Homeಅಂತರಾಷ್ಟ್ರೀಯಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

- Advertisement -
- Advertisement -

ಅಮೆರಿಕದ ಟೆಕ್ಸಾಸ್ ಪ್ರಾಂತ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ ಮೂಲದ ಅಮೇರಿಕನ್‌ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿ ಥಳಿಸಿದ್ದಾರೆ. ಭಾರತೀಯರು ಅಮೆರಿಕವನ್ನು ‘ಹಾಳು’ ಮಾಡುತ್ತಿದ್ದ, ‘ಭಾರತಕ್ಕೆ ಹಿಂತಿರುಗಿ’ ಎಂದು ಜನಾಂಗೀಯ ನಿಂದನೆ ಮಾಡಿದ್ದಾರೆ. ಘಟನೆ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ನಡೆದಿದೆ.

ದುಷ್ಕರ್ಮಿ ಮಹಿಳೆಯನ್ನು ಎಸ್ಮೆರಾಲ್ಡಾ ಆಪ್ಟನ್ ಎಂದು ಗುರುತಿಸಲಾಗಿದೆ. ಇದೀಗ ಅವರನ್ನು ಪೊಲೀಸರು ಬಂಧಿಸಿದ್ದು ವಿಡಿಯೊದಲ್ಲಿ ಮಹಿಳೆಯು ತಾನು ಮೆಕ್ಸಿಕನ್ ಅಮೆರಿಕನ್ ಎಂದು ಹೇಳಿಕೊಳ್ಳುತ್ತಾರೆ. ವಿಡಿಯೊದಲ್ಲಿ ಅವರು ಭಾರತೀಯ-ಅಮೇರಿಕನ್ ಮಹಿಳೆಯರ ಗುಂಪಿನ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಭಾರತೀಯರನ್ನು ದ್ವೇಷಿಸುತ್ತೇನೆ. ಉತ್ತಮ ಜೀವನ ಬಯಸಿ ಎಲ್ಲಾ ಭಾರತೀಯರು ಅಮೆರಿಕಕ್ಕೆ ಬರುತ್ತಾರೆ. ನೀವು ಭಾರತೀಯರು ಎಲ್ಲೆಡೆ ಇದ್ದೀರಿ” ಎಂದು ಎಸ್ಮೆರಾಲ್ಡಾ ಆಪ್ಟನ್ ವೀಡಿಯೊದಲ್ಲಿ ನಾಲ್ವರು ಭಾರತೀಯ-ಅಮೆರಿಕನ್ ಮಹಿಳೆಯರ ಮೇಲೆ ನಿಂದನೆ ಮಾಡುತ್ತಾ ಹೇಳುತ್ತಾರೆ.

ಇದನ್ನೂ ಓದಿ: ವೈರಲ್‌ ವಿಡಿಯೊ: ಯುಕೆ ಕಾರ್ಯದರ್ಶಿ ಪ್ರೀತಿ ಪಟೇಲ್ ಜನಾಂಗೀಯ ನೀತಿ ಖಂಡಿಸಿ ಪ್ರಜೆಗಳು ಪ್ರತಿಭಟಿಸಿದ್ದು ಹೀಗೆ

