Homeಮುಖಪುಟಅಮೆರಿಕದಿಂದ ಅಕ್ರಮ ವಲಸಿಗ ಭಾರತೀಯರನ್ನು ಹಿಂಪಡೆಯಲು ಸಿದ್ದ: ಕೇಂದ್ರ ಪುನರುಚ್ಛಾರ

ಅಮೆರಿಕದಿಂದ ಅಕ್ರಮ ವಲಸಿಗ ಭಾರತೀಯರನ್ನು ಹಿಂಪಡೆಯಲು ಸಿದ್ದ: ಕೇಂದ್ರ ಪುನರುಚ್ಛಾರ

- Advertisement -
- Advertisement -

ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ‘ಹಿಂತಿರುಗಿ ಪಡೆಯಲು’ ಸಿದ್ಧ ಎಂದು ಕೇಂದ್ರ ವಿದೇಶಾಂಗ ಸಚಿವಾಲಯವು ಶುಕ್ರವಾರ ಹೇಳಿದೆ. ಭಾರತೀಯರ ಅಕ್ರಮ ವಲಸೆಗೆ ವಿರೋಧವನ್ನು ಪುನರುಚ್ಛರಿಸಿದ ಕೇಂದ್ರವು, ಸರಿಯಾದ ದಾಖಲೆಗಳಿಲ್ಲದೆ ವಿದೇಶಗಳಲ್ಲಿ ವಾಸಿಸುವ ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕಳುಹಿಸುವ ಬದ್ಧತೆಯನ್ನು ದೃಢಪಡಿಸಿದೆ. ಅಕ್ರಮ ವಲಸಿಗ

“ನಾವು ಇದನ್ನು ಮೊದಲೇ ಸ್ಪಷ್ಟಪಡಿಸಿದ್ದೇವೆ. ನಾವು ಅಕ್ರಮ ವಲಸೆಯನ್ನು ವಿರೋಧಿಸುತ್ತೇವೆ, ವಿಶೇಷವಾಗಿ ಇದು ಹಲವಾರು ರೀತಿಯ ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದೆ.” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಹೊಸದಾಗಿ ಅಧಿಕಾರ ವಹಿಸಿಕೊಂಡ ಡೊನಾಲ್ಡ್ ಟ್ರಂಪ್ ಆಡಳಿತದೊಂದಿಗೆ ಕೆಲಸ ಮಾಡುತ್ತಿರುವ ಭಾರತವು ಸುಮಾರು 18,000 ದಾಖಲೆರಹಿತ ಅಥವಾ ವೀಸಾ ಅವಧಿ ಮೀರಿದ ಭಾರತೀಯ ಪ್ರಜೆಗಳನ್ನು ಅಮೆರಿಕದಲ್ಲಿ ಗಡೀಪಾರು ಮಾಡುವ ವರದಿಗಳಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭಾರತೀಯ ಪ್ರಜೆಗಳು, ಅಮೆರಿಕದಲ್ಲಿ ಅಥವಾ ಬೇರೆಡೆ ಇರಲಿ, ಅವರು ಸರಿಯಾದ ದಾಖಲೆಗಳಿಲ್ಲದೆ ದೇಶದಲ್ಲಿ ಅವಧಿ ಮೀರಿದ ಅಥವಾ ವಾಸಿಸುತ್ತಿದ್ದರೆ, ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಅಗತ್ಯವಾದ ದಾಖಲೆಗಳನ್ನು ನಮ್ಮೊಂದಿಗೆ ಹಂಚಿಕೊಂಡರೆ, ನಾವು ಅವರನ್ನು ಮರಳಿ ಕರೆತರುತ್ತೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ. ಅಕ್ರಮ ವಲಸಿಗ

ದೇಶದಲ್ಲಿ ಅಕ್ರಮವಾಗಿ ವಾಸಿಸುವ ಭಾರತೀಯ ನಾಗರಿಕರನ್ನು ಗುರುತಿಸಲು ಮತ್ತು ಸ್ವದೇಶಕ್ಕೆ ಕಳುಹಿಸಲು ಭಾರತವು ಅಮೆರಿಕದೊಂದಿಗೆ ಸಹಕರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಮಂಗಳವಾರ ಹೇಳಿತ್ತು. ಅದರ ನಂತರ ಪ್ರತಿಕ್ರಿಯಿಸಿದ್ದ ಅಮೆರಿಕ, ಆರ್ಥಿಕ ಸಂಬಂಧಗಳನ್ನು ಹೆಚ್ಚಿಸಲು ಮತ್ತು “ಅನಿಯಮಿತ ವಲಸೆ”ಗೆ ಸಂಬಂಧಿಸಿದ ಕಳವಳಗಳನ್ನು ಪರಿಹರಿಸಲು ಭಾರತದೊಂದಿಗೆ ಕೆಲಸ ಮಾಡಲು ಬಯಸುವುದಾಗಿ ಹೇಳಿತ್ತು.

ಅಮೆರಿಕದಿಂದ ವಾಪಸಾಗಬೇಕಾದ ಭಾರತೀಯರ ಸಂಖ್ಯೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೈಸ್ವಾಲ್, “ಈ ಸಮಯದಲ್ಲಿ, ಸಂಖ್ಯೆಗಳ ಬಗ್ಗೆ ಯಾವುದೇ ಚರ್ಚೆ ಅಕಾಲಿಕವಾಗಿದೆ” ಎಂದು ಹೇಳಿದ್ದಾರೆ.

ಬುಧವಾರ, ವಾಷಿಂಗ್ಟನ್‌ನಲ್ಲಿ ಅಮೆರಿಕದ ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ, ವಿದೇಶಾಂಗ ಸಚಿವ ಎಸ್ ಜೈಶಂಕರ್ ವರದಿಗಾರರೊಂದಿಗೆ ಮಾತನಾಡುತ್ತಾ, ದಾಖಲೆರಹಿತ ಭಾರತೀಯ ವಲಸಿಗರ “ಕಾನೂನುಬದ್ಧ ಮರಳುವಿಸುವಿಕೆ”ಗೆ ಭಾರತ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಅಮೆರಿಕದಿಂದ ಗಡೀಪಾರು ಮಾಡಲು ಅರ್ಹ ವ್ಯಕ್ತಿಗಳನ್ನು ನಿರ್ಧರಿಸುವ ಪರಿಶೀಲನಾ ಪ್ರಕ್ರಿಯೆಯು ನಡೆಯುತ್ತಿದೆ ಮತ್ತು ನಿಖರವಾದ ಸಂಖ್ಯೆಯನ್ನು ಇನ್ನೂ ಸ್ಥಾಪಿಸಲಾಗಿಲ್ಲ ಎಂದು ಅವರು ಹೇಳಿದ್ದರು.

ಗೃಹ ಭದ್ರತಾ ಇಲಾಖೆಯ 2022 ರ ವರದಿಯು, 2,20,000 ದಾಖಲೆರಹಿತ ಭಾರತೀಯ ವಲಸಿಗರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಿದೆ. ಈ ಹಿಂದಿನ ಜೋ ಬಿಡೆನ್ ಆಡಳಿತ ಸೇರಿದಂತೆ, 2024 ರ ಅಕ್ಟೋಬರ್‌ವರೆಗಿನ 12 ತಿಂಗಳುಗಳಲ್ಲಿ 1,100 ಕ್ಕೂ ಹೆಚ್ಚು ಭಾರತೀಯ ನಾಗರಿಕರನ್ನು ಗಡೀಪಾರು ಮಾಡಿತ್ತು.

ಇದನ್ನೂಓದಿ:  ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ಗುಜರಾತ್| ಮದುವೆ ಮೆರವಣಿಗೆಗೆ ಮುನ್ನ ಪೊಲೀಸ್ ರಕ್ಷಣೆ ಕೋರಿದ ದಲಿತ ವಕೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...