Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...