Homeಅಂತರಾಷ್ಟ್ರೀಯಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

- Advertisement -
- Advertisement -

ಅಮೆರಿಕದ ಟೆಕ್ಸಾಸ್ ಪ್ರಾಂತ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ ಮೂಲದ ಅಮೇರಿಕನ್‌ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿ ಥಳಿಸಿದ್ದಾರೆ. ಭಾರತೀಯರು ಅಮೆರಿಕವನ್ನು ‘ಹಾಳು’ ಮಾಡುತ್ತಿದ್ದ, ‘ಭಾರತಕ್ಕೆ ಹಿಂತಿರುಗಿ’ ಎಂದು ಜನಾಂಗೀಯ ನಿಂದನೆ ಮಾಡಿದ್ದಾರೆ. ಘಟನೆ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ನಡೆದಿದೆ.

ದುಷ್ಕರ್ಮಿ ಮಹಿಳೆಯನ್ನು ಎಸ್ಮೆರಾಲ್ಡಾ ಆಪ್ಟನ್ ಎಂದು ಗುರುತಿಸಲಾಗಿದೆ. ಇದೀಗ ಅವರನ್ನು ಪೊಲೀಸರು ಬಂಧಿಸಿದ್ದು ವಿಡಿಯೊದಲ್ಲಿ ಮಹಿಳೆಯು ತಾನು ಮೆಕ್ಸಿಕನ್ ಅಮೆರಿಕನ್ ಎಂದು ಹೇಳಿಕೊಳ್ಳುತ್ತಾರೆ. ವಿಡಿಯೊದಲ್ಲಿ ಅವರು ಭಾರತೀಯ-ಅಮೇರಿಕನ್ ಮಹಿಳೆಯರ ಗುಂಪಿನ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಭಾರತೀಯರನ್ನು ದ್ವೇಷಿಸುತ್ತೇನೆ. ಉತ್ತಮ ಜೀವನ ಬಯಸಿ ಎಲ್ಲಾ ಭಾರತೀಯರು ಅಮೆರಿಕಕ್ಕೆ ಬರುತ್ತಾರೆ. ನೀವು ಭಾರತೀಯರು ಎಲ್ಲೆಡೆ ಇದ್ದೀರಿ” ಎಂದು ಎಸ್ಮೆರಾಲ್ಡಾ ಆಪ್ಟನ್ ವೀಡಿಯೊದಲ್ಲಿ ನಾಲ್ವರು ಭಾರತೀಯ-ಅಮೆರಿಕನ್ ಮಹಿಳೆಯರ ಮೇಲೆ ನಿಂದನೆ ಮಾಡುತ್ತಾ ಹೇಳುತ್ತಾರೆ.

ಇದನ್ನೂ ಓದಿ: ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

“ನೀವು ಭಾರತಕ್ಕೆ ಹಿಂತಿರುಗಿ. ನೀವು *** ಈ ದೇಶವನ್ನು ಹಾಳು ಮಾಡುತ್ತಿದ್ದೀರಿ” ಎಂದು ಮಹಿಳೆಯು ಭಾರತೀಯರ ಗುಂಪಿಗೆ ಅವಾಚ್ಯ ನಿಂದನೆ ಮಾಡುತ್ತಾ ಹೇಳುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಅಮೆರಿಕದಾದ್ಯಂತ ಭಾರತೀಯ-ಅಮೆರಿಕನ್ ಸಮುದಾಯದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಆರೋಪಿ ಎಸ್ಮೆರಾಲ್ಡಾ ಆಪ್ಟನ್ ಜನಾಂಗೀಯ ನಿಂದನೆಗಳನ್ನು ಮಾಡುವುದು ವೀಡಿಯೊದಲ್ಲಿ ದಾಖಲಾಗಿದ್ದು, ಒಂದು ಹಂತದಲ್ಲಿ ಅವರು ಇಬ್ಬರು ಭಾರತೀಯ ಮಹಿಳೆಯರ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ ವ್ಯಕ್ತಿಯು, “ನನ್ನ ತಾಯಿ ಮತ್ತು ಅವರ ಮೂವರು ಸ್ನೇಹಿತರು ಊಟಕ್ಕೆ ಹೋದ ಸಮಯ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ಘಟನೆ ಸಂಭವಿಸಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಜಾತೀಯತೆ ಮತ್ತು ಜನಾಂಗೀಯವಾದವನ್ನು ಬೆಸೆದು ಶೋಷಣೆಯ ವ್ಯಾಪಕತೆಯನ್ನು ಚರ್ಚಿಸುವ ’ಕ್ಯಾಸ್ಟ್’

ವಿಡಿಯೊದಲ್ಲಿ ಆರೋಪಿ ಮಹಿಳೆಯ ಮಾತುಗಳನ್ನು ಭಾರತೀಯ ಮಹಿಳೆ ವಿರೋಧಿಸುತ್ತಾರೆ, ಜನಾಂಗೀಯ ನಿಂದನೆಗಳನ್ನು ಮಾಡದಂತೆ ವಿನಂತಿಸುತ್ತಾರೆ. ತಾನು ಅಮೆರಿಕದಲ್ಲಿ ಜನಿಸಿದೆ ಎಂದು ಹೇಳುವ ಆರೋಪಿ ಮಹಿಳೆ ಮಹಿಳೆಯರ ಮೇಲೆ ದಾಳಿ ಮಾಡುತ್ತಾರೆ.

“ನಾನು ಎಲ್ಲಿಗೆ ಹೋದರೂ, ನೀವು ಭಾರತೀಯರು ಎಲ್ಲೆಡೆ ಇದ್ದೀರಿ. ಭಾರತದಲ್ಲಿ ಜೀವನವು ತುಂಬಾ ದೊಡ್ಡದಾಗಿದ್ದರೆ, ನೀವು ಯಾಕೆ ಇಲ್ಲಿ ಇದ್ದೀರಿ” ಎಂದು ಆರೋಪಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ಪ್ಲಾನೋ ಪೋಲೀಸ್ ಡಿಟೆಕ್ಟಿವ್ಸ್ ಗುರುವಾರ ಮಧ್ಯಾಹ್ನ ಆರೋಪಿ ಎಸ್ಮೆರಾಲ್ಡಾ ಅಪ್ಟನ್ನ ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಹಲ್ಲೆ, ದೈಹಿಕ ಗಾಯ ಮತ್ತು ಭಯೋತ್ಪಾದಕ ಬೆದರಿಕೆಗಳ ಆರೋಪ ಹೊರಿಸಲಾಗಿದೆ. ಒಟ್ಟು 10,000 ಅಮೇರಿಕನ್ ಡಾಲರ್‌ ಬಾಂಡ್ ಮೊತ್ತದ ಮೇಲೆ ಅವರನ್ನು ಬಂಧಿಸಲಾಗಿದೆ. ಪ್ಲಾನೋ ಪೋಲೀಸ್ ಇಲಾಖೆ ಘಟನೆಯು ದ್ವೇಷದ ಅಪರಾಧ ಎಂದು ತನಿಖೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...