Homeಅಂತರಾಷ್ಟ್ರೀಯಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

ಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ಅಮೆರಿಕನ್ನರು ಮತ್ತು ಪೆಸಿಫಿಕ್ ದ್ವೀಪವಾಸಿಗಳ ವಿರುದ್ಧದ ಹಿಂಸಾಚಾರ ಮತ್ತು ತಾರತಮ್ಯವನ್ನು ತಡೆಗಟ್ಟಲು ಹೆಚ್ಚುವರಿ ಧನಸಹಾಯ ಮತ್ತು ಕ್ರಾಸ್-ಏಜೆನ್ಸಿ ಉಪಕ್ರಮ ಸೇರಿದಂತೆ ಹೊಸ ಕ್ರಮಗಳನ್ನು ಶ್ವೇತಭವನ ಮಂಗಳವಾರ ಪ್ರಕಟಿಸಿದೆ ಎಂದು ಐಎಎನ್ಎಸ್ ವರದಿಯೊಂದು ತಿಳಿಸಿದೆ.

“ಜನಾಂಗೀಯ ನ್ಯಾಯಕ್ಕಾಗಿ ಸರ್ಕಾರದ ಮೂಲಕ ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳಿಗೆ ಸಮತೆಯನ್ನು ಖಚಿತಪಡಿಸಲು ಬಿಡೆನ್ ಆಡಳಿತ ನಿರ್ಧಿರಿಸಿದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಹೇಳಿಕೆ

ಅಧ್ಯಕ್ಷ ಜೋ ಬಿಡನ್‌, ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳ ಮೇಲೆ ಪರಿಣಾಮ ಬೀರುವ ಅಮೆರಿಕ ಸರ್ಕಾರದ ನೀತಿಗಳ ಸಮನ್ವಯದಲ್ಲಿ ಉಪಕ್ರಮವನ್ನು ಸಾಧಿಸಲು ಶಾಶ್ವತ ನಿರ್ದೇಶಕರನ್ನು ನೇಮಿಸಲಿದ್ದಾರೆ ಎಂದು ವೈಟ್‌ಹೌಸ್ ಪ್ರಕಟಣೆ ಹೇಳಿದೆ.

ಎಫ್‌ಬಿಐ ಹೊಸ ಸಂವಾದಾತ್ಮಕ ವೆಬ್‌ಸೈಟ್‌ ಅನ್ನು ಪ್ರಕಟಿಸಿದ್ದು, ಅದರಲ್ಲಿ ಏಷ್ಯನ್ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ವಿರುದ್ಧದ ಅಪರಾಧಗಳನ್ನು ದಾಖಲಿಸುತ್ತದೆ ಎಂದು ಹೇಳಿದೆ. ಅಲ್ಲದೆ ಏಷ್ಯನ್ ವಿರೋಧಿ ಪಕ್ಷಪಾತವನ್ನು ಗುರುತಿಸುವ ಮತ್ತು ವರದಿ ಮಾಡುವ ಬಗ್ಗೆ ಏಜೆಂಟರಿಗೆ ಶಿಕ್ಷಣ ನೀಡಲು ತರಬೇತಿ ಕಾರ್ಯಕ್ರಮಗಳನ್ನು ನಡೆಸಲು ಪ್ರಾರಂಭಿಸುತ್ತದೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

ಕೌಟುಂಬಿಕ ಹಿಂಸೆ ಮತ್ತು ಲೈಂಗಿಕ ದೌರ್ಜನ್ಯದ ಸಂತ್ರಸ್ತರಾದ ಏಷ್ಯನ್‌ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ಜನರಿಗೆ ಸಹಾಯ ಮಾಡಲು ಆರೋಗ್ಯ ಇಲಾಖೆಯು ಅಮೆರಿಕನ್ ಪಾರುಗಾಣಿಕಾ ಯೋಜನೆಯಿಂದ ಸುಮಾರು 50 ಮಿಲಿಯನ್ ಡಾಲರ್‌ ಒದಗಿಸುತ್ತಿದೆ.

ಜನವರಿಯಲ್ಲಿ ಸ್ಥಾಪಿಸಲಾದ ಕೋವಿಡ್ -19 ಹೆಲ್ತ್ ಈಕ್ವಿಟಿ ಟಾಸ್ಕ್ ಫೋರ್ಸ್, ಸ್ಟ್ರಕ್ಚರಲ್ ಡ್ರೈವರ್ಸ್ ಆಫ್ ಹೆಲ್ತ್ ಇನೀಕ್ವಿಟಿ ಆಂಡ್‌ ಸೆನೋಫೋಬಿಯಾ ಕುರಿತು ಉಪಸಮಿತಿಯನ್ನು ಸ್ಥಾಪಿಸಿದೆ ಎಂದು ಶ್ವೇತಭವನ ತಿಳಿಸಿದೆ. ಈ ಉಪಸಮಿತಿಯು ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ವಿರೋಧಿ ಪಕ್ಷಪಾತದ ಉಲ್ಬಣವನ್ನು ಎದುರಿಸಲು ನಿರ್ದಿಷ್ಟವಾಗಿ ಗಮನ ಹರಿಸಲಿದೆ.

ಸಂಪನ್ಮೂಲಗಳನ್ನು ವಿಸ್ತರಿಸಲು ಮತ್ತು ಏಷ್ಯನ್-ಅಮೇರಿಕನ್ ಇತಿಹಾಸದ ಬಗ್ಗೆ ಮಾಹಿತಿಯನ್ನು ಒದಗಿಸಲು ನ್ಯಾಷನಲ್ ಎಂಡೋಮೆಂಟ್ ಫಾರ್ ದಿ ಹ್ಯುಮಾನಿಟೀಸ್ ಈಗಾಗಲೆ ವರ್ಚುವಲ್ ಲೈಬ್ರರಿಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ’ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚಿಸಿದ್ದೇನೆ’: ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...