Homeಅಂತರಾಷ್ಟ್ರೀಯಅಮೆರಿಕಾ ಪ್ರೇರಿತ ದಂಗೆಗೆ ಮತ್ತೊಮ್ಮೆ ತಿರುಗೇಟು ನೀಡಿ ವಿಫಲಗೊಳಿಸಿದ ವೆನಿಜುವೆಲಾ ಜನತೆ

ಅಮೆರಿಕಾ ಪ್ರೇರಿತ ದಂಗೆಗೆ ಮತ್ತೊಮ್ಮೆ ತಿರುಗೇಟು ನೀಡಿ ವಿಫಲಗೊಳಿಸಿದ ವೆನಿಜುವೆಲಾ ಜನತೆ

- Advertisement -
- Advertisement -

| ಭರತ್ ಹೆಬ್ಬಾಳ್ |

 

 

ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಜಗತ್ತಿನ ಹಲವೆಡೆ ಪ್ರಜಾತಾಂತ್ರಿಕ ಆಡಳಿತವನ್ನು ಬೆಂಬಲಿಸುವ ಮುಖವಾಡ ಹೊತ್ತು ತನಗೆ ವಿರುದ್ಧವಾಗಿರುವ ಚುನಾಯಿತ ಸರ್ಕಾರಗಳನ್ನೇ ಕಿತ್ತು ಹಾಕುವ ಕೆಲಸವನ್ನು ಅಮೆರಿಕಾ ಮಾಡುತ್ತಾ ಬರುತ್ತಿದೆ. ಈಗ ಆ ಕೆಲಸವನ್ನು ಟ್ರಂಪ್ ಮಾಡುತ್ತಿದ್ದಾರಷ್ಟೆ. ಅಂತಹ ಯತ್ನವನ್ನು ಮತ್ತೊಮ್ಮೆ ವೆನಿಜುವೆಲದಲ್ಲಿ ಮಾಡಲು ಹೋಗಿ, ಅಲ್ಲಿನ ಜನತೆ ತಿರುಗೇಟು ನೀಡಿ, ತಮ್ಮ ಸರ್ಕಾರವನ್ನು ಉಳಿಸಿಕೊಂಡಿರುವುದರ ಕುರಿತು ‘ಭರತ್ ಹೆಬ್ಬಾಳ’ ಬರೆದಿದ್ದಾರೆ.

ವೆನಿಜುವೆಲದಲ್ಲಿ ನಿಕೊಲಸ್ ಮಡುರೋ ಅವರ ನೇತೃತ್ವದ ಪ್ರಜಾಸತ್ತಾತ್ಮಕವಾಗಿ ಆಯ್ಕೆಗೊಂಡ ಸರ್ಕಾರವನ್ನು ಅಮೆರಿಕ ಆಡಳಿತದ ನೆರವಿನಿಂದ ಕಿತ್ತೊಗೆಯಲು ಯತ್ನಿಸಿದ ಜುಯಾನ್ ಗುಯುಡೋಯ ‘ಕ್ಷಿಪ್ರ’ ದಂಗೆ ಮತ್ತೆ ವಿಫಲವಾಗಿದೆ. ಇದು ಅಂತರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಅಷ್ಟೇ ಅಲ್ಲ, ಜಗತ್ತಿನಾದ್ಯಂತ ಸಮಾಜಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಅಧ:ಪತನ ಹೊಂದುತ್ತಿರುವ ವಿದ್ಯಮಾನದ ಪ್ರತಿಫಲನವೂ ಆಗಿದೆ. ಒಂದು ಶತಮಾನದೀಂದ ನಡೆಯುತ್ತಿರುವ ಅಮೆರಿಕದ ಈ ಹುನ್ನಾರವು ಹಾಲಿವುಡ್ ಸೇರಿದಂತೆ ಜಗತ್ತಿನ ಮುಖ್ಯವಾಹಿನಿ ಮಾಧ್ಯಮಗಳಿಂದ ನಿರ್ಲಕ್ಷಿಸಲ್ಪಟ್ಟಿದೆ, ಇಲ್ಲವೇ ತಪ್ಪಾಗಿ ಬಿಂಬಿಸಲ್ಪಟ್ಟಿದೆ.

