೊಂಡಿದ್ದರು. ಆ ಪ್ರಕರಣ ಅಂದಿನ ದಿನಗಳಲ್ಲೇ ಸದನದಲ್ಲಿ ಭಾರೀ ಸದ್ದು ಮಾಡಿತ್ತು. ಪರಿಣಾಮ 2004 ರಲ್ಲಿ ದೀರ್ಘ ಚರ್ಚೆಯ ನಂತರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕವನ್ನು ಜಾರಿಗೆ ತರಲಾಯಿತು” ಎಂದರು.

“ಚೈನ್‌ಲಿಂಕ್‌, ಚಿಟ್‌ಫಂಡ್‌, ಪಿರಮಿಡ್‌ ಮಾದರಿ ಹಾಗೂ ಹಣ ಡಬ್ಲಿಂಗ್‌ ಮಾಡುವ ಆಮಿಷ ಒಡ್ಡಿ ಜನರಿಂದ ಹಣ ಠೇವಣಿ ಪಡೆದು ವಂಚಿಸುವ ಕಂಪೆನಿಗಳಿಗೆ ಕಡಿವಾಣ ಹಾಕುವುದು ಈ ಕಾನೂನಿನ ಮುಖ್ಯ ಉದ್ದೇಶ. ಈ ಕಾನೂನು ಜಾರಿಗೆ ಬಂದು 20 ವರ್ಷ ಆಯ್ತು. ಆದರೆ, ಈಗಲೂ ಈ ಬಗ್ಗೆ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಲೇ ಇದೆ. ಸೆಟಲ್ಮೆಂಟ್‌ಗಳೂ ಆಗುತ್ತಲೇ ಇವೆ. ಹೀಗಾಗಿ ಈ ಕಾನೂನನ್ನು ಅನುಷ್ಠಾನಗೊಳುವಾಗ ಒಂದಷ್ಟು ಬದಲಾವಣೆ ತಂದರೆ ಮತ್ತಷ್ಟು ಪ್ರಬಲವಾಗಿ ಅನುಷ್ಠಾನಗೊಳಿಸಬಹುದು ಹಾಗೂ ಬಾಧಿತರಿಗೆ ಮತ್ತಷ್ಟು ಪರಿಹಾರ ಒದಗಿಸಬಹುದು ಎಂಬ ಮಹತ್ವಾಕಾಂಕ್ಷೆಯಿಂದ ಈ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದರು.

“ಈ ಕಾನೂನಿಗೆ ಏನೆಲ್ಲಾ ತಿದ್ದುಪಡಿ ತರಬೇಕು ಎಂದು ಅನುಭವದ ಆಧಾರದ ಮೇಲೆ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ ತಿದ್ದುಪಡಿ ತರಲಾಗಿದೆ. ಕಾನೂನಿನ ಸಮರ್ಪಕ ಅನುಷ್ಠಾನ ಹಾಗೂ ಠೇವಣಿದಾರರಿಗೆ ಸಹಾಯ ಮಾಡಿಕೊಡುವ, ಅವರ ಹಣವನ್ನು ಸುಲಭಕ್ಕೆ ಹಿಂತಿರುಗಿ ಪಡೆಯುವ ನಿಟ್ಟಿನಲ್ಲಿ ಸರಳೀಕರಣಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನೂ ತಿದ್ದುಪಡಿಯಲ್ಲಿ ತರಲಾಗಿದೆ” ಎಂದು ಅವರು ತಿಳಿಸಿದರು.

“ಕೆಲವರು ಕಂಪೆನಿ ತೆರೆದು ಹಗರಣ ಮಾಡಿ, ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗುವ ಮೊದಲೇ ಆ ಕಂಪನಿಯ ನಿರ್ದೇಶಕ ಹುದ್ದೆಯಿಂದ ನಿರ್ಗಮಿಸಿರುತ್ತಾರೆ. ನಿರ್ಗಮಿತ ನಿರ್ದೇಶಕರನ್ನು ವಿಚಾರಿಸುವ ಅವಕಾಶ ಹಳೆಯ ಕಾನೂನಿನಲ್ಲಿ ಇರಲಿಲ್ಲ. ಆದರೆ, ಇದೀಗ ಹೊಸ ತಿದ್ದುಪಡಿಯಲ್ಲಿ ಅದಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಅಂತಹ ವಂಚಕ ಕಂಪೆನಿಗಳು ತಮ್ಮ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ ಚಟುವಟಿಕೆ ಆರಂಭಿಸಿರುವ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಉಪ-ವಿಭಾಗಾಧಿಕಾರಿಗಳು ಆ ಬಗ್ಗೆ ಕ್ರಮವಹಿಸಬೇಕು, ಅಂತಹ ಕಂಪೆನಿಗಳ ಪ್ರಚಾರ-ಜಾಹೀರಾತುಗಳಿಗೂ ತಡೆಯೊಡ್ಡುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧವೂ ಕ್ರಮ

ತಿದ್ದುಪಡಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಿಸುತ್ತಿದ್ದಂತೆ ವಿಪಕ್ಷ ನಾಯಕ ಆರ್.‌ ಅಶೋಕ್‌, ಬಿಜೆಪಿ ಶಾಸಕರಾದ ಸುನೀಲ್‌ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ ಫನಾನ್ಸ್‌, ಹೌಸಿಂಗ್‌ ಸ್ಕೀಂ ಹಾಗೂ ಗೋಲ್ಡ್‌ ಲೋನ್‌ ಕಂಪೆನಿಗಳ ವಂಚನೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೆ, ಈ ಅಕ್ರಮಗಳಿಗೂ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

“ಹೌಸಿಂಗ್‌ ಸ್ಕೀಂ, ಮೈಕ್ರೋ ಲೆಂಡಿಂಗ್‌, ಗೋಲ್ಡ್‌ಲೋನ್‌ ನಂತರ ಅಕ್ರಮಗಳನ್ನು ತಡೆಯಲು ಪ್ರತ್ಯೇಕ ಕಾನೂನು ಇದೆ. ಆ ಚಟುವಟಿಕೆಗಳು ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕದ ಅಡಿ ಬರುವುದಿಲ್ಲ. ಆದರೆ, ಆ ಕಾನೂನುಗಳನ್ನೂ ಸಹ ಬಲಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಇಂತಹ ಮೋಸದ ಕಂಪೆನಿಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಕುರಿತೂ ಚಿಂತಿಸಲಾಗುತ್ತಿದೆ. ಕೆಲವು ಮೈಕ್ರೋ ಫೈನಾನ್ಸ್‌ ಹೆಸರಿನ ಕಂಪೆನಿಗಳು ಮಹಿಳೆಯರನ್ನು ಶೋಷಿಸುತ್ತಿದ್ದು, ಇಂತಹ ಚಟುವಟಿಕೆಗಳನ್ನು ತಡೆಗಟ್ಟಲು, ತದ್ಸಂಬದ್ದ ಕಾನೂನಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುತ್ತೇನೆ” ಎಂದು ಸದನಕ್ಕೆ ಭರವಸೆ ನೀಡಿದರು.

ಇದನ್ನೂ ಓದಿ; ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...