Homeಅಂತರಾಷ್ಟ್ರೀಯಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

- Advertisement -
- Advertisement -

ಗಾಜಾದಿಂದ ಸುಡಾನ್, ಸೊಮಾಲಿಯಾ ಮತ್ತು ಅದರ ಬೇರ್ಪಟ್ಟ ಪ್ರದೇಶವಾದ ಸೊಮಾಲಿಲ್ಯಾಂಡ್‌ಗೆ ಪ್ಯಾಲೆಸ್ತೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ಗಳು ಮೂರು ಪೂರ್ವ ಆಫ್ರಿಕಾದ ಸರ್ಕಾರಗಳೊಂದಿಗೆ ಚರ್ಚಿಸಿವೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶುಕ್ರವಾರದ ವರದಿಯಲ್ಲಿ ಸುಡಾನ್ ಅಧಿಕಾರಿಗಳು ಅಮೆರಿಕದ ಪ್ರಸ್ತಾವನೆಗಳನ್ನು ತಿರಸ್ಕರಿಸಿರುವುದಾಗಿ ಹೇಳಿಕೊಂಡರೆ, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಅಧಿಕಾರಿಗಳು ಯಾವುದೇ ಸಂಪರ್ಕಗಳ ಬಗ್ಗೆ ತಿಳಿದಿಲ್ಲ ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ರಹಸ್ಯ ರಾಜತಾಂತ್ರಿಕ ಉಪಕ್ರಮದ ಬಗ್ಗೆ ಚರ್ಚಿಸಲು ಅನಾಮಧೇಯತೆಯ ಷರತ್ತಿನ ಮೇಲೆ ಮಾತನಾಡಿದ ಅಮೆರಿಕ ಮತ್ತು ಇಸ್ರೇಲಿ ಅಧಿಕಾರಿಗಳು, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನೊಂದಿಗಿನ ಸಂಪರ್ಕಗಳನ್ನು ದೃಢಪಡಿಸಿದರು ಮತ್ತು ಅಮೆರಿಕದ ಅಧಿಕಾರಿಗಳು ಸುಡಾನ್ ಅನ್ನು ಸಹ ದೃಢಪಡಿಸಿದರು. ಪ್ರಯತ್ನಗಳು ಎಷ್ಟು ಪ್ರಗತಿ ಸಾಧಿಸಿವೆ ಅಥವಾ ಚರ್ಚೆಗಳು ಯಾವ ಮಟ್ಟದಲ್ಲಿ ನಡೆದವು ಎಂಬುದು ಸ್ಪಷ್ಟವಾಗಿಲ್ಲ ಎಂದು ಅದು ಹೇಳಿದೆ.

ಪ್ಯಾಲೆಸ್ಟೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಮತ್ತು ಗಾಜಾ ಪಟ್ಟಿಯನ್ನು “ಸ್ವಾಧೀನಪಡಿಸಿಕೊಳ್ಳುವ” ಕಲ್ಪನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಡಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಇದನ್ನು ಪ್ಯಾಲೆಸ್ಟೀನಿಯನ್ನರು ಮತ್ತು ಮಧ್ಯಪ್ರಾಚ್ಯದ ದೇಶಗಳು ಸಂಪೂರ್ಣವಾಗಿ ತಿರಸ್ಕರಿಸಿವೆ. ಅನೇಕರು ಇದನ್ನು ಜನಾಂಗೀಯ ಶುದ್ಧೀಕರಣ ಎಂದು ಬಣ್ಣಿಸಿದ್ದಾರೆ.

ಟ್ರಂಪ್ ಅವರು ನೆತನ್ಯಾಹು ಜೊತೆಗೆ ಗಾಜಾ ಯೋಜನೆಯನ್ನು ಮಂಡಿಸಿದ ಕೆಲವು ದಿನಗಳ ನಂತರ, ಅಮೆರಿಕ ಮತ್ತು ಇಸ್ರೇಲ್‌ನಿಂದ ಮೂರು ಸಂಭಾವ್ಯ ತಾಣಗಳಿಗೆ ಪ್ರತ್ಯೇಕ ಸಂಪರ್ಕವು ಕಳೆದ ತಿಂಗಳು ಪ್ರಾರಂಭವಾಯಿತು ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಈ ಚರ್ಚೆಗಳಲ್ಲಿ ಇಸ್ರೇಲ್ ಮುಂಚೂಣಿಯಲ್ಲಿದೆ ಎಂದು ಅದು ವರದಿ ಮಾಡಿದೆ.

