Homeಮುಖಪುಟಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

ಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

- Advertisement -
- Advertisement -

ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಜೊತೆಗೆ ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಕಾರ್ಯದಕ್ಷತಾ ಇಲಾಖೆ (ಡಿಒಜಿಒ)ಯ ಉಸ್ತುವಾರಿಯಾಗಿ ನಾಮನಿರ್ದೇಶನಗೊಂಡಿರುವ ಭಾರತ ಮೂಲದ ಉದ್ಯಮಿ ಹಾಗೂ ರಾಜಕಾರಣಿ ವಿವೇಕ್ ರಾಮಸ್ವಾಮಿ ಯುಎಸ್ ಸರ್ಕಾರಿ ಉದ್ಯೋಗಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ್ದಾರೆ.

ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಗುರುವಾರ (ನ.16) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, “ಎಲೋನ್ ಮಸ್ಕ್ ಮತ್ತು ನಾನು ಲಕ್ಷಾಂತರ ಚುನಾಯಿತ ಫೆಡರಲ್ ಅಧಿಕಾರಶಾಹಿಗಳನ್ನು ವಾಷಿಂಗ್ಟನ್ ಡಿಸಿ ಅಧಿಕಾರಶಾಹಿಯಿಂದ ತೆಗೆದು ಹಾಕಲು ಸಿದ್ಧರಿದ್ದೇವೆ. ಈ ರೀತಿ ನಾವು ಈ ದೇಶವನ್ನು ಉಳಿಸುತ್ತೇವೆ” ಎಂದು ನೇರವಾಗಿ ಹೇಳಿದ್ದಾರೆ.

ಅಧಿಕಾರಶಾಹಿಯನ್ನು ನಿಭಾಯಿಸಲು ಮಸ್ಕ್‌ನ ವಿಧಾನವನ್ನು ವಿವರಿಸಿದ ರಾಮಸ್ವಾಮಿ, “ನೀವು ಇನ್ನೂ ಎಲೋನ್ ಅವರನ್ನು ಭೇಟಿ ಮಾಡಿದ್ದೀರೋ..ಇಲ್ಲವೋ ಎಂದು ನನಗೆ ಗೊತ್ತಿಲ್ಲ. ಆದರೆ, ಅವರು ‘ಉಳಿ ತರುವುದಿಲ್ಲ..ಗರಗಸ’ ತರಲಿದ್ದಾರೆ (ನಿಧಾನವಲ್ಲ, ತ್ವರಿತ ಕಡಿತ) ಎಂದು ಸೂಚ್ಯವಾಗಿ ತಿಳಿಸಿದ್ದಾರೆ.

ವಿವೇಕ್ ರಾಮಸ್ವಾಮಿ ಅಮೆರಿಕದ ನವೀಕರಣ ಸಾಮರ್ಥ್ಯದ ಬಗ್ಗೆ ತಮ್ಮ ನಂಬಿಕೆಯನ್ನು ಒತ್ತಿ ಹೇಳಿದ್ದು, ದೇಶವು ಬದಲಾಯಿಸಲಾಗದ ಅವನತಿಯಲ್ಲಿದೆ ಎಂಬ ಕಲ್ಪನೆಯನ್ನು ತಿರಸ್ಕರಿಸಿದ್ದಾರೆ. ಕಳೆದ ವಾರಕ್ಕೆ ಹೋಲಿಸಿದರೆ, ಈ ವಾರ ನಾವು ಮುಂದುವರೆದಿದ್ದೇವೆ. ಅಮೆರಿಕ ಇನ್ನೂ ಮುಂದುವರಿಯಲಿದೆ ಎಂದಿದ್ದಾರೆ.

ದೇಶದ ಭವಿಷ್ಯವನ್ನು ‘ಹೊಸ ಉದಯ’ ಎಂದು ಬಣ್ಣಿಸಿದ ಸ್ವಾಮಿ, ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಅರ್ಹತೆಯ ಮೂಲಕ ಯಶಸ್ವಿಯಾಗುತ್ತೇವೆ ಎಂದು ತಿಳಿದು ನಮ್ಮ ಮಕ್ಕಳು ಮುನ್ನಡೆಯಲಿದ್ದಾರೆ. ನಿಮಗೆ ಅನಿಸಿದ್ದನ್ನು ಮಾತನಾಡಲು ನೀವು ಮುಕ್ತರಾಗಿರುತ್ತೀರಿ. ಉತ್ತಮ ವ್ಯಕ್ತಿಗೆ ಅವರ ಹಿನ್ನೆಲೆಯ ಹೊರತಾಗಿಯೂ ಕೆಲಸ ಸಿಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಜನರ ನಡುವಿನ ಅಂತವನ್ನು ಕಡಿಮೆ ಮಾಡಲು ದಕ್ಷತೆ ಇಲಾಖೆಯ ಪ್ರಗತಿಯ ಕುರಿತು ಪ್ರತಿ ವಾರ ನಾನು ಮತ್ತು ಎಲೋನ್ ಲೈವ್ ಬಂದು ಮಾತನಾಡುತ್ತೇವೆ. ಜನರೊಂದಿಗೆ ಸಾಧ್ಯವಾದಷ್ಟು ಪಾರದರ್ಶಕವಾಗಿರಲು ಪ್ರಯತ್ನಿಸುತ್ತೇವೆ ಎಂದು ರಾಮಸ್ವಾಮಿ ಭರವಸೆ ನೀಡಿದ್ದಾರೆ.

ವಿವೇಕ್ ರಾಮಸ್ವಾಮಿಯ ಈ ಹೇಳಿಕೆ ಸಂಚಲನ ಸೃಷ್ಟಿಸಿದ್ದು, ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಭಾರತೀಯ ಉದ್ಯೋಗಳಲ್ಲೂ ಆತಂಕ ಉಂಟು ಮಾಡಿದೆ ಎಂದು ವರದಿಗಳು ಹೇಳಿವೆ.

ಎಲೋನ್ ಮಸ್ಕ್ ಮತ್ತು ವಿವೇಕ್ ರಾಮಸ್ವಾಮಿ ಉಸ್ತುವಾರಿ ವಹಿಸಲಿರುವ ಡಿಒಜಿಒ ಸರ್ಕಾರಕ್ಕೆ ಸಲಹೆ ಮತ್ತು ಮಾರ್ಗದರ್ಶನ ನೀಡಲಿದೆ. ದೊಡ್ಡ ಪ್ರಮಾಣದ ರಚನಾತ್ಮಕ ಸುಧಾರಣೆಗೆ ಚಾಲನೆ ನೀಡಲು, ಸರ್ಕಾರಕ್ಕೆ ಉದ್ಯಮಶೀಲತೆಯ ವಿಧಾನವನ್ನು ರಚಿಸಲು ವೈಟ್ ಹೌಸ್, ಆಫೀಸ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಬಜೆಟ್‌ನೊಂದಿಗೆ ಕೆಲಸ ಮಾಡಲಿದೆ ಟ್ರಂಪ್ ಹೇಳಿದ್ದಾರೆ.

 ಇದನ್ನೂ ಓದಿ : COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...