Homeಅಂತರಾಷ್ಟ್ರೀಯಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

- Advertisement -
- Advertisement -

ಗಾಜಾದಿಂದ ಸುಡಾನ್, ಸೊಮಾಲಿಯಾ ಮತ್ತು ಅದರ ಬೇರ್ಪಟ್ಟ ಪ್ರದೇಶವಾದ ಸೊಮಾಲಿಲ್ಯಾಂಡ್‌ಗೆ ಪ್ಯಾಲೆಸ್ತೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ಗಳು ಮೂರು ಪೂರ್ವ ಆಫ್ರಿಕಾದ ಸರ್ಕಾರಗಳೊಂದಿಗೆ ಚರ್ಚಿಸಿವೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶುಕ್ರವಾರದ ವರದಿಯಲ್ಲಿ ಸುಡಾನ್ ಅಧಿಕಾರಿಗಳು ಅಮೆರಿಕದ ಪ್ರಸ್ತಾವನೆಗಳನ್ನು ತಿರಸ್ಕರಿಸಿರುವುದಾಗಿ ಹೇಳಿಕೊಂಡರೆ, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಅಧಿಕಾರಿಗಳು ಯಾವುದೇ ಸಂಪರ್ಕಗಳ ಬಗ್ಗೆ ತಿಳಿದಿಲ್ಲ ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ರಹಸ್ಯ ರಾಜತಾಂತ್ರಿಕ ಉಪಕ್ರಮದ ಬಗ್ಗೆ ಚರ್ಚಿಸಲು ಅನಾಮಧೇಯತೆಯ ಷರತ್ತಿನ ಮೇಲೆ ಮಾತನಾಡಿದ ಅಮೆರಿಕ ಮತ್ತು ಇಸ್ರೇಲಿ ಅಧಿಕಾರಿಗಳು, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನೊಂದಿಗಿನ ಸಂಪರ್ಕಗಳನ್ನು ದೃಢಪಡಿಸಿದರು ಮತ್ತು ಅಮೆರಿಕದ ಅಧಿಕಾರಿಗಳು ಸುಡಾನ್ ಅನ್ನು ಸಹ ದೃಢಪಡಿಸಿದರು. ಪ್ರಯತ್ನಗಳು ಎಷ್ಟು ಪ್ರಗತಿ ಸಾಧಿಸಿವೆ ಅಥವಾ ಚರ್ಚೆಗಳು ಯಾವ ಮಟ್ಟದಲ್ಲಿ ನಡೆದವು ಎಂಬುದು ಸ್ಪಷ್ಟವಾಗಿಲ್ಲ ಎಂದು ಅದು ಹೇಳಿದೆ.

ಪ್ಯಾಲೆಸ್ಟೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಮತ್ತು ಗಾಜಾ ಪಟ್ಟಿಯನ್ನು “ಸ್ವಾಧೀನಪಡಿಸಿಕೊಳ್ಳುವ” ಕಲ್ಪನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಡಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಇದನ್ನು ಪ್ಯಾಲೆಸ್ಟೀನಿಯನ್ನರು ಮತ್ತು ಮಧ್ಯಪ್ರಾಚ್ಯದ ದೇಶಗಳು ಸಂಪೂರ್ಣವಾಗಿ ತಿರಸ್ಕರಿಸಿವೆ. ಅನೇಕರು ಇದನ್ನು ಜನಾಂಗೀಯ ಶುದ್ಧೀಕರಣ ಎಂದು ಬಣ್ಣಿಸಿದ್ದಾರೆ.

ಟ್ರಂಪ್ ಅವರು ನೆತನ್ಯಾಹು ಜೊತೆಗೆ ಗಾಜಾ ಯೋಜನೆಯನ್ನು ಮಂಡಿಸಿದ ಕೆಲವು ದಿನಗಳ ನಂತರ, ಅಮೆರಿಕ ಮತ್ತು ಇಸ್ರೇಲ್‌ನಿಂದ ಮೂರು ಸಂಭಾವ್ಯ ತಾಣಗಳಿಗೆ ಪ್ರತ್ಯೇಕ ಸಂಪರ್ಕವು ಕಳೆದ ತಿಂಗಳು ಪ್ರಾರಂಭವಾಯಿತು ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಈ ಚರ್ಚೆಗಳಲ್ಲಿ ಇಸ್ರೇಲ್ ಮುಂಚೂಣಿಯಲ್ಲಿದೆ ಎಂದು ಅದು ವರದಿ ಮಾಡಿದೆ.