1999ರಲ್ಲಿ ಹ್ಯೂಗೋ ಚಾವೇಜ್ ನಾಯಕತ್ವದಲ್ಲಿ ಜಾರಿಗೆ ಬಂದ ‘ಬೊಲೆವಿರಿಯನ್ ಕ್ರಾಂತಿ’ಯನ್ನು, ಅದರ ಹಿಂದಿನ ಸದಾಶಯವನ್ನು ಒಡೆದು ಹಾಕಲು ಅಮೆರಿಕ ಹತಾಶೆಯಲ್ಲಿ ವಿಫಲ ಯತ್ನಗಳನ್ನು ಮಾಡುತ್ತಲೇ ಇದೆ. ಇಂಥದ್ದೇ ‘ಕ್ಷಿಪ್ರ ದಂಗೆ’ಗಳನ್ನು 2002ರಲ್ಲಿ ಚಾವೇಜ್ ವಿರುದ್ಧ, 2016ರಲ್ಲಿ ಮಡುರೋ ವಿರುದ್ಧ ನಡೆಸಲು ಅಮೆರಿಕಾ ಯತ್ನಿಸಿದಾಗ ಅದನ್ನು ಅಲ್ಲಿಯ ಜನತೆ ಸೋಲಿಸಿದ್ದಾರೆ.

ಅಮೆರಿಕದಿಂದ ಮಧ್ಯಂತರ ಅಧ್ಯಕ್ಷನೆಂದು ಘೋಷಿಸಲ್ಪಟ್ಟ ಜುಯಾನ್ ಗುಯುಡೋ ಏಪ್ರಿಲ್ 30ರಂದು ವಿಡಿಯೊ ಮೂಲಕ ಪ್ರತ್ಯಕ್ಷನಾದ. ತನ್ನ ಜೊತೆ ಮಿಲಿಟರಿ ಇದೆ ಎಂದು ತೋರಿಸಲೆಂದೇ ದೊಡ್ಡ ಸಂಖ್ಯೆಯಲ್ಲಿ ಸಶಸ್ತ್ರ ಸೈನಿಕರನ್ನೂ ಇಟ್ಟುಕೊಂಡು, ಮಿಲಿಟರಿ ಕ್ಷಿಪ್ರ ದಂಗೆಯ ಸುಳಿವನ್ನು ನೀಡಿದ. ಈ ವಿಡಿಯೋವನ್ನು ರಾಜಧಾನಿ ಕಾರಾಕಸ್‍ನ ‘ಜನರಿಲಸ್ಮೊ ಫ್ರಾಂಕಿಸ್ಕೊ ಡಿ ಮೆರಂಡೊ ಏರ್‍ಬೇಸ್‍ನಲ್ಲಿ ಚಿತ್ರೀಕರಿಸಲಾಗಿತ್ತು. ಸರ್ಕಾರಿ ವಿರೋಧಿ ದಂಗೆಗಳಲ್ಲಿ ಹಿಂಸೆಯನ್ನು ಉತ್ತೇಜಿಸಿದ ಕಾರಣಕ್ಕಾಗಿ ಗೃಹಬಂಧನಕ್ಕೆ ಒಳಗಾಗಿದ್ದ ವಿರೋಧ ಪಕ್ಷದ ನಾಯಕ ಲಿಯೊಪೊಲ್ಡೊ ಲೊಪೆಜ್ ಕೂಡ ಗುಯುಡೋ ಜೊತೆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ. ಅಮೆರಿಕ ಅಧ್ತಕ್ಷ ಟ್ರಂಪ್, ಉಪಾಧ್ಯಕ್ಷ ಪೆನ್ಸ್ ಮತ್ತು ರಾಷ್ಟ್ರೀಯ ಸುರಕ್ಷತಾ ಸಲಹೆಗಾರ ಜಾನ್ ಬೊಲ್ಟನ್ ಕೂಡಲೇ ಟ್ವೀಟ್ ಮಾಡಿ, ಮಿಲಿಟರಿ ದಂಗೆಯ ಸಾಧ್ಯತೆಯ ಬಗ್ಗೆ, ವೆನಿಜುವೆಲದ ಶಾಸನಬದ್ಧ ಸರ್ಕಾರದ ವಿರುದ್ಧ ಮಿಲಿಟರಿ ಕ್ರಮದ ಬಗ್ಗೆ ಎಚ್ಚರಿಕೆ ನೀಡಿ ಜನರ ಬೆಂಬಲವನ್ನು ಕೇಳಿದ್ದರು. ಈ ಅಮೆರಿಕ ಬೆಂಬಲಿತ ಉದ್ದೇಶಿತ ಕ್ಷಿಪ್ರ ದಂಗೆಯ ಯತ್ನಕ್ಕೆ ‘ಆಪರೇಷನ್ ಲಿಬಿರ್ಟಿ’ ಎಂದು ಹೆಸರಿಸಲಾಗಿತ್ತು. ಇದಕ್ಕೆ ಅಮೆರಿಕದ ನಾಯಕರು, ಅಧಿಕಾರಿಗಳು ಮತ್ತು ಅಮೆರಿಕದ ಸ್ನೇಹಿತರಾದ ಲ್ಯಾಟಿನ್ ಅಮೆರಿಕದ ಕೆಲವು ದೇಶಗಳ ನಾಯಕರು ಧ್ವನಿಗೂಡಿಸಿದ್ದರು.

