Homeಅಂತರಾಷ್ಟ್ರೀಯ‘ದೊಡ್ಡ ತಪ್ಪಾಗಿದೆ’ - ಅಫ್ಘಾನ್‌ನ 7 ಮಕ್ಕಳು ಸೇರಿದಂತೆ 10 ನಾಗರಿಕರನ್ನು ಕೊಂದ ಬಗ್ಗೆ ತಪ್ಪೊಪ್ಪಿಕೊಂಡ...

‘ದೊಡ್ಡ ತಪ್ಪಾಗಿದೆ’ – ಅಫ್ಘಾನ್‌ನ 7 ಮಕ್ಕಳು ಸೇರಿದಂತೆ 10 ನಾಗರಿಕರನ್ನು ಕೊಂದ ಬಗ್ಗೆ ತಪ್ಪೊಪ್ಪಿಕೊಂಡ ಅಮೆರಿಕಾ

- Advertisement -
- Advertisement -

ಅಮೆರಿಕಾ ಸೆಂಟ್ರಲ್ ಕಮಾಂಡ್‌ನ ಕಮಾಂಡರ್ ಜನರಲ್ ಕೆನ್ನೆತ್ ಮೆಕೆಂಜಿ ಅವರು ಆಗಸ್ಟ್ 29 ರಂದು ಅಫ್ಘಾನಿಸ್ತಾನದ ಡ್ರೋನ್ ದಾಳಿಯಲ್ಲಿ ಮೃತಪಟ್ಟ ಕುಟುಂಬಗಳೊಂದಿಗೆ ಕ್ಷಮೆಯಾಚಿಸಿದ್ದಾರೆ. 7 ಮಕ್ಕಳು ಸೇರಿದಂತೆ 10 ನಾಗರಿಕರ ಮೇಲೆ ಐಎಸ್‌ಐ ಉಗ್ರರು ಎಂದು ತಪ್ಪಾಗಿ ದಾಳಿ ನಡೆಸಲಾಗಿದೆ ಎಂದು ಮೆಕೆಂಜಿ ಒಪ್ಪಿಕೊಂಡಿದ್ದಾರೆ.

ಆಗಸ್ಟ್‌ 29 ರ ದಾಳಿಯ ನಂತರ ಅಮೆರಿಕಾ ರಕ್ಷಣಾ ಇಲಾಖೆಯು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಪಡೆಗಳಿಗೆ ನೇರ ಬೆದರಿಕೆ ಒಡ್ಡಿದ ಐಎಸ್‌ಐ ಬಂಡುಕೋರರ ಮೇಲೆ ಬಾಂಬ್ ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿತ್ತು.

ಇದನ್ನೂ ಓದಿ: ಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

“ಆ ದಾಳಿಯಲ್ಲಿ ಏಳು ಮಕ್ಕಳು ಸೇರಿದಂತೆ 10 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ನನಗೆ ಈಗ ಮನವರಿಕೆಯಾಗಿದೆ” ಎಂದು ಹೇಳಿರುವ ಮೆಕೆಂಜಿ, ಇದು ದೊಡ್ಡ ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಜೊತೆಗೆ ದಾಳಿಯಲ್ಲಿ ಮೃತಪಟ್ಟ ಕುಟುಂಬ ಮತ್ತು ಸ್ನೇಹಿತರಿಗೆ ತೀವ್ರ ಸಂತಾಪ ವ್ಯಕ್ತಪಡಸಿದ್ದಾರೆ.

“ನಮ್ಮ ಪಡೆಗಳಿಗೆ ಮತ್ತು ವಿಮಾನ ನಿಲ್ದಾಣದಿಂದ ಸ್ಥಳಾಂತರವಾಗುವವರಿಗೆ ಉಂಟಾಗಿದ್ದ ಬೆದರಿಕೆಯನ್ನು ತಡೆಯಬಹುದು ಎಂಬ ತೀವ್ರ ನಂಬಿಕೆಯಿಂದ ಈ ದಾಳಿಯನ್ನು ಮಾಡಲಾಗಿತ್ತು. ಆದರೆ ಅದರಲ್ಲಿ ದೊಡ್ಡ ತಪ್ಪು ಸಂಭವಿಸಿದ್ದು, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಆಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ದಾಳಿ: 43ಕ್ಕೂ ಹೆಚ್ಚು ಮಂದಿಗೆ ಗಾಯ

ಈ ದಾಳಿಯ ನಂತರ ಅಮೆರಿಕಾ ನೀಡಿದ್ದ ಹೇಳಿಕೆಯ ಬಗ್ಗೆ ಸುದ್ದಿ ಸಂಸ್ಥೆಗಳು ಅನುಮಾನವನ್ನು ವ್ಯಕ್ತಪಡಿಸಿದ್ದವು. “ಸ್ಪೋಟಕ ಹೊಂದಿದೆ ಎಂದು ಹೇಳಿ ಅಮೆರಿಕಾ ದಾಳಿ ಮಾಡಿದ್ದ ವಾಹನದ ಚಾಲಕ ಅಮೆರಿಕಾ ಸಂಸ್ಥೆಯೊಂದರಲ್ಲಿ ದೀರ್ಘಾವಧಿಯ ಉದ್ಯೋಗಿಯಾಗದ್ದರು” ಎಂದು ಮಾಧ್ಯಮಗಳು ಈ ವೇಳೆ ಉಲ್ಲೇಖಿಸಿದ್ದವು. ಇದರ ನಂತರ ದಾಳಿಯ ಬಗ್ಗೆ ಮೆಕೆಂಜಿ ಅವರು ಸೆಂಟ್ರಲ್ ಕಮಾಂಡ್ ತನಿಖೆಗೆ ಆದೇಶಿಸಿದ್ದರು.

ಅಫ್ಘಾನ್ ನಾಗರಿಕರಿಗೆ ಆಹಾರ ವಿತರಿಸುವ ಸರ್ಕಾರೇತರ ಸಂಸ್ಥೆಯಾದ, ನ್ಯೂಟ್ರಿಷನ್ ಅಂಡ್ ಎಜುಕೇಶನ್ ಇಂಟರ್‌ನ್ಯಾಷನಲ್‌ನಲ್ಲಿ ಕೆಲಸ ಮಾಡುತ್ತಿದ್ದ ಜೆಮರಿ ಅಹ್ಮದಿ ಮತ್ತು ಅವರ ಕುಟುಂಬದ ಒಂಬತ್ತು ಸದಸ್ಯರು ಈ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದರು ಎಂದು ತನಿಖೆಯು ಕಂಡುಕೊಂಡಿದೆ. ಅವರ ಕಾರಿನಲ್ಲಿ ಸ್ಫೋಟಕಗಳು ಇರಲಿಲ್ಲ, ಬದಲಾಗಿ ನೀರಿನ ಬಾಟಲಿಗಳಿದ್ದವು ಎಂದು ಮೂಲಗಳನ್ನು ಉಲ್ಲೇಖಿಸಿ ಗಾರ್ಡಿಯನ್ ವರದಿ ಮಾಡಿದೆ.

ಇದನ್ನೂ ಓದಿ: ಭಯೋತ್ಪಾದನೆಯ ಹಿಂದಿರುವುದು ಧರ್ಮವೋ… ತೈಲವೋ….? – ರಾಂ‌ ಪುನಿಯಾನಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...