Homeಅಂತರಾಷ್ಟ್ರೀಯಅಮೆರಿಕಾ ಪ್ರೇರಿತ ದಂಗೆಗೆ ಮತ್ತೊಮ್ಮೆ ತಿರುಗೇಟು ನೀಡಿ ವಿಫಲಗೊಳಿಸಿದ ವೆನಿಜುವೆಲಾ ಜನತೆ

ಅಮೆರಿಕಾ ಪ್ರೇರಿತ ದಂಗೆಗೆ ಮತ್ತೊಮ್ಮೆ ತಿರುಗೇಟು ನೀಡಿ ವಿಫಲಗೊಳಿಸಿದ ವೆನಿಜುವೆಲಾ ಜನತೆ

- Advertisement -
- Advertisement -

| ಭರತ್ ಹೆಬ್ಬಾಳ್ |

 

 

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಜಗತ್ತಿನ ಹಲವೆಡೆ ಪ್ರಜಾತಾಂತ್ರಿಕ ಆಡಳಿತವನ್ನು ಬೆಂಬಲಿಸುವ ಮುಖವಾಡ ಹೊತ್ತು ತನಗೆ ವಿರುದ್ಧವಾಗಿರುವ ಚುನಾಯಿತ ಸರ್ಕಾರಗಳನ್ನೇ ಕಿತ್ತು ಹಾಕುವ ಕೆಲಸವನ್ನು ಅಮೆರಿಕಾ ಮಾಡುತ್ತಾ ಬರುತ್ತಿದೆ. ಈಗ ಆ ಕೆಲಸವನ್ನು ಟ್ರಂಪ್ ಮಾಡುತ್ತಿದ್ದಾರಷ್ಟೆ. ಅಂತಹ ಯತ್ನವನ್ನು ಮತ್ತೊಮ್ಮೆ ವೆನಿಜುವೆಲದಲ್ಲಿ ಮಾಡಲು ಹೋಗಿ, ಅಲ್ಲಿನ ಜನತೆ ತಿರುಗೇಟು ನೀಡಿ, ತಮ್ಮ ಸರ್ಕಾರವನ್ನು ಉಳಿಸಿಕೊಂಡಿರುವುದರ ಕುರಿತು ‘ಭರತ್ ಹೆಬ್ಬಾಳ’ ಬರೆದಿದ್ದಾರೆ.

ವೆನಿಜುವೆಲದಲ್ಲಿ ನಿಕೊಲಸ್ ಮಡುರೋ ಅವರ ನೇತೃತ್ವದ ಪ್ರಜಾಸತ್ತಾತ್ಮಕವಾಗಿ ಆಯ್ಕೆಗೊಂಡ ಸರ್ಕಾರವನ್ನು ಅಮೆರಿಕ ಆಡಳಿತದ ನೆರವಿನಿಂದ ಕಿತ್ತೊಗೆಯಲು ಯತ್ನಿಸಿದ ಜುಯಾನ್ ಗುಯುಡೋಯ ‘ಕ್ಷಿಪ್ರ’ ದಂಗೆ ಮತ್ತೆ ವಿಫಲವಾಗಿದೆ. ಇದು ಅಂತರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಅಷ್ಟೇ ಅಲ್ಲ, ಜಗತ್ತಿನಾದ್ಯಂತ ಸಮಾಜಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಅಧ:ಪತನ ಹೊಂದುತ್ತಿರುವ ವಿದ್ಯಮಾನದ ಪ್ರತಿಫಲನವೂ ಆಗಿದೆ. ಒಂದು ಶತಮಾನದೀಂದ ನಡೆಯುತ್ತಿರುವ ಅಮೆರಿಕದ ಈ ಹುನ್ನಾರವು ಹಾಲಿವುಡ್ ಸೇರಿದಂತೆ ಜಗತ್ತಿನ ಮುಖ್ಯವಾಹಿನಿ ಮಾಧ್ಯಮಗಳಿಂದ ನಿರ್ಲಕ್ಷಿಸಲ್ಪಟ್ಟಿದೆ, ಇಲ್ಲವೇ ತಪ್ಪಾಗಿ ಬಿಂಬಿಸಲ್ಪಟ್ಟಿದೆ.

