Homeಅಂತರಾಷ್ಟ್ರೀಯಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

- Advertisement -
- Advertisement -

ಗಾಜಾದಿಂದ ಸುಡಾನ್, ಸೊಮಾಲಿಯಾ ಮತ್ತು ಅದರ ಬೇರ್ಪಟ್ಟ ಪ್ರದೇಶವಾದ ಸೊಮಾಲಿಲ್ಯಾಂಡ್‌ಗೆ ಪ್ಯಾಲೆಸ್ತೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ಗಳು ಮೂರು ಪೂರ್ವ ಆಫ್ರಿಕಾದ ಸರ್ಕಾರಗಳೊಂದಿಗೆ ಚರ್ಚಿಸಿವೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶುಕ್ರವಾರದ ವರದಿಯಲ್ಲಿ ಸುಡಾನ್ ಅಧಿಕಾರಿಗಳು ಅಮೆರಿಕದ ಪ್ರಸ್ತಾವನೆಗಳನ್ನು ತಿರಸ್ಕರಿಸಿರುವುದಾಗಿ ಹೇಳಿಕೊಂಡರೆ, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಅಧಿಕಾರಿಗಳು ಯಾವುದೇ ಸಂಪರ್ಕಗಳ ಬಗ್ಗೆ ತಿಳಿದಿಲ್ಲ ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ರಹಸ್ಯ ರಾಜತಾಂತ್ರಿಕ ಉಪಕ್ರಮದ ಬಗ್ಗೆ ಚರ್ಚಿಸಲು ಅನಾಮಧೇಯತೆಯ ಷರತ್ತಿನ ಮೇಲೆ ಮಾತನಾಡಿದ ಅಮೆರಿಕ ಮತ್ತು ಇಸ್ರೇಲಿ ಅಧಿಕಾರಿಗಳು, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನೊಂದಿಗಿನ ಸಂಪರ್ಕಗಳನ್ನು ದೃಢಪಡಿಸಿದರು ಮತ್ತು ಅಮೆರಿಕದ ಅಧಿಕಾರಿಗಳು ಸುಡಾನ್ ಅನ್ನು ಸಹ ದೃಢಪಡಿಸಿದರು. ಪ್ರಯತ್ನಗಳು ಎಷ್ಟು ಪ್ರಗತಿ ಸಾಧಿಸಿವೆ ಅಥವಾ ಚರ್ಚೆಗಳು ಯಾವ ಮಟ್ಟದಲ್ಲಿ ನಡೆದವು ಎಂಬುದು ಸ್ಪಷ್ಟವಾಗಿಲ್ಲ ಎಂದು ಅದು ಹೇಳಿದೆ.

ಪ್ಯಾಲೆಸ್ಟೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಮತ್ತು ಗಾಜಾ ಪಟ್ಟಿಯನ್ನು “ಸ್ವಾಧೀನಪಡಿಸಿಕೊಳ್ಳುವ” ಕಲ್ಪನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಡಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಇದನ್ನು ಪ್ಯಾಲೆಸ್ಟೀನಿಯನ್ನರು ಮತ್ತು ಮಧ್ಯಪ್ರಾಚ್ಯದ ದೇಶಗಳು ಸಂಪೂರ್ಣವಾಗಿ ತಿರಸ್ಕರಿಸಿವೆ. ಅನೇಕರು ಇದನ್ನು ಜನಾಂಗೀಯ ಶುದ್ಧೀಕರಣ ಎಂದು ಬಣ್ಣಿಸಿದ್ದಾರೆ.

ಟ್ರಂಪ್ ಅವರು ನೆತನ್ಯಾಹು ಜೊತೆಗೆ ಗಾಜಾ ಯೋಜನೆಯನ್ನು ಮಂಡಿಸಿದ ಕೆಲವು ದಿನಗಳ ನಂತರ, ಅಮೆರಿಕ ಮತ್ತು ಇಸ್ರೇಲ್‌ನಿಂದ ಮೂರು ಸಂಭಾವ್ಯ ತಾಣಗಳಿಗೆ ಪ್ರತ್ಯೇಕ ಸಂಪರ್ಕವು ಕಳೆದ ತಿಂಗಳು ಪ್ರಾರಂಭವಾಯಿತು ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಈ ಚರ್ಚೆಗಳಲ್ಲಿ ಇಸ್ರೇಲ್ ಮುಂಚೂಣಿಯಲ್ಲಿದೆ ಎಂದು ಅದು ವರದಿ ಮಾಡಿದೆ.

