Homeಅಂತರಾಷ್ಟ್ರೀಯಅಮೆರಿಕ ಪರ ಯುದ್ಧದಲ್ಲಿ ಪಾಕ್ ಭಾಗವಹಿಸುವುದಿಲ್ಲ: ಇಮ್ರಾನ್ ಖಾನ್

ಅಮೆರಿಕ ಪರ ಯುದ್ಧದಲ್ಲಿ ಪಾಕ್ ಭಾಗವಹಿಸುವುದಿಲ್ಲ: ಇಮ್ರಾನ್ ಖಾನ್

- Advertisement -
- Advertisement -

ಪಾಕಿಸ್ತಾನ ಇನ್ನು ಮುಂದೆ ಎಂದೂ ಅಮೆರಿಕದೊಂದಿಗೆ ಯುದ್ಧದಲ್ಲಿ ಕೈಜೋಡಿಸಲಾರದು ಎಂದು ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಬುಧವಾರ ಸಂಸತ್‌ನ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಪಾಕಿಸ್ತಾನ ಅಮೆರಿಕದೊಂದಿಗೆ ಈ ಹಿಂದೆ ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿತ್ತು. ಅಮೆರಿಕದೊಂದಿಗೆ ಯುದ್ಧದಲ್ಲಿ ಕೈಜೋಡಿಸಿದಾಗಿನಷ್ಟು ಅವಮಾನವನ್ನು ಪಾಕ್ ಈ ಹಿಂದೆ ಎಂದೂ ಅನುಭವಿಸಿಲ್ಲ. ನಾವು ಶಾಂತಿಯ ಕಾರಣಕ್ಕಾಗಿ ಮಾತ್ರ ಅಮೆರಿಕ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ. ಯುದ್ದಕ್ಕಾಗಿ ಪಾಕ್ ಅಮೆರಿಕ ಮೈತ್ರಿ ಭವಿಷ್ಯದಲ್ಲಿ ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ನಿನ್ನೆ ತಮ್ಮ ಬಜೆಟ್‌ ಭಾಷಣದಲ್ಲಿ ಮಾತನಾಡಿದ್ದಾರೆ.

ಅಮೆರಿಕಕ್ಕೆ ಪಾಕಿಸ್ತಾನದಷ್ಟು ಸಹಾಯವನ್ನು ಯಾವ ದೇಶವೂ ಮಾಡಿಲ್ಲ. ನಮ್ಮ ತ್ಯಾಗದ ಬೆಲೆಯನ್ನು ಅಮೆರಿಕ ಎಂದಾದರೂ ಗುರುತಿಸಿದೆಯೇ? ಬದಲಾಗಿ ನಮ್ಮನ್ನೇ ಹಿಫೋಕ್ರೆಟ್‌ ಎಂದು ಅಮೆರಿಕ ಕರೆದಿದೆ. ಪಾಕಿಸ್ತಾನವನ್ನು ಜಗತ್ತಿನ ಮುಂದೆ ಕೆಟ್ಟದ್ದಾಗಿ ಬಿಂಬಿಸುತ್ತದೆ. ಪಾಕಿಸ್ತಾನ ಅಮೆರಿಕದ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ರಾಷ್ಟ್ರವಾಗಿ ನಿಂತಿತು. ಏನು ಪ್ರಯೋಜನ? ನಮಗೆ ಯುದ್ಧ ಯಾಕೆ ಬೇಕು ಎಂದು ಪದೇ ಪದೇ ದೇಶವನ್ನು ಪ್ರಶ್ನಿಸುತ್ತಲೇ ಬಂದಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯಾವುದಾದರೂ ದೇಶ ಬೇರೆ ದೇಶದ ಯುದ್ಧಕ್ಕಾಗಿ ತನ್ನ 70,000 ಪ್ರಜೆಗಳನ್ನು ಬಲಿ ಕೊಟ್ಟಿದೆಯೇ? ಮುಂದೆ ಅತ್ಯಂತ ಕಠಿಣ ದಿನಗಳು ಪಾಕಿಸ್ತಾನದ ಮುಂದಿದೆ. ಸುಮಾರು 5000 ಜನ ತೆಹ್ರಿಕ್ ಇ ತಾಲಿಬಾನ್‌ ಪಾಕಿಸ್ತಾನ್‌ (TTP) ಉಗ್ರರು ಪಾಕಿಸ್ತಾನದ ಗಡಿ ಪ್ರವೇಶಿಸಲು ಕಾದಿದ್ದಾರೆಂದು ಇಮ್ರಾನ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಆಂತರಿಕ ವ್ಯವಹಾರಗಳ ಸಚಿವ ಷೇಕ್ ರಶೀದ್, ಆಫ್ಘಾನಿಸ್ತಾನ್ ಮತ್ತು ಪಾಕಿಸ್ತಾನ ನಡುವೆ ಗಡಿ ವಿವಾದವಿದ್ದು ಡ್ಯುರಾಂಡ್ ರೇಖೆಯನ್ನೇ ಪಾಕ್-ಆಫ್ಘಾನ್ ನಡುವಿನ ಗಡಿರೇಖೆಯನ್ನಾಗಿ ಪಾಕ್ ಸರ್ಕಾರ ಪರಿಗಣಿಸಿದೆ. 80% ದಷ್ಟು ಗಡಿ ಬೇಲಿಗಳನ್ನು ನಿರ್ಮಿಸುವ ಕಾರ್ಯ ಮುಗಿದಿದೆ. ಗಡಿ ಬೇಲಿಗಳ ನಿರ್ಮಾಣಕ್ಕೆ ಸ್ಥಳಿಯ ನಿವಾಸಿಗಳ ತೀವ್ರ ವಿರೋಧವಿದ್ದು  ಆಫ್ಘಾನ್ ಸರ್ಕಾರ ಡ್ಯುರಾಂಡ್ ಗಡಿ ರೇಖೆಯನ್ನು ಒಪ್ಪಲು ಸಿದ್ಧವಿಲ್ಲದಿರುವುದೇ ಸಮಸ್ಯೆಯೆಂದಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದದ ಹೋರಾಟದಲ್ಲಿ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ ಪಾಕ್ ಪ್ರಧಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....