1999ರಲ್ಲಿ ಹ್ಯೂಗೋ ಚಾವೇಜ್ ನಾಯಕತ್ವದಲ್ಲಿ ಜಾರಿಗೆ ಬಂದ ‘ಬೊಲೆವಿರಿಯನ್ ಕ್ರಾಂತಿ’ಯನ್ನು, ಅದರ ಹಿಂದಿನ ಸದಾಶಯವನ್ನು ಒಡೆದು ಹಾಕಲು ಅಮೆರಿಕ ಹತಾಶೆಯಲ್ಲಿ ವಿಫಲ ಯತ್ನಗಳನ್ನು ಮಾಡುತ್ತಲೇ ಇದೆ. ಇಂಥದ್ದೇ ‘ಕ್ಷಿಪ್ರ ದಂಗೆ’ಗಳನ್ನು 2002ರಲ್ಲಿ ಚಾವೇಜ್ ವಿರುದ್ಧ, 2016ರಲ್ಲಿ ಮಡುರೋ ವಿರುದ್ಧ ನಡೆಸಲು ಅಮೆರಿಕಾ ಯತ್ನಿಸಿದಾಗ ಅದನ್ನು ಅಲ್ಲಿಯ ಜನತೆ ಸೋಲಿಸಿದ್ದಾರೆ.

ಅಮೆರಿಕದಿಂದ ಮಧ್ಯಂತರ ಅಧ್ಯಕ್ಷನೆಂದು ಘೋಷಿಸಲ್ಪಟ್ಟ ಜುಯಾನ್ ಗುಯುಡೋ ಏಪ್ರಿಲ್ 30ರಂದು ವಿಡಿಯೊ ಮೂಲಕ ಪ್ರತ್ಯಕ್ಷನಾದ. ತನ್ನ ಜೊತೆ ಮಿಲಿಟರಿ ಇದೆ ಎಂದು ತೋರಿಸಲೆಂದೇ ದೊಡ್ಡ ಸಂಖ್ಯೆಯಲ್ಲಿ ಸಶಸ್ತ್ರ ಸೈನಿಕರನ್ನೂ ಇಟ್ಟುಕೊಂಡು, ಮಿಲಿಟರಿ ಕ್ಷಿಪ್ರ ದಂಗೆಯ ಸುಳಿವನ್ನು ನೀಡಿದ. ಈ ವಿಡಿಯೋವನ್ನು ರಾಜಧಾನಿ ಕಾರಾಕಸ್‍ನ ‘ಜನರಿಲಸ್ಮೊ ಫ್ರಾಂಕಿಸ್ಕೊ ಡಿ ಮೆರಂಡೊ ಏರ್‍ಬೇಸ್‍ನಲ್ಲಿ ಚಿತ್ರೀಕರಿಸಲಾಗಿತ್ತು. ಸರ್ಕಾರಿ ವಿರೋಧಿ ದಂಗೆಗಳಲ್ಲಿ ಹಿಂಸೆಯನ್ನು ಉತ್ತೇಜಿಸಿದ ಕಾರಣಕ್ಕಾಗಿ ಗೃಹಬಂಧನಕ್ಕೆ ಒಳಗಾಗಿದ್ದ ವಿರೋಧ ಪಕ್ಷದ ನಾಯಕ ಲಿಯೊಪೊಲ್ಡೊ ಲೊಪೆಜ್ ಕೂಡ ಗುಯುಡೋ ಜೊತೆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ. ಅಮೆರಿಕ ಅಧ್ತಕ್ಷ ಟ್ರಂಪ್, ಉಪಾಧ್ಯಕ್ಷ ಪೆನ್ಸ್ ಮತ್ತು ರಾಷ್ಟ್ರೀಯ ಸುರಕ್ಷತಾ ಸಲಹೆಗಾರ ಜಾನ್ ಬೊಲ್ಟನ್ ಕೂಡಲೇ ಟ್ವೀಟ್ ಮಾಡಿ, ಮಿಲಿಟರಿ ದಂಗೆಯ ಸಾಧ್ಯತೆಯ ಬಗ್ಗೆ, ವೆನಿಜುವೆಲದ ಶಾಸನಬದ್ಧ ಸರ್ಕಾರದ ವಿರುದ್ಧ ಮಿಲಿಟರಿ ಕ್ರಮದ ಬಗ್ಗೆ ಎಚ್ಚರಿಕೆ ನೀಡಿ ಜನರ ಬೆಂಬಲವನ್ನು ಕೇಳಿದ್ದರು. ಈ ಅಮೆರಿಕ ಬೆಂಬಲಿತ ಉದ್ದೇಶಿತ ಕ್ಷಿಪ್ರ ದಂಗೆಯ ಯತ್ನಕ್ಕೆ ‘ಆಪರೇಷನ್ ಲಿಬಿರ್ಟಿ’ ಎಂದು ಹೆಸರಿಸಲಾಗಿತ್ತು. ಇದಕ್ಕೆ ಅಮೆರಿಕದ ನಾಯಕರು, ಅಧಿಕಾರಿಗಳು ಮತ್ತು ಅಮೆರಿಕದ ಸ್ನೇಹಿತರಾದ ಲ್ಯಾಟಿನ್ ಅಮೆರಿಕದ ಕೆಲವು ದೇಶಗಳ ನಾಯಕರು ಧ್ವನಿಗೂಡಿಸಿದ್ದರು.

