Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...