Homeಮುಖಪುಟಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

ಸರ್ಕಾರಿ ಉದ್ಯೋಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ ಅಮೆರಿಕ

- Advertisement -
- Advertisement -

ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಜೊತೆಗೆ ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಕಾರ್ಯದಕ್ಷತಾ ಇಲಾಖೆ (ಡಿಒಜಿಒ)ಯ ಉಸ್ತುವಾರಿಯಾಗಿ ನಾಮನಿರ್ದೇಶನಗೊಂಡಿರುವ ಭಾರತ ಮೂಲದ ಉದ್ಯಮಿ ಹಾಗೂ ರಾಜಕಾರಣಿ ವಿವೇಕ್ ರಾಮಸ್ವಾಮಿ ಯುಎಸ್ ಸರ್ಕಾರಿ ಉದ್ಯೋಗಗಳಲ್ಲಿ ಭಾರೀ ಕಡಿತದ ಮುನ್ಸೂಚನೆ ನೀಡಿದ್ದಾರೆ.

ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಗುರುವಾರ (ನ.16) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, “ಎಲೋನ್ ಮಸ್ಕ್ ಮತ್ತು ನಾನು ಲಕ್ಷಾಂತರ ಚುನಾಯಿತ ಫೆಡರಲ್ ಅಧಿಕಾರಶಾಹಿಗಳನ್ನು ವಾಷಿಂಗ್ಟನ್ ಡಿಸಿ ಅಧಿಕಾರಶಾಹಿಯಿಂದ ತೆಗೆದು ಹಾಕಲು ಸಿದ್ಧರಿದ್ದೇವೆ. ಈ ರೀತಿ ನಾವು ಈ ದೇಶವನ್ನು ಉಳಿಸುತ್ತೇವೆ” ಎಂದು ನೇರವಾಗಿ ಹೇಳಿದ್ದಾರೆ.

ಅಧಿಕಾರಶಾಹಿಯನ್ನು ನಿಭಾಯಿಸಲು ಮಸ್ಕ್‌ನ ವಿಧಾನವನ್ನು ವಿವರಿಸಿದ ರಾಮಸ್ವಾಮಿ, “ನೀವು ಇನ್ನೂ ಎಲೋನ್ ಅವರನ್ನು ಭೇಟಿ ಮಾಡಿದ್ದೀರೋ..ಇಲ್ಲವೋ ಎಂದು ನನಗೆ ಗೊತ್ತಿಲ್ಲ. ಆದರೆ, ಅವರು ‘ಉಳಿ ತರುವುದಿಲ್ಲ..ಗರಗಸ’ ತರಲಿದ್ದಾರೆ (ನಿಧಾನವಲ್ಲ, ತ್ವರಿತ ಕಡಿತ) ಎಂದು ಸೂಚ್ಯವಾಗಿ ತಿಳಿಸಿದ್ದಾರೆ.

ವಿವೇಕ್ ರಾಮಸ್ವಾಮಿ ಅಮೆರಿಕದ ನವೀಕರಣ ಸಾಮರ್ಥ್ಯದ ಬಗ್ಗೆ ತಮ್ಮ ನಂಬಿಕೆಯನ್ನು ಒತ್ತಿ ಹೇಳಿದ್ದು, ದೇಶವು ಬದಲಾಯಿಸಲಾಗದ ಅವನತಿಯಲ್ಲಿದೆ ಎಂಬ ಕಲ್ಪನೆಯನ್ನು ತಿರಸ್ಕರಿಸಿದ್ದಾರೆ. ಕಳೆದ ವಾರಕ್ಕೆ ಹೋಲಿಸಿದರೆ, ಈ ವಾರ ನಾವು ಮುಂದುವರೆದಿದ್ದೇವೆ. ಅಮೆರಿಕ ಇನ್ನೂ ಮುಂದುವರಿಯಲಿದೆ ಎಂದಿದ್ದಾರೆ.

ದೇಶದ ಭವಿಷ್ಯವನ್ನು ‘ಹೊಸ ಉದಯ’ ಎಂದು ಬಣ್ಣಿಸಿದ ಸ್ವಾಮಿ, ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಅರ್ಹತೆಯ ಮೂಲಕ ಯಶಸ್ವಿಯಾಗುತ್ತೇವೆ ಎಂದು ತಿಳಿದು ನಮ್ಮ ಮಕ್ಕಳು ಮುನ್ನಡೆಯಲಿದ್ದಾರೆ. ನಿಮಗೆ ಅನಿಸಿದ್ದನ್ನು ಮಾತನಾಡಲು ನೀವು ಮುಕ್ತರಾಗಿರುತ್ತೀರಿ. ಉತ್ತಮ ವ್ಯಕ್ತಿಗೆ ಅವರ ಹಿನ್ನೆಲೆಯ ಹೊರತಾಗಿಯೂ ಕೆಲಸ ಸಿಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಜನರ ನಡುವಿನ ಅಂತವನ್ನು ಕಡಿಮೆ ಮಾಡಲು ದಕ್ಷತೆ ಇಲಾಖೆಯ ಪ್ರಗತಿಯ ಕುರಿತು ಪ್ರತಿ ವಾರ ನಾನು ಮತ್ತು ಎಲೋನ್ ಲೈವ್ ಬಂದು ಮಾತನಾಡುತ್ತೇವೆ. ಜನರೊಂದಿಗೆ ಸಾಧ್ಯವಾದಷ್ಟು ಪಾರದರ್ಶಕವಾಗಿರಲು ಪ್ರಯತ್ನಿಸುತ್ತೇವೆ ಎಂದು ರಾಮಸ್ವಾಮಿ ಭರವಸೆ ನೀಡಿದ್ದಾರೆ.

ವಿವೇಕ್ ರಾಮಸ್ವಾಮಿಯ ಈ ಹೇಳಿಕೆ ಸಂಚಲನ ಸೃಷ್ಟಿಸಿದ್ದು, ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳು ಉದ್ಯೋಗ ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಭಾರತೀಯ ಉದ್ಯೋಗಳಲ್ಲೂ ಆತಂಕ ಉಂಟು ಮಾಡಿದೆ ಎಂದು ವರದಿಗಳು ಹೇಳಿವೆ.

ಎಲೋನ್ ಮಸ್ಕ್ ಮತ್ತು ವಿವೇಕ್ ರಾಮಸ್ವಾಮಿ ಉಸ್ತುವಾರಿ ವಹಿಸಲಿರುವ ಡಿಒಜಿಒ ಸರ್ಕಾರಕ್ಕೆ ಸಲಹೆ ಮತ್ತು ಮಾರ್ಗದರ್ಶನ ನೀಡಲಿದೆ. ದೊಡ್ಡ ಪ್ರಮಾಣದ ರಚನಾತ್ಮಕ ಸುಧಾರಣೆಗೆ ಚಾಲನೆ ನೀಡಲು, ಸರ್ಕಾರಕ್ಕೆ ಉದ್ಯಮಶೀಲತೆಯ ವಿಧಾನವನ್ನು ರಚಿಸಲು ವೈಟ್ ಹೌಸ್, ಆಫೀಸ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ಬಜೆಟ್‌ನೊಂದಿಗೆ ಕೆಲಸ ಮಾಡಲಿದೆ ಟ್ರಂಪ್ ಹೇಳಿದ್ದಾರೆ.

 ಇದನ್ನೂ ಓದಿ : COP29 | ಅಭಿವೃದ್ದಿ ಹೊಂದಿದ ದೇಶಗಳು ‘ಹೂಡಿಕೆಯ ಗುರಿ’ ನೋಡಬಾರದು : ಭಾರತ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...