Homeಕರ್ನಾಟಕ'ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ'ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

‘ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಜನರ ಹಣ ವಂಚಿಸುವ ಮೋಸದ ಕಂಪೆನಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಲ್ಲಿ ‘ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ಹಲವು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ (ಡಿ.16) ವಿಧಾನಸಭೆಯಲ್ಲಿ “ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024” ಮಂಡಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “2003-04 ರಲ್ಲಿ ವಿನಿವಿಂಕ್‌ ಶಾಸ್ತ್ರಿ ಚಿಟ್‌ಫಂಡ್‌ ಸ್ಕೀಂನಿಂದ ಸಾವಿರಾರು ಜನ ಬಡ ಠೇವಣಿದಾರರು ಹಣ ಕಳೆದುಕೊಂಡಿದ್ದರು. ಅಪಾರ ಸಂಖ್ಯೆಯ ಅಮಾಯಕರು ಹಣ ಕಳೆದುಕೊಂಡಿದ್ದರು. ಆ ಪ್ರಕರಣ ಅಂದಿನ ದಿನಗಳಲ್ಲೇ ಸದನದಲ್ಲಿ ಭಾರೀ ಸದ್ದು ಮಾಡಿತ್ತು. ಪರಿಣಾಮ 2004 ರಲ್ಲಿ ದೀರ್ಘ ಚರ್ಚೆಯ ನಂತರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕವನ್ನು ಜಾರಿಗೆ ತರಲಾಯಿತು” ಎಂದರು.

“ಚೈನ್‌ಲಿಂಕ್‌, ಚಿಟ್‌ಫಂಡ್‌, ಪಿರಮಿಡ್‌ ಮಾದರಿ ಹಾಗೂ ಹಣ ಡಬ್ಲಿಂಗ್‌ ಮಾಡುವ ಆಮಿಷ ಒಡ್ಡಿ ಜನರಿಂದ ಹಣ ಠೇವಣಿ ಪಡೆದು ವಂಚಿಸುವ ಕಂಪೆನಿಗಳಿಗೆ ಕಡಿವಾಣ ಹಾಕುವುದು ಈ ಕಾನೂನಿನ ಮುಖ್ಯ ಉದ್ದೇಶ. ಈ ಕಾನೂನು ಜಾರಿಗೆ ಬಂದು 20 ವರ್ಷ ಆಯ್ತು. ಆದರೆ, ಈಗಲೂ ಈ ಬಗ್ಗೆ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಲೇ ಇದೆ. ಸೆಟಲ್ಮೆಂಟ್‌ಗಳೂ ಆಗುತ್ತಲೇ ಇವೆ. ಹೀಗಾಗಿ ಈ ಕಾನೂನನ್ನು ಅನುಷ್ಠಾನಗೊಳುವಾಗ ಒಂದಷ್ಟು ಬದಲಾವಣೆ ತಂದರೆ ಮತ್ತಷ್ಟು ಪ್ರಬಲವಾಗಿ ಅನುಷ್ಠಾನಗೊಳಿಸಬಹುದು ಹಾಗೂ ಬಾಧಿತರಿಗೆ ಮತ್ತಷ್ಟು ಪರಿಹಾರ ಒದಗಿಸಬಹುದು ಎಂಬ ಮಹತ್ವಾಕಾಂಕ್ಷೆಯಿಂದ ಈ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದರು.

“ಈ ಕಾನೂನಿಗೆ ಏನೆಲ್ಲಾ ತಿದ್ದುಪಡಿ ತರಬೇಕು ಎಂದು ಅನುಭವದ ಆಧಾರದ ಮೇಲೆ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ ತಿದ್ದುಪಡಿ ತರಲಾಗಿದೆ. ಕಾನೂನಿನ ಸಮರ್ಪಕ ಅನುಷ್ಠಾನ ಹಾಗೂ ಠೇವಣಿದಾರರಿಗೆ ಸಹಾಯ ಮಾಡಿಕೊಡುವ, ಅವರ ಹಣವನ್ನು ಸುಲಭಕ್ಕೆ ಹಿಂತಿರುಗಿ ಪಡೆಯುವ ನಿಟ್ಟಿನಲ್ಲಿ ಸರಳೀಕರಣಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನೂ ತಿದ್ದುಪಡಿಯಲ್ಲಿ ತರಲಾಗಿದೆ” ಎಂದು ಅವರು ತಿಳಿಸಿದರು.

