Homeಮುಖಪುಟಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

ಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

- Advertisement -
- Advertisement -

ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಜೊತೆಗೆ ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಕಾರ್ಯದಕ್ಷತಾ ಇಲಾಖೆ (ಡಿಒಜಿಒ)ಯ ಉಸ್ತುವಾರಿಯಾಗಿ ನಾಮನಿರ್ದೇಶನಗೊಂಡಿರುವ ಭಾರತ ಮೂಲದ ಉದ್ಯಮಿ ಹಾಗೂ ರಾಜಕಾರಣಿ ವಿವೇಕ್ ರಾಮಸ್ವಾಮಿ ಯುಎಸ್ ಸರ್ಕಾರಿ ಉದ್ಯೋಗಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ್ದಾರೆ.

ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಗುರುವಾರ (ನ.16) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, “ಎಲೋನ್ ಮಸ್ಕ್ ಮತ್ತು ನಾನು ಲಕ್ಷಾಂತರ ಚುನಾಯಿತ ಫೆಡರಲ್ ಅಧಿಕಾರಶಾಹಿಗಳನ್ನು ವಾಷಿಂಗ್ಟನ್ ಡಿಸಿ ಅಧಿಕಾರಶಾಹಿಯಿಂದ ತೆಗೆದು ಹಾಕಲು ಸಿದ್ಧರಿದ್ದೇವೆ. ಈ ರೀತಿ ನಾವು ಈ ದೇಶವನ್ನು ಉಳಿಸುತ್ತೇವೆ” ಎಂದು ನೇರವಾಗಿ ಹೇಳಿದ್ದಾರೆ.

ಅಧಿಕಾರಶಾಹಿಯನ್ನು ನಿಭಾಯಿಸಲು ಮಸ್ಕ್‌ನ ವಿಧಾನವನ್ನು ವಿವರಿಸಿದ ರಾಮಸ್ವಾಮಿ, “ನೀವು ಇನ್ನೂ ಎಲೋನ್ ಅವರನ್ನು ಭೇಟಿ ಮಾಡಿದ್ದೀರೋ..ಇಲ್ಲವೋ ಎಂದು ನನಗೆ ಗೊತ್ತಿಲ್ಲ. ಆದರೆ, ಅವರು ‘ಉಳಿ ತರುವುದಿಲ್ಲ..ಗರಗಸ’ ತರಲಿದ್ದಾರೆ (ನಿಧಾನವಲ್ಲ, ತ್ವರಿತ ಕಡಿತ) ಎಂದು ಸೂಚ್ಯವಾಗಿ ತಿಳಿಸಿದ್ದಾರೆ.

ವಿವೇಕ್ ರಾಮಸ್ವಾಮಿ ಅಮೆರಿಕದ ನವೀಕರಣ ಸಾಮರ್ಥ್ಯದ ಬಗ್ಗೆ ತಮ್ಮ ನಂಬಿಕೆಯನ್ನು ಒತ್ತಿ ಹೇಳಿದ್ದು, ದೇಶವು ಬದಲಾಯಿಸಲಾಗದ ಅವನತಿಯಲ್ಲಿದೆ ಎಂಬ ಕಲ್ಪನೆಯನ್ನು ತಿರಸ್ಕರಿಸಿದ್ದಾರೆ. ಕಳೆದ ವಾರಕ್ಕೆ ಹೋಲಿಸಿದರೆ, ಈ ವಾರ ನಾವು ಮುಂದುವರೆದಿದ್ದೇವೆ. ಅಮೆರಿಕ ಇನ್ನೂ ಮುಂದುವರಿಯಲಿದೆ ಎಂದಿದ್ದಾರೆ.

ದೇಶದ ಭವಿಷ್ಯವನ್ನು ‘ಹೊಸ ಉದಯ’ ಎಂದು ಬಣ್ಣಿಸಿದ ಸ್ವಾಮಿ, ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಅರ್ಹತೆಯ ಮೂಲಕ ಯಶಸ್ವಿಯಾಗುತ್ತೇವೆ ಎಂದು ತಿಳಿದು ನಮ್ಮ ಮಕ್ಕಳು ಮುನ್ನಡೆಯಲಿದ್ದಾರೆ. ನಿಮಗೆ ಅನಿಸಿದ್ದನ್ನು ಮಾತನಾಡಲು ನೀವು ಮುಕ್ತರಾಗಿರುತ್ತೀರಿ. ಉತ್ತಮ ವ್ಯಕ್ತಿಗೆ ಅವರ ಹಿನ್ನೆಲೆಯ ಹೊರತಾಗಿಯೂ ಕೆಲಸ ಸಿಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಜನರ ನಡುವಿನ ಅಂತವನ್ನು ಕಡಿಮೆ ಮಾಡಲು ದಕ್ಷತೆ ಇಲಾಖೆಯ ಪ್ರಗತಿಯ ಕುರಿತು ಪ್ರತಿ ವಾರ ನಾನು ಮತ್ತು ಎಲೋನ್ ಲೈವ್ ಬಂದು ಮಾತನಾಡುತ್ತೇವೆ. ಜನರೊಂದಿಗೆ ಸಾಧ್ಯವಾದಷ್ಟು ಪಾರದರ್ಶಕವಾಗಿರಲು ಪ್ರಯತ್ನಿಸುತ್ತೇವೆ ಎಂದು ರಾಮಸ್ವಾಮಿ ಭರವಸೆ ನೀಡಿದ್ದಾರೆ.

ವಿವೇಕ್ ರಾಮಸ್ವಾಮಿಯ ಈ ಹೇಳಿಕೆ ಸಂಚಲನ ಸೃಷ್ಟಿಸಿದ್ದು, ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಭಾರತೀಯ ಉದ್ಯೋಗಳಲ್ಲೂ ಆತಂಕ ಉಂಟು ಮಾಡಿದೆ ಎಂದು ವರದಿಗಳು ಹೇಳಿವೆ.

ಎಲೋನ್ ಮಸ್ಕ್ ಮತ್ತು ವಿವೇಕ್ ರಾಮಸ್ವಾಮಿ ಉಸ್ತುವಾರಿ ವಹಿಸಲಿರುವ ಡಿಒಜಿಒ ಸರ್ಕಾರಕ್ಕೆ ಸಲಹೆ ಮತ್ತು ಮಾರ್ಗದರ್ಶನ ನೀಡಲಿದೆ. ದೊಡ್ಡ ಪ್ರಮಾಣದ ರಚನಾತ್ಮಕ ಸುಧಾರಣೆಗೆ ಚಾಲನೆ ನೀಡಲು, ಸರ್ಕಾರಕ್ಕೆ ಉದ್ಯಮಶೀಲತೆಯ ವಿಧಾನವನ್ನು ರಚಿಸಲು ವೈಟ್ ಹೌಸ್, ಆಫೀಸ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಬಜೆಟ್‌ನೊಂದಿಗೆ ಕೆಲಸ ಮಾಡಲಿದೆ ಟ್ರಂಪ್ ಹೇಳಿದ್ದಾರೆ.

 ಇದನ್ನೂ ಓದಿ : COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...