ಆದರೆ ಉದ್ದೇಶಿಸಿದಂತೆ ಈ ಕ್ಷಿಪ್ರ ದಂಗೆ ಸಫಲವಾಗಲಿಲ್ಲ. ಗುಯುಡೋ ಪ್ರತಿಪಾದಿಸಿದಂತೆ, ಆತನ ಬೆಂಬಲಿಗರು ‘ಜನರಿಲಸ್ಮೊ ಫ್ರಾಂಕಿಸ್ಕೊ ಡಿ ಮೆರಂಡೊ ಏರ್‍ಬೇಸ್’ ಅನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾದರು. ಮೊದಲ ಅರ್ಧ ದಿನ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಏರ್‍ಬೇಸ್‍ನ ಹೊರಗಿನ ಮುಖ್ಯ ಬೀದಿ ಮತ್ತು ಮಿಲಿಟರಿ ನೆಲೆಗಳಿದ್ದ ಹೈವೇಯಲ್ಲಿ ಪ್ರತಿಭಟನೆ ನಡೆಸಿದರು. ಸಂಜೆ ಹೊತ್ತಿಗೆ ಅಲ್ಲಿಂದ ಹೆಚ್ಚೂ ಕಡಿಮೆ ಎಲ್ಲ ಪ್ರತಿಭಟನಾಕಾರರನ್ನು ತೆರವು ಮಾಡಲಾಗಿತು. ಕೆಲವು ದಂಗೆಕೋರರು ಅಧ್ಯಕ್ಷರ ಕಾರ್ಯಕ್ಷೇತ್ರವಾದ ಪೆಲಾಸಿಯೊ ಡಿ ಮೆರಫ್ಲೊರ್ಸ್ ಕಡೆಗೆ ನುಗ್ಗಲು ಯತ್ನಿಸಿದರಾದರೂ, ಅದನ್ನು ವಿಧ್ವಂಸ ಮಾಡುವಷ್ಟು ಸಶಕ್ತರಾಗಿರಲಿಲ್ಲ. ಇಡೀ ದಿನ ಅಮೆರಿಕದ ಅಧಿಕಾರಿಗಳು ತಮ್ಮ ಹೇಳಿಕೆಯ ಮೂಲಕ ಮತ್ತು ಅಮೆರಿಕದ ಚಾನೆಲ್ಲುಗಳು ತಮ್ಮ ಸ್ಟೋರಿಗಳ ಮೂಲಕ, ಪ್ರಜಾಪ್ರಭುತ್ವ ಜಯದ ಹಾದಿಯಲ್ಲಿದೆ ಎಂದೂ, ಅಧ್ಯಕ್ಷ ಮದುರೋ ರಷ್ಯಾಕ್ಕೆ ಓಡಿ ಹೋಗುವ ಯತ್ನದಲ್ಲಿದ್ದಾರೆ ಎಂದು ಪ್ರತಿಪಾದಿಸಿದವು. ಆದರೆ ಇದ್ಯಾವುದೂ ಸಾಧ್ಯವಾಗಲಿಲ್ಲ. ಸ್ಥಳೀಯ ಜನರ ಬೆಂಬಲವಿಲ್ಲದ ಕಾರಣದಿಂದ ಗುಯಡೋ ನಡೆಸಿದ ಎರಡನೇ ವಿಫಲ ಕ್ಷಿಪ್ರ ದಂಗೆ ಇದಾಗಿತ್ತು.

