Homeಅಂತರಾಷ್ಟ್ರೀಯಅಮೆರಿಕಾ ಚುನಾವಣಾ: ಯಾವ ರಾಜ್ಯದಲ್ಲಿ ಯಾರಿಗೆ ಮುನ್ನಡೆ?

ಅಮೆರಿಕಾ ಚುನಾವಣಾ: ಯಾವ ರಾಜ್ಯದಲ್ಲಿ ಯಾರಿಗೆ ಮುನ್ನಡೆ?

- Advertisement -
- Advertisement -

ಅಮೆರಿಕಾದ ಹಲವಾರು ರಾಜ್ಯಗಳಲ್ಲಿ ಮತ ಎಣಿಕೆ ಮುಂದುವರೆದಿದೆ. ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರಿಗೆ ಗೆಲುವು ಎನ್ನುವುದು ಫಲಿತಾಂಶವು ಇನ್ನೂ ಸ್ಪಷ್ಟವಾಗಿ ಹೊರಬಿದ್ದಿಲ್ಲ. ಅದು ಪೂರ್ಣಗೊಳ್ಳಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂದು ವರದಿಗಳು ಹೇಳುತ್ತಿವೆ.

ಒಟ್ಟು 538 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಸ್ಪಷ್ಟ ಬಹುಮತಕ್ಕೆ 270 ಸ್ಥಾನಗಳ ಅಗತ್ಯವಿದ್ದು, ನ್ಯೂಯಾರ್ಕ್‌ ಟೈಮ್ಸ್‌ ವರದಿಯ ಪ್ರಕಾರ ಜೋ ಬೈಡೆನ್ 264 ಸ್ಥಾನಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡಿದ್ದರೆ, ಟ್ರಂಪ್ 214 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಇನ್ನೂ ಹಲವು ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಇದು ಗೆಲುವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

9 ರಾಜ್ಯಗಳಲ್ಲಿ ಯಾರು ಎಷ್ಟರಲ್ಲಿ ಮೇಲುಗೈ ಸಾಧಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಇಂಡಿಯಾ ಟುಡೆ ವರದಿ ಮಾಡಿದೆ.

ಅಲಾಸ್ಕಾ
ಇಲ್ಲಿ ಟ್ರಂಪ್ ವ್ಯಾಪಕ ಮುನ್ನಡೆ ಹೊಂದಿದ್ದು, ಕೇವಲ 56% ಮತಗಳನ್ನು ಎಣಿಸಲಾಗಿದೆ.

ಅರಿಝೋನಾ
ಇಲ್ಲಿ ಬೈಡೆನ್ ಗಮನಾರ್ಹ ಮುನ್ನಡೆ ಸಾಧಿಸಿದ್ದಾರೆ. ಅಸೋಸಿಯೇಟೆಡ್ ಪ್ರೆಸ್ ಮತ್ತು ಫಾಕ್ಸ್ ನ್ಯೂಸ್ ಈಗಾಗಲೇ ಡೆಮೋಕ್ರಾಟ್ ಗೆದ್ದಿದೆ ಎಂದು ಘೋಷಿಸಿದೆ.

ಜಾರ್ಜಿಯಾ
ಇಲ್ಲಿ ಟ್ರಂಪ್ ಅಲ್ಪ ಮುನ್ನಡೆ ಸಾಧಿಸುತ್ತಿದ್ದಾರೆ. ಆದರೆ ಅಟ್ಲಾಂಟಾದ ಸುತ್ತಮುತ್ತಲಿನ ಹಲವಾರು ದೊಡ್ಡ ಕೌಂಟಿಂಗ್‌ಗಳು ಡೆಮೋಕ್ರಾಟಿಕ್‌ನ ಬೈಡೆನ್‌ನತ್ತ ಒಲವು ಇದೆ ಎಂದು ವರದಿಯಾಗಿದೆ.

ಮಿಚಿಗನ್
ಇಲ್ಲಿ ಬೈಡೆನ್ ಭಾರೀ ಬಹುಮತದಿಂದ ಮುನ್ನಡೆಯಲ್ಲಿದ್ದಾರೆ. ಮಿಚಿಗನ್ ವಿದೇಶಾಂಗ ಕಾರ್ಯದರ್ಶಿ ಜೋಸೆಲಿನ್ ಬೆನ್ಸನ್ ಅವರು ಬುಧವಾರ ರಾತ್ರಿ ರಾಜ್ಯದ ಎಲ್ಲಾ ಮಾನ್ಯ ಮತಪತ್ರಗಳನ್ನು ಎಣಿಕೆ ಮಾಡಿದ್ದಾರೆ ಮತ್ತು ಅಲ್ಲಿನ ಮತಗಳ ಎಣಿಕೆಯನ್ನು ನಿಲ್ಲಿಸಲು ಟ್ರಂಪ್ ಕೋರಿರುವ ಮೊಕದ್ದಮೆ ಕ್ಷುಲ್ಲಕ ಎಂದು ಹೇಳಿದರು.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ನೆವಾಡಾ
ಇಲ್ಲಿ ಬೈಡೆನ್ ಮತ್ತು ಟ್ರಂಪ್ ನಡುವಿನ ಮತ ಹಂಚಿಕೆಯ ವ್ಯತ್ಯಾಸ ತೀರಾ ಕಡಿಮೆಯಿದೆ.

ಉತ್ತರ ಕೆರೊಲಿನಾ
ಟ್ರಂಪ್ ಮತ್ತು ಬಿಡೆನ್ ನಡುವಿನ ಅಂತರವು ಶೇಕಡಾ 2 ಕ್ಕಿಂತ ಕಡಿಮೆ ಇದೆ. ಇಲ್ಲಿ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ. ನಿರೀಕ್ಷಿತ 95% ಮತಗಳ ಎಣಿಕೆ ಮಾಡಲಾಗಿದೆ.

ಪೆನ್ಸಿಲ್ವೇನಿಯಾ
ಇಲ್ಲಿ ಟ್ರಂಪ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ವಿಸ್ಕಾನ್ಸಿನ್
ಇಲ್ಲಿ ಅಭ್ಯರ್ಥಿಗಳ ನಡುವಿನ ಅಂತರವು ಶೇಕಡಾ 1 ಕ್ಕಿಂತ ಕಡಿಮೆ ಇದೆ.


ಇದನ್ನೂ ಓದಿ: ಅಮೆರಿಕಾ ಚುನಾವಾಣೆ: ಭಾರತ ಮೂಲದ ರಾಜ ಕೃಷ್ಣಮೂರ್ತಿ ಪ್ರತಿನಿಧಿಗಳ ಸದನಕ್ಕೆ ಮರು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...