ಆದರೆ ಉದ್ದೇಶಿಸಿದಂತೆ ಈ ಕ್ಷಿಪ್ರ ದಂಗೆ ಸಫಲವಾಗಲಿಲ್ಲ. ಗುಯುಡೋ ಪ್ರತಿಪಾದಿಸಿದಂತೆ, ಆತನ ಬೆಂಬಲಿಗರು ‘ಜನರಿಲಸ್ಮೊ ಫ್ರಾಂಕಿಸ್ಕೊ ಡಿ ಮೆರಂಡೊ ಏರ್‍ಬೇಸ್’ ಅನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಮೊದಲ ಅರ್ಧ ದಿನ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಏರ್‍ಬೇಸ್‍ನ ಹೊರಗಿನ ಮುಖ್ಯ ಬೀದಿ ಮತ್ತು ಮಿಲಿಟರಿ ನೆಲೆಗಳಿದ್ದ ಹೈವೇಯಲ್ಲಿ ಪ್ರತಿಭಟನೆ ನಡೆಸಿದರು. ಸಂಜೆ ಹೊತ್ತಿಗೆ ಅಲ್ಲಿಂದ ಹೆಚ್ಚೂ ಕಡಿಮೆ ಎಲ್ಲ ಪ್ರತಿಭಟನಾಕಾರರನ್ನು ತೆರವು ಮಾಡಲಾಗಿತು. ಕೆಲವು ದಂಗೆಕೋರರು ಅಧ್ಯಕ್ಷರ ಕಾರ್ಯಕ್ಷೇತ್ರವಾದ ಪೆಲಾಸಿಯೊ ಡಿ ಮೆರಫ್ಲೊರ್ಸ್ ಕಡೆಗೆ ನುಗ್ಗಲು ಯತ್ನಿಸಿದರಾದರೂ, ಅದನ್ನು ವಿಧ್ವಂಸ ಮಾಡುವಷ್ಟು ಸಶಕ್ತರಾಗಿರಲಿಲ್ಲ. ಇಡೀ ದಿನ ಅಮೆರಿಕದ ಅಧಿಕಾರಿಗಳು ತಮ್ಮ ಹೇಳಿಕೆಯ ಮೂಲಕ ಮತ್ತು ಅಮೆರಿಕದ ಚಾನೆಲ್ಲುಗಳು ತಮ್ಮ ಸ್ಟೋರಿಗಳ ಮೂಲಕ, ಪ್ರಜಾಪ್ರಭುತ್ವ ಜಯದ ಹಾದಿಯಲ್ಲಿದೆ ಎಂದೂ, ಅಧ್ಯಕ್ಷ ಮದುರೋ ರಷ್ಯಾಕ್ಕೆ ಓಡಿ ಹೋಗುವ ಯತ್ನದಲ್ಲಿದ್ದಾರೆ ಎಂದು ಪ್ರತಿಪಾದಿಸಿದವು. ಆದರೆ ಇದ್ಯಾವುದೂ ಸಾಧ್ಯವಾಗಲಿಲ್ಲ. ಸ್ಥಳೀಯ ಜನರ ಬೆಂಬಲವಿಲ್ಲದ ಕಾರಣದಿಂದ ಗುಯಡೋ ನಡೆಸಿದ ಎರಡನೇ ವಿಫಲ ಕ್ಷಿಪ್ರ ದಂಗೆ ಇದಾಗಿತ್ತು.

