Homeಅಂತರಾಷ್ಟ್ರೀಯವಿದೇಶಿ ವಿದ್ಯಾರ್ಥಿಗಳಿಗೆ ಅಧ್ಯಯನ ನಂತರ ಉಳಿಯಲು ಅನುವು ಮಾಡಿಕೊಡುವ ಕಾಯ್ದೆ ನಿಲ್ಲಿಸಲಿರುವ ಅಮೆರಿಕಾ

ವಿದೇಶಿ ವಿದ್ಯಾರ್ಥಿಗಳಿಗೆ ಅಧ್ಯಯನ ನಂತರ ಉಳಿಯಲು ಅನುವು ಮಾಡಿಕೊಡುವ ಕಾಯ್ದೆ ನಿಲ್ಲಿಸಲಿರುವ ಅಮೆರಿಕಾ

ಸುಮಾರು 80,000 ಭಾರತೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರದಲ್ಲಿ?

- Advertisement -
- Advertisement -

ಅಧ್ಯಯನ ಮುಗಿದ ನಂತರ ಕೆಲವು ಷರತ್ತುಗಳ ಅಡಿಯಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಕೆಲಸಕ್ಕಾಗಿ ದೇಶದಲ್ಲಿ ಉಳಿಯಲು ಅನುವು ಮಾಡಿಕೊಡುವ ನೀತಿಯನ್ನು ತೊಡೆದು ಹಾಕಲು ಅಮೆರಿಕಾ ಸಂಸದರ ಗುಂಪೊಂದು ಸದನದಲ್ಲಿ ಶಾಸನವೊಂದನ್ನು ಪರಿಚಯಿಸಿದೆ. ಒಂದು ವೇಳೆ ಈ ಕಾನೂನು ಅಂಗೀಕಾರವಾದರೆ ಅಮೆರಿಕಾದಲ್ಲಿ ಅಧ್ಯಯನ ಮಾಡುವ ಸಾವಿರಾರು ಭಾರತೀಯರ ಮೇಲೆ ಪರಿಣಾಮ ಬೀರಲಿದೆ ಎಂದು ಪತ್ರಿಕೆಗಳು ವರದಿ ಮಾಡಿವೆ.

ಅಮೆರಿಕಾದ ಬಲಪಂಥೀಯ ಪಕ್ಷವಾದ ರಿಪಬ್ಲಿಕನ್‌ ಪಕ್ಷದ ಸಂಸದರಾದ ಪಾಲ್ ಎ. ಗೋಸರ್, ಮೋ ಬ್ರೂಕ್ಸ್, ಆಂಡಿ ಬಿಗ್ಸ್ ಮತ್ತು ಮ್ಯಾಟ್ ಗೇಟ್ಜ್ ಅವರು ಫೇರ್‌ನೆಸ್‌ ಫಾರ್ ಹೈ-ಸ್ಕಿಲ್ಡ್ ಅಮೆರಿಕನ್ಸ್‌‌ ಕಾಯ್ದೆಯನ್ನು ಪರಿಚಯಿಸಿದ್ದಾರೆ. ಸಂಸದರಾದ ಪಾಲ್ ಎ. ಗೋಸರ್‌‌ ಮೊದಲ ಬಾರಿಗೆ 116 ನೇ ಸಂಸತ್‌ ಅಧಿವೇಶನಲ್ಲಿ ಫೇರ್‌ನೆಸ್ ಫಾರ್ ಹೈ-ಸ್ಕಿಲ್ಡ್ ಅಮೆರಿಕನ್ಸ್‌‌ ಕಾಯ್ದೆಯನ್ನು ಪರಿಚಯಿಸಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಈ ಮಸೂದೆಯು ಆಪ್ಷನಲ್‌ ಪ್ರಾಕ್ಟೀಸ್‌ ಟ್ರೈನಿಂಗ್‌(ಒಪಿಟಿ) ಕುರಿತ ವಲಸೆ ಮತ್ತು ರಾಷ್ಟ್ರೀಯತೆ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತದೆ. ಒಪಿಟಿ ಎಂದರೆ ಅಮೆರಿಕಾ ಇಮಿಗ್ರೇಷನ್ ಮತ್ತು ಕಸ್ಟಮ್ಸ್ ಎನ್ಫೋರ್ಸ್ಮೆಂಟ್ (ಐಸಿಇ) ನಿಂದ ನಿರ್ವಹಿಸಲ್ಪಡುವ ಅತಿಥಿ ಕಾರ್ಮಿಕರ ಕಾರ್ಯಕ್ರಮವಾಗಿದೆ.

ಅಮೆರಿಕಾದಲ್ಲಿ ಒಪಿಟಿ ಕಾರ್ಯಕ್ರಮದ ಅಡಿಯಲ್ಲಿ ಸುಮಾರು 80,000 ಭಾರತೀಯ ವಿದ್ಯಾರ್ಥಿಗಳಿದ್ದಾರೆ ಎಂದು ವರದಿಯಾಗಿದೆ. ಮಸೂದೆಯು ಕಾನೂನಾಗಲು ಅಮೆರಿಕಾ ಅಧ್ಯಕ್ಷರ ಸಹಿ ಅಗತ್ಯವಿದೆ. ಅದಕ್ಕೂ ಮೊದಲು ಮಸೂದೆಯು ಸೆನೆಟ್‌ನಲ್ಲಿ ಅಂಗೀಕಾರ ಆಗಬೇಕಾಗುತ್ತದೆ.

ಆದಾಗ್ಯೂ, ಅಮೆರಿಕಾ ಸಂಸತ್‌ನ ಎರಡೂ ಸದನದಲ್ಲಿ ಡೆಮೋಕ್ರಾಟ್‌ ಬಹುಮತವನ್ನು ಹೊಂದಿದ್ದರಿಂದ ಸೆನೆಟ್ ಮೂಲಕ ಮಸೂದೆಯನ್ನು ಅಂಗೀಕರಿಸುವುದು ಅಷ್ಟು ಸುಲಭವಲ್ಲ.

ಒಪಿಟಿಯಿಂದಾಗಿ ವಿದೇಶಿ ವಿದ್ಯಾರ್ಥಿಗಳಾಗಿ ಪ್ರವೇಶ ಪಡೆದ 1 ಲಕ್ಷಕ್ಕೂ ಹೆಚ್ಚು ವಿದೇಶಿಗರು ಪದವಿಯ ನಂತರ ಅಮೆರಿಕಾದಲ್ಲೇ ಮೂರು ವರ್ಷಗಳವರೆಗೆ ಕೆಲಸ ಮಾಡಲು ಅವಕಾಶ ನೀಡುತ್ತದೆ ಎಂದು ಪಾಲ್ ಎ. ಗೋಸರ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ವರದಿ ಆಧರಿಸಿ, ಅಮೆರಿಕಾದಲ್ಲಿ ಮಾಸ್ಕ್ ನಿಯಮ: ಅಮೆರಿಕಾ ಸಂಸದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...