Homeಅಂತರಾಷ್ಟ್ರೀಯಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

ಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ಅಮೆರಿಕನ್ನರು ಮತ್ತು ಪೆಸಿಫಿಕ್ ದ್ವೀಪವಾಸಿಗಳ ವಿರುದ್ಧದ ಹಿಂಸಾಚಾರ ಮತ್ತು ತಾರತಮ್ಯವನ್ನು ತಡೆಗಟ್ಟಲು ಹೆಚ್ಚುವರಿ ಧನಸಹಾಯ ಮತ್ತು ಕ್ರಾಸ್-ಏಜೆನ್ಸಿ ಉಪಕ್ರಮ ಸೇರಿದಂತೆ ಹೊಸ ಕ್ರಮಗಳನ್ನು ಶ್ವೇತಭವನ ಮಂಗಳವಾರ ಪ್ರಕಟಿಸಿದೆ ಎಂದು ಐಎಎನ್ಎಸ್ ವರದಿಯೊಂದು ತಿಳಿಸಿದೆ.

“ಜನಾಂಗೀಯ ನ್ಯಾಯಕ್ಕಾಗಿ ಸರ್ಕಾರದ ಮೂಲಕ ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳಿಗೆ ಸಮತೆಯನ್ನು ಖಚಿತಪಡಿಸಲು ಬಿಡೆನ್ ಆಡಳಿತ ನಿರ್ಧಿರಿಸಿದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಹೇಳಿಕೆ

ಅಧ್ಯಕ್ಷ ಜೋ ಬಿಡನ್‌, ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳ ಮೇಲೆ ಪರಿಣಾಮ ಬೀರುವ ಅಮೆರಿಕ ಸರ್ಕಾರದ ನೀತಿಗಳ ಸಮನ್ವಯದಲ್ಲಿ ಉಪಕ್ರಮವನ್ನು ಸಾಧಿಸಲು ಶಾಶ್ವತ ನಿರ್ದೇಶಕರನ್ನು ನೇಮಿಸಲಿದ್ದಾರೆ ಎಂದು ವೈಟ್‌ಹೌಸ್ ಪ್ರಕಟಣೆ ಹೇಳಿದೆ.

ಎಫ್‌ಬಿಐ ಹೊಸ ಸಂವಾದಾತ್ಮಕ ವೆಬ್‌ಸೈಟ್‌ ಅನ್ನು ಪ್ರಕಟಿಸಿದ್ದು, ಅದರಲ್ಲಿ ಏಷ್ಯನ್ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ವಿರುದ್ಧದ ಅಪರಾಧಗಳನ್ನು ದಾಖಲಿಸುತ್ತದೆ ಎಂದು ಹೇಳಿದೆ. ಅಲ್ಲದೆ ಏಷ್ಯನ್ ವಿರೋಧಿ ಪಕ್ಷಪಾತವನ್ನು ಗುರುತಿಸುವ ಮತ್ತು ವರದಿ ಮಾಡುವ ಬಗ್ಗೆ ಏಜೆಂಟರಿಗೆ ಶಿಕ್ಷಣ ನೀಡಲು ತರಬೇತಿ ಕಾರ್ಯಕ್ರಮಗಳನ್ನು ನಡೆಸಲು ಪ್ರಾರಂಭಿಸುತ್ತದೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

ಕೌಟುಂಬಿಕ ಹಿಂಸೆ ಮತ್ತು ಲೈಂಗಿಕ ದೌರ್ಜನ್ಯದ ಸಂತ್ರಸ್ತರಾದ ಏಷ್ಯನ್‌ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ಜನರಿಗೆ ಸಹಾಯ ಮಾಡಲು ಆರೋಗ್ಯ ಇಲಾಖೆಯು ಅಮೆರಿಕನ್ ಪಾರುಗಾಣಿಕಾ ಯೋಜನೆಯಿಂದ ಸುಮಾರು 50 ಮಿಲಿಯನ್ ಡಾಲರ್‌ ಒದಗಿಸುತ್ತಿದೆ.

ಜನವರಿಯಲ್ಲಿ ಸ್ಥಾಪಿಸಲಾದ ಕೋವಿಡ್ -19 ಹೆಲ್ತ್ ಈಕ್ವಿಟಿ ಟಾಸ್ಕ್ ಫೋರ್ಸ್, ಸ್ಟ್ರಕ್ಚರಲ್ ಡ್ರೈವರ್ಸ್ ಆಫ್ ಹೆಲ್ತ್ ಇನೀಕ್ವಿಟಿ ಆಂಡ್‌ ಸೆನೋಫೋಬಿಯಾ ಕುರಿತು ಉಪಸಮಿತಿಯನ್ನು ಸ್ಥಾಪಿಸಿದೆ ಎಂದು ಶ್ವೇತಭವನ ತಿಳಿಸಿದೆ. ಈ ಉಪಸಮಿತಿಯು ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ವಿರೋಧಿ ಪಕ್ಷಪಾತದ ಉಲ್ಬಣವನ್ನು ಎದುರಿಸಲು ನಿರ್ದಿಷ್ಟವಾಗಿ ಗಮನ ಹರಿಸಲಿದೆ.

ಸಂಪನ್ಮೂಲಗಳನ್ನು ವಿಸ್ತರಿಸಲು ಮತ್ತು ಏಷ್ಯನ್-ಅಮೇರಿಕನ್ ಇತಿಹಾಸದ ಬಗ್ಗೆ ಮಾಹಿತಿಯನ್ನು ಒದಗಿಸಲು ನ್ಯಾಷನಲ್ ಎಂಡೋಮೆಂಟ್ ಫಾರ್ ದಿ ಹ್ಯುಮಾನಿಟೀಸ್ ಈಗಾಗಲೆ ವರ್ಚುವಲ್ ಲೈಬ್ರರಿಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ’ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚಿಸಿದ್ದೇನೆ’: ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...