“ನೀವು ಭಾರತಕ್ಕೆ ಹಿಂತಿರುಗಿ. ನೀವು *** ಈ ದೇಶವನ್ನು ಹಾಳು ಮಾಡುತ್ತಿದ್ದೀರಿ” ಎಂದು ಮಹಿಳೆಯು ಭಾರತೀಯರ ಗುಂಪಿಗೆ ಅವಾಚ್ಯ ನಿಂದನೆ ಮಾಡುತ್ತಾ ಹೇಳುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಅಮೆರಿಕದಾದ್ಯಂತ ಭಾರತೀಯ-ಅಮೆರಿಕನ್ ಸಮುದಾಯದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಆರೋಪಿ ಎಸ್ಮೆರಾಲ್ಡಾ ಆಪ್ಟನ್ ಜನಾಂಗೀಯ ನಿಂದನೆಗಳನ್ನು ಮಾಡುವುದು ವೀಡಿಯೊದಲ್ಲಿ ದಾಖಲಾಗಿದ್ದು, ಒಂದು ಹಂತದಲ್ಲಿ ಅವರು ಇಬ್ಬರು ಭಾರತೀಯ ಮಹಿಳೆಯರ ಮೇಲೆ ದೈಹಿಕವಾಗಿ ಹಲ್ಲೆ ನಡೆಸುತ್ತಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ ವ್ಯಕ್ತಿಯು, “ನನ್ನ ತಾಯಿ ಮತ್ತು ಅವರ ಮೂವರು ಸ್ನೇಹಿತರು ಊಟಕ್ಕೆ ಹೋದ ಸಮಯ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ಘಟನೆ ಸಂಭವಿಸಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಜಾತೀಯತೆ ಮತ್ತು ಜನಾಂಗೀಯವಾದವನ್ನು ಬೆಸೆದು ಶೋಷಣೆಯ ವ್ಯಾಪಕತೆಯನ್ನು ಚರ್ಚಿಸುವ ’ಕ್ಯಾಸ್ಟ್’

ವಿಡಿಯೊದಲ್ಲಿ ಆರೋಪಿ ಮಹಿಳೆಯ ಮಾತುಗಳನ್ನು ಭಾರತೀಯ ಮಹಿಳೆ ವಿರೋಧಿಸುತ್ತಾರೆ, ಜನಾಂಗೀಯ ನಿಂದನೆಗಳನ್ನು ಮಾಡದಂತೆ ವಿನಂತಿಸುತ್ತಾರೆ. ತಾನು ಅಮೆರಿಕದಲ್ಲಿ ಜನಿಸಿದೆ ಎಂದು ಹೇಳುವ ಆರೋಪಿ ಮಹಿಳೆ ಮಹಿಳೆಯರ ಮೇಲೆ ದಾಳಿ ಮಾಡುತ್ತಾರೆ.

“ನಾನು ಎಲ್ಲಿಗೆ ಹೋದರೂ, ನೀವು ಭಾರತೀಯರು ಎಲ್ಲೆಡೆ ಇದ್ದೀರಿ. ಭಾರತದಲ್ಲಿ ಜೀವನವು ತುಂಬಾ ದೊಡ್ಡದಾಗಿದ್ದರೆ, ನೀವು ಯಾಕೆ ಇಲ್ಲಿ ಇದ್ದೀರಿ” ಎಂದು ಆರೋಪಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಜನಾಂಗೀಯ ಹತ್ಯೆಯ ಅಪರಾಧಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶಿಕ್ಷೆ

ಪ್ಲಾನೋ ಪೋಲೀಸ್ ಡಿಟೆಕ್ಟಿವ್ಸ್ ಗುರುವಾರ ಮಧ್ಯಾಹ್ನ ಆರೋಪಿ ಎಸ್ಮೆರಾಲ್ಡಾ ಅಪ್ಟನ್ನ ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಹಲ್ಲೆ, ದೈಹಿಕ ಗಾಯ ಮತ್ತು ಭಯೋತ್ಪಾದಕ ಬೆದರಿಕೆಗಳ ಆರೋಪ ಹೊರಿಸಲಾಗಿದೆ. ಒಟ್ಟು 10,000 ಅಮೇರಿಕನ್ ಡಾಲರ್‌ ಬಾಂಡ್ ಮೊತ್ತದ ಮೇಲೆ ಅವರನ್ನು ಬಂಧಿಸಲಾಗಿದೆ. ಪ್ಲಾನೋ ಪೋಲೀಸ್ ಇಲಾಖೆ ಘಟನೆಯು ದ್ವೇಷದ ಅಪರಾಧ ಎಂದು ತನಿಖೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...