Homeಅಂತರಾಷ್ಟ್ರೀಯ‘ದೊಡ್ಡ ತಪ್ಪಾಗಿದೆ’ - ಅಫ್ಘಾನ್‌ನ 7 ಮಕ್ಕಳು ಸೇರಿದಂತೆ 10 ನಾಗರಿಕರನ್ನು ಕೊಂದ ಬಗ್ಗೆ ತಪ್ಪೊಪ್ಪಿಕೊಂಡ...

‘ದೊಡ್ಡ ತಪ್ಪಾಗಿದೆ’ – ಅಫ್ಘಾನ್‌ನ 7 ಮಕ್ಕಳು ಸೇರಿದಂತೆ 10 ನಾಗರಿಕರನ್ನು ಕೊಂದ ಬಗ್ಗೆ ತಪ್ಪೊಪ್ಪಿಕೊಂಡ ಅಮೆರಿಕಾ

- Advertisement -
- Advertisement -

ಅಮೆರಿಕಾ ಸೆಂಟ್ರಲ್ ಕಮಾಂಡ್‌ನ ಕಮಾಂಡರ್ ಜನರಲ್ ಕೆನ್ನೆತ್ ಮೆಕೆಂಜಿ ಅವರು ಆಗಸ್ಟ್ 29 ರಂದು ಅಫ್ಘಾನಿಸ್ತಾನದ ಡ್ರೋನ್ ದಾಳಿಯಲ್ಲಿ ಮೃತಪಟ್ಟ ಕುಟುಂಬಗಳೊಂದಿಗೆ ಕ್ಷಮೆಯಾಚಿಸಿದ್ದಾರೆ. 7 ಮಕ್ಕಳು ಸೇರಿದಂತೆ 10 ನಾಗರಿಕರ ಮೇಲೆ ಐಎಸ್‌ಐ ಉಗ್ರರು ಎಂದು ತಪ್ಪಾಗಿ ದಾಳಿ ನಡೆಸಲಾಗಿದೆ ಎಂದು ಮೆಕೆಂಜಿ ಒಪ್ಪಿಕೊಂಡಿದ್ದಾರೆ.

ಆಗಸ್ಟ್‌ 29 ರ ದಾಳಿಯ ನಂತರ ಅಮೆರಿಕಾ ರಕ್ಷಣಾ ಇಲಾಖೆಯು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಪಡೆಗಳಿಗೆ ನೇರ ಬೆದರಿಕೆ ಒಡ್ಡಿದ ಐಎಸ್‌ಐ ಬಂಡುಕೋರರ ಮೇಲೆ ಬಾಂಬ್ ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿತ್ತು.

ಇದನ್ನೂ ಓದಿ: ಸೋನು ಸೂದ್ ಕಚೇರಿಗಳ ಮೇಲೆ ಐಟಿ ದಾಳಿ: ತಾಲಿಬಾನ್ ಮನಸ್ಥಿತಿ ಎಂದ ಶಿವಸೇನೆ

“ಆ ದಾಳಿಯಲ್ಲಿ ಏಳು ಮಕ್ಕಳು ಸೇರಿದಂತೆ 10 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ನನಗೆ ಈಗ ಮನವರಿಕೆಯಾಗಿದೆ” ಎಂದು ಹೇಳಿರುವ ಮೆಕೆಂಜಿ, ಇದು ದೊಡ್ಡ ತಪ್ಪು ಎಂದು ಒಪ್ಪಿಕೊಂಡಿದ್ದಾರೆ. ಜೊತೆಗೆ ದಾಳಿಯಲ್ಲಿ ಮೃತಪಟ್ಟ ಕುಟುಂಬ ಮತ್ತು ಸ್ನೇಹಿತರಿಗೆ ತೀವ್ರ ಸಂತಾಪ ವ್ಯಕ್ತಪಡಸಿದ್ದಾರೆ.

“ನಮ್ಮ ಪಡೆಗಳಿಗೆ ಮತ್ತು ವಿಮಾನ ನಿಲ್ದಾಣದಿಂದ ಸ್ಥಳಾಂತರವಾಗುವವರಿಗೆ ಉಂಟಾಗಿದ್ದ ಬೆದರಿಕೆಯನ್ನು ತಡೆಯಬಹುದು ಎಂಬ ತೀವ್ರ ನಂಬಿಕೆಯಿಂದ ಈ ದಾಳಿಯನ್ನು ಮಾಡಲಾಗಿತ್ತು. ಆದರೆ ಅದರಲ್ಲಿ ದೊಡ್ಡ ತಪ್ಪು ಸಂಭವಿಸಿದ್ದು, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಆಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ದಾಳಿ: 43ಕ್ಕೂ ಹೆಚ್ಚು ಮಂದಿಗೆ ಗಾಯ

ಈ ದಾಳಿಯ ನಂತರ ಅಮೆರಿಕಾ ನೀಡಿದ್ದ ಹೇಳಿಕೆಯ ಬಗ್ಗೆ ಸುದ್ದಿ ಸಂಸ್ಥೆಗಳು ಅನುಮಾನವನ್ನು ವ್ಯಕ್ತಪಡಿಸಿದ್ದವು. “ಸ್ಪೋಟಕ ಹೊಂದಿದೆ ಎಂದು ಹೇಳಿ ಅಮೆರಿಕಾ ದಾಳಿ ಮಾಡಿದ್ದ ವಾಹನದ ಚಾಲಕ ಅಮೆರಿಕಾ ಸಂಸ್ಥೆಯೊಂದರಲ್ಲಿ ದೀರ್ಘಾವಧಿಯ ಉದ್ಯೋಗಿಯಾಗದ್ದರು” ಎಂದು ಮಾಧ್ಯಮಗಳು ಈ ವೇಳೆ ಉಲ್ಲೇಖಿಸಿದ್ದವು. ಇದರ ನಂತರ ದಾಳಿಯ ಬಗ್ಗೆ ಮೆಕೆಂಜಿ ಅವರು ಸೆಂಟ್ರಲ್ ಕಮಾಂಡ್ ತನಿಖೆಗೆ ಆದೇಶಿಸಿದ್ದರು.

ಅಫ್ಘಾನ್ ನಾಗರಿಕರಿಗೆ ಆಹಾರ ವಿತರಿಸುವ ಸರ್ಕಾರೇತರ ಸಂಸ್ಥೆಯಾದ, ನ್ಯೂಟ್ರಿಷನ್ ಅಂಡ್ ಎಜುಕೇಶನ್ ಇಂಟರ್‌ನ್ಯಾಷನಲ್‌ನಲ್ಲಿ ಕೆಲಸ ಮಾಡುತ್ತಿದ್ದ ಜೆಮರಿ ಅಹ್ಮದಿ ಮತ್ತು ಅವರ ಕುಟುಂಬದ ಒಂಬತ್ತು ಸದಸ್ಯರು ಈ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದರು ಎಂದು ತನಿಖೆಯು ಕಂಡುಕೊಂಡಿದೆ. ಅವರ ಕಾರಿನಲ್ಲಿ ಸ್ಫೋಟಕಗಳು ಇರಲಿಲ್ಲ, ಬದಲಾಗಿ ನೀರಿನ ಬಾಟಲಿಗಳಿದ್ದವು ಎಂದು ಮೂಲಗಳನ್ನು ಉಲ್ಲೇಖಿಸಿ ಗಾರ್ಡಿಯನ್ ವರದಿ ಮಾಡಿದೆ.

ಇದನ್ನೂ ಓದಿ: ಭಯೋತ್ಪಾದನೆಯ ಹಿಂದಿರುವುದು ಧರ್ಮವೋ… ತೈಲವೋ….? – ರಾಂ‌ ಪುನಿಯಾನಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...