Homeಕರ್ನಾಟಕ'ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ'ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

‘ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಜನರ ಹಣ ವಂಚಿಸುವ ಮೋಸದ ಕಂಪೆನಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಲ್ಲಿ ‘ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ’ಕ್ಕೆ ಹಲವು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ (ಡಿ.16) ವಿಧಾನಸಭೆಯಲ್ಲಿ “ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024” ಮಂಡಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “2003-04 ರಲ್ಲಿ ವಿನಿವಿಂಕ್‌ ಶಾಸ್ತ್ರಿ ಚಿಟ್‌ಫಂಡ್‌ ಸ್ಕೀಂನಿಂದ ಸಾವಿರಾರು ಜನ ಬಡ ಠೇವಣಿದಾರರು ಹಣ ಕಳೆದುಕೊಂಡಿದ್ದರು. ಅಪಾರ ಸಂಖ್ಯೆಯ ಅಮಾಯಕರು ಹಣ ಕಳೆದುಕೊಂಡಿದ್ದರು. ಆ ಪ್ರಕರಣ ಅಂದಿನ ದಿನಗಳಲ್ಲೇ ಸದನದಲ್ಲಿ ಭಾರೀ ಸದ್ದು ಮಾಡಿತ್ತು. ಪರಿಣಾಮ 2004 ರಲ್ಲಿ ದೀರ್ಘ ಚರ್ಚೆಯ ನಂತರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕವನ್ನು ಜಾರಿಗೆ ತರಲಾಯಿತು” ಎಂದರು.

“ಚೈನ್‌ಲಿಂಕ್‌, ಚಿಟ್‌ಫಂಡ್‌, ಪಿರಮಿಡ್‌ ಮಾದರಿ ಹಾಗೂ ಹಣ ಡಬ್ಲಿಂಗ್‌ ಮಾಡುವ ಆಮಿಷ ಒಡ್ಡಿ ಜನರಿಂದ ಹಣ ಠೇವಣಿ ಪಡೆದು ವಂಚಿಸುವ ಕಂಪೆನಿಗಳಿಗೆ ಕಡಿವಾಣ ಹಾಕುವುದು ಈ ಕಾನೂನಿನ ಮುಖ್ಯ ಉದ್ದೇಶ. ಈ ಕಾನೂನು ಜಾರಿಗೆ ಬಂದು 20 ವರ್ಷ ಆಯ್ತು. ಆದರೆ, ಈಗಲೂ ಈ ಬಗ್ಗೆ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಲೇ ಇದೆ. ಸೆಟಲ್ಮೆಂಟ್‌ಗಳೂ ಆಗುತ್ತಲೇ ಇವೆ. ಹೀಗಾಗಿ ಈ ಕಾನೂನನ್ನು ಅನುಷ್ಠಾನಗೊಳುವಾಗ ಒಂದಷ್ಟು ಬದಲಾವಣೆ ತಂದರೆ ಮತ್ತಷ್ಟು ಪ್ರಬಲವಾಗಿ ಅನುಷ್ಠಾನಗೊಳಿಸಬಹುದು ಹಾಗೂ ಬಾಧಿತರಿಗೆ ಮತ್ತಷ್ಟು ಪರಿಹಾರ ಒದಗಿಸಬಹುದು ಎಂಬ ಮಹತ್ವಾಕಾಂಕ್ಷೆಯಿಂದ ಈ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದರು.

“ಈ ಕಾನೂನಿಗೆ ಏನೆಲ್ಲಾ ತಿದ್ದುಪಡಿ ತರಬೇಕು ಎಂದು ಅನುಭವದ ಆಧಾರದ ಮೇಲೆ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ ತಿದ್ದುಪಡಿ ತರಲಾಗಿದೆ. ಕಾನೂನಿನ ಸಮರ್ಪಕ ಅನುಷ್ಠಾನ ಹಾಗೂ ಠೇವಣಿದಾರರಿಗೆ ಸಹಾಯ ಮಾಡಿಕೊಡುವ, ಅವರ ಹಣವನ್ನು ಸುಲಭಕ್ಕೆ ಹಿಂತಿರುಗಿ ಪಡೆಯುವ ನಿಟ್ಟಿನಲ್ಲಿ ಸರಳೀಕರಣಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನೂ ತಿದ್ದುಪಡಿಯಲ್ಲಿ ತರಲಾಗಿದೆ” ಎಂದು ಅವರು ತಿಳಿಸಿದರು.