ಈ ವರದಿ ಕುರಿತಂತೆ ಅಮೆರಿಕ ಅಥವಾ ಇಸ್ರೇಲ್‌ನಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ ಪ್ಯಾಲೆಸ್ಟೀನಿಯನ್ನರ “ಸ್ವಯಂಪ್ರೇರಿತ” ವಲಸೆ ಎಂದು ದೀರ್ಘಕಾಲದಿಂದ ಪ್ರತಿಪಾದಿಸುತ್ತಿರುವ ಇಸ್ರೇಲಿ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್, ಈ ವಾರ ಇಸ್ರೇಲ್ ಇವರ ಸ್ಥಳಾಂತರಕ್ಕೆ ದೇಶಗಳನ್ನು ಗುರುತಿಸಲು ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ. ಇಸ್ರೇಲ್ ತನ್ನ ರಕ್ಷಣಾ ಸಚಿವಾಲಯದೊಳಗೆ “ಬಹಳ ದೊಡ್ಡ ವಲಸೆ ಇಲಾಖೆ”ಯನ್ನು ಸಿದ್ಧಪಡಿಸುತ್ತಿದೆ ಎಂದು ಕೂಡ ಅದು ವರದಿ ಮಾಡಿದೆ.

ದೋಹಾ ಇನ್‌ಸ್ಟಿಟ್ಯೂಟ್ ಫಾರ್ ಗ್ರಾಜುಯೇಟ್ ಸ್ಟಡೀಸ್‌ನ ಅಸೋಸಿಯೇಟ್ ಪ್ರೊಫೆಸರ್ ಟ್ಯಾಮರ್ ಕ್ವಾರ್ಮೌಟ್  ಅವರು ಅಲ್ ಜಜೀರಾ ಜೊತೆ ಮಾತನಾಡಿ, ಪ್ಯಾಲೆಸ್ಟೀನಿಯನ್ನರ ಸ್ಥಳಾಂತರವು “ದಾಟಿ ಹೋಗಬಾರದ ಕೆಂಪು ರೇಖೆ” ಎಂದು ಹೇಳಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ “ಅತಿರೇಕದ” ಪ್ರಸ್ತಾವನೆಯನ್ನು ನಿಲ್ಲಿಸುವ ಜವಾಬ್ದಾರಿಯನ್ನು ಹೊಂದಿವೆ ಮತ್ತು “ಈ ಯಾವುದೇ ಸನ್ನಿವೇಶಗಳಲ್ಲಿ ಇಸ್ರೇಲ್‌ನೊಂದಿಗೆ ತೊಡಗಿಸಿಕೊಳ್ಳಬಾರದು” ಎಂದು ಅವರು ಹೇಳಿದರು. ವಿಶೇಷವಾಗಿ ಪ್ಯಾಲೆಸ್ಟೀನಿಯನ್ನರನ್ನು ವಸಾಹತುಶಾಹಿ ಪರಂಪರೆಯಿಂದ ಹೋರಾಡುತ್ತಲೇ ಇರುವ ಆಫ್ರಿಕನ್ ದೇಶಗಳಿಗೆ ಸ್ಥಳಾಂತರಿಸುವುದು ಖಂಡನೀಯ ಎಂದಿದ್ದಾರೆ.

ವಸಾಹತುಶಾಹಿ ಪರಂಪರೆಯಿಂದಾಗಿ ಸುಡಾನ್ ಮತ್ತು ಸೊಮಾಲಿಯಾ ಇನ್ನೂ ಯುದ್ಧಗಳಿಂದ ಜರ್ಜರಿತಗೊಂಡಿವೆ ಎಂದು ಕಾರ್ಮೌಟ್ ಹೇಳಿದ್ದಾರೆ.

ಮಾನ್ಯತೆಗೆ ಬದಲಾಗಿ ಅಮೆರಿಕಕ್ಕೆ ಸಹಾಯಕವಾಗಬಹುದಾದ ಹಲವಾರು ಕ್ಷೇತ್ರಗಳ ಕುರಿತು ಸೊಮಾಲಿಲ್ಯಾಂಡ್‌ನೊಂದಿಗೆ ಅಮೆರಿಕವು ಸಂಭಾಷಣೆ ನಡೆಸುತ್ತಿದೆ ಎಂದು ಈ ಪ್ರಯತ್ನಗಳಲ್ಲಿ ಭಾಗಿಯಾಗಿರುವ ಅಮೆರಿಕದ ಅಧಿಕಾರಿಯೊಬ್ಬರು ಎಪಿಗೆ ದೃಢಪಡಿಸಿದ್ದಾರೆ.

ಏತನ್ಮಧ್ಯೆ, ಪ್ಯಾಲೆಸ್ಟೀನಿಯನ್ ಸ್ವ-ಆಡಳಿತಕ್ಕೆ ಸೊಮಾಲಿಯಾ ಬಲವಾದ ಬೆಂಬಲವನ್ನು ನೀಡುತ್ತಿರುವಾಗ ಪ್ಯಾಲೆಸ್ಟೀನಿಯನ್ನರಿಗೆ ಆತಿಥ್ಯ ವಹಿಸಲು ಸೊಮಾಲಿಯಾ ಏಕೆ ಬಯಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ನೈರೋಬಿಯಲ್ಲಿ ವಕೀಲ ಮತ್ತು ಸಂಘರ್ಷ ಸಂಶೋಧಕ ಸಾಂಬು ಚೆಪ್ಕೋರಿರ್ ಎಪಿಗೆ ತಿಳಿಸಿದ್ದಾರೆ.

ಸೂಕ್ಷ್ಮ ರಾಜತಾಂತ್ರಿಕ ವಿಷಯದ ಕುರಿತು ಚರ್ಚಿಸಲು ಹೆಸರು ಬಹಿರಂಗಪಡಿಸಲು ಇಚ್ಛಿಸದ ಇಬ್ಬರು ಸುಡಾನ್ ಅಧಿಕಾರಿಗಳು, ಟ್ರಂಪ್ ಆಡಳಿತವು ಪ್ಯಾಲೆಸ್ಟೀನಿಯನ್ನರನ್ನು ಸ್ವೀಕರಿಸುವ ಬಗ್ಗೆ ಮಿಲಿಟರಿ ನೇತೃತ್ವದ ಸರ್ಕಾರವನ್ನು ಸಂಪರ್ಕಿಸಿದೆ ಎಂದು ದೃಢಪಡಿಸಿದರು.

ಸುಡಾನ್ ಸರ್ಕಾರ ಈ ವಿಚಾರವನ್ನು ತಿರಸ್ಕರಿಸಿದೆ ಎಂದು ಇಬ್ಬರೂ ಅಧಿಕಾರಿಗಳು ತಿಳಿಸಿದ್ದಾರೆ. “ಈ ಸಲಹೆಯನ್ನು ತಕ್ಷಣವೇ ತಿರಸ್ಕರಿಸಲಾಯಿತು” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಈ ಕುರಿತು ರಾಯಿಟರ್ಸ್‌ನ ಪ್ರತಿಕ್ರಿಯೆಗೆ ಶ್ವೇತಭವನ ಮತ್ತು ಯುಎಸ್ ವಿದೇಶಾಂಗ ಇಲಾಖೆ ತಕ್ಷಣ ಪ್ರತಿಕ್ರಿಯಿಸಲಿಲ್ಲ. ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಮಾಹಿತಿ ಸಚಿವರು ರಾಯಿಟರ್ಸ್‌ನ ಪ್ರತಿಕ್ರಿಯೆ ಕೋರಿದ ದೂರವಾಣಿ ಕರೆಗಳಿಗೆ ಉತ್ತರಿಸಲಿಲ್ಲ.

12 ಮಿಲಿಯನ್ ಸ್ವಂತ ಜನರನ್ನು ಸ್ಥಳಾಂತರಿಸಿರುವ ಮತ್ತು ಕ್ಷಾಮವನ್ನು ಎದುರಿಸುತ್ತಾ, ವಿನಾಶಕಾರಿ ಅಂತರ್ಯುದ್ಧವನ್ನು ಎದುರಿಸುತ್ತಿರುವ ದೇಶವಾದ ಸುಡಾನ್‌ನ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಿಲ್ಲ. ಈ ತಿಂಗಳ ಆರಂಭದಲ್ಲಿ  ಅರಬ್ ನಾಯಕರು ಗಾಜಾಗೆ 53 ಬಿಲಿಯನ್ ಡಾಲರ್‌ಗಳ ಈಜಿಪ್ಟ್ ಪುನರ್ನಿರ್ಮಾಣ ಯೋಜನೆಯನ್ನು ಘೋಷಿಸಿದ್ದಾರೆ. ಇದು ಪ್ಯಾಲೆಸ್ಟೀನಿಯನ್ನರನ್ನು ಎನ್ಕ್ಲೇವ್‌ನಿಂದ ಸ್ಥಳಾಂತರಿಸುವುದನ್ನು ತಪ್ಪಿಸುತ್ತದೆ. ಇದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಮಧ್ಯಪ್ರಾಚ್ಯ ರಿವೇರಿಯಾ”ದ ದೃಷ್ಟಿಕೋನಕ್ಕೆ ವ್ಯತಿರಿಕ್ತವಾಗಿದೆ. ಈ ಘೋಷಣೆಯ ಯೋಜನೆಯಲ್ಲಿ ಸುಡಾನ್ ಮತ್ತು ಸೊಮಾಲಿಯಾ ಎರಡೂ ರಾಷ್ಟ್ರಗಳ ನಾಯಕರು ಸೇರಿದ್ದರು.

ಟ್ರಂಪ್ ಅವರ ಯೋಜನೆಯು ತಮ್ಮ ನೆಲೆಯಿಂದ ಶಾಶ್ವತವಾಗಿ ಓಡಿಸಲ್ಪಡುವ ಬಗ್ಗೆ ದೀರ್ಘಕಾಲದ ಪ್ಯಾಲೆಸ್ಟೀನಿಯನ್ ಭಯವನ್ನು ಬಲಪಡಿಸಿದೆ ಮತ್ತು ಅಂತರರಾಷ್ಟ್ರೀಯವಾಗಿ ವ್ಯಾಪಕ ತಿರಸ್ಕಾರವನ್ನು ಎದುರಿಸಿದೆ.

ಹಾವೇರಿ | ನರ್ಸ್ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...