Homeಅಂತರಾಷ್ಟ್ರೀಯಅಮೆರಿಕ | ಅದಾನಿ ವಿರುದ್ಧ ಆರೋಪ ಮಾಡಿದ್ದ ಅಟಾರ್ನಿ ರಾಜೀನಾಮೆ

ಅಮೆರಿಕ | ಅದಾನಿ ವಿರುದ್ಧ ಆರೋಪ ಮಾಡಿದ್ದ ಅಟಾರ್ನಿ ರಾಜೀನಾಮೆ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಅದಾನಿ ಅವರ ಅದಾನಿ ಗ್ರೂಪ್ ವಿರುದ್ಧ ಬಹಕೋಟಿ ವಂಚನೆಗೆ ಸಂಬಂಧಿಸಿ ಅಮೆರಿಕದಲ್ಲಿ ಮಾಡಲಾಗಿದ್ದ ದೋಷಾರೋಪಣೆಯ ಹಿಂದಿರುವ ಅಟಾರ್ನಿ ಬ್ರಿಯಾನ್ ಪೀಸ್ ಅವರು ಜನವರಿ 10ರಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕ

2021ರಲ್ಲಿ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರು ಬ್ರಿಯಾನ್ ಪೀಸ್ ಅವರನ್ನು ಸರಕಾರಿ ವಕೀಲರಾಗಿ ನೇಮಕ ಮಾಡಿದ್ದರು. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಕೆಲವೇ ದಿನಗಳ ಮೊದಲು ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನವೆಂಬರ್‌ನಲ್ಲಿ ಬ್ರಿಯಾನ್ ಪೀಸ್ ಅವರು ಗೌತಮ್ ಅದಾನಿ ಮತ್ತು ಇತರರ ವಿರುದ್ಧ ಸೌರ ಗುತ್ತಿಗೆ ಒಪ್ಪಂದಕ್ಕೆ ಸಂಬಂಧಿಸಿ ವಂಚನೆ ಮತ್ತು ಲಂಚದ ಆರೋಪವನ್ನು ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬ್ರಿಯಾನ್ ಪೀಸ್ ಅವರು ಗೌತಮ್ ಅದಾನಿ ವಿರುದ್ಧದ ದೋಷಾರೋಪಣೆ ಪ್ರಕರಣಗಳಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಅವರು ಆಗಸ್ಟ್‌ನಲ್ಲಿ ಜಾರ್ಜ್ ಸ್ಯಾಂಟೋಸ್ ಹಣವನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಮಾಡಿದ್ದೆ ಆರೋಪ ಸಾಬೀತಾಗಿತ್ತು. ಅಲ್ಲದೆ, ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿ 2022ರಲ್ಲಿ ಹಿಪ್ ಹಾಪ್ ತಾರೆ ಕೆಲ್ಲಿ ಅವರಿಗೆ 30 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಆರು ಮಂದಿಯನ್ನು ನ್ಯೂಯಾರ್ಕ್‌ನಲ್ಲಿರುವ ಈಸ್ಟರ್ನ್ ಡಿಸ್ಟ್ರಿಕ್ಟ್‌ನ ಯುನೈಟೆಡ್ ಸ್ಟೇಟ್ಸ್ ಅಟಾರ್ನಿ ಕಚೇರಿಯು ಕಳೆದ ತಿಂಗಳು ದೋಷಾರೋಪಣೆ ಮಾಡಿತ್ತು. ಭಾರತದಲ್ಲಿ ಸೋಲಾರ್‌ ಯೋಜನೆ ಒಪ್ಪಂದ ಪಡೆಯಲು ಅವರು 2020 ರ ನಡುವೆ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಅಥವಾ ಸುಮಾರು 2,236 ಕೋಟಿ ರೂಪಾಯಿಗಳನ್ನು ಲಂಚವಾಗಿ ಪಾವತಿಸಲು ಒಪ್ಪಿಕೊಂಡಿದ್ದರು ಎಂದು ಅಮೆರಿಕದ ನ್ಯಾಯಾಲಯ ಹೇಳಿದೆ.

ಈ ಒಪ್ಪಂದಗಳ ಕಾರಣಕ್ಕೆ 20 ವರ್ಷಗಳಲ್ಲಿ ಅದಾನಿ $2 ಶತಕೋಟಿ ಅಥವಾ ಸುಮಾರು 16,880 ಕೋಟಿ ರೂ.ಗಳ ಲಾಭವನ್ನು ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆರೋಪಕ್ಕೆ ಸಂಬಂಧಿಸಿದಂತೆ ಯುನೈಟೆಡ್ ಸ್ಟೇಟ್ಸ್ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರಿಗೆ ಸಮನ್ಸ್ ನೀಡಿದೆ. ಆದರೆ, ಅದಾನಿ ಗ್ರೂಪ್ ಆರೋಪಗಳನ್ನು ನಿರಾಕರಿಸಿದೆ, ಅವುಗಳನ್ನು “ಆಧಾರರಹಿತ” ಎಂದು ಕರೆದಿದೆ. ಅಮೆರಿಕ

ಇದನ್ನೂ ಓದಿ: ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ

ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...