ಈ ವರದಿ ಕುರಿತಂತೆ ಅಮೆರಿಕ ಅಥವಾ ಇಸ್ರೇಲ್‌ನಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ ಪ್ಯಾಲೆಸ್ಟೀನಿಯನ್ನರ “ಸ್ವಯಂಪ್ರೇರಿತ” ವಲಸೆ ಎಂದು ದೀರ್ಘಕಾಲದಿಂದ ಪ್ರತಿಪಾದಿಸುತ್ತಿರುವ ಇಸ್ರೇಲಿ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್, ಈ ವಾರ ಇಸ್ರೇಲ್ ಇವರ ಸ್ಥಳಾಂತರಕ್ಕೆ ದೇಶಗಳನ್ನು ಗುರುತಿಸಲು ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ. ಇಸ್ರೇಲ್ ತನ್ನ ರಕ್ಷಣಾ ಸಚಿವಾಲಯದೊಳಗೆ “ಬಹಳ ದೊಡ್ಡ ವಲಸೆ ಇಲಾಖೆ”ಯನ್ನು ಸಿದ್ಧಪಡಿಸುತ್ತಿದೆ ಎಂದು ಕೂಡ ಅದು ವರದಿ ಮಾಡಿದೆ.

ದೋಹಾ ಇನ್‌ಸ್ಟಿಟ್ಯೂಟ್ ಫಾರ್ ಗ್ರಾಜುಯೇಟ್ ಸ್ಟಡೀಸ್‌ನ ಅಸೋಸಿಯೇಟ್ ಪ್ರೊಫೆಸರ್ ಟ್ಯಾಮರ್ ಕ್ವಾರ್ಮೌಟ್  ಅವರು ಅಲ್ ಜಜೀರಾ ಜೊತೆ ಮಾತನಾಡಿ, ಪ್ಯಾಲೆಸ್ಟೀನಿಯನ್ನರ ಸ್ಥಳಾಂತರವು “ದಾಟಿ ಹೋಗಬಾರದ ಕೆಂಪು ರೇಖೆ” ಎಂದು ಹೇಳಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ “ಅತಿರೇಕದ” ಪ್ರಸ್ತಾವನೆಯನ್ನು ನಿಲ್ಲಿಸುವ ಜವಾಬ್ದಾರಿಯನ್ನು ಹೊಂದಿವೆ ಮತ್ತು “ಈ ಯಾವುದೇ ಸನ್ನಿವೇಶಗಳಲ್ಲಿ ಇಸ್ರೇಲ್‌ನೊಂದಿಗೆ ತೊಡಗಿಸಿಕೊಳ್ಳಬಾರದು” ಎಂದು ಅವರು ಹೇಳಿದರು. ವಿಶೇಷವಾಗಿ ಪ್ಯಾಲೆಸ್ಟೀನಿಯನ್ನರನ್ನು ವಸಾಹತುಶಾಹಿ ಪರಂಪರೆಯಿಂದ ಹೋರಾಡುತ್ತಲೇ ಇರುವ ಆಫ್ರಿಕನ್ ದೇಶಗಳಿಗೆ ಸ್ಥಳಾಂತರಿಸುವುದು ಖಂಡನೀಯ ಎಂದಿದ್ದಾರೆ.

ವಸಾಹತುಶಾಹಿ ಪರಂಪರೆಯಿಂದಾಗಿ ಸುಡಾನ್ ಮತ್ತು ಸೊಮಾಲಿಯಾ ಇನ್ನೂ ಯುದ್ಧಗಳಿಂದ ಜರ್ಜರಿತಗೊಂಡಿವೆ ಎಂದು ಕಾರ್ಮೌಟ್ ಹೇಳಿದ್ದಾರೆ.

ಮಾನ್ಯತೆಗೆ ಬದಲಾಗಿ ಅಮೆರಿಕಕ್ಕೆ ಸಹಾಯಕವಾಗಬಹುದಾದ ಹಲವಾರು ಕ್ಷೇತ್ರಗಳ ಕುರಿತು ಸೊಮಾಲಿಲ್ಯಾಂಡ್‌ನೊಂದಿಗೆ ಅಮೆರಿಕವು ಸಂಭಾಷಣೆ ನಡೆಸುತ್ತಿದೆ ಎಂದು ಈ ಪ್ರಯತ್ನಗಳಲ್ಲಿ ಭಾಗಿಯಾಗಿರುವ ಅಮೆರಿಕದ ಅಧಿಕಾರಿಯೊಬ್ಬರು ಎಪಿಗೆ ದೃಢಪಡಿಸಿದ್ದಾರೆ.

ಏತನ್ಮಧ್ಯೆ, ಪ್ಯಾಲೆಸ್ಟೀನಿಯನ್ ಸ್ವ-ಆಡಳಿತಕ್ಕೆ ಸೊಮಾಲಿಯಾ ಬಲವಾದ ಬೆಂಬಲವನ್ನು ನೀಡುತ್ತಿರುವಾಗ ಪ್ಯಾಲೆಸ್ಟೀನಿಯನ್ನರಿಗೆ ಆತಿಥ್ಯ ವಹಿಸಲು ಸೊಮಾಲಿಯಾ ಏಕೆ ಬಯಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ನೈರೋಬಿಯಲ್ಲಿ ವಕೀಲ ಮತ್ತು ಸಂಘರ್ಷ ಸಂಶೋಧಕ ಸಾಂಬು ಚೆಪ್ಕೋರಿರ್ ಎಪಿಗೆ ತಿಳಿಸಿದ್ದಾರೆ.

ಸೂಕ್ಷ್ಮ ರಾಜತಾಂತ್ರಿಕ ವಿಷಯದ ಕುರಿತು ಚರ್ಚಿಸಲು ಹೆಸರು ಬಹಿರಂಗಪಡಿಸಲು ಇಚ್ಛಿಸದ ಇಬ್ಬರು ಸುಡಾನ್ ಅಧಿಕಾರಿಗಳು, ಟ್ರಂಪ್ ಆಡಳಿತವು ಪ್ಯಾಲೆಸ್ಟೀನಿಯನ್ನರನ್ನು ಸ್ವೀಕರಿಸುವ ಬಗ್ಗೆ ಮಿಲಿಟರಿ ನೇತೃತ್ವದ ಸರ್ಕಾರವನ್ನು ಸಂಪರ್ಕಿಸಿದೆ ಎಂದು ದೃಢಪಡಿಸಿದರು.

ಸುಡಾನ್ ಸರ್ಕಾರ ಈ ವಿಚಾರವನ್ನು ತಿರಸ್ಕರಿಸಿದೆ ಎಂದು ಇಬ್ಬರೂ ಅಧಿಕಾರಿಗಳು ತಿಳಿಸಿದ್ದಾರೆ. “ಈ ಸಲಹೆಯನ್ನು ತಕ್ಷಣವೇ ತಿರಸ್ಕರಿಸಲಾಯಿತು” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಈ ಕುರಿತು ರಾಯಿಟರ್ಸ್‌ನ ಪ್ರತಿಕ್ರಿಯೆಗೆ ಶ್ವೇತಭವನ ಮತ್ತು ಯುಎಸ್ ವಿದೇಶಾಂಗ ಇಲಾಖೆ ತಕ್ಷಣ ಪ್ರತಿಕ್ರಿಯಿಸಲಿಲ್ಲ. ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಮಾಹಿತಿ ಸಚಿವರು ರಾಯಿಟರ್ಸ್‌ನ ಪ್ರತಿಕ್ರಿಯೆ ಕೋರಿದ ದೂರವಾಣಿ ಕರೆಗಳಿಗೆ ಉತ್ತರಿಸಲಿಲ್ಲ.

12 ಮಿಲಿಯನ್ ಸ್ವಂತ ಜನರನ್ನು ಸ್ಥಳಾಂತರಿಸಿರುವ ಮತ್ತು ಕ್ಷಾಮವನ್ನು ಎದುರಿಸುತ್ತಾ, ವಿನಾಶಕಾರಿ ಅಂತರ್ಯುದ್ಧವನ್ನು ಎದುರಿಸುತ್ತಿರುವ ದೇಶವಾದ ಸುಡಾನ್‌ನ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಿಲ್ಲ. ಈ ತಿಂಗಳ ಆರಂಭದಲ್ಲಿ  ಅರಬ್ ನಾಯಕರು ಗಾಜಾಗೆ 53 ಬಿಲಿಯನ್ ಡಾಲರ್‌ಗಳ ಈಜಿಪ್ಟ್ ಪುನರ್ನಿರ್ಮಾಣ ಯೋಜನೆಯನ್ನು ಘೋಷಿಸಿದ್ದಾರೆ. ಇದು ಪ್ಯಾಲೆಸ್ಟೀನಿಯನ್ನರನ್ನು ಎನ್ಕ್ಲೇವ್‌ನಿಂದ ಸ್ಥಳಾಂತರಿಸುವುದನ್ನು ತಪ್ಪಿಸುತ್ತದೆ. ಇದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಮಧ್ಯಪ್ರಾಚ್ಯ ರಿವೇರಿಯಾ”ದ ದೃಷ್ಟಿಕೋನಕ್ಕೆ ವ್ಯತಿರಿಕ್ತವಾಗಿದೆ. ಈ ಘೋಷಣೆಯ ಯೋಜನೆಯಲ್ಲಿ ಸುಡಾನ್ ಮತ್ತು ಸೊಮಾಲಿಯಾ ಎರಡೂ ರಾಷ್ಟ್ರಗಳ ನಾಯಕರು ಸೇರಿದ್ದರು.

ಟ್ರಂಪ್ ಅವರ ಯೋಜನೆಯು ತಮ್ಮ ನೆಲೆಯಿಂದ ಶಾಶ್ವತವಾಗಿ ಓಡಿಸಲ್ಪಡುವ ಬಗ್ಗೆ ದೀರ್ಘಕಾಲದ ಪ್ಯಾಲೆಸ್ಟೀನಿಯನ್ ಭಯವನ್ನು ಬಲಪಡಿಸಿದೆ ಮತ್ತು ಅಂತರರಾಷ್ಟ್ರೀಯವಾಗಿ ವ್ಯಾಪಕ ತಿರಸ್ಕಾರವನ್ನು ಎದುರಿಸಿದೆ.

ಹಾವೇರಿ | ನರ್ಸ್ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...