Homeಮುಖಪುಟಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

ಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

- Advertisement -
- Advertisement -

ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಜೊತೆಗೆ ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಕಾರ್ಯದಕ್ಷತಾ ಇಲಾಖೆ (ಡಿಒಜಿಒ)ಯ ಉಸ್ತುವಾರಿಯಾಗಿ ನಾಮನಿರ್ದೇಶನಗೊಂಡಿರುವ ಭಾರತ ಮೂಲದ ಉದ್ಯಮಿ ಹಾಗೂ ರಾಜಕಾರಣಿ ವಿವೇಕ್ ರಾಮಸ್ವಾಮಿ ಯುಎಸ್ ಸರ್ಕಾರಿ ಉದ್ಯೋಗಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ್ದಾರೆ.

ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಗುರುವಾರ (ನ.16) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, “ಎಲೋನ್ ಮಸ್ಕ್ ಮತ್ತು ನಾನು ಲಕ್ಷಾಂತರ ಚುನಾಯಿತ ಫೆಡರಲ್ ಅಧಿಕಾರಶಾಹಿಗಳನ್ನು ವಾಷಿಂಗ್ಟನ್ ಡಿಸಿ ಅಧಿಕಾರಶಾಹಿಯಿಂದ ತೆಗೆದು ಹಾಕಲು ಸಿದ್ಧರಿದ್ದೇವೆ. ಈ ರೀತಿ ನಾವು ಈ ದೇಶವನ್ನು ಉಳಿಸುತ್ತೇವೆ” ಎಂದು ನೇರವಾಗಿ ಹೇಳಿದ್ದಾರೆ.

ಅಧಿಕಾರಶಾಹಿಯನ್ನು ನಿಭಾಯಿಸಲು ಮಸ್ಕ್‌ನ ವಿಧಾನವನ್ನು ವಿವರಿಸಿದ ರಾಮಸ್ವಾಮಿ, “ನೀವು ಇನ್ನೂ ಎಲೋನ್ ಅವರನ್ನು ಭೇಟಿ ಮಾಡಿದ್ದೀರೋ..ಇಲ್ಲವೋ ಎಂದು ನನಗೆ ಗೊತ್ತಿಲ್ಲ. ಆದರೆ, ಅವರು ‘ಉಳಿ ತರುವುದಿಲ್ಲ..ಗರಗಸ’ ತರಲಿದ್ದಾರೆ (ನಿಧಾನವಲ್ಲ, ತ್ವರಿತ ಕಡಿತ) ಎಂದು ಸೂಚ್ಯವಾಗಿ ತಿಳಿಸಿದ್ದಾರೆ.

ವಿವೇಕ್ ರಾಮಸ್ವಾಮಿ ಅಮೆರಿಕದ ನವೀಕರಣ ಸಾಮರ್ಥ್ಯದ ಬಗ್ಗೆ ತಮ್ಮ ನಂಬಿಕೆಯನ್ನು ಒತ್ತಿ ಹೇಳಿದ್ದು, ದೇಶವು ಬದಲಾಯಿಸಲಾಗದ ಅವನತಿಯಲ್ಲಿದೆ ಎಂಬ ಕಲ್ಪನೆಯನ್ನು ತಿರಸ್ಕರಿಸಿದ್ದಾರೆ. ಕಳೆದ ವಾರಕ್ಕೆ ಹೋಲಿಸಿದರೆ, ಈ ವಾರ ನಾವು ಮುಂದುವರೆದಿದ್ದೇವೆ. ಅಮೆರಿಕ ಇನ್ನೂ ಮುಂದುವರಿಯಲಿದೆ ಎಂದಿದ್ದಾರೆ.

ದೇಶದ ಭವಿಷ್ಯವನ್ನು ‘ಹೊಸ ಉದಯ’ ಎಂದು ಬಣ್ಣಿಸಿದ ಸ್ವಾಮಿ, ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಅರ್ಹತೆಯ ಮೂಲಕ ಯಶಸ್ವಿಯಾಗುತ್ತೇವೆ ಎಂದು ತಿಳಿದು ನಮ್ಮ ಮಕ್ಕಳು ಮುನ್ನಡೆಯಲಿದ್ದಾರೆ. ನಿಮಗೆ ಅನಿಸಿದ್ದನ್ನು ಮಾತನಾಡಲು ನೀವು ಮುಕ್ತರಾಗಿರುತ್ತೀರಿ. ಉತ್ತಮ ವ್ಯಕ್ತಿಗೆ ಅವರ ಹಿನ್ನೆಲೆಯ ಹೊರತಾಗಿಯೂ ಕೆಲಸ ಸಿಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಜನರ ನಡುವಿನ ಅಂತವನ್ನು ಕಡಿಮೆ ಮಾಡಲು ದಕ್ಷತೆ ಇಲಾಖೆಯ ಪ್ರಗತಿಯ ಕುರಿತು ಪ್ರತಿ ವಾರ ನಾನು ಮತ್ತು ಎಲೋನ್ ಲೈವ್ ಬಂದು ಮಾತನಾಡುತ್ತೇವೆ. ಜನರೊಂದಿಗೆ ಸಾಧ್ಯವಾದಷ್ಟು ಪಾರದರ್ಶಕವಾಗಿರಲು ಪ್ರಯತ್ನಿಸುತ್ತೇವೆ ಎಂದು ರಾಮಸ್ವಾಮಿ ಭರವಸೆ ನೀಡಿದ್ದಾರೆ.

ವಿವೇಕ್ ರಾಮಸ್ವಾಮಿಯ ಈ ಹೇಳಿಕೆ ಸಂಚಲನ ಸೃಷ್ಟಿಸಿದ್ದು, ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಭಾರತೀಯ ಉದ್ಯೋಗಳಲ್ಲೂ ಆತಂಕ ಉಂಟು ಮಾಡಿದೆ ಎಂದು ವರದಿಗಳು ಹೇಳಿವೆ.

ಎಲೋನ್ ಮಸ್ಕ್ ಮತ್ತು ವಿವೇಕ್ ರಾಮಸ್ವಾಮಿ ಉಸ್ತುವಾರಿ ವಹಿಸಲಿರುವ ಡಿಒಜಿಒ ಸರ್ಕಾರಕ್ಕೆ ಸಲಹೆ ಮತ್ತು ಮಾರ್ಗದರ್ಶನ ನೀಡಲಿದೆ. ದೊಡ್ಡ ಪ್ರಮಾಣದ ರಚನಾತ್ಮಕ ಸುಧಾರಣೆಗೆ ಚಾಲನೆ ನೀಡಲು, ಸರ್ಕಾರಕ್ಕೆ ಉದ್ಯಮಶೀಲತೆಯ ವಿಧಾನವನ್ನು ರಚಿಸಲು ವೈಟ್ ಹೌಸ್, ಆಫೀಸ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಬಜೆಟ್‌ನೊಂದಿಗೆ ಕೆಲಸ ಮಾಡಲಿದೆ ಟ್ರಂಪ್ ಹೇಳಿದ್ದಾರೆ.

 ಇದನ್ನೂ ಓದಿ : COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...