ತನ್ನ ಮೂರನೇ ಯತ್ನದಲ್ಲಿ, ಮೇ 1 ಅಂತರಾಷ್ಟ್ರೀಯ ಕಾರ್ಮಿಕ ದಿನದಂದು ಸರ್ಕಾರವನ್ನು ಕಿತ್ತೊಗೆಯಲು ಜುಯಾನ್ ಗುಯಡೊ ಸಾಮಾಜಿಕ ಜಾಲತಾಣಗಳ ಮೂಲಕ ಕರೆ ಕೊಟ್ಟ. ಆದರೆ ಸರ್ಕಾರದ ಪರ ಕಾರ್ಮಿಕರು ಮತ್ತು ಎಡ ಸಂಘಟನೆಗಳ ಜನರು ಬೀದಿಗೆ ಬಂದಿದ್ದರಿಂದ ಗುಯಡೋನ ಮೂರನೇ ಯತ್ನವೂ ವಿಫಲವಾಗಿತು. ಅಮೆರಿಕದ ಸಂಚನ್ನು ವಿಫಲಗೊಳಿಸಲು ಜನ ಸಂಘಟಿತರಾಗಬೇಕು ಎಂದು ಅಧ್ಯಕ್ಷ ಮದುರೋ ಕರೆ ಕೊಟ್ಟರು. ಅಮೆರಿಕ ಘೋಷಿತ ಅಧ್ಯಕ್ಷನನ್ನು ಸೇನೆಯು ತಿರಸ್ಕರಿಸಿದೆ ಎಂದು ರಕ್ಷಣಾ ಸಚಿವ ವ್ಲಾಡಿಮಿರ್ ಪಡ್ರಿನೊ ಮತ್ತೆ ಸ್ಪಷ್ಟಪಡಿಸಿದರು. ವಿಶ್ವಸಂಸ್ಥೆ ರಾಯಭಾರಿ ವೆನಿಜುವೆಲದ ಸ್ಯಾಮುಯೆಲ್ ಮೊಂಕಡಾ, ‘ವೆನಿಜುವೆಲದಲ್ಲಿ ವಿದೇಶಿ ಶಕ್ತಿಗಳು ನಾಗರಿಕ ಯುದ್ಧ ಸೃಷ್ಟಿಸಲು ಸಂಚು ಮಾಡಿವೆ’ ಎಂದು ದೂರಿದರು. ನಂಬಲರ್ಹ ವರದಿಗಳ ಪ್ರಕಾರ, ಗುಯಡೊ ಜೊತೆ ಶಾಮೀಲಾದ ಸೈನಿಕರು ಮತ್ತು ಸುರಕ್ಷತಾ ಅಧಿಕಾರಿಗಳ ಸಂಖ್ಯೆ ಕೇವಲ 80ರಿಂದ 100 ಮಾತ್ರ. ಗುಯಡೊ ಬೆಂಬಲಕ್ಕೆ ನಿಂತ ಸೈನಿಕರ ಸಣ್ಣ ಗುಂಪನ್ನು ವೆನಿಜುವೆಲ ಸರ್ಕಾರವು ದೇಶದ್ರೋಹಿಗಳೆಂದು ಗುರುತಿಸಿದೆ. ರಾಜಧಾನಿ ಸುತ್ತ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕ್ಷಿಪ್ರ ಸೇನಾದಂಗೆಗೆ ಬೆಂಬಲ ನೀಡುವ ವರದಿ ಮಾಡುತ್ತಿದ್ದ ಸಿಎನ್‍ಎನ್ ಮತ್ತು ಬಿಬಿಸಿಗಳನ್ನು ನಿಷೇಧಿಸಲಾಗಿದೆ.

