Homeಅಂತರಾಷ್ಟ್ರೀಯಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

ಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ಅಮೆರಿಕನ್ನರು ಮತ್ತು ಪೆಸಿಫಿಕ್ ದ್ವೀಪವಾಸಿಗಳ ವಿರುದ್ಧದ ಹಿಂಸಾಚಾರ ಮತ್ತು ತಾರತಮ್ಯವನ್ನು ತಡೆಗಟ್ಟಲು ಹೆಚ್ಚುವರಿ ಧನಸಹಾಯ ಮತ್ತು ಕ್ರಾಸ್-ಏಜೆನ್ಸಿ ಉಪಕ್ರಮ ಸೇರಿದಂತೆ ಹೊಸ ಕ್ರಮಗಳನ್ನು ಶ್ವೇತಭವನ ಮಂಗಳವಾರ ಪ್ರಕಟಿಸಿದೆ ಎಂದು ಐಎಎನ್ಎಸ್ ವರದಿಯೊಂದು ತಿಳಿಸಿದೆ.

“ಜನಾಂಗೀಯ ನ್ಯಾಯಕ್ಕಾಗಿ ಸರ್ಕಾರದ ಮೂಲಕ ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳಿಗೆ ಸಮತೆಯನ್ನು ಖಚಿತಪಡಿಸಲು ಬಿಡೆನ್ ಆಡಳಿತ ನಿರ್ಧಿರಿಸಿದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಹೇಳಿಕೆ

ಅಧ್ಯಕ್ಷ ಜೋ ಬಿಡನ್‌, ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳ ಮೇಲೆ ಪರಿಣಾಮ ಬೀರುವ ಅಮೆರಿಕ ಸರ್ಕಾರದ ನೀತಿಗಳ ಸಮನ್ವಯದಲ್ಲಿ ಉಪಕ್ರಮವನ್ನು ಸಾಧಿಸಲು ಶಾಶ್ವತ ನಿರ್ದೇಶಕರನ್ನು ನೇಮಿಸಲಿದ್ದಾರೆ ಎಂದು ವೈಟ್‌ಹೌಸ್ ಪ್ರಕಟಣೆ ಹೇಳಿದೆ.

ಎಫ್‌ಬಿಐ ಹೊಸ ಸಂವಾದಾತ್ಮಕ ವೆಬ್‌ಸೈಟ್‌ ಅನ್ನು ಪ್ರಕಟಿಸಿದ್ದು, ಅದರಲ್ಲಿ ಏಷ್ಯನ್ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ವಿರುದ್ಧದ ಅಪರಾಧಗಳನ್ನು ದಾಖಲಿಸುತ್ತದೆ ಎಂದು ಹೇಳಿದೆ. ಅಲ್ಲದೆ ಏಷ್ಯನ್ ವಿರೋಧಿ ಪಕ್ಷಪಾತವನ್ನು ಗುರುತಿಸುವ ಮತ್ತು ವರದಿ ಮಾಡುವ ಬಗ್ಗೆ ಏಜೆಂಟರಿಗೆ ಶಿಕ್ಷಣ ನೀಡಲು ತರಬೇತಿ ಕಾರ್ಯಕ್ರಮಗಳನ್ನು ನಡೆಸಲು ಪ್ರಾರಂಭಿಸುತ್ತದೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

ಕೌಟುಂಬಿಕ ಹಿಂಸೆ ಮತ್ತು ಲೈಂಗಿಕ ದೌರ್ಜನ್ಯದ ಸಂತ್ರಸ್ತರಾದ ಏಷ್ಯನ್‌ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ಜನರಿಗೆ ಸಹಾಯ ಮಾಡಲು ಆರೋಗ್ಯ ಇಲಾಖೆಯು ಅಮೆರಿಕನ್ ಪಾರುಗಾಣಿಕಾ ಯೋಜನೆಯಿಂದ ಸುಮಾರು 50 ಮಿಲಿಯನ್ ಡಾಲರ್‌ ಒದಗಿಸುತ್ತಿದೆ.

ಜನವರಿಯಲ್ಲಿ ಸ್ಥಾಪಿಸಲಾದ ಕೋವಿಡ್ -19 ಹೆಲ್ತ್ ಈಕ್ವಿಟಿ ಟಾಸ್ಕ್ ಫೋರ್ಸ್, ಸ್ಟ್ರಕ್ಚರಲ್ ಡ್ರೈವರ್ಸ್ ಆಫ್ ಹೆಲ್ತ್ ಇನೀಕ್ವಿಟಿ ಆಂಡ್‌ ಸೆನೋಫೋಬಿಯಾ ಕುರಿತು ಉಪಸಮಿತಿಯನ್ನು ಸ್ಥಾಪಿಸಿದೆ ಎಂದು ಶ್ವೇತಭವನ ತಿಳಿಸಿದೆ. ಈ ಉಪಸಮಿತಿಯು ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ವಿರೋಧಿ ಪಕ್ಷಪಾತದ ಉಲ್ಬಣವನ್ನು ಎದುರಿಸಲು ನಿರ್ದಿಷ್ಟವಾಗಿ ಗಮನ ಹರಿಸಲಿದೆ.

ಸಂಪನ್ಮೂಲಗಳನ್ನು ವಿಸ್ತರಿಸಲು ಮತ್ತು ಏಷ್ಯನ್-ಅಮೇರಿಕನ್ ಇತಿಹಾಸದ ಬಗ್ಗೆ ಮಾಹಿತಿಯನ್ನು ಒದಗಿಸಲು ನ್ಯಾಷನಲ್ ಎಂಡೋಮೆಂಟ್ ಫಾರ್ ದಿ ಹ್ಯುಮಾನಿಟೀಸ್ ಈಗಾಗಲೆ ವರ್ಚುವಲ್ ಲೈಬ್ರರಿಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ’ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚಿಸಿದ್ದೇನೆ’: ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....