Homeಮುಖಪುಟಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆಯ ಹೇಯ ಕೃತ್ಯಕ್ಕೆ ಅಮೆರಿಕ ಕಳವಳ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆಯ ಹೇಯ ಕೃತ್ಯಕ್ಕೆ ಅಮೆರಿಕ ಕಳವಳ

- Advertisement -
- Advertisement -

ಮಣಿಪುರದಲ್ಲಿ ಕುಕಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ವಿಡಿಯೋ ಕಳೆದ ವಾರ ವೈರಲ್ ಆಗಿತ್ತು. ಇದರಿಂದ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಅಮೆರಿಕ ಕೂಡ “ಆಘಾತ ಮತ್ತು ಗಾಬರಿಗೊಂಡಿದೆ” ಎಂದು ವಾಷಿಂಗ್ಟನ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ವಿದೇಶಾಂಗ ಇಲಾಖೆಯ ಉಪ ವಕ್ತಾರರಾದ ವೇದಾಂತ್ ಪಟೇಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ”ಈ ಲಿಂಗ ಆಧಾರಿತ ಹಿಂಸಾಚಾರದಿಂದ ಬದುಕುಳಿದವರಿಗೆ ನಾವು ನಮ್ಮ ಆಳವಾದ ಸಹಾನುಭೂತಿಗಳನ್ನು ತಿಳಿಸುತ್ತೇವೆ ಮತ್ತು ಅವರಿಗೆ ನ್ಯಾಯ ದೊರಕಿಸುವ ಭಾರತ ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುತ್ತೇವೆ. ಜುಲೈ 23ರಂದು, ವಿದೇಶಾಂಗ ಇಲಾಖೆಯು ಲೈಂಗಿಕ ದೌರ್ಜನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ” ಎಂದು ಹೇಳಿದರು.

ಬುಧವಾರವೂ ಮುಂದುವರೆದ ಹಿಂಸಾಚಾರ:

ಮೊರೆಹ್ ಜಿಲ್ಲೆಯಲ್ಲಿ ಈ ಹೀಂಸಾಚಾರದಿಂದ ಸ್ಥಾಳಾಂತರಗೊಂಡಿರುವವ ಮನೆಗಳಿಗೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಬೆಂಕಿ ಹಚ್ಚಿದೆ ಎಂದು ಪಿಟಿಐ ವರದಿ ಮಾಡಿದೆ.

ಈ ಮನೆಗಳು ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಮೊರೆಹ್ ಬಜಾರ್ ಪ್ರದೇಶದಲ್ಲಿವೆ. ಹಿಂಸಾಚಾರ ಭುಗಿಲೆದ್ದ ನಂತರ ಅವರು ಪ್ರದೇಶವನ್ನು ತೊರೆದ ಮೈತಿ ಸಮುದಾಯಕ್ಕೆ ಸೇರಿದವರು ಎಂದು ವರದಿಯಾಗಿದೆ.

ಮೊರೆಹ್‌ನಲ್ಲಿ ನಡೆದ ಘಟನೆಯ ಕೆಲವು ಗಂಟೆಗಳ ಮೊದಲು, ಕಾಂಗ್‌ಪೋಕ್ಪಿ ಜಿಲ್ಲೆಯ ಜನಸಮೂಹವು ಸಿಬ್ಬಂದಿಯನ್ನು ಸಾಗಿಸಲು ಭದ್ರತಾ ಪಡೆಗಳು ಬಳಸುತ್ತಿದ್ದ ಎರಡು ಬಸ್‌ಗಳಿಗೆ ಬೆಂಕಿ ಹಚ್ಚಿದೆ. ಮಂಗಳವಾರ ಸಂಜೆ ದಿಮಾಪುರದಿಂದ ಬಸ್ಸುಗಳು ಹೋಗುತ್ತಿದ್ದಾಗ ಸಪೋರ್ಮಿನಾ ಪ್ರದೇಶದಲ್ಲಿ ಬೆಂಕಿ ಹಚ್ಚಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಮತ್ತು ಹಲ್ಲೆ ಮಾಡಿದ ಘಟನೆಯಿಂದ ಸಶಸ್ತ್ರ ನಾಗಾ ಗುಂಪಿನ ರಾಷ್ಟ್ರೀಯ ಸಮಾಜವಾದಿ ಕೌನ್ಸಿಲ್ ಆಫ್ ನಾಗಾಲ್ಯಾಂಡ್ (ಇಸಾಕ್-ಮುಯಿವಾ) ನ ಮಹಿಳಾ ವಿಭಾಗವು ”ಆಘಾತ ಮತ್ತು ಭಯಭೀತರಾಗಿದ್ದೇವೆ” ಎಂದು ಹೇಳಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಈ ಗುಂಪು ಮಾತನಾಡಿರುವುದು ಇದೇ ಮೊದಲು. ನಾಗಾಲಿಮ್‌ನ ರಾಷ್ಟ್ರೀಯ ಸಮಾಜವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಹೊಶೆಲಿ ಅಚುಮಿ ಮಾತನಾಡಿದ್ದು, ”ಮಣಿಪುರದಲ್ಲಿ ಮಹಿಳೆಯರ ಹಕ್ಕುಗಳಿಗೆ, ವಿಶೇಷವಾಗಿ ಅವರ ಜೀವನೋಪಾಯ ಮತ್ತು ಘನತೆಗೆ ಬೆದರಿಕೆ ಇರುವ ದುಃಸ್ವಪ್ನ ಪರಿಸ್ಥಿತಿಯಿಂದ ನಮ್ಮ ಸಮೂಹ ಆಘಾತಕ್ಕೊಳಗಾಗಿದೆ. ಮಣಿಪುರದ ಹಿಂಸಾಚಾರದಿಂದ ರಾಜ್ಯದಲ್ಲಿ “ಯಾವುದೇ ಸಮಾನತೆಯನ್ನು ಕಾಣುವುದಿಲ್ಲ” ಎಂದು ಅವರು ಹೇಳಿದರು.

ಕಳೆದ ವಾರ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಇದುವರೆಗೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಮೇ 4 ರಂದು ಹಲ್ಲೆ ನಡೆದಿದ್ದು, ಪೊಲೀಸರು ಮೇ 18 ರಂದು ಎಫ್‌ಐಆರ್ ಸಲ್ಲಿಸಿದ್ದರು. ಆದರೆ, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೆಯಾದ ನಂತರ ಕಳೆದ ವಾರವಷ್ಟೇ ಮೊದಲ ಬಂಧನವನ್ನು ಮಾಡಲಾಗಿದೆ.

ಇದನ್ನೂ ಓದಿ: ‘ಮಿಸ್ಟರ್ ಮೋದಿ, ಏನು ಬೇಕಾದರೂ ಕರೆಯಿರಿ, ಮಣಿಪುರದಲ್ಲಿ ಶಾಂತಿಯನ್ನು ಮರುನಿರ್ಮಾಣ ಮಾಡುತ್ತೇವೆ’: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...