ವಿದೇಶಗಳ ನೇರ ಬೆಂಬಲವಿಲ್ಲದೇ ಗುಯಡೊ ಮತ್ತು ಬೆಂಬಲಿಗರು ಅಧಿಕಾರ ಪಡೆಯುವುದು ಅಸಾಧ್ಯ ಅನಿಸುತ್ತದೆ. ಅಂತಹ ಬೆಂಬಲ ಅಮೆರಿಕ ನೇತೃತ್ವದ ಗುಂಪಿನ ಅತಿಕ್ರಮಣದಿಂದ ಮಾತ್ರ ಸಾಧ್ಯ. ‘ಬ್ಲ್ಯಾಕ್ ವಾಟರ್’ ಎಂಬ ಖಾಸಗಿ ಸೇನೆ ಸ್ಥಾಪಿಸಿದ ನಟೋರಿಯಸ್ ಎರಿಕ್ ಪ್ರಿನ್ಸ್, ಸರ್ಕಾರದ ವಿರುದ್ಧದ ದಂಗೆಗೆ 5 ಸಾವಿರ ಸೈನಿಕರನ್ನು ನಿಯೋಜಿಸಿ ಎಂದು ಅಮೆರಿಕಕ್ಕೆ ಸಲಹೆ ನೀಡಿದ್ದಾನೆ ಎಂದು ಕೆಲವು ವರದಿಗಳು ಹೇಳುತ್ತಿವೆ.

ಅಕ್ರಮ ದಿಗ್ಬಂಧನಗಳ ಮೂಲಕ ಎರಡು ದಶಕಗಳ ಕಾಲ ವೆನಿಜುವೆಲದ ಆರ್ಥಿಕತೆಯನ್ನು ಡೋಲಾಯಮಾನ ಮಾಡಿ, ಲಕ್ಷಾಂತರ ಜನರನ್ನು ಹಸಿವಿಗೆ ದೂಡಿದ ಅಮೆರಿಕ ಈಗ ಪ್ರಜಾತಂತ್ರದ ಬಗ್ಗೆ ಮಾತಾಡುತ್ತಿರುವುದು ಚೋದ್ಯ. ‘ವೆನಿಜುವೆಲದಲ್ಲಿ ಅಲ್ಲಿನ ಜನರ ಆಡಳಿತವೇ ಇರಬೇಕು, ಬಾಹ್ಯ ಶಕ್ತಿಗಳು ಆಡಳಿತ ನಡೆಸಲು ನಾವು ಬಯಸುವುದಿಲ್ಲ’ ಎಂದು ಈಗ ಅಮೆರಿಕದ ರಾಷ್ಟ್ರೀಯ ಸುರಕ್ಷತಾ ಸಲಹಾಗಾರ ಜಾನ್ ಬೋಲ್ಟನ್ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಮುಗ್ಧ ನಾಗರಿಕರ ವಿರುದ್ಧ ಸಶಸ್ತ್ರ ಸೇನೆಯನ್ನು ಬಳಸಬಾರದು ಎಂದು ಬೋಲ್ಟನ್ ಅಧ್ಯಕ್ಷ ಮರುಡೊಗೆ ಎಚ್ಚರಿಸಿದ್ದಾರೆ. ಬೋಲ್ಟನ್ ಹೇಳುವ ‘ಮುಗ್ಧ ನಾಗರಿಕರು’ ಎಂದರೆ ಚುನಾಯಿತ ಸರ್ಕಾರವನ್ನು ಕಿತ್ತೊಗೆಯಲು, ಸ್ವಘೋಷಿತ ಅಧ್ಯಕ್ಷ ಗುಯಡೊನನ್ನು ಬೆಂಬಲಿಸಲು ಹಿಂಸೆಯನ್ನು ಸೃಷ್ಟಿಸುತ್ತಿರುವ ಕೆಲವು ಸೈನಿಕರು ಮತ್ತು ಪಶ್ಚಿಮ ಬೆಂಬಲಿತ ದಂಗೆಕೋರರ ಸಣ್ಣ ಗುಂಪು ಅಷ್ಟೇ.

ಮಡುರೋ ಏನೂ ಚಾವೆಜ್ ಅಲ್ಲ. ಮಡುರೊ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರವಿದ್ದರೂ, ಅಲ್ಲಿನ ಬಹುಪಾಲು ಜನತೆ ಬೊಲಿವೆರಿಯನ್ ಕ್ರಾಂತಿಗೆ ಬದ್ಧರಾಗಿದ್ದು, ಪ್ರಜಾತಾಂತ್ರಿಕವಾಗಿ ಆಯ್ಕೆಗೊಂಡ ಮಡುರೊ ಸರ್ಕಾರದ ಪರವಾಗಿಯೇ ಇದ್ದಾರೆ. ವೆನಿಜುವೆಲದಲ್ಲಿ ಅಮೆರಿಕದ ಸೇನಾತ್ಮಕ ಅತಿಕ್ರಮಣವನ್ನು ಸಹಿಸುವುದಿಲ್ಲ ಎಂದು ಅಧ್ಯಕ್ಷ ಮಡುರೊ ಎಚ್ಚರಿಸಿದ್ದಾರೆ. ಅಫಘಾನಿಸ್ತಾನ, ಸಿರಿಯಾ, ಇರಾಕ್, ಲಿಬ್ಯಾ, ಯೆಮೆನ್‍ಗಳಲ್ಲಿ ಹಸ್ತಕ್ಷೇಪ, ಅತಿಕ್ರಮಣ ನಡೆಸಿದ್ದ, ಈಗ ಇರಾನ್ ವಿರುದ್ಧ ಹೊಸ ಯುದ್ಧಕ್ಕೆ ಸಂಚು ಮಾಡುತ್ತಿರುವ ಅಮೆರಿಕ ವೆನಿಜುವೆಲದ ಮಡುರೊ ಸರ್ಕಾರವನ್ನು ಬೀಳಿಸುವ ಯತ್ನವನ್ನೂ ಮಾಡುತ್ತಿದೆ. ಜಗತ್ತಿನ ಎಲ್ಲೆಡೆ ಪ್ರಜಾತಾಂತ್ರಿಕ ಆಡಳಿತವನ್ನು ಬೆಂಬಲಿಸುವ ಮುಖವಾಡ ಹೊತ್ತ ಟ್ರಂಪ್ ನೇತೃತ್ವದ ಆಡಳಿತವು ಹಸ್ತಕ್ಷೇಪದ ಮೂಲಕ ಜಗತ್ತಿನ ಎಲ್ಲ ಮೂಲೆಗಳನ್ನು ನಿಯಂತ್ರಿಸುವ ದುಸ್ಸಾಹಸ ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...