Homeಅಂತರಾಷ್ಟ್ರೀಯವಿದೇಶಿ ವಿದ್ಯಾರ್ಥಿಗಳಿಗೆ ಅಧ್ಯಯನ ನಂತರ ಉಳಿಯಲು ಅನುವು ಮಾಡಿಕೊಡುವ ಕಾಯ್ದೆ ನಿಲ್ಲಿಸಲಿರುವ ಅಮೆರಿಕಾ

ವಿದೇಶಿ ವಿದ್ಯಾರ್ಥಿಗಳಿಗೆ ಅಧ್ಯಯನ ನಂತರ ಉಳಿಯಲು ಅನುವು ಮಾಡಿಕೊಡುವ ಕಾಯ್ದೆ ನಿಲ್ಲಿಸಲಿರುವ ಅಮೆರಿಕಾ

ಸುಮಾರು 80,000 ಭಾರತೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರದಲ್ಲಿ?

- Advertisement -
- Advertisement -

ಅಧ್ಯಯನ ಮುಗಿದ ನಂತರ ಕೆಲವು ಷರತ್ತುಗಳ ಅಡಿಯಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಕೆಲಸಕ್ಕಾಗಿ ದೇಶದಲ್ಲಿ ಉಳಿಯಲು ಅನುವು ಮಾಡಿಕೊಡುವ ನೀತಿಯನ್ನು ತೊಡೆದು ಹಾಕಲು ಅಮೆರಿಕಾ ಸಂಸದರ ಗುಂಪೊಂದು ಸದನದಲ್ಲಿ ಶಾಸನವೊಂದನ್ನು ಪರಿಚಯಿಸಿದೆ. ಒಂದು ವೇಳೆ ಈ ಕಾನೂನು ಅಂಗೀಕಾರವಾದರೆ ಅಮೆರಿಕಾದಲ್ಲಿ ಅಧ್ಯಯನ ಮಾಡುವ ಸಾವಿರಾರು ಭಾರತೀಯರ ಮೇಲೆ ಪರಿಣಾಮ ಬೀರಲಿದೆ ಎಂದು ಪತ್ರಿಕೆಗಳು ವರದಿ ಮಾಡಿವೆ.

ಅಮೆರಿಕಾದ ಬಲಪಂಥೀಯ ಪಕ್ಷವಾದ ರಿಪಬ್ಲಿಕನ್‌ ಪಕ್ಷದ ಸಂಸದರಾದ ಪಾಲ್ ಎ. ಗೋಸರ್, ಮೋ ಬ್ರೂಕ್ಸ್, ಆಂಡಿ ಬಿಗ್ಸ್ ಮತ್ತು ಮ್ಯಾಟ್ ಗೇಟ್ಜ್ ಅವರು ಫೇರ್‌ನೆಸ್‌ ಫಾರ್ ಹೈ-ಸ್ಕಿಲ್ಡ್ ಅಮೆರಿಕನ್ಸ್‌‌ ಕಾಯ್ದೆಯನ್ನು ಪರಿಚಯಿಸಿದ್ದಾರೆ. ಸಂಸದರಾದ ಪಾಲ್ ಎ. ಗೋಸರ್‌‌ ಮೊದಲ ಬಾರಿಗೆ 116 ನೇ ಸಂಸತ್‌ ಅಧಿವೇಶನಲ್ಲಿ ಫೇರ್‌ನೆಸ್ ಫಾರ್ ಹೈ-ಸ್ಕಿಲ್ಡ್ ಅಮೆರಿಕನ್ಸ್‌‌ ಕಾಯ್ದೆಯನ್ನು ಪರಿಚಯಿಸಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಈ ಮಸೂದೆಯು ಆಪ್ಷನಲ್‌ ಪ್ರಾಕ್ಟೀಸ್‌ ಟ್ರೈನಿಂಗ್‌(ಒಪಿಟಿ) ಕುರಿತ ವಲಸೆ ಮತ್ತು ರಾಷ್ಟ್ರೀಯತೆ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತದೆ. ಒಪಿಟಿ ಎಂದರೆ ಅಮೆರಿಕಾ ಇಮಿಗ್ರೇಷನ್ ಮತ್ತು ಕಸ್ಟಮ್ಸ್ ಎನ್ಫೋರ್ಸ್ಮೆಂಟ್ (ಐಸಿಇ) ನಿಂದ ನಿರ್ವಹಿಸಲ್ಪಡುವ ಅತಿಥಿ ಕಾರ್ಮಿಕರ ಕಾರ್ಯಕ್ರಮವಾಗಿದೆ.

ಅಮೆರಿಕಾದಲ್ಲಿ ಒಪಿಟಿ ಕಾರ್ಯಕ್ರಮದ ಅಡಿಯಲ್ಲಿ ಸುಮಾರು 80,000 ಭಾರತೀಯ ವಿದ್ಯಾರ್ಥಿಗಳಿದ್ದಾರೆ ಎಂದು ವರದಿಯಾಗಿದೆ. ಮಸೂದೆಯು ಕಾನೂನಾಗಲು ಅಮೆರಿಕಾ ಅಧ್ಯಕ್ಷರ ಸಹಿ ಅಗತ್ಯವಿದೆ. ಅದಕ್ಕೂ ಮೊದಲು ಮಸೂದೆಯು ಸೆನೆಟ್‌ನಲ್ಲಿ ಅಂಗೀಕಾರ ಆಗಬೇಕಾಗುತ್ತದೆ.

ಆದಾಗ್ಯೂ, ಅಮೆರಿಕಾ ಸಂಸತ್‌ನ ಎರಡೂ ಸದನದಲ್ಲಿ ಡೆಮೋಕ್ರಾಟ್‌ ಬಹುಮತವನ್ನು ಹೊಂದಿದ್ದರಿಂದ ಸೆನೆಟ್ ಮೂಲಕ ಮಸೂದೆಯನ್ನು ಅಂಗೀಕರಿಸುವುದು ಅಷ್ಟು ಸುಲಭವಲ್ಲ.

ಒಪಿಟಿಯಿಂದಾಗಿ ವಿದೇಶಿ ವಿದ್ಯಾರ್ಥಿಗಳಾಗಿ ಪ್ರವೇಶ ಪಡೆದ 1 ಲಕ್ಷಕ್ಕೂ ಹೆಚ್ಚು ವಿದೇಶಿಗರು ಪದವಿಯ ನಂತರ ಅಮೆರಿಕಾದಲ್ಲೇ ಮೂರು ವರ್ಷಗಳವರೆಗೆ ಕೆಲಸ ಮಾಡಲು ಅವಕಾಶ ನೀಡುತ್ತದೆ ಎಂದು ಪಾಲ್ ಎ. ಗೋಸರ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ವರದಿ ಆಧರಿಸಿ, ಅಮೆರಿಕಾದಲ್ಲಿ ಮಾಸ್ಕ್ ನಿಯಮ: ಅಮೆರಿಕಾ ಸಂಸದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....