Homeಅಂತರಾಷ್ಟ್ರೀಯಅಮೆರಿಕಾ ಚುನಾವಣಾ: ಯಾವ ರಾಜ್ಯದಲ್ಲಿ ಯಾರಿಗೆ ಮುನ್ನಡೆ?

ಅಮೆರಿಕಾ ಚುನಾವಣಾ: ಯಾವ ರಾಜ್ಯದಲ್ಲಿ ಯಾರಿಗೆ ಮುನ್ನಡೆ?

- Advertisement -
- Advertisement -

ಅಮೆರಿಕಾದ ಹಲವಾರು ರಾಜ್ಯಗಳಲ್ಲಿ ಮತ ಎಣಿಕೆ ಮುಂದುವರೆದಿದೆ. ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರಿಗೆ ಗೆಲುವು ಎನ್ನುವುದು ಫಲಿತಾಂಶವು ಇನ್ನೂ ಸ್ಪಷ್ಟವಾಗಿ ಹೊರಬಿದ್ದಿಲ್ಲ. ಅದು ಪೂರ್ಣಗೊಳ್ಳಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂದು ವರದಿಗಳು ಹೇಳುತ್ತಿವೆ.

ಒಟ್ಟು 538 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಸ್ಪಷ್ಟ ಬಹುಮತಕ್ಕೆ 270 ಸ್ಥಾನಗಳ ಅಗತ್ಯವಿದ್ದು, ನ್ಯೂಯಾರ್ಕ್‌ ಟೈಮ್ಸ್‌ ವರದಿಯ ಪ್ರಕಾರ ಜೋ ಬೈಡೆನ್ 264 ಸ್ಥಾನಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡಿದ್ದರೆ, ಟ್ರಂಪ್ 214 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಇನ್ನೂ ಹಲವು ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಇದು ಗೆಲುವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

9 ರಾಜ್ಯಗಳಲ್ಲಿ ಯಾರು ಎಷ್ಟರಲ್ಲಿ ಮೇಲುಗೈ ಸಾಧಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಇಂಡಿಯಾ ಟುಡೆ ವರದಿ ಮಾಡಿದೆ.

ಅಲಾಸ್ಕಾ
ಇಲ್ಲಿ ಟ್ರಂಪ್ ವ್ಯಾಪಕ ಮುನ್ನಡೆ ಹೊಂದಿದ್ದು, ಕೇವಲ 56% ಮತಗಳನ್ನು ಎಣಿಸಲಾಗಿದೆ.

ಅರಿಝೋನಾ
ಇಲ್ಲಿ ಬೈಡೆನ್ ಗಮನಾರ್ಹ ಮುನ್ನಡೆ ಸಾಧಿಸಿದ್ದಾರೆ. ಅಸೋಸಿಯೇಟೆಡ್ ಪ್ರೆಸ್ ಮತ್ತು ಫಾಕ್ಸ್ ನ್ಯೂಸ್ ಈಗಾಗಲೇ ಡೆಮೋಕ್ರಾಟ್ ಗೆದ್ದಿದೆ ಎಂದು ಘೋಷಿಸಿದೆ.

ಜಾರ್ಜಿಯಾ
ಇಲ್ಲಿ ಟ್ರಂಪ್ ಅಲ್ಪ ಮುನ್ನಡೆ ಸಾಧಿಸುತ್ತಿದ್ದಾರೆ. ಆದರೆ ಅಟ್ಲಾಂಟಾದ ಸುತ್ತಮುತ್ತಲಿನ ಹಲವಾರು ದೊಡ್ಡ ಕೌಂಟಿಂಗ್‌ಗಳು ಡೆಮೋಕ್ರಾಟಿಕ್‌ನ ಬೈಡೆನ್‌ನತ್ತ ಒಲವು ಇದೆ ಎಂದು ವರದಿಯಾಗಿದೆ.

ಮಿಚಿಗನ್
ಇಲ್ಲಿ ಬೈಡೆನ್ ಭಾರೀ ಬಹುಮತದಿಂದ ಮುನ್ನಡೆಯಲ್ಲಿದ್ದಾರೆ. ಮಿಚಿಗನ್ ವಿದೇಶಾಂಗ ಕಾರ್ಯದರ್ಶಿ ಜೋಸೆಲಿನ್ ಬೆನ್ಸನ್ ಅವರು ಬುಧವಾರ ರಾತ್ರಿ ರಾಜ್ಯದ ಎಲ್ಲಾ ಮಾನ್ಯ ಮತಪತ್ರಗಳನ್ನು ಎಣಿಕೆ ಮಾಡಿದ್ದಾರೆ ಮತ್ತು ಅಲ್ಲಿನ ಮತಗಳ ಎಣಿಕೆಯನ್ನು ನಿಲ್ಲಿಸಲು ಟ್ರಂಪ್ ಕೋರಿರುವ ಮೊಕದ್ದಮೆ ಕ್ಷುಲ್ಲಕ ಎಂದು ಹೇಳಿದರು.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನೆವಾಡಾ
ಇಲ್ಲಿ ಬೈಡೆನ್ ಮತ್ತು ಟ್ರಂಪ್ ನಡುವಿನ ಮತ ಹಂಚಿಕೆಯ ವ್ಯತ್ಯಾಸ ತೀರಾ ಕಡಿಮೆಯಿದೆ.

ಉತ್ತರ ಕೆರೊಲಿನಾ
ಟ್ರಂಪ್ ಮತ್ತು ಬಿಡೆನ್ ನಡುವಿನ ಅಂತರವು ಶೇಕಡಾ 2 ಕ್ಕಿಂತ ಕಡಿಮೆ ಇದೆ. ಇಲ್ಲಿ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ. ನಿರೀಕ್ಷಿತ 95% ಮತಗಳ ಎಣಿಕೆ ಮಾಡಲಾಗಿದೆ.

ಪೆನ್ಸಿಲ್ವೇನಿಯಾ
ಇಲ್ಲಿ ಟ್ರಂಪ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ವಿಸ್ಕಾನ್ಸಿನ್
ಇಲ್ಲಿ ಅಭ್ಯರ್ಥಿಗಳ ನಡುವಿನ ಅಂತರವು ಶೇಕಡಾ 1 ಕ್ಕಿಂತ ಕಡಿಮೆ ಇದೆ.


ಇದನ್ನೂ ಓದಿ: ಅಮೆರಿಕಾ ಚುನಾವಾಣೆ: ಭಾರತ ಮೂಲದ ರಾಜ ಕೃಷ್ಣಮೂರ್ತಿ ಪ್ರತಿನಿಧಿಗಳ ಸದನಕ್ಕೆ ಮರು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...