ಈ ವರದಿ ಕುರಿತಂತೆ ಅಮೆರಿಕ ಅಥವಾ ಇಸ್ರೇಲ್‌ನಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ ಪ್ಯಾಲೆಸ್ಟೀನಿಯನ್ನರ “ಸ್ವಯಂಪ್ರೇರಿತ” ವಲಸೆ ಎಂದು ದೀರ್ಘಕಾಲದಿಂದ ಪ್ರತಿಪಾದಿಸುತ್ತಿರುವ ಇಸ್ರೇಲಿ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್, ಈ ವಾರ ಇಸ್ರೇಲ್ ಇವರ ಸ್ಥಳಾಂತರಕ್ಕೆ ದೇಶಗಳನ್ನು ಗುರುತಿಸಲು ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ. ಇಸ್ರೇಲ್ ತನ್ನ ರಕ್ಷಣಾ ಸಚಿವಾಲಯದೊಳಗೆ “ಬಹಳ ದೊಡ್ಡ ವಲಸೆ ಇಲಾಖೆ”ಯನ್ನು ಸಿದ್ಧಪಡಿಸುತ್ತಿದೆ ಎಂದು ಕೂಡ ಅದು ವರದಿ ಮಾಡಿದೆ.

ದೋಹಾ ಇನ್‌ಸ್ಟಿಟ್ಯೂಟ್ ಫಾರ್ ಗ್ರಾಜುಯೇಟ್ ಸ್ಟಡೀಸ್‌ನ ಅಸೋಸಿಯೇಟ್ ಪ್ರೊಫೆಸರ್ ಟ್ಯಾಮರ್ ಕ್ವಾರ್ಮೌಟ್  ಅವರು ಅಲ್ ಜಜೀರಾ ಜೊತೆ ಮಾತನಾಡಿ, ಪ್ಯಾಲೆಸ್ಟೀನಿಯನ್ನರ ಸ್ಥಳಾಂತರವು “ದಾಟಿ ಹೋಗಬಾರದ ಕೆಂಪು ರೇಖೆ” ಎಂದು ಹೇಳಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ “ಅತಿರೇಕದ” ಪ್ರಸ್ತಾವನೆಯನ್ನು ನಿಲ್ಲಿಸುವ ಜವಾಬ್ದಾರಿಯನ್ನು ಹೊಂದಿವೆ ಮತ್ತು “ಈ ಯಾವುದೇ ಸನ್ನಿವೇಶಗಳಲ್ಲಿ ಇಸ್ರೇಲ್‌ನೊಂದಿಗೆ ತೊಡಗಿಸಿಕೊಳ್ಳಬಾರದು” ಎಂದು ಅವರು ಹೇಳಿದರು. ವಿಶೇಷವಾಗಿ ಪ್ಯಾಲೆಸ್ಟೀನಿಯನ್ನರನ್ನು ವಸಾಹತುಶಾಹಿ ಪರಂಪರೆಯಿಂದ ಹೋರಾಡುತ್ತಲೇ ಇರುವ ಆಫ್ರಿಕನ್ ದೇಶಗಳಿಗೆ ಸ್ಥಳಾಂತರಿಸುವುದು ಖಂಡನೀಯ ಎಂದಿದ್ದಾರೆ.

ವಸಾಹತುಶಾಹಿ ಪರಂಪರೆಯಿಂದಾಗಿ ಸುಡಾನ್ ಮತ್ತು ಸೊಮಾಲಿಯಾ ಇನ್ನೂ ಯುದ್ಧಗಳಿಂದ ಜರ್ಜರಿತಗೊಂಡಿವೆ ಎಂದು ಕಾರ್ಮೌಟ್ ಹೇಳಿದ್ದಾರೆ.

ಮಾನ್ಯತೆಗೆ ಬದಲಾಗಿ ಅಮೆರಿಕಕ್ಕೆ ಸಹಾಯಕವಾಗಬಹುದಾದ ಹಲವಾರು ಕ್ಷೇತ್ರಗಳ ಕುರಿತು ಸೊಮಾಲಿಲ್ಯಾಂಡ್‌ನೊಂದಿಗೆ ಅಮೆರಿಕವು ಸಂಭಾಷಣೆ ನಡೆಸುತ್ತಿದೆ ಎಂದು ಈ ಪ್ರಯತ್ನಗಳಲ್ಲಿ ಭಾಗಿಯಾಗಿರುವ ಅಮೆರಿಕದ ಅಧಿಕಾರಿಯೊಬ್ಬರು ಎಪಿಗೆ ದೃಢಪಡಿಸಿದ್ದಾರೆ.

ಏತನ್ಮಧ್ಯೆ, ಪ್ಯಾಲೆಸ್ಟೀನಿಯನ್ ಸ್ವ-ಆಡಳಿತಕ್ಕೆ ಸೊಮಾಲಿಯಾ ಬಲವಾದ ಬೆಂಬಲವನ್ನು ನೀಡುತ್ತಿರುವಾಗ ಪ್ಯಾಲೆಸ್ಟೀನಿಯನ್ನರಿಗೆ ಆತಿಥ್ಯ ವಹಿಸಲು ಸೊಮಾಲಿಯಾ ಏಕೆ ಬಯಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ನೈರೋಬಿಯಲ್ಲಿ ವಕೀಲ ಮತ್ತು ಸಂಘರ್ಷ ಸಂಶೋಧಕ ಸಾಂಬು ಚೆಪ್ಕೋರಿರ್ ಎಪಿಗೆ ತಿಳಿಸಿದ್ದಾರೆ.

