Homeಮುಖಪುಟಅಮೆರಿಕದ ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಅಮೆರಿಕದ ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

- Advertisement -
- Advertisement -

ಅಮೆರಿಕದ ಖ್ಯಾತ ಅರ್ಥಶಾಸ್ತ್ರಜ್ಞೆ ಕ್ಲಾಡಿಯಾ ಗೋಲ್ಡಿನ್ ಅವರಿಗೆ 2023ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ. ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಮಹಿಳಾ ಕಾರ್ಮಿಕ ಮಾರುಕಟ್ಟೆ ಫಲಿತಾಂಶಗಳ ಕುರಿತಂತೆ ನಮ್ಮ ಜ್ಞಾನವನ್ನು ಹೆಚ್ಚಿಸಿದ್ದಕ್ಕಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸಾಯನ್ಸಸ್ ಹೇಳಿದೆ.

ಈ ವರ್ಷದ ನೊಬೆಲ್ ಪ್ರಶಸ್ತಿಗಳ ಪೈಕಿ ಇತರ ಕ್ಷೇತ್ರಗಳ ಪ್ರಶಸ್ತಿಯನ್ನು ಈಗಾಗಲೇ ಘೋಷಿಸಲಾಗಿದ್ದು ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಈ ಬಾರಿಯ ಕೊನೆಯ ಪ್ರಶಸ್ತಿಯಾಗಿದೆ.

ನೊಬೆಲ್ ಪ್ರಶಸ್ತಿಯನ್ನು ಆರಂಭಿಸಿದ್ದ ಆಲ್ಫ್ರೆಡ್ ನೊಬೆಲ್ ಮೊದಲು ವಿಜ್ಞಾನ, ಸಾಹಿತ್ಯ ಮತ್ತು ಶಾಂತಿ ನೊಬೆಲ್ ಪ್ರಶಸ್ತಿಯನ್ನು ಆರಂಭಿಸಿದ್ದರೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸ್ವೀಡನ್ ದೇಶದ ಸೆಂಟ್ರಲ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ 1968ರಲ್ಲಿ ಸೇರಿಸಲಾಗಿತ್ತು.

ಆರ್ಥಿಕ ವಿಜ್ಞಾನಕ್ಕೆ 1969 ರಿಂದ 2022 ರವರೆಗೆ ಒಟ್ಟು 54 ನೊಬೆಲ್ ಪ್ರಶಸ್ತಿಗಳನ್ನು ನೀಡಲಾಗಿದೆ. 92 ಪುರಸ್ಕೃತರ ಪೈಕಿ 25 ಮಂದಿ ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. ಇನ್ನು ಮಹಿಳೆಯರ ಪೈಕಿ ಇಬ್ಬರು ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. 2009ರಲ್ಲಿ ಎಲಿನಾರ್ ಓಸ್ಟ್ರೋಮ್. 2019ರಲ್ಲಿ ಎಸ್ತರ್ ಡುಫ್ಲೋ. ಇದೀಗ ಈ ಪ್ರಶಸ್ತಿಯನ್ನು ಪಡೆದ ಮೂರನೇ ಮಹಿಳೆ ಎಂಬ ಗೌರವಕ್ಕೆ ಕ್ಲಾಡಿಯಾ ಗೋಲ್ಡಿನ್‌ ಪಾತ್ರರಾಗಿದ್ದಾರೆ.

ನೊಬೆಲ್​​ ಪ್ರಶಸ್ತಿಯನ್ನು ಅಕ್ಟೋಬರ್ 2ರಿಂದ ನೀಡಲಾಗುತ್ತಿದೆ. ಇನ್ನು ಆರ್ಥಿಕ ವಿಜ್ಞಾನ ಕ್ಷೇತ್ರಕ್ಕೆ ಇದು ಈ ವರ್ಷದ ಕೊನೆಯ ಪ್ರಶಸ್ತಿಯಾಗಿದೆ. ಔಷಧ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ, ಮತ್ತು ಶಾಂತಿಗೆ ಸಂಬಂಧಿಸಿದಂತೆ ಈ ವಾರ ನೊಬೆಲ್​​ ಪ್ರಶಸ್ತಿಯನ್ನು ನೀಡಲಾಗಿತ್ತು.

ಇದನ್ನೂ ಓದಿ: ನೊಬೆಲ್ ಶಾಂತಿ ಪ್ರಶಸ್ತಿ: ಜೈಲಿನಲ್ಲಿರುವ ಇರಾನ್‌ನ ನರ್ಗೆಸ್ ಮೊಹಮ್ಮದಿಯವರಿಗೆ ಪುರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...