“ಕೆಲವರು ಕಂಪೆನಿ ತೆರೆದು ಹಗರಣ ಮಾಡಿ, ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗುವ ಮೊದಲೇ ಆ ಕಂಪನಿಯ ನಿರ್ದೇಶಕ ಹುದ್ದೆಯಿಂದ ನಿರ್ಗಮಿಸಿರುತ್ತಾರೆ. ನಿರ್ಗಮಿತ ನಿರ್ದೇಶಕರನ್ನು ವಿಚಾರಿಸುವ ಅವಕಾಶ ಹಳೆಯ ಕಾನೂನಿನಲ್ಲಿ ಇರಲಿಲ್ಲ. ಆದರೆ, ಇದೀಗ ಹೊಸ ತಿದ್ದುಪಡಿಯಲ್ಲಿ ಅದಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಅಂತಹ ವಂಚಕ ಕಂಪೆನಿಗಳು ತಮ್ಮ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ ಚಟುವಟಿಕೆ ಆರಂಭಿಸಿರುವ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಉಪ-ವಿಭಾಗಾಧಿಕಾರಿಗಳು ಆ ಬಗ್ಗೆ ಕ್ರಮವಹಿಸಬೇಕು, ಅಂತಹ ಕಂಪೆನಿಗಳ ಪ್ರಚಾರ-ಜಾಹೀರಾತುಗಳಿಗೂ ತಡೆಯೊಡ್ಡುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧವೂ ಕ್ರಮ

ತಿದ್ದುಪಡಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಿಸುತ್ತಿದ್ದಂತೆ ವಿಪಕ್ಷ ನಾಯಕ ಆರ್.‌ ಅಶೋಕ್‌, ಬಿಜೆಪಿ ಶಾಸಕರಾದ ಸುನೀಲ್‌ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ ಫನಾನ್ಸ್‌, ಹೌಸಿಂಗ್‌ ಸ್ಕೀಂ ಹಾಗೂ ಗೋಲ್ಡ್‌ ಲೋನ್‌ ಕಂಪೆನಿಗಳ ವಂಚನೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೆ, ಈ ಅಕ್ರಮಗಳಿಗೂ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

“ಹೌಸಿಂಗ್‌ ಸ್ಕೀಂ, ಮೈಕ್ರೋ ಲೆಂಡಿಂಗ್‌, ಗೋಲ್ಡ್‌ಲೋನ್‌ ನಂತರ ಅಕ್ರಮಗಳನ್ನು ತಡೆಯಲು ಪ್ರತ್ಯೇಕ ಕಾನೂನು ಇದೆ. ಆ ಚಟುವಟಿಕೆಗಳು ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕದ ಅಡಿ ಬರುವುದಿಲ್ಲ. ಆದರೆ, ಆ ಕಾನೂನುಗಳನ್ನೂ ಸಹ ಬಲಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಇಂತಹ ಮೋಸದ ಕಂಪೆನಿಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಕುರಿತೂ ಚಿಂತಿಸಲಾಗುತ್ತಿದೆ. ಕೆಲವು ಮೈಕ್ರೋ ಫೈನಾನ್ಸ್‌ ಹೆಸರಿನ ಕಂಪೆನಿಗಳು ಮಹಿಳೆಯರನ್ನು ಶೋಷಿಸುತ್ತಿದ್ದು, ಇಂತಹ ಚಟುವಟಿಕೆಗಳನ್ನು ತಡೆಗಟ್ಟಲು, ತದ್ಸಂಬದ್ದ ಕಾನೂನಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುತ್ತೇನೆ” ಎಂದು ಸದನಕ್ಕೆ ಭರವಸೆ ನೀಡಿದರು.

ಇದನ್ನೂ ಓದಿ; ಮಂಡ್ಯ | ಮುಸ್ಲಿಂ ಯುವಕರನ್ನು ಸುತ್ತುವರೆದು ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...