Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...