Homeಅಂತರಾಷ್ಟ್ರೀಯಜಾರ್ಜಿಯ, ಮಿಷಿಗನ್ ಕಾನೂನು ಸಮರದಲ್ಲಿ ಸೋತ ಟ್ರಂಪ್; ಬೈಡೆನ್ ಗೆಲುವು ನಿಶ್ಚಿತ?

ಜಾರ್ಜಿಯ, ಮಿಷಿಗನ್ ಕಾನೂನು ಸಮರದಲ್ಲಿ ಸೋತ ಟ್ರಂಪ್; ಬೈಡೆನ್ ಗೆಲುವು ನಿಶ್ಚಿತ?

ಭಾರಿ ಕುತೂಹಲವೇರ್ಪಟ್ಟಿದ್ದ ಜಾರ್ಜಿಯ ಮತ್ತು ಮಿಷಿಗನ್ ರಾಜ್ಯಗಳ ಮತ ಎಣಿಕೆ ತಡೆಹಿಡಿಯುವಂತೆ ಡೊನಾಲ್ಡ್ ಟ್ರಂಪ್ ಮಾಡಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರಿ ಕುತೂಹಲವೇರ್ಪಟ್ಟಿದ್ದ ಜಾರ್ಜಿಯ ಮತ್ತು ಮಿಷಿಗನ್ ರಾಜ್ಯಗಳ ಮತ ಎಣಿಕೆ ತಡೆಹಿಡಿಯುವಂತೆ ಡೊನಾಲ್ಡ್ ಟ್ರಂಪ್ ಮಾಡಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆದರೆ ಟ್ರಂಪ್ ಅವರ ತಂಡವು ಇಷ್ಟಕ್ಕೆ ನಿಲ್ಲದೆ ನೆವಾಡಾದಲ್ಲಿ ಕಾನೂನು ಸಮರಕ್ಕೆ ಇಳಿದಿದೆ.

ಜಾರ್ಜಿಯಾದಲ್ಲಿ ತಡವಾಗಿ ಬಂದ 53 ಬ್ಯಾಲೆಟ್‌ಗಳನ್ನು ಸಕಾಲಕ್ಕೆ ಬಂದ ಬ್ಯಾಲೆಟ್‌ಗಳ ಜತೆ ಮಿಶ್ರ ಮಾಡಲಾಗಿದೆ ಎಂದು ಆಪಾದಿಸಿದ್ದ ಟ್ರಂಪ್ ತಂಡ, ಮಿಷಿಗನ್‌ನಲ್ಲಿ ಕೂಡಾ ವಂಚನೆ ನಡೆದಿದೆ ಆದ್ದರಿಂದ ಮತ ಎಣಿಕೆಯನ್ನು ತೆಡೆಹಿಡಿಯುವಂತೆ ಕೋರಿತ್ತು. ಆದರೆ ಅವರ ಎರಡೂ ಮನವಿಗಳನ್ನು ರಾಜ್ಯ ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.

ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ

ಬ್ಯಾಲೆಟ್ ಮತಗಳು ಅಸಿಂಧು ಎನ್ನುವುದಕ್ಕೆ ಯಾವ ಪುರಾವೆಯೂ ಇಲ್ಲ ಎಂದು ಜಾರ್ಜಿಯಾ ಹಾಗೂ ಮಿಷಿಗನ್ ರಾಜ್ಯದ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ನಂತರ ನೆವಾಡಾದ ಜನನಿಬಿಡ ಕ್ಲಾರ್ಕ್ ಕೌಂಟಿಯಲ್ಲಿ ವಂಚನೆ ನಡೆದಿವೆ ಎಂದು ಟ್ರಂಪ್ ತಂಡ ಆರೋಪಿಸಿದೆ.

ಅಧ್ಯಕ್ಷ ಸ್ಥಾನಕ್ಕೆ ಒಟ್ಟು 270 ಸ್ಥಾನಗಳ ಅಗತ್ಯವಿದ್ದು, ಪ್ರಸ್ತುತ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ 264 ಸ್ಥಾನಗಳಲ್ಲಿ ಗೆಲುವು ಕಂಡಿದ್ದು, ಟ್ರಂಪ್ 214 ಸ್ಥಾನಗಳನ್ನು ಪಡೆದಿದ್ದಾರೆ. ಅಧಿಕಾರ ಹಿಡಿಯಲು ಬೈಡೆನ್‌ಗೆ ಇನ್ನು ಕೇವಲ 6 ಸ್ಥಾನಗಳ ಅಗತ್ಯವಿದ್ದು, ಆರು ಸ್ಥಾನಗಳಿರುವ ನೆವಾಡಾ ರಾಜ್ಯದಲ್ಲಿ ಅವರು ಮುನ್ನಡೆಯಲ್ಲಿದ್ದಾರೆ.

ಟ್ರಂಪ್ ತಾನು ಮುನ್ನಡೆಯಲ್ಲಿರುವ ಎಲ್ಲಾ ರಾಜ್ಯಗಳಲ್ಲಿ ಗೆದ್ದರೂ 265 ಸ್ಥಾನಗಳನ್ನಷ್ಟೇ ಪಡೆಯಲಿದ್ದಾರೆ. ಹೀಗಾಗಿ ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್ ಆಯ್ಕೆಯಾಗುವುದು ನಿಚ್ಚಳವಾಗಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...