Homeಅಂತರಾಷ್ಟ್ರೀಯಯುದ್ಧಕೋರ ಅಮೆರಿಕಾದ ಇರಾನ್ ಮೇಲಿನ ದುಸ್ಸಾಹಸ ಫಲ ನೀಡುವುದೇ ಇಲ್ಲ ಪೆಟ್ಟು ಕೊಡುವುದೇ?

ಯುದ್ಧಕೋರ ಅಮೆರಿಕಾದ ಇರಾನ್ ಮೇಲಿನ ದುಸ್ಸಾಹಸ ಫಲ ನೀಡುವುದೇ ಇಲ್ಲ ಪೆಟ್ಟು ಕೊಡುವುದೇ?

ಬೇರೆ ದೇಶಗಳ ಮೇಲೆ ದಾಳಿ ಮಾಡುವುದು, ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು, ತನ್ನ ಬಂಡವಾಳಕ್ಕೆ ಅನುಕೂಲಕರವಾದ ಎಲ್ಲಾ ಕಡೆಗಳಲ್ಲಿ ಆಂತರಿಕ ದಂಗೆ ಪ್ರಚೋದಿಸಿ, ಕೈಗೊಂಬೆ ಸರಕಾರಗಳನ್ನು ಸ್ಥಾಪಿಸುವುದು ಯುಎಸ್‌ಎಯ ಹಳೆಯ ಚಾಳಿ

- Advertisement -
- Advertisement -

ಯುಎಸ್‌ಎಯ ಯುದ್ಧದಾಹವು ಪಶ್ಚಿಮ ಏಷ್ಯಾದಲ್ಲಿ ಇನ್ನೊಂದು ಪೂರ್ಣಪ್ರಮಾಣದ ಯುದ್ಧಕ್ಕೆ ನಾಂದಿ ಹಾಡಿದೆ. ಅದು ಇರಾನಿನ ಸೇನೆಯ ಭಾಗವಾದ ರಿವೋಲ್ಯೂಷನರಿ ಗಾರ್ಡ್ಸ್ ಕಾಪ್ಸ್‌ನ ಕಮಾಂಡರ್ ಮೇಜರ್ ಜನರಲ್ ಖಾಸಿಂ ಸುಲೇಮಾನಿ ಮತ್ತು ಪಾಪ್ಯುಲರ್ ಮೊಬಿಲೈಸೇಷನ್ ಫೋರ್ಸ್‌ನ ಹಲವಾರು ನಾಯಕರನ್ನು ಬಾಗ್ದಾದ್‌ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಇರಾನ್ ಪ್ರತೀಕಾರದ ಕ್ರಮವಾಗಿ ಇರಾಕ್‌ನಲ್ಲಿರುವ ಯುಎಸ್‌ಎಯ ಸೇನಾ ನೆಲೆಗಳನ್ನು ಗುರಿ ಮಾಡಿಕೊಂಡು ಕ್ಷಿಪಣಿ ದಾಳಿ ನಡೆಸಿರುವುದು ಪೂರ್ಣ ಪ್ರಮಾಣದ ಯುದ್ಧ ಭೀತಿಯನ್ನು ಹೆಚ್ಚಿಸಿದೆ.

ಇರಾನ್, ಇರಾಕ್‌ನ ಎರ್ಬಿಲ್ ಮತ್ತು ಅಲ್ ಅಸ್ಸಾದ್‌ನಲ್ಲಿರುವ ಯುಎಸ್‌ಎ ಸೇನಾ ನೆಲೆಗಳ ಮೇಲೆ 22 ಕ್ಷಿಪಣಿಗಳನ್ನು ಉಡಾಯಿಸಿದೆ. ಈ ದಾಳಿಗಳಲ್ಲಿ 80ರಷ್ಟು ಯುಎಸ್‌ಎ ಸೈನಿಕರನ್ನು ಕೊಂದಿರುವುದಾಗಿ ಇರಾನ್ ಹೇಳಿಕೊಂಡಿದ್ದರೆ, ದಾಳಿ ನಡೆದಿರುವುದು ನಿಜವಾಗಿದ್ದರೂ ತನ್ನ ಅಥವಾ ಇರಾಕಿನ ಯಾವುದೇ ಸೈನಿಕರು ಸತ್ತಿಲ್ಲ ಎಂದು ಯುಎಸ್‌ಎ ಹೇಳಿದೆ. ಇರಾನ್ ಹೆದರಿದ್ದು, ಬೇಕೆಂದೇ ತಪ್ಪು ಗುರಿಯನ್ನು ಇರಿಸಿ ದಾಳಿ ನಡೆಸಿದೆ ಎಂಬಂತಹಾ ಧಾರ್ಷ್ಟ್ಯದ ಹೇಳಿಕೆಯನ್ನು ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ, ಈ ಪ್ರದೇಶದಲ್ಲಿ ಯುಎಸ್‌ಎಯ ಪ್ರಭಾವವನ್ನು ಶಾಶ್ವತವಾಗಿ ಕಡಿಮೆ ಮಾಡಲು ಇದು ಸಕಾಲ ಎಂದು ಇರಾನಿನ ಪರಮೋಚ್ಚ ನಾಯಕ ಅಯಾತೊಲ್ಲ ಅಲ್ ಖಮೇನಿ ಹಾಗೂ ಅಧ್ಯಕ್ಷ ಹಸನ್ ರೊಹಾನಿ ಹೇಳಿದ್ದಾರೆ. ಯುಎಸ್‌ಎಯಿಂದ ತೊಂದರೆಗೆ ಒಳಗಾಗಿರುವ ಎಲ್ಲಾ ದೇಶಗಳು ಒಟ್ಟಾಗಬೇಕು ಎಂಬ ಕರೆಯನ್ನು ಇರಾನ್ ನೀಡಿದೆ. ಸದ್ಯ ಯುಎಸ್‌ಎಯ ಪಾಳಯದಲ್ಲಿ ಸೌದಿ ಅರೇಬಿಯಾ, ಇಸ್ರೇಲ್, ಕುವೈಟ್ ಮುಂತಾದ ದೇಶಗಳಿದ್ದು, ಯುಎಸ್‌ಎ ವಿರುದ್ಧ ಪ್ರತೀಕಾರಕ್ಕೆ ಬಯಸುವ ದೇಶಗಳೇ ಹೆಚ್ಚು. ಒಟ್ಟಿನಲ್ಲಿ ಭಾರತದ ಮೇಲೂ ದುಷ್ಪರಿಣಾಮ ಬೀರಬಹುದಾದ ಒಂದು ಪೂರ್ಣ ಪ್ರಮಾಣದ ಯುದ್ಧದ ಸಾಧ್ಯತೆಗೆ ಕಾರಣವಾಗಿರುವುದು ಯುಎಸ್‌ಎ ಎಂಬುದರಲ್ಲಿ ಸಂಶಯವಿಲ್ಲ.

ಏಕೆಂದರೆ, ಇರಾನಿನ ಎರಡನೇ ಅತ್ಯಂತ ಪ್ರಭಾವಿ ಮಿಲಿಟರಿ ನಾಯಕನ ಹತ್ಯೆಗೆ ಡೊನಾಲ್ಡ್ ಟ್ರಂಪ್ ನೇರವಾಗಿ ನಿರ್ದೇಶನ ನೀಡಿರುವುದಾಗಿ ಪೆಂಟಗನ್ ದೃಢಪಡಿಸಿದೆ. ಯುಎಸ್ಎಯ ಸಂಸತ್ತಿನಲ್ಲಿ ವಜಾ ವಾಗ್ದಂಡನೆ ಎದುರಿಸುತ್ತಿರುವ ಟ್ರಂಪ್ ನಾಝಿ ತಂತ್ರವನ್ನೇ ಈ ಬಾರಿ ಉಪಯೋಗಿಸಿರುವುದು ಸ್ಪಷ್ಟವಾಗಿದೆ. ಅದೆಂದರೆ, ಬೇರೆ ದೇಶಗಳನ್ನು ತೋರಿಸಿ, ಜನರ ಗಮನವನ್ನು ಬೇರೆಡೆಗೆ ಸೆಳೆಯುವುದು. ತನ್ನ ಟ್ವೀಟ್‌ನಲ್ಲಿ ಯುಎಸ್‌ಎಯ ರಾಷ್ಟ್ರಧ್ವಜವನ್ನು ಬಳಸಿಕೊಂಡು ಹುಸಿ ದೇಶಪ್ರೇಮವನ್ನು ಬಡಿದೆಬ್ಬಿಸಿ, ತನ್ನ ದುರಾಡಳಿತವನ್ನು ಮರೆಮಾಚುವ ತಂತ್ರವನ್ನು ಟ್ರಂಪ್ ಉಪಯೋಗಿಸಿರುವುದು ಕೂಡಾ ಸ್ಪಷ್ಟವಾಗಿದೆ.

ಇನ್ನೊಂದು ಕಡೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭ್ರಷ್ಟಾಚಾರದ ಆರೋಪದಲ್ಲಿ ಬಂಧನವನ್ನು ಎದುರಿಸುತ್ತಿದ್ದು, ಇಸ್ರೇಲಿಗರ ಗಮನವನ್ನು ಬೇರೆಡೆ ಸೆಳೆಯಲು ಯುದ್ಧವು ಒಂದು ಅನುಕೂಲಕರ ಅವಕಾಶವಾಗಿದೆ. ಇಬ್ಬರೂ ಇರಾನನ್ನು ಯುಎಸ್‌ಎ ಮತ್ತು ಇಸ್ರೇಲಿನ ಶತ್ರು ಎಂಬಂತೆ ಬಿಂಬಿಸುತ್ತಾ ಬಂದಿದ್ದಾರೆ. ಇಲ್ಲವಾದಲ್ಲಿ ಬರಾಕ್ ಒಬಾಮ ತನ್ನ ಎರಡನೆಯ ಅವಧಿಯಲ್ಲಿ ಇರಾನ್ ಜೊತೆ ಯುದ್ಧವನ್ನು ಪ್ರಚೋದಿಸುತ್ತಿರುವುದಾಗಿ ಆರೋಪಿಸಿದ್ದ ಇದೇ ಟ್ರಂಪ್, ಈಗ ತಾನೇ ಅಂತಹ ಕ್ರಮ ಕೈಗೊಂಡಿರುವುದು ಏನನ್ನು ಸೂಚಿಸುತ್ತದೆ?

ಯುಎಸ್‌ಎ ನಡೆಸಿದ ದಾಳಿ ಗಂಭೀರ ಸ್ವರೂಪದ ಆಕ್ರಮಣವಾಗಿದ್ದು, ಇರಾನ್ ಇದನ್ನು ಸುಲಭದಲ್ಲಿ ಮರೆಯುವ ಸಾಧ್ಯತೆ ಇಲ್ಲ. ಖಾಸಿಂ ಸುಲೇಮಾನಿಯನ್ನು ಸರ್ದಾರ್ ಎಂದು ಕರೆಯಲಾಗುತಿತ್ತು. ಕಳೆದ 23 ವರ್ಷಗಳಿಂದ ಅವರು ದೇಶದ ಒಂದು ಪ್ರಮುಖ ಸೇನಾ ವಿಭಾಗದ ಮುಖ್ಯಸ್ಥರಾಗಿದ್ದರು. ಅವರು ಇರಾಕ್ ಮತ್ತು ಸಿರಿಯಾದಲ್ಲಿ ಐಸಿಸ್‌ನ ಬೆನ್ನು ಮೂಳೆ ಮುರಿದವರು. ಐಸಿಸ್ ವಿರುದ್ಧ, ಭಯೋತ್ಪಾದನೆ ವಿರುದ್ಧ ತಾನೆಂದು ಹೇಳುವ ಯುಎಸ್‌ಎ ಅಂತವರನ್ನೇ ಯಾಕೆ ಕೊಂದಿತು? ಇರಾನ್, ಇರಾಕಿ ನೆಲದಲ್ಲಿ ತನ್ನ ಮೇಲೆ ದಾಳಿಗೆ ಬೆಂಬಲ ನೀಡುತ್ತಿದೆ ಎಂದು ಯುಎಸ್‌ಎ ಆರೋಪಿಸಿದ್ದು, ಎರಡೂ ದೇಶಗಳ ಸಂಬಂಧ ಹದಗೆಟ್ಟಿತ್ತು. ಆದರೆ, ಈ ಆರೋಪಕ್ಕೆ ಯುಎಸ್‌ಎ ಯಾವುದೇ ಸಾಕ್ಷ್ಯಾಧಾರಗಳನ್ನು ಈ ತನಕ ನೀಡಿಲ್ಲ.

ಇದಕ್ಕೂ ಹಿಂದೆ ಇರಾಕಿ ಮಿಲಿಷಿಯಾದ ಮೇಲೆ ಯುಎಸ್‌ಎ ನಡೆಸಿದ್ದ ವಾಯುದಾಳಿಯಲ್ಲಿ 20ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದರು. ಅದು ಬಾಗ್ದಾದ್‌ನ ಯುಎಸ್‌ಎ ರಾಯಭಾರ ಕಚೇರಿಯ ಎದುರು ಪ್ರತಿಭಟನೆಗೆ ಕಾರಣವಾಗಿತ್ತು. ಅಲ್ಲಿ ‘ಅಮೆರಿಕಕ್ಕೆ ಸಾವು’ ಎಂಬ ಘೋಷಣೆ ಕೂಗಲಾಗಿತ್ತು ಮತ್ತು ಕಿಟಕಿ ಗಾಜುಗಳನ್ನು ಒಡೆದು ಹಾಕಲಾಗಿತ್ತು. ಈ ಪ್ರತಿಭಟನೆಗಳಿಗೆ ಇರಾನ್ ಬೆಂಬಲ ನೀಡುತ್ತಿದೆ ಮತ್ತು ಪಶ್ಚಿಮ ಏಷ್ಯಾದಲ್ಲಿ ಯುಎಸ್‌ಎ ವಿರುದ್ಧ ದ್ವೇಷದ ಭಾವನೆ ಹುಟ್ಟುಹಾಕುತ್ತಿದೆ ಎಂದು ಆರೋಪಿಸಲಾಗಿದ್ದರೂ, ಅದೊಂದು ಆರೋಪವಾಗಿಯೇ ಉಳಿದಿದೆ.

ಇದೇ ರೀತಿಯಲ್ಲಿ ಇರಾಕ್ ಸಾಮೂಹಿಕ ವಿನಾಶದ ರಾಸಾಯನಿಕ ಅಸ್ತ್ರಗಳನ್ನು ಹೊಂದಿದೆ ಎಂಬ ಆರೋಪದಲ್ಲಿ ಇರಾಕ್ ಮೇಲೆ ದಾಳಿ ಮಾಡಿದ್ದ ಯುಎಸ್‌ಎ, ಸದ್ದಾಂ ಹುಸೇನ್ ಸಾವಿಗೆ ಕಾರಣವಾಗಿತ್ತು. ಆದರೆ, ಅಲ್ಲಿ ಯಾವುದೇ ರಾಸಾಯನಿಕ ಅಸ್ತ್ರ ದೊರೆತಿರಲಿಲ್ಲ. ವಾಸ್ತವವಾಗಿ ಇಸ್ಲಾಮಿಕ್ ಕ್ರಾಂತಿಯ ಬಳಿಕ 1979ರ ನವೆಂಬರ್‌ನಲ್ಲಿ ಯುಎಸ್‌ಎಯ ಟೆಹರಾನ್ ರಾಯಭಾರ ಕಚೇರಿಯ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿಗಳು 50ರಷ್ಟು ಯುಎಸ್‌ಎ ಪ್ರಜೆಗಳನ್ನು 444 ದಿನಗಳ ಕಾಲ ಒತ್ತೆ ಸೆರೆ ಇರಿಸಿಕೊಂಡದ್ದು ಬಿಟ್ಟರೆ, ಆ ಬಳಿಕ ಇರಾನ್, ಯುಎಸ್‌ಎಯ ಮೇಲೆ ಯಾವುದೇ ದಾಳಿಯನ್ನು ನಡೆಸಿಲ್ಲ. ಹಾಗಿದ್ದರೂ,  ಯುಎಸ್‌ಎ ಇರಾನ್ ಮೇಲೆ ಒತ್ತಾಯದ ಆರ್ಥಿಕ ದಿಗ್ಬಂಧನವನ್ನು ಹೇರಿತ್ತು ಮಾತ್ರವಲ್ಲ, ಭಾರತದ ಕೈಯನ್ನೂ ತಿರುಚಿ, ಸಾಕಷ್ಟು ಅಗ್ಗದ ಬೆಲೆಯಲ್ಲಿ ಕಚ್ಚಾತೈಲ ಪೂರೈಸುತ್ತಿದ್ದ ಇರಾನ್‌ನಿಂದ ತೈಲ ಖರೀದಿ ನಿಲ್ಲಿಸುವಂತೆ ಮಾಡಿತ್ತು.

ಬೇರೆ ದೇಶಗಳ ಮೇಲೆ ದಾಳಿ ಮಾಡುವುದು, ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು, ತನ್ನ ಬಂಡವಾಳಕ್ಕೆ ಅನುಕೂಲಕರವಾದ ಎಲ್ಲಾ ಕಡೆಗಳಲ್ಲಿ ಆಂತರಿಕ ದಂಗೆ ಪ್ರಚೋದಿಸಿ, ಕೈಗೊಂಬೆ ಸರಕಾರಗಳನ್ನು ಸ್ಥಾಪಿಸುವುದು ಯುಎಸ್‌ಎಯ ಹಳೆಯ ಚಾಳಿ. ಮಧ್ಯ ಮತ್ತು ದಕ್ಷಿಣ ಅಮೇರಿಕಾ ಹಾಗೂ ಆಫ್ರಿಕಾದ ಅನೇಕ ಚಿಕ್ಕ, ದೊಡ್ಡ ದೇಶಗಳು ಇದನ್ನು ಅನುಭವಿಸಿದ್ದು, ಅದಕ್ಕೆ ಸಡ್ಡುಹೊಡೆದು ನಿಂತದ್ದು, ವಿಯೆಟ್ನಾಂ ಮತ್ತು ಕ್ಯೂಬಾ ಮಾತ್ರ. ಎರಡನೇ ಮಹಾಯುದ್ಧದ ಬಳಿಕ ಕೊರಿಯಾ, ವಿಯೆಟ್ನಾಂ ಯುದ್ಧದಿಂದ ಹಿಡಿದು, ಈ ತನಕ ಪ್ರಪಂಚದಲ್ಲಿ ನಡೆದ ಬಹುತೇಕ ಎಲ್ಲಾ ಯುದ್ಧಗಳಲ್ಲಿ ಯುಎಸ್‌ಎಯ ಪ್ರತ್ಯಕ್ಷ ಅಥವಾ ಪರೋಕ್ಷ ಪಾತ್ರ ಇರುವುದು ಏಕೆಂದು ನಾವು ಯೋಚಿಸಬಹುದು.

1991ರಲ್ಲಿ ಇರಾಕ್ ಮೇಲೆ ದಾಳಿ ನಡೆಸಿದ ಬಳಿಕ ಯುಎಸ್‌ಎಯು ಅಫಘಾನಿಸ್ತಾನ, ಲಿಬಿಯಾ, ಸುಡಾನ್, ಈಜಿಪ್ಟ್, ಸೋಮಾಲಿಯಾ, ಯೆಮೆನ್ ಮತ್ತು ಸಿರಿಯಾದ ಮೇಲೆ ದಾಳಿ ನಡೆಸಿ ಅಲ್ಲಿನ ಆಡಳಿತಗಾರರನ್ನು ಉರುಳಿಸಿ, ಅವರ ಸಾವಿಗೆ ಕಾರಣವಾಗಿದೆ. ಅದಕ್ಕೆ ನೀಡಿದ ಕಾರಣವೆಂದರೆ, ಅವರು ಸರ್ವಾಧಿಕಾರಿಗಳು ಎಂಬುದು ಅಥವಾ ಐಸಿಸ್, ಅಲ್ ಖಾಯ್ದಾ ಉಗ್ರರನ್ನು ನಾಶಮಾಡುವುದು. ಆದರೆ, ನಿಜವಾದ ಕಾರಣವೆಂದರೆ, ಇವುಗಳಲ್ಲಿ ಬಹುತೇಕ ಎಲ್ಲವೂ ತೈಲಸಂಪನ್ನ ದೇಶಗಳಾಗಿರುವುದು. ಬಡದೇಶಗಳಲ್ಲಿ ಮಹಾ ಕ್ರೂರ ಸರ್ವಾಧಿಕಾರಿಗಳಿದ್ದರೂ, ಪ್ರಜಾಪ್ರಭುತ್ವದ ಏಕೈಕ ವಕ್ತಾರನಂತೆ ವರ್ತಿಸುವ ಯುಎಸ್‌ಎ ಮೂಸಿಯೂ ನೋಡುವುದಿಲ್ಲ. ಉದಾಹರಣೆಗೆ ರುವಾಂಡದಲ್ಲಿ ಲಕ್ಷಗಟ್ಟಲೆ ಮಂದಿಯನ್ನು ಹುಟು- ಟುಟ್ಸಿ ಅಂತಃಕಲಹದಲ್ಲಿ ಹಾದಿಬೀದಿಗಳಲ್ಲಿ ಕತ್ತರಿಸಿ ಕೊಲ್ಲಲಾಗುತ್ತಿದ್ದರೂ, ಅದನ್ನು ತಪ್ಪಿಸಲು ಏನನ್ನೂ ಮಾಡಲಿಲ್ಲ. ಅದು ಇದೀಗ ಕೊಲ್ಲಿಯಲ್ಲಿ ಇನ್ನೊಂದು ಸುಡುಮದ್ದು ರಾಶಿಗೆ ಕಿಡಿ ಹಚ್ಚಿದೆ. ಪರಿಣಾಮ ಕಾದುನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...