ತನ್ನ ಮೂರನೇ ಯತ್ನದಲ್ಲಿ, ಮೇ 1 ಅಂತರಾಷ್ಟ್ರೀಯ ಕಾರ್ಮಿಕ ದಿನದಂದು ಸರ್ಕಾರವನ್ನು ಕಿತ್ತೊಗೆಯಲು ಜುಯಾನ್ ಗುಯಡೊ ಸಾಮಾಜಿಕ ಜಾಲತಾಣಗಳ ಮೂಲಕ ಕರೆ ಕೊಟ್ಟ. ಆದರೆ ಸರ್ಕಾರದ ಪರ ಕಾರ್ಮಿಕರು ಮತ್ತು ಎಡ ಸಂಘಟನೆಗಳ ಜನರು ಬೀದಿಗೆ ಬಂದಿದ್ದರಿಂದ ಗುಯಡೋನ ಮೂರನೇ ಯತ್ನವೂ ವಿಫಲವಾಗಿತು. ಅಮೆರಿಕದ ಸಂಚನ್ನು ವಿಫಲಗೊಳಿಸಲು ಜನ ಸಂಘಟಿತರಾಗಬೇಕು ಎಂದು ಅಧ್ಯಕ್ಷ ಮದುರೋ ಕರೆ ಕೊಟ್ಟರು. ಅಮೆರಿಕ ಘೋಷಿತ ಅಧ್ಯಕ್ಷನನ್ನು ಸೇನೆಯು ತಿರಸ್ಕರಿಸಿದೆ ಎಂದು ರಕ್ಷಣಾ ಸಚಿವ ವ್ಲಾಡಿಮಿರ್ ಪಡ್ರಿನೊ ಮತ್ತೆ ಸ್ಪಷ್ಟಪಡಿಸಿದರು. ವಿಶ್ವಸಂಸ್ಥೆ ರಾಯಭಾರಿ ವೆನಿಜುವೆಲದ ಸ್ಯಾಮುಯೆಲ್ ಮೊಂಕಡಾ, ‘ವೆನಿಜುವೆಲದಲ್ಲಿ ವಿದೇಶಿ ಶಕ್ತಿಗಳು ನಾಗರಿಕ ಯುದ್ಧ ಸೃಷ್ಟಿಸಲು ಸಂಚು ಮಾಡಿವೆ’ ಎಂದು ದೂರಿದರು. ನಂಬಲರ್ಹ ವರದಿಗಳ ಪ್ರಕಾರ, ಗುಯಡೊ ಜೊತೆ ಶಾಮೀಲಾದ ಸೈನಿಕರು ಮತ್ತು ಸುರಕ್ಷತಾ ಅಧಿಕಾರಿಗಳ ಸಂಖ್ಯೆ ಕೇವಲ 80ರಿಂದ 100 ಮಾತ್ರ. ಗುಯಡೊ ಬೆಂಬಲಕ್ಕೆ ನಿಂತ ಸೈನಿಕರ ಸಣ್ಣ ಗುಂಪನ್ನು ವೆನಿಜುವೆಲ ಸರ್ಕಾರವು ದೇಶದ್ರೋಹಿಗಳೆಂದು ಗುರುತಿಸಿದೆ. ರಾಜಧಾನಿ ಸುತ್ತ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕ್ಷಿಪ್ರ ಸೇನಾದಂಗೆಗೆ ಬೆಂಬಲ ನೀಡುವ ವರದಿ ಮಾಡುತ್ತಿದ್ದ ಸಿಎನ್‍ಎನ್ ಮತ್ತು ಬಿಬಿಸಿಗಳನ್ನು ನಿಷೇಧಿಸಲಾಗಿದೆ.

