Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...