“ಕೆಲವರು ಕಂಪೆನಿ ತೆರೆದು ಹಗರಣ ಮಾಡಿ, ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗುವ ಮೊದಲೇ ಆ ಕಂಪನಿಯ ನಿರ್ದೇಶಕ ಹುದ್ದೆಯಿಂದ ನಿರ್ಗಮಿಸಿರುತ್ತಾರೆ. ನಿರ್ಗಮಿತ ನಿರ್ದೇಶಕರನ್ನು ವಿಚಾರಿಸುವ ಅವಕಾಶ ಹಳೆಯ ಕಾನೂನಿನಲ್ಲಿ ಇರಲಿಲ್ಲ. ಆದರೆ, ಇದೀಗ ಹೊಸ ತಿದ್ದುಪಡಿಯಲ್ಲಿ ಅದಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಅಂತಹ ವಂಚಕ ಕಂಪೆನಿಗಳು ತಮ್ಮ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ ಚಟುವಟಿಕೆ ಆರಂಭಿಸಿರುವ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಉಪ-ವಿಭಾಗಾಧಿಕಾರಿಗಳು ಆ ಬಗ್ಗೆ ಕ್ರಮವಹಿಸಬೇಕು, ಅಂತಹ ಕಂಪೆನಿಗಳ ಪ್ರಚಾರ-ಜಾಹೀರಾತುಗಳಿಗೂ ತಡೆಯೊಡ್ಡುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧವೂ ಕ್ರಮ

ತಿದ್ದುಪಡಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಿಸುತ್ತಿದ್ದಂತೆ ವಿಪಕ್ಷ ನಾಯಕ ಆರ್.‌ ಅಶೋಕ್‌, ಬಿಜೆಪಿ ಶಾಸಕರಾದ ಸುನೀಲ್‌ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ ಫನಾನ್ಸ್‌, ಹೌಸಿಂಗ್‌ ಸ್ಕೀಂ ಹಾಗೂ ಗೋಲ್ಡ್‌ ಲೋನ್‌ ಕಂಪೆನಿಗಳ ವಂಚನೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೆ, ಈ ಅಕ್ರಮಗಳಿಗೂ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

“ಹೌಸಿಂಗ್‌ ಸ್ಕೀಂ, ಮೈಕ್ರೋ ಲೆಂಡಿಂಗ್‌, ಗೋಲ್ಡ್‌ಲೋನ್‌ ನಂತರ ಅಕ್ರಮಗಳನ್ನು ತಡೆಯಲು ಪ್ರತ್ಯೇಕ ಕಾನೂನು ಇದೆ. ಆ ಚಟುವಟಿಕೆಗಳು ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕದ ಅಡಿ ಬರುವುದಿಲ್ಲ. ಆದರೆ, ಆ ಕಾನೂನುಗಳನ್ನೂ ಸಹ ಬಲಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಇಂತಹ ಮೋಸದ ಕಂಪೆನಿಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಕುರಿತೂ ಚಿಂತಿಸಲಾಗುತ್ತಿದೆ. ಕೆಲವು ಮೈಕ್ರೋ ಫೈನಾನ್ಸ್‌ ಹೆಸರಿನ ಕಂಪೆನಿಗಳು ಮಹಿಳೆಯರನ್ನು ಶೋಷಿಸುತ್ತಿದ್ದು, ಇಂತಹ ಚಟುವಟಿಕೆಗಳನ್ನು ತಡೆಗಟ್ಟಲು, ತದ್ಸಂಬದ್ದ ಕಾನೂನಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುತ್ತೇನೆ” ಎಂದು ಸದನಕ್ಕೆ ಭರವಸೆ ನೀಡಿದರು.

ಇದನ್ನೂ ಓದಿ; ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...