ಸೂಕ್ಷ್ಮ ರಾಜತಾಂತ್ರಿಕ ವಿಷಯದ ಕುರಿತು ಚರ್ಚಿಸಲು ಹೆಸರು ಬಹಿರಂಗಪಡಿಸಲು ಇಚ್ಛಿಸದ ಇಬ್ಬರು ಸುಡಾನ್ ಅಧಿಕಾರಿಗಳು, ಟ್ರಂಪ್ ಆಡಳಿತವು ಪ್ಯಾಲೆಸ್ಟೀನಿಯನ್ನರನ್ನು ಸ್ವೀಕರಿಸುವ ಬಗ್ಗೆ ಮಿಲಿಟರಿ ನೇತೃತ್ವದ ಸರ್ಕಾರವನ್ನು ಸಂಪರ್ಕಿಸಿದೆ ಎಂದು ದೃಢಪಡಿಸಿದರು.

ಸುಡಾನ್ ಸರ್ಕಾರ ಈ ವಿಚಾರವನ್ನು ತಿರಸ್ಕರಿಸಿದೆ ಎಂದು ಇಬ್ಬರೂ ಅಧಿಕಾರಿಗಳು ತಿಳಿಸಿದ್ದಾರೆ. “ಈ ಸಲಹೆಯನ್ನು ತಕ್ಷಣವೇ ತಿರಸ್ಕರಿಸಲಾಯಿತು” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಈ ಕುರಿತು ರಾಯಿಟರ್ಸ್‌ನ ಪ್ರತಿಕ್ರಿಯೆಗೆ ಶ್ವೇತಭವನ ಮತ್ತು ಯುಎಸ್ ವಿದೇಶಾಂಗ ಇಲಾಖೆ ತಕ್ಷಣ ಪ್ರತಿಕ್ರಿಯಿಸಲಿಲ್ಲ. ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಮಾಹಿತಿ ಸಚಿವರು ರಾಯಿಟರ್ಸ್‌ನ ಪ್ರತಿಕ್ರಿಯೆ ಕೋರಿದ ದೂರವಾಣಿ ಕರೆಗಳಿಗೆ ಉತ್ತರಿಸಲಿಲ್ಲ.

12 ಮಿಲಿಯನ್ ಸ್ವಂತ ಜನರನ್ನು ಸ್ಥಳಾಂತರಿಸಿರುವ ಮತ್ತು ಕ್ಷಾಮವನ್ನು ಎದುರಿಸುತ್ತಾ, ವಿನಾಶಕಾರಿ ಅಂತರ್ಯುದ್ಧವನ್ನು ಎದುರಿಸುತ್ತಿರುವ ದೇಶವಾದ ಸುಡಾನ್‌ನ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಿಲ್ಲ. ಈ ತಿಂಗಳ ಆರಂಭದಲ್ಲಿ  ಅರಬ್ ನಾಯಕರು ಗಾಜಾಗೆ 53 ಬಿಲಿಯನ್ ಡಾಲರ್‌ಗಳ ಈಜಿಪ್ಟ್ ಪುನರ್ನಿರ್ಮಾಣ ಯೋಜನೆಯನ್ನು ಘೋಷಿಸಿದ್ದಾರೆ. ಇದು ಪ್ಯಾಲೆಸ್ಟೀನಿಯನ್ನರನ್ನು ಎನ್ಕ್ಲೇವ್‌ನಿಂದ ಸ್ಥಳಾಂತರಿಸುವುದನ್ನು ತಪ್ಪಿಸುತ್ತದೆ. ಇದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಮಧ್ಯಪ್ರಾಚ್ಯ ರಿವೇರಿಯಾ”ದ ದೃಷ್ಟಿಕೋನಕ್ಕೆ ವ್ಯತಿರಿಕ್ತವಾಗಿದೆ. ಈ ಘೋಷಣೆಯ ಯೋಜನೆಯಲ್ಲಿ ಸುಡಾನ್ ಮತ್ತು ಸೊಮಾಲಿಯಾ ಎರಡೂ ರಾಷ್ಟ್ರಗಳ ನಾಯಕರು ಸೇರಿದ್ದರು.

ಟ್ರಂಪ್ ಅವರ ಯೋಜನೆಯು ತಮ್ಮ ನೆಲೆಯಿಂದ ಶಾಶ್ವತವಾಗಿ ಓಡಿಸಲ್ಪಡುವ ಬಗ್ಗೆ ದೀರ್ಘಕಾಲದ ಪ್ಯಾಲೆಸ್ಟೀನಿಯನ್ ಭಯವನ್ನು ಬಲಪಡಿಸಿದೆ ಮತ್ತು ಅಂತರರಾಷ್ಟ್ರೀಯವಾಗಿ ವ್ಯಾಪಕ ತಿರಸ್ಕಾರವನ್ನು ಎದುರಿಸಿದೆ.

ಹಾವೇರಿ | ನರ್ಸ್ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...