Homeಅಂತರಾಷ್ಟ್ರೀಯಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

ಏಷ್ಯನ್ ವಿರೋಧಿ ಹಿಂಸಾಚಾರ ನಿಗ್ರಹಿಸಲು ಕ್ರಮ: ಅಮೆರಿಕ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ಅಮೆರಿಕನ್ನರು ಮತ್ತು ಪೆಸಿಫಿಕ್ ದ್ವೀಪವಾಸಿಗಳ ವಿರುದ್ಧದ ಹಿಂಸಾಚಾರ ಮತ್ತು ತಾರತಮ್ಯವನ್ನು ತಡೆಗಟ್ಟಲು ಹೆಚ್ಚುವರಿ ಧನಸಹಾಯ ಮತ್ತು ಕ್ರಾಸ್-ಏಜೆನ್ಸಿ ಉಪಕ್ರಮ ಸೇರಿದಂತೆ ಹೊಸ ಕ್ರಮಗಳನ್ನು ಶ್ವೇತಭವನ ಮಂಗಳವಾರ ಪ್ರಕಟಿಸಿದೆ ಎಂದು ಐಎಎನ್ಎಸ್ ವರದಿಯೊಂದು ತಿಳಿಸಿದೆ.

“ಜನಾಂಗೀಯ ನ್ಯಾಯಕ್ಕಾಗಿ ಸರ್ಕಾರದ ಮೂಲಕ ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳಿಗೆ ಸಮತೆಯನ್ನು ಖಚಿತಪಡಿಸಲು ಬಿಡೆನ್ ಆಡಳಿತ ನಿರ್ಧಿರಿಸಿದೆ” ಎಂದು ವರದಿ ಹೇಳಿದೆ.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಹೇಳಿಕೆ

ಅಧ್ಯಕ್ಷ ಜೋ ಬಿಡನ್‌, ಏಷ್ಯನ್ ಅಮೇರಿಕನ್, ಸ್ಥಳೀಯ ಹವಾಯಿಯನ್ ಮತ್ತು ಪೆಸಿಫಿಕ್ ದ್ವೀಪ ಸಮುದಾಯಗಳ ಮೇಲೆ ಪರಿಣಾಮ ಬೀರುವ ಅಮೆರಿಕ ಸರ್ಕಾರದ ನೀತಿಗಳ ಸಮನ್ವಯದಲ್ಲಿ ಉಪಕ್ರಮವನ್ನು ಸಾಧಿಸಲು ಶಾಶ್ವತ ನಿರ್ದೇಶಕರನ್ನು ನೇಮಿಸಲಿದ್ದಾರೆ ಎಂದು ವೈಟ್‌ಹೌಸ್ ಪ್ರಕಟಣೆ ಹೇಳಿದೆ.

ಎಫ್‌ಬಿಐ ಹೊಸ ಸಂವಾದಾತ್ಮಕ ವೆಬ್‌ಸೈಟ್‌ ಅನ್ನು ಪ್ರಕಟಿಸಿದ್ದು, ಅದರಲ್ಲಿ ಏಷ್ಯನ್ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ವಿರುದ್ಧದ ಅಪರಾಧಗಳನ್ನು ದಾಖಲಿಸುತ್ತದೆ ಎಂದು ಹೇಳಿದೆ. ಅಲ್ಲದೆ ಏಷ್ಯನ್ ವಿರೋಧಿ ಪಕ್ಷಪಾತವನ್ನು ಗುರುತಿಸುವ ಮತ್ತು ವರದಿ ಮಾಡುವ ಬಗ್ಗೆ ಏಜೆಂಟರಿಗೆ ಶಿಕ್ಷಣ ನೀಡಲು ತರಬೇತಿ ಕಾರ್ಯಕ್ರಮಗಳನ್ನು ನಡೆಸಲು ಪ್ರಾರಂಭಿಸುತ್ತದೆ ಎಂದು ಅದು ತಿಳಿಸಿದೆ.

ಇದನ್ನೂ ಓದಿ: ಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

ಕೌಟುಂಬಿಕ ಹಿಂಸೆ ಮತ್ತು ಲೈಂಗಿಕ ದೌರ್ಜನ್ಯದ ಸಂತ್ರಸ್ತರಾದ ಏಷ್ಯನ್‌ ಅಮೇರಿಕನ್‌ ಮತ್ತು ಪೆಸಿಫಿಕ್ ದ್ವೀಪ ಸಮುದಾಯದ ಜನರಿಗೆ ಸಹಾಯ ಮಾಡಲು ಆರೋಗ್ಯ ಇಲಾಖೆಯು ಅಮೆರಿಕನ್ ಪಾರುಗಾಣಿಕಾ ಯೋಜನೆಯಿಂದ ಸುಮಾರು 50 ಮಿಲಿಯನ್ ಡಾಲರ್‌ ಒದಗಿಸುತ್ತಿದೆ.

ಜನವರಿಯಲ್ಲಿ ಸ್ಥಾಪಿಸಲಾದ ಕೋವಿಡ್ -19 ಹೆಲ್ತ್ ಈಕ್ವಿಟಿ ಟಾಸ್ಕ್ ಫೋರ್ಸ್, ಸ್ಟ್ರಕ್ಚರಲ್ ಡ್ರೈವರ್ಸ್ ಆಫ್ ಹೆಲ್ತ್ ಇನೀಕ್ವಿಟಿ ಆಂಡ್‌ ಸೆನೋಫೋಬಿಯಾ ಕುರಿತು ಉಪಸಮಿತಿಯನ್ನು ಸ್ಥಾಪಿಸಿದೆ ಎಂದು ಶ್ವೇತಭವನ ತಿಳಿಸಿದೆ. ಈ ಉಪಸಮಿತಿಯು ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಏಷ್ಯನ್ ವಿರೋಧಿ ಪಕ್ಷಪಾತದ ಉಲ್ಬಣವನ್ನು ಎದುರಿಸಲು ನಿರ್ದಿಷ್ಟವಾಗಿ ಗಮನ ಹರಿಸಲಿದೆ.

ಸಂಪನ್ಮೂಲಗಳನ್ನು ವಿಸ್ತರಿಸಲು ಮತ್ತು ಏಷ್ಯನ್-ಅಮೇರಿಕನ್ ಇತಿಹಾಸದ ಬಗ್ಗೆ ಮಾಹಿತಿಯನ್ನು ಒದಗಿಸಲು ನ್ಯಾಷನಲ್ ಎಂಡೋಮೆಂಟ್ ಫಾರ್ ದಿ ಹ್ಯುಮಾನಿಟೀಸ್ ಈಗಾಗಲೆ ವರ್ಚುವಲ್ ಲೈಬ್ರರಿಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ’ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚಿಸಿದ್ದೇನೆ’: ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...