Homeಅಂತರಾಷ್ಟ್ರೀಯಅಮೆರಿಕ ಪರ ಯುದ್ಧದಲ್ಲಿ ಪಾಕ್ ಭಾಗವಹಿಸುವುದಿಲ್ಲ: ಇಮ್ರಾನ್ ಖಾನ್

ಅಮೆರಿಕ ಪರ ಯುದ್ಧದಲ್ಲಿ ಪಾಕ್ ಭಾಗವಹಿಸುವುದಿಲ್ಲ: ಇಮ್ರಾನ್ ಖಾನ್

- Advertisement -
- Advertisement -

ಪಾಕಿಸ್ತಾನ ಇನ್ನು ಮುಂದೆ ಎಂದೂ ಅಮೆರಿಕದೊಂದಿಗೆ ಯುದ್ಧದಲ್ಲಿ ಕೈಜೋಡಿಸಲಾರದು ಎಂದು ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಬುಧವಾರ ಸಂಸತ್‌ನ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಪಾಕಿಸ್ತಾನ ಅಮೆರಿಕದೊಂದಿಗೆ ಈ ಹಿಂದೆ ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿತ್ತು. ಅಮೆರಿಕದೊಂದಿಗೆ ಯುದ್ಧದಲ್ಲಿ ಕೈಜೋಡಿಸಿದಾಗಿನಷ್ಟು ಅವಮಾನವನ್ನು ಪಾಕ್ ಈ ಹಿಂದೆ ಎಂದೂ ಅನುಭವಿಸಿಲ್ಲ. ನಾವು ಶಾಂತಿಯ ಕಾರಣಕ್ಕಾಗಿ ಮಾತ್ರ ಅಮೆರಿಕ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ. ಯುದ್ದಕ್ಕಾಗಿ ಪಾಕ್ ಅಮೆರಿಕ ಮೈತ್ರಿ ಭವಿಷ್ಯದಲ್ಲಿ ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ನಿನ್ನೆ ತಮ್ಮ ಬಜೆಟ್‌ ಭಾಷಣದಲ್ಲಿ ಮಾತನಾಡಿದ್ದಾರೆ.

ಅಮೆರಿಕಕ್ಕೆ ಪಾಕಿಸ್ತಾನದಷ್ಟು ಸಹಾಯವನ್ನು ಯಾವ ದೇಶವೂ ಮಾಡಿಲ್ಲ. ನಮ್ಮ ತ್ಯಾಗದ ಬೆಲೆಯನ್ನು ಅಮೆರಿಕ ಎಂದಾದರೂ ಗುರುತಿಸಿದೆಯೇ? ಬದಲಾಗಿ ನಮ್ಮನ್ನೇ ಹಿಫೋಕ್ರೆಟ್‌ ಎಂದು ಅಮೆರಿಕ ಕರೆದಿದೆ. ಪಾಕಿಸ್ತಾನವನ್ನು ಜಗತ್ತಿನ ಮುಂದೆ ಕೆಟ್ಟದ್ದಾಗಿ ಬಿಂಬಿಸುತ್ತದೆ. ಪಾಕಿಸ್ತಾನ ಅಮೆರಿಕದ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ರಾಷ್ಟ್ರವಾಗಿ ನಿಂತಿತು. ಏನು ಪ್ರಯೋಜನ? ನಮಗೆ ಯುದ್ಧ ಯಾಕೆ ಬೇಕು ಎಂದು ಪದೇ ಪದೇ ದೇಶವನ್ನು ಪ್ರಶ್ನಿಸುತ್ತಲೇ ಬಂದಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಯಾವುದಾದರೂ ದೇಶ ಬೇರೆ ದೇಶದ ಯುದ್ಧಕ್ಕಾಗಿ ತನ್ನ 70,000 ಪ್ರಜೆಗಳನ್ನು ಬಲಿ ಕೊಟ್ಟಿದೆಯೇ? ಮುಂದೆ ಅತ್ಯಂತ ಕಠಿಣ ದಿನಗಳು ಪಾಕಿಸ್ತಾನದ ಮುಂದಿದೆ. ಸುಮಾರು 5000 ಜನ ತೆಹ್ರಿಕ್ ಇ ತಾಲಿಬಾನ್‌ ಪಾಕಿಸ್ತಾನ್‌ (TTP) ಉಗ್ರರು ಪಾಕಿಸ್ತಾನದ ಗಡಿ ಪ್ರವೇಶಿಸಲು ಕಾದಿದ್ದಾರೆಂದು ಇಮ್ರಾನ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಆಂತರಿಕ ವ್ಯವಹಾರಗಳ ಸಚಿವ ಷೇಕ್ ರಶೀದ್, ಆಫ್ಘಾನಿಸ್ತಾನ್ ಮತ್ತು ಪಾಕಿಸ್ತಾನ ನಡುವೆ ಗಡಿ ವಿವಾದವಿದ್ದು ಡ್ಯುರಾಂಡ್ ರೇಖೆಯನ್ನೇ ಪಾಕ್-ಆಫ್ಘಾನ್ ನಡುವಿನ ಗಡಿರೇಖೆಯನ್ನಾಗಿ ಪಾಕ್ ಸರ್ಕಾರ ಪರಿಗಣಿಸಿದೆ. 80% ದಷ್ಟು ಗಡಿ ಬೇಲಿಗಳನ್ನು ನಿರ್ಮಿಸುವ ಕಾರ್ಯ ಮುಗಿದಿದೆ. ಗಡಿ ಬೇಲಿಗಳ ನಿರ್ಮಾಣಕ್ಕೆ ಸ್ಥಳಿಯ ನಿವಾಸಿಗಳ ತೀವ್ರ ವಿರೋಧವಿದ್ದು  ಆಫ್ಘಾನ್ ಸರ್ಕಾರ ಡ್ಯುರಾಂಡ್ ಗಡಿ ರೇಖೆಯನ್ನು ಒಪ್ಪಲು ಸಿದ್ಧವಿಲ್ಲದಿರುವುದೇ ಸಮಸ್ಯೆಯೆಂದಿದ್ದಾರೆ.


ಇದನ್ನೂ ಓದಿ: ಕೊರೊನಾ ವಿರುದ್ದದ ಹೋರಾಟದಲ್ಲಿ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ ಪಾಕ್ ಪ್ರಧಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...