ವಿದೇಶಗಳ ನೇರ ಬೆಂಬಲವಿಲ್ಲದೇ ಗುಯಡೊ ಮತ್ತು ಬೆಂಬಲಿಗರು ಅಧಿಕಾರ ಪಡೆಯುವುದು ಅಸಾಧ್ಯ ಅನಿಸುತ್ತದೆ. ಅಂತಹ ಬೆಂಬಲ ಅಮೆರಿಕ ನೇತೃತ್ವದ ಗುಂಪಿನ ಅತಿಕ್ರಮಣದಿಂದ ಮಾತ್ರ ಸಾಧ್ಯ. ‘ಬ್ಲ್ಯಾಕ್ ವಾಟರ್’ ಎಂಬ ಖಾಸಗಿ ಸೇನೆ ಸ್ಥಾಪಿಸಿದ ನಟೋರಿಯಸ್ ಎರಿಕ್ ಪ್ರಿನ್ಸ್, ಸರ್ಕಾರದ ವಿರುದ್ಧದ ದಂಗೆಗೆ 5 ಸಾವಿರ ಸೈನಿಕರನ್ನು ನಿಯೋಜಿಸಿ ಎಂದು ಅಮೆರಿಕಕ್ಕೆ ಸಲಹೆ ನೀಡಿದ್ದಾನೆ ಎಂದು ಕೆಲವು ವರದಿಗಳು ಹೇಳುತ್ತಿವೆ.

ಅಕ್ರಮ ದಿಗ್ಬಂಧನಗಳ ಮೂಲಕ ಎರಡು ದಶಕಗಳ ಕಾಲ ವೆನಿಜುವೆಲದ ಆರ್ಥಿಕತೆಯನ್ನು ಡೋಲಾಯಮಾನ ಮಾಡಿ, ಲಕ್ಷಾಂತರ ಜನರನ್ನು ಹಸಿವಿಗೆ ದೂಡಿದ ಅಮೆರಿಕ ಈಗ ಪ್ರಜಾತಂತ್ರದ ಬಗ್ಗೆ ಮಾತಾಡುತ್ತಿರುವುದು ಚೋದ್ಯ. ‘ವೆನಿಜುವೆಲದಲ್ಲಿ ಅಲ್ಲಿನ ಜನರ ಆಡಳಿತವೇ ಇರಬೇಕು, ಬಾಹ್ಯ ಶಕ್ತಿಗಳು ಆಡಳಿತ ನಡೆಸಲು ನಾವು ಬಯಸುವುದಿಲ್ಲ’ ಎಂದು ಈಗ ಅಮೆರಿಕದ ರಾಷ್ಟ್ರೀಯ ಸುರಕ್ಷತಾ ಸಲಹಾಗಾರ ಜಾನ್ ಬೋಲ್ಟನ್ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಮುಗ್ಧ ನಾಗರಿಕರ ವಿರುದ್ಧ ಸಶಸ್ತ್ರ ಸೇನೆಯನ್ನು ಬಳಸಬಾರದು ಎಂದು ಬೋಲ್ಟನ್ ಅಧ್ಯಕ್ಷ ಮರುಡೊಗೆ ಎಚ್ಚರಿಸಿದ್ದಾರೆ. ಬೋಲ್ಟನ್ ಹೇಳುವ ‘ಮುಗ್ಧ ನಾಗರಿಕರು’ ಎಂದರೆ ಚುನಾಯಿತ ಸರ್ಕಾರವನ್ನು ಕಿತ್ತೊಗೆಯಲು, ಸ್ವಘೋಷಿತ ಅಧ್ಯಕ್ಷ ಗುಯಡೊನನ್ನು ಬೆಂಬಲಿಸಲು ಹಿಂಸೆಯನ್ನು ಸೃಷ್ಟಿಸುತ್ತಿರುವ ಕೆಲವು ಸೈನಿಕರು ಮತ್ತು ಪಶ್ಚಿಮ ಬೆಂಬಲಿತ ದಂಗೆಕೋರರ ಸಣ್ಣ ಗುಂಪು ಅಷ್ಟೇ.

ಮಡುರೋ ಏನೂ ಚಾವೆಜ್ ಅಲ್ಲ. ಮಡುರೊ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರವಿದ್ದರೂ, ಅಲ್ಲಿನ ಬಹುಪಾಲು ಜನತೆ ಬೊಲಿವೆರಿಯನ್ ಕ್ರಾಂತಿಗೆ ಬದ್ಧರಾಗಿದ್ದು, ಪ್ರಜಾತಾಂತ್ರಿಕವಾಗಿ ಆಯ್ಕೆಗೊಂಡ ಮಡುರೊ ಸರ್ಕಾರದ ಪರವಾಗಿಯೇ ಇದ್ದಾರೆ. ವೆನಿಜುವೆಲದಲ್ಲಿ ಅಮೆರಿಕದ ಸೇನಾತ್ಮಕ ಅತಿಕ್ರಮಣವನ್ನು ಸಹಿಸುವುದಿಲ್ಲ ಎಂದು ಅಧ್ಯಕ್ಷ ಮಡುರೊ ಎಚ್ಚರಿಸಿದ್ದಾರೆ. ಅಫಘಾನಿಸ್ತಾನ, ಸಿರಿಯಾ, ಇರಾಕ್, ಲಿಬ್ಯಾ, ಯೆಮೆನ್‍ಗಳಲ್ಲಿ ಹಸ್ತಕ್ಷೇಪ, ಅತಿಕ್ರಮಣ ನಡೆಸಿದ್ದ, ಈಗ ಇರಾನ್ ವಿರುದ್ಧ ಹೊಸ ಯುದ್ಧಕ್ಕೆ ಸಂಚು ಮಾಡುತ್ತಿರುವ ಅಮೆರಿಕ ವೆನಿಜುವೆಲದ ಮಡುರೊ ಸರ್ಕಾರವನ್ನು ಬೀಳಿಸುವ ಯತ್ನವನ್ನೂ ಮಾಡುತ್ತಿದೆ. ಜಗತ್ತಿನ ಎಲ್ಲೆಡೆ ಪ್ರಜಾತಾಂತ್ರಿಕ ಆಡಳಿತವನ್ನು ಬೆಂಬಲಿಸುವ ಮುಖವಾಡ ಹೊತ್ತ ಟ್ರಂಪ್ ನೇತೃತ್ವದ ಆಡಳಿತವು ಹಸ್ತಕ್ಷೇಪದ ಮೂಲಕ ಜಗತ್ತಿನ ಎಲ್ಲ ಮೂಲೆಗಳನ್ನು ನಿಯಂತ್ರಿಸುವ ದುಸ್ಸಾಹಸ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...