Homeಮುಖಪುಟಅಮೆರಿಕದ ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

ಅಮೆರಿಕದ ಕ್ಲಾಡಿಯಾ ಗೋಲ್ಡಿನ್​​ಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ

- Advertisement -
- Advertisement -

ಅಮೆರಿಕದ ಖ್ಯಾತ ಅರ್ಥಶಾಸ್ತ್ರಜ್ಞೆ ಕ್ಲಾಡಿಯಾ ಗೋಲ್ಡಿನ್ ಅವರಿಗೆ 2023ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ. ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು ಹೆಚ್ಚಿಸಿದ್ದಕ್ಕಾಗಿ ಕ್ಲಾಡಿಯಾ ಗೋಲ್ಡಿನ್‌ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಮಹಿಳಾ ಕಾರ್ಮಿಕ ಮಾರುಕಟ್ಟೆ ಫಲಿತಾಂಶಗಳ ಕುರಿತಂತೆ ನಮ್ಮ ಜ್ಞಾನವನ್ನು ಹೆಚ್ಚಿಸಿದ್ದಕ್ಕಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸಾಯನ್ಸಸ್ ಹೇಳಿದೆ.

ಈ ವರ್ಷದ ನೊಬೆಲ್ ಪ್ರಶಸ್ತಿಗಳ ಪೈಕಿ ಇತರ ಕ್ಷೇತ್ರಗಳ ಪ್ರಶಸ್ತಿಯನ್ನು ಈಗಾಗಲೇ ಘೋಷಿಸಲಾಗಿದ್ದು ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಈ ಬಾರಿಯ ಕೊನೆಯ ಪ್ರಶಸ್ತಿಯಾಗಿದೆ.

ನೊಬೆಲ್ ಪ್ರಶಸ್ತಿಯನ್ನು ಆರಂಭಿಸಿದ್ದ ಆಲ್ಫ್ರೆಡ್ ನೊಬೆಲ್ ಮೊದಲು ವಿಜ್ಞಾನ, ಸಾಹಿತ್ಯ ಮತ್ತು ಶಾಂತಿ ನೊಬೆಲ್ ಪ್ರಶಸ್ತಿಯನ್ನು ಆರಂಭಿಸಿದ್ದರೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸ್ವೀಡನ್ ದೇಶದ ಸೆಂಟ್ರಲ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ 1968ರಲ್ಲಿ ಸೇರಿಸಲಾಗಿತ್ತು.

ಆರ್ಥಿಕ ವಿಜ್ಞಾನಕ್ಕೆ 1969 ರಿಂದ 2022 ರವರೆಗೆ ಒಟ್ಟು 54 ನೊಬೆಲ್ ಪ್ರಶಸ್ತಿಗಳನ್ನು ನೀಡಲಾಗಿದೆ. 92 ಪುರಸ್ಕೃತರ ಪೈಕಿ 25 ಮಂದಿ ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. ಇನ್ನು ಮಹಿಳೆಯರ ಪೈಕಿ ಇಬ್ಬರು ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಆಗಿದ್ದರು. 2009ರಲ್ಲಿ ಎಲಿನಾರ್ ಓಸ್ಟ್ರೋಮ್. 2019ರಲ್ಲಿ ಎಸ್ತರ್ ಡುಫ್ಲೋ. ಇದೀಗ ಈ ಪ್ರಶಸ್ತಿಯನ್ನು ಪಡೆದ ಮೂರನೇ ಮಹಿಳೆ ಎಂಬ ಗೌರವಕ್ಕೆ ಕ್ಲಾಡಿಯಾ ಗೋಲ್ಡಿನ್‌ ಪಾತ್ರರಾಗಿದ್ದಾರೆ.

ನೊಬೆಲ್​​ ಪ್ರಶಸ್ತಿಯನ್ನು ಅಕ್ಟೋಬರ್ 2ರಿಂದ ನೀಡಲಾಗುತ್ತಿದೆ. ಇನ್ನು ಆರ್ಥಿಕ ವಿಜ್ಞಾನ ಕ್ಷೇತ್ರಕ್ಕೆ ಇದು ಈ ವರ್ಷದ ಕೊನೆಯ ಪ್ರಶಸ್ತಿಯಾಗಿದೆ. ಔಷಧ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಾಹಿತ್ಯ, ಮತ್ತು ಶಾಂತಿಗೆ ಸಂಬಂಧಿಸಿದಂತೆ ಈ ವಾರ ನೊಬೆಲ್​​ ಪ್ರಶಸ್ತಿಯನ್ನು ನೀಡಲಾಗಿತ್ತು.

ಇದನ್ನೂ ಓದಿ: ನೊಬೆಲ್ ಶಾಂತಿ ಪ್ರಶಸ್ತಿ: ಜೈಲಿನಲ್ಲಿರುವ ಇರಾನ್‌ನ ನರ್ಗೆಸ್ ಮೊಹಮ್ಮದಿಯವರಿಗೆ ಪುರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...