Homeಮುಖಪುಟಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

ಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

- Advertisement -
- Advertisement -

ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಜೊತೆಗೆ ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಕಾರ್ಯದಕ್ಷತಾ ಇಲಾಖೆ (ಡಿಒಜಿಒ)ಯ ಉಸ್ತುವಾರಿಯಾಗಿ ನಾಮನಿರ್ದೇಶನಗೊಂಡಿರುವ ಭಾರತ ಮೂಲದ ಉದ್ಯಮಿ ಹಾಗೂ ರಾಜಕಾರಣಿ ವಿವೇಕ್ ರಾಮಸ್ವಾಮಿ ಯುಎಸ್ ಸರ್ಕಾರಿ ಉದ್ಯೋಗಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ್ದಾರೆ.

ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಗುರುವಾರ (ನ.16) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, “ಎಲೋನ್ ಮಸ್ಕ್ ಮತ್ತು ನಾನು ಲಕ್ಷಾಂತರ ಚುನಾಯಿತ ಫೆಡರಲ್ ಅಧಿಕಾರಶಾಹಿಗಳನ್ನು ವಾಷಿಂಗ್ಟನ್ ಡಿಸಿ ಅಧಿಕಾರಶಾಹಿಯಿಂದ ತೆಗೆದು ಹಾಕಲು ಸಿದ್ಧರಿದ್ದೇವೆ. ಈ ರೀತಿ ನಾವು ಈ ದೇಶವನ್ನು ಉಳಿಸುತ್ತೇವೆ” ಎಂದು ನೇರವಾಗಿ ಹೇಳಿದ್ದಾರೆ.

ಅಧಿಕಾರಶಾಹಿಯನ್ನು ನಿಭಾಯಿಸಲು ಮಸ್ಕ್‌ನ ವಿಧಾನವನ್ನು ವಿವರಿಸಿದ ರಾಮಸ್ವಾಮಿ, “ನೀವು ಇನ್ನೂ ಎಲೋನ್ ಅವರನ್ನು ಭೇಟಿ ಮಾಡಿದ್ದೀರೋ..ಇಲ್ಲವೋ ಎಂದು ನನಗೆ ಗೊತ್ತಿಲ್ಲ. ಆದರೆ, ಅವರು ‘ಉಳಿ ತರುವುದಿಲ್ಲ..ಗರಗಸ’ ತರಲಿದ್ದಾರೆ (ನಿಧಾನವಲ್ಲ, ತ್ವರಿತ ಕಡಿತ) ಎಂದು ಸೂಚ್ಯವಾಗಿ ತಿಳಿಸಿದ್ದಾರೆ.

ವಿವೇಕ್ ರಾಮಸ್ವಾಮಿ ಅಮೆರಿಕದ ನವೀಕರಣ ಸಾಮರ್ಥ್ಯದ ಬಗ್ಗೆ ತಮ್ಮ ನಂಬಿಕೆಯನ್ನು ಒತ್ತಿ ಹೇಳಿದ್ದು, ದೇಶವು ಬದಲಾಯಿಸಲಾಗದ ಅವನತಿಯಲ್ಲಿದೆ ಎಂಬ ಕಲ್ಪನೆಯನ್ನು ತಿರಸ್ಕರಿಸಿದ್ದಾರೆ. ಕಳೆದ ವಾರಕ್ಕೆ ಹೋಲಿಸಿದರೆ, ಈ ವಾರ ನಾವು ಮುಂದುವರೆದಿದ್ದೇವೆ. ಅಮೆರಿಕ ಇನ್ನೂ ಮುಂದುವರಿಯಲಿದೆ ಎಂದಿದ್ದಾರೆ.

ದೇಶದ ಭವಿಷ್ಯವನ್ನು ‘ಹೊಸ ಉದಯ’ ಎಂದು ಬಣ್ಣಿಸಿದ ಸ್ವಾಮಿ, ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಅರ್ಹತೆಯ ಮೂಲಕ ಯಶಸ್ವಿಯಾಗುತ್ತೇವೆ ಎಂದು ತಿಳಿದು ನಮ್ಮ ಮಕ್ಕಳು ಮುನ್ನಡೆಯಲಿದ್ದಾರೆ. ನಿಮಗೆ ಅನಿಸಿದ್ದನ್ನು ಮಾತನಾಡಲು ನೀವು ಮುಕ್ತರಾಗಿರುತ್ತೀರಿ. ಉತ್ತಮ ವ್ಯಕ್ತಿಗೆ ಅವರ ಹಿನ್ನೆಲೆಯ ಹೊರತಾಗಿಯೂ ಕೆಲಸ ಸಿಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಜನರ ನಡುವಿನ ಅಂತವನ್ನು ಕಡಿಮೆ ಮಾಡಲು ದಕ್ಷತೆ ಇಲಾಖೆಯ ಪ್ರಗತಿಯ ಕುರಿತು ಪ್ರತಿ ವಾರ ನಾನು ಮತ್ತು ಎಲೋನ್ ಲೈವ್ ಬಂದು ಮಾತನಾಡುತ್ತೇವೆ. ಜನರೊಂದಿಗೆ ಸಾಧ್ಯವಾದಷ್ಟು ಪಾರದರ್ಶಕವಾಗಿರಲು ಪ್ರಯತ್ನಿಸುತ್ತೇವೆ ಎಂದು ರಾಮಸ್ವಾಮಿ ಭರವಸೆ ನೀಡಿದ್ದಾರೆ.

ವಿವೇಕ್ ರಾಮಸ್ವಾಮಿಯ ಈ ಹೇಳಿಕೆ ಸಂಚಲನ ಸೃಷ್ಟಿಸಿದ್ದು, ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಭಾರತೀಯ ಉದ್ಯೋಗಳಲ್ಲೂ ಆತಂಕ ಉಂಟು ಮಾಡಿದೆ ಎಂದು ವರದಿಗಳು ಹೇಳಿವೆ.

ಎಲೋನ್ ಮಸ್ಕ್ ಮತ್ತು ವಿವೇಕ್ ರಾಮಸ್ವಾಮಿ ಉಸ್ತುವಾರಿ ವಹಿಸಲಿರುವ ಡಿಒಜಿಒ ಸರ್ಕಾರಕ್ಕೆ ಸಲಹೆ ಮತ್ತು ಮಾರ್ಗದರ್ಶನ ನೀಡಲಿದೆ. ದೊಡ್ಡ ಪ್ರಮಾಣದ ರಚನಾತ್ಮಕ ಸುಧಾರಣೆಗೆ ಚಾಲನೆ ನೀಡಲು, ಸರ್ಕಾರಕ್ಕೆ ಉದ್ಯಮಶೀಲತೆಯ ವಿಧಾನವನ್ನು ರಚಿಸಲು ವೈಟ್ ಹೌಸ್, ಆಫೀಸ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಬಜೆಟ್‌ನೊಂದಿಗೆ ಕೆಲಸ ಮಾಡಲಿದೆ ಟ್ರಂಪ್ ಹೇಳಿದ್ದಾರೆ.

 ಇದನ್ನೂ ಓದಿ : COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...