Homeಅಂತರಾಷ್ಟ್ರೀಯಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

- Advertisement -
- Advertisement -

ಗಾಜಾದಿಂದ ಸುಡಾನ್, ಸೊಮಾಲಿಯಾ ಮತ್ತು ಅದರ ಬೇರ್ಪಟ್ಟ ಪ್ರದೇಶವಾದ ಸೊಮಾಲಿಲ್ಯಾಂಡ್‌ಗೆ ಪ್ಯಾಲೆಸ್ತೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ಗಳು ಮೂರು ಪೂರ್ವ ಆಫ್ರಿಕಾದ ಸರ್ಕಾರಗಳೊಂದಿಗೆ ಚರ್ಚಿಸಿವೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶುಕ್ರವಾರದ ವರದಿಯಲ್ಲಿ ಸುಡಾನ್ ಅಧಿಕಾರಿಗಳು ಅಮೆರಿಕದ ಪ್ರಸ್ತಾವನೆಗಳನ್ನು ತಿರಸ್ಕರಿಸಿರುವುದಾಗಿ ಹೇಳಿಕೊಂಡರೆ, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಅಧಿಕಾರಿಗಳು ಯಾವುದೇ ಸಂಪರ್ಕಗಳ ಬಗ್ಗೆ ತಿಳಿದಿಲ್ಲ ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ರಹಸ್ಯ ರಾಜತಾಂತ್ರಿಕ ಉಪಕ್ರಮದ ಬಗ್ಗೆ ಚರ್ಚಿಸಲು ಅನಾಮಧೇಯತೆಯ ಷರತ್ತಿನ ಮೇಲೆ ಮಾತನಾಡಿದ ಅಮೆರಿಕ ಮತ್ತು ಇಸ್ರೇಲಿ ಅಧಿಕಾರಿಗಳು, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನೊಂದಿಗಿನ ಸಂಪರ್ಕಗಳನ್ನು ದೃಢಪಡಿಸಿದರು ಮತ್ತು ಅಮೆರಿಕದ ಅಧಿಕಾರಿಗಳು ಸುಡಾನ್ ಅನ್ನು ಸಹ ದೃಢಪಡಿಸಿದರು. ಪ್ರಯತ್ನಗಳು ಎಷ್ಟು ಪ್ರಗತಿ ಸಾಧಿಸಿವೆ ಅಥವಾ ಚರ್ಚೆಗಳು ಯಾವ ಮಟ್ಟದಲ್ಲಿ ನಡೆದವು ಎಂಬುದು ಸ್ಪಷ್ಟವಾಗಿಲ್ಲ ಎಂದು ಅದು ಹೇಳಿದೆ.

ಪ್ಯಾಲೆಸ್ಟೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಮತ್ತು ಗಾಜಾ ಪಟ್ಟಿಯನ್ನು “ಸ್ವಾಧೀನಪಡಿಸಿಕೊಳ್ಳುವ” ಕಲ್ಪನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಡಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಇದನ್ನು ಪ್ಯಾಲೆಸ್ಟೀನಿಯನ್ನರು ಮತ್ತು ಮಧ್ಯಪ್ರಾಚ್ಯದ ದೇಶಗಳು ಸಂಪೂರ್ಣವಾಗಿ ತಿರಸ್ಕರಿಸಿವೆ. ಅನೇಕರು ಇದನ್ನು ಜನಾಂಗೀಯ ಶುದ್ಧೀಕರಣ ಎಂದು ಬಣ್ಣಿಸಿದ್ದಾರೆ.

ಟ್ರಂಪ್ ಅವರು ನೆತನ್ಯಾಹು ಜೊತೆಗೆ ಗಾಜಾ ಯೋಜನೆಯನ್ನು ಮಂಡಿಸಿದ ಕೆಲವು ದಿನಗಳ ನಂತರ, ಅಮೆರಿಕ ಮತ್ತು ಇಸ್ರೇಲ್‌ನಿಂದ ಮೂರು ಸಂಭಾವ್ಯ ತಾಣಗಳಿಗೆ ಪ್ರತ್ಯೇಕ ಸಂಪರ್ಕವು ಕಳೆದ ತಿಂಗಳು ಪ್ರಾರಂಭವಾಯಿತು ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಈ ಚರ್ಚೆಗಳಲ್ಲಿ ಇಸ್ರೇಲ್ ಮುಂಚೂಣಿಯಲ್ಲಿದೆ ಎಂದು ಅದು ವರದಿ ಮಾಡಿದೆ.

ಈ ವರದಿ ಕುರಿತಂತೆ ಅಮೆರಿಕ ಅಥವಾ ಇಸ್ರೇಲ್‌ನಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ ಪ್ಯಾಲೆಸ್ಟೀನಿಯನ್ನರ “ಸ್ವಯಂಪ್ರೇರಿತ” ವಲಸೆ ಎಂದು ದೀರ್ಘಕಾಲದಿಂದ ಪ್ರತಿಪಾದಿಸುತ್ತಿರುವ ಇಸ್ರೇಲಿ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್, ಈ ವಾರ ಇಸ್ರೇಲ್ ಇವರ ಸ್ಥಳಾಂತರಕ್ಕೆ ದೇಶಗಳನ್ನು ಗುರುತಿಸಲು ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ. ಇಸ್ರೇಲ್ ತನ್ನ ರಕ್ಷಣಾ ಸಚಿವಾಲಯದೊಳಗೆ “ಬಹಳ ದೊಡ್ಡ ವಲಸೆ ಇಲಾಖೆ”ಯನ್ನು ಸಿದ್ಧಪಡಿಸುತ್ತಿದೆ ಎಂದು ಕೂಡ ಅದು ವರದಿ ಮಾಡಿದೆ.

ದೋಹಾ ಇನ್‌ಸ್ಟಿಟ್ಯೂಟ್ ಫಾರ್ ಗ್ರಾಜುಯೇಟ್ ಸ್ಟಡೀಸ್‌ನ ಅಸೋಸಿಯೇಟ್ ಪ್ರೊಫೆಸರ್ ಟ್ಯಾಮರ್ ಕ್ವಾರ್ಮೌಟ್  ಅವರು ಅಲ್ ಜಜೀರಾ ಜೊತೆ ಮಾತನಾಡಿ, ಪ್ಯಾಲೆಸ್ಟೀನಿಯನ್ನರ ಸ್ಥಳಾಂತರವು “ದಾಟಿ ಹೋಗಬಾರದ ಕೆಂಪು ರೇಖೆ” ಎಂದು ಹೇಳಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ “ಅತಿರೇಕದ” ಪ್ರಸ್ತಾವನೆಯನ್ನು ನಿಲ್ಲಿಸುವ ಜವಾಬ್ದಾರಿಯನ್ನು ಹೊಂದಿವೆ ಮತ್ತು “ಈ ಯಾವುದೇ ಸನ್ನಿವೇಶಗಳಲ್ಲಿ ಇಸ್ರೇಲ್‌ನೊಂದಿಗೆ ತೊಡಗಿಸಿಕೊಳ್ಳಬಾರದು” ಎಂದು ಅವರು ಹೇಳಿದರು. ವಿಶೇಷವಾಗಿ ಪ್ಯಾಲೆಸ್ಟೀನಿಯನ್ನರನ್ನು ವಸಾಹತುಶಾಹಿ ಪರಂಪರೆಯಿಂದ ಹೋರಾಡುತ್ತಲೇ ಇರುವ ಆಫ್ರಿಕನ್ ದೇಶಗಳಿಗೆ ಸ್ಥಳಾಂತರಿಸುವುದು ಖಂಡನೀಯ ಎಂದಿದ್ದಾರೆ.

ವಸಾಹತುಶಾಹಿ ಪರಂಪರೆಯಿಂದಾಗಿ ಸುಡಾನ್ ಮತ್ತು ಸೊಮಾಲಿಯಾ ಇನ್ನೂ ಯುದ್ಧಗಳಿಂದ ಜರ್ಜರಿತಗೊಂಡಿವೆ ಎಂದು ಕಾರ್ಮೌಟ್ ಹೇಳಿದ್ದಾರೆ.

ಮಾನ್ಯತೆಗೆ ಬದಲಾಗಿ ಅಮೆರಿಕಕ್ಕೆ ಸಹಾಯಕವಾಗಬಹುದಾದ ಹಲವಾರು ಕ್ಷೇತ್ರಗಳ ಕುರಿತು ಸೊಮಾಲಿಲ್ಯಾಂಡ್‌ನೊಂದಿಗೆ ಅಮೆರಿಕವು ಸಂಭಾಷಣೆ ನಡೆಸುತ್ತಿದೆ ಎಂದು ಈ ಪ್ರಯತ್ನಗಳಲ್ಲಿ ಭಾಗಿಯಾಗಿರುವ ಅಮೆರಿಕದ ಅಧಿಕಾರಿಯೊಬ್ಬರು ಎಪಿಗೆ ದೃಢಪಡಿಸಿದ್ದಾರೆ.

ಏತನ್ಮಧ್ಯೆ, ಪ್ಯಾಲೆಸ್ಟೀನಿಯನ್ ಸ್ವ-ಆಡಳಿತಕ್ಕೆ ಸೊಮಾಲಿಯಾ ಬಲವಾದ ಬೆಂಬಲವನ್ನು ನೀಡುತ್ತಿರುವಾಗ ಪ್ಯಾಲೆಸ್ಟೀನಿಯನ್ನರಿಗೆ ಆತಿಥ್ಯ ವಹಿಸಲು ಸೊಮಾಲಿಯಾ ಏಕೆ ಬಯಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ನೈರೋಬಿಯಲ್ಲಿ ವಕೀಲ ಮತ್ತು ಸಂಘರ್ಷ ಸಂಶೋಧಕ ಸಾಂಬು ಚೆಪ್ಕೋರಿರ್ ಎಪಿಗೆ ತಿಳಿಸಿದ್ದಾರೆ.

ಸೂಕ್ಷ್ಮ ರಾಜತಾಂತ್ರಿಕ ವಿಷಯದ ಕುರಿತು ಚರ್ಚಿಸಲು ಹೆಸರು ಬಹಿರಂಗಪಡಿಸಲು ಇಚ್ಛಿಸದ ಇಬ್ಬರು ಸುಡಾನ್ ಅಧಿಕಾರಿಗಳು, ಟ್ರಂಪ್ ಆಡಳಿತವು ಪ್ಯಾಲೆಸ್ಟೀನಿಯನ್ನರನ್ನು ಸ್ವೀಕರಿಸುವ ಬಗ್ಗೆ ಮಿಲಿಟರಿ ನೇತೃತ್ವದ ಸರ್ಕಾರವನ್ನು ಸಂಪರ್ಕಿಸಿದೆ ಎಂದು ದೃಢಪಡಿಸಿದರು.

ಸುಡಾನ್ ಸರ್ಕಾರ ಈ ವಿಚಾರವನ್ನು ತಿರಸ್ಕರಿಸಿದೆ ಎಂದು ಇಬ್ಬರೂ ಅಧಿಕಾರಿಗಳು ತಿಳಿಸಿದ್ದಾರೆ. “ಈ ಸಲಹೆಯನ್ನು ತಕ್ಷಣವೇ ತಿರಸ್ಕರಿಸಲಾಯಿತು” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಈ ಕುರಿತು ರಾಯಿಟರ್ಸ್‌ನ ಪ್ರತಿಕ್ರಿಯೆಗೆ ಶ್ವೇತಭವನ ಮತ್ತು ಯುಎಸ್ ವಿದೇಶಾಂಗ ಇಲಾಖೆ ತಕ್ಷಣ ಪ್ರತಿಕ್ರಿಯಿಸಲಿಲ್ಲ. ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಮಾಹಿತಿ ಸಚಿವರು ರಾಯಿಟರ್ಸ್‌ನ ಪ್ರತಿಕ್ರಿಯೆ ಕೋರಿದ ದೂರವಾಣಿ ಕರೆಗಳಿಗೆ ಉತ್ತರಿಸಲಿಲ್ಲ.

12 ಮಿಲಿಯನ್ ಸ್ವಂತ ಜನರನ್ನು ಸ್ಥಳಾಂತರಿಸಿರುವ ಮತ್ತು ಕ್ಷಾಮವನ್ನು ಎದುರಿಸುತ್ತಾ, ವಿನಾಶಕಾರಿ ಅಂತರ್ಯುದ್ಧವನ್ನು ಎದುರಿಸುತ್ತಿರುವ ದೇಶವಾದ ಸುಡಾನ್‌ನ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಿಲ್ಲ. ಈ ತಿಂಗಳ ಆರಂಭದಲ್ಲಿ  ಅರಬ್ ನಾಯಕರು ಗಾಜಾಗೆ 53 ಬಿಲಿಯನ್ ಡಾಲರ್‌ಗಳ ಈಜಿಪ್ಟ್ ಪುನರ್ನಿರ್ಮಾಣ ಯೋಜನೆಯನ್ನು ಘೋಷಿಸಿದ್ದಾರೆ. ಇದು ಪ್ಯಾಲೆಸ್ಟೀನಿಯನ್ನರನ್ನು ಎನ್ಕ್ಲೇವ್‌ನಿಂದ ಸ್ಥಳಾಂತರಿಸುವುದನ್ನು ತಪ್ಪಿಸುತ್ತದೆ. ಇದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಮಧ್ಯಪ್ರಾಚ್ಯ ರಿವೇರಿಯಾ”ದ ದೃಷ್ಟಿಕೋನಕ್ಕೆ ವ್ಯತಿರಿಕ್ತವಾಗಿದೆ. ಈ ಘೋಷಣೆಯ ಯೋಜನೆಯಲ್ಲಿ ಸುಡಾನ್ ಮತ್ತು ಸೊಮಾಲಿಯಾ ಎರಡೂ ರಾಷ್ಟ್ರಗಳ ನಾಯಕರು ಸೇರಿದ್ದರು.

ಟ್ರಂಪ್ ಅವರ ಯೋಜನೆಯು ತಮ್ಮ ನೆಲೆಯಿಂದ ಶಾಶ್ವತವಾಗಿ ಓಡಿಸಲ್ಪಡುವ ಬಗ್ಗೆ ದೀರ್ಘಕಾಲದ ಪ್ಯಾಲೆಸ್ಟೀನಿಯನ್ ಭಯವನ್ನು ಬಲಪಡಿಸಿದೆ ಮತ್ತು ಅಂತರರಾಷ್ಟ್ರೀಯವಾಗಿ ವ್ಯಾಪಕ ತಿರಸ್ಕಾರವನ್ನು ಎದುರಿಸಿದೆ.

ಹಾವೇರಿ | ನರ್ಸ್ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...