Homeಮುಖಪುಟಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆಯ ಹೇಯ ಕೃತ್ಯಕ್ಕೆ ಅಮೆರಿಕ ಕಳವಳ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆಯ ಹೇಯ ಕೃತ್ಯಕ್ಕೆ ಅಮೆರಿಕ ಕಳವಳ

- Advertisement -
- Advertisement -

ಮಣಿಪುರದಲ್ಲಿ ಕುಕಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಹೇಯ ಕೃತ್ಯದ ವಿಡಿಯೋ ಕಳೆದ ವಾರ ವೈರಲ್ ಆಗಿತ್ತು. ಇದರಿಂದ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಅಮೆರಿಕ ಕೂಡ “ಆಘಾತ ಮತ್ತು ಗಾಬರಿಗೊಂಡಿದೆ” ಎಂದು ವಾಷಿಂಗ್ಟನ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ವಿದೇಶಾಂಗ ಇಲಾಖೆಯ ಉಪ ವಕ್ತಾರರಾದ ವೇದಾಂತ್ ಪಟೇಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ”ಈ ಲಿಂಗ ಆಧಾರಿತ ಹಿಂಸಾಚಾರದಿಂದ ಬದುಕುಳಿದವರಿಗೆ ನಾವು ನಮ್ಮ ಆಳವಾದ ಸಹಾನುಭೂತಿಗಳನ್ನು ತಿಳಿಸುತ್ತೇವೆ ಮತ್ತು ಅವರಿಗೆ ನ್ಯಾಯ ದೊರಕಿಸುವ ಭಾರತ ಸರ್ಕಾರದ ಪ್ರಯತ್ನಗಳನ್ನು ಬೆಂಬಲಿಸುತ್ತೇವೆ. ಜುಲೈ 23ರಂದು, ವಿದೇಶಾಂಗ ಇಲಾಖೆಯು ಲೈಂಗಿಕ ದೌರ್ಜನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ” ಎಂದು ಹೇಳಿದರು.

ಬುಧವಾರವೂ ಮುಂದುವರೆದ ಹಿಂಸಾಚಾರ:

ಮೊರೆಹ್ ಜಿಲ್ಲೆಯಲ್ಲಿ ಈ ಹೀಂಸಾಚಾರದಿಂದ ಸ್ಥಾಳಾಂತರಗೊಂಡಿರುವವ ಮನೆಗಳಿಗೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಬೆಂಕಿ ಹಚ್ಚಿದೆ ಎಂದು ಪಿಟಿಐ ವರದಿ ಮಾಡಿದೆ.

ಈ ಮನೆಗಳು ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಮೊರೆಹ್ ಬಜಾರ್ ಪ್ರದೇಶದಲ್ಲಿವೆ. ಹಿಂಸಾಚಾರ ಭುಗಿಲೆದ್ದ ನಂತರ ಅವರು ಪ್ರದೇಶವನ್ನು ತೊರೆದ ಮೈತಿ ಸಮುದಾಯಕ್ಕೆ ಸೇರಿದವರು ಎಂದು ವರದಿಯಾಗಿದೆ.

ಮೊರೆಹ್‌ನಲ್ಲಿ ನಡೆದ ಘಟನೆಯ ಕೆಲವು ಗಂಟೆಗಳ ಮೊದಲು, ಕಾಂಗ್‌ಪೋಕ್ಪಿ ಜಿಲ್ಲೆಯ ಜನಸಮೂಹವು ಸಿಬ್ಬಂದಿಯನ್ನು ಸಾಗಿಸಲು ಭದ್ರತಾ ಪಡೆಗಳು ಬಳಸುತ್ತಿದ್ದ ಎರಡು ಬಸ್‌ಗಳಿಗೆ ಬೆಂಕಿ ಹಚ್ಚಿದೆ. ಮಂಗಳವಾರ ಸಂಜೆ ದಿಮಾಪುರದಿಂದ ಬಸ್ಸುಗಳು ಹೋಗುತ್ತಿದ್ದಾಗ ಸಪೋರ್ಮಿನಾ ಪ್ರದೇಶದಲ್ಲಿ ಬೆಂಕಿ ಹಚ್ಚಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಮತ್ತು ಹಲ್ಲೆ ಮಾಡಿದ ಘಟನೆಯಿಂದ ಸಶಸ್ತ್ರ ನಾಗಾ ಗುಂಪಿನ ರಾಷ್ಟ್ರೀಯ ಸಮಾಜವಾದಿ ಕೌನ್ಸಿಲ್ ಆಫ್ ನಾಗಾಲ್ಯಾಂಡ್ (ಇಸಾಕ್-ಮುಯಿವಾ) ನ ಮಹಿಳಾ ವಿಭಾಗವು ”ಆಘಾತ ಮತ್ತು ಭಯಭೀತರಾಗಿದ್ದೇವೆ” ಎಂದು ಹೇಳಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಈ ಗುಂಪು ಮಾತನಾಡಿರುವುದು ಇದೇ ಮೊದಲು. ನಾಗಾಲಿಮ್‌ನ ರಾಷ್ಟ್ರೀಯ ಸಮಾಜವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಹೊಶೆಲಿ ಅಚುಮಿ ಮಾತನಾಡಿದ್ದು, ”ಮಣಿಪುರದಲ್ಲಿ ಮಹಿಳೆಯರ ಹಕ್ಕುಗಳಿಗೆ, ವಿಶೇಷವಾಗಿ ಅವರ ಜೀವನೋಪಾಯ ಮತ್ತು ಘನತೆಗೆ ಬೆದರಿಕೆ ಇರುವ ದುಃಸ್ವಪ್ನ ಪರಿಸ್ಥಿತಿಯಿಂದ ನಮ್ಮ ಸಮೂಹ ಆಘಾತಕ್ಕೊಳಗಾಗಿದೆ. ಮಣಿಪುರದ ಹಿಂಸಾಚಾರದಿಂದ ರಾಜ್ಯದಲ್ಲಿ “ಯಾವುದೇ ಸಮಾನತೆಯನ್ನು ಕಾಣುವುದಿಲ್ಲ” ಎಂದು ಅವರು ಹೇಳಿದರು.

ಕಳೆದ ವಾರ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಇದುವರೆಗೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಮೇ 4 ರಂದು ಹಲ್ಲೆ ನಡೆದಿದ್ದು, ಪೊಲೀಸರು ಮೇ 18 ರಂದು ಎಫ್‌ಐಆರ್ ಸಲ್ಲಿಸಿದ್ದರು. ಆದರೆ, ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೆಯಾದ ನಂತರ ಕಳೆದ ವಾರವಷ್ಟೇ ಮೊದಲ ಬಂಧನವನ್ನು ಮಾಡಲಾಗಿದೆ.

ಇದನ್ನೂ ಓದಿ: ‘ಮಿಸ್ಟರ್ ಮೋದಿ, ಏನು ಬೇಕಾದರೂ ಕರೆಯಿರಿ, ಮಣಿಪುರದಲ್ಲಿ ಶಾಂತಿಯನ್ನು ಮರುನಿರ್ಮಾಣ ಮಾಡುತ